Sunday, 27th October 2024

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು: ಸಿ.ಎನ್.ನಾರಾಯಣಸ್ವಾಮಿ

ಚಿಕ್ಕಬಳ್ಳಾಪುರ: ದಲಿತ, ಶೋಷಿತ, ಹಿಂದುಳಿದ ಸಮುದಾಯದ ಘನತೆಗೆ ಧಕ್ಕೆ ತರುವ ಮಾತಗಳನ್ನಾಡಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಕಾನೂನು ರೀತಿಯ ಕ್ರಮಕೈಗೊಳ್ಳಬೇಕೆಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸಿ.ಎನ್.ನಾರಾಯಣ ಸ್ವಾಮಿ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಜನಪ್ರತಿನಿಧಿಯಾಗಿರುವ ಮುನಿರತ್ನ ಅವರು ಜಾತಿ ನಿಂದನೆ, ಕೊಲೆ, ಸುಲಿಗೆ, ಭ್ರಷ್ಟಚಾರ, ಅಧಿಕಾರ ದುರುಪಯೋಗಪಡಿಸಿಕೊಂಡು ಮತ್ತು ಅತ್ಯಂತ ಕೀಳು ಮಟ್ಟದ ಮಾತುಗಳನ್ನಾಡಿರುವ ರಾಜಕಾರಣಿಯಾಗಿದ್ದು, ಇಂತಹ ವ್ಯಕ್ತಿಯನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಮುನಿರತ್ನ ಅವರು ಅತ್ಯಂತ ತುಚ್ಛವಾಗಿ ಎರಡು ಸಮುದಾಯಗಳ ಬಗ್ಗೆ ಮಾತನಾಡಿದ್ದಾನೆ. ನಾಡಪ್ರಭು ಕೆಂಪೇಗೌಡರ ಸಮುದಾಯದ ಬಗ್ಗೆ, ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಕೆಟ್ಟದಾಗಿ ಮಾತನಾಡಿದ್ದಾರೆ. ಪರಿಶಿಷ್ಟ ಜಾತಿಯ ಬಗ್ಗೆ ಜಾತಿ ನಿಂದನೆ ಮಾಡಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಅವರನ್ನು ಮುಂದುವರೆಯಲು ಶೋಷಿತ ಸಮಾಜ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿದರು.

ರಾಮ ಸೀತಾ ಆಂಜನೇಯ ಎಂದು ದೇವರಲ್ಲಿ ಬೊಬ್ಬೆ ಹೊಡೆಯುವ ಬಿಜೆಪಿಯು ಹೆಣ್ಣು ಮಕ್ಕಳ ಮೇಲೆ ಗೌರವ ಇದ್ದರೆ ಬಿಜೆಪಿಯ ರಾಜ್ಯ, ರಾಷ್ಟಿçÃಯ ನಾಯಕರು ಕೂಡಲೇ ಶಾಸಕ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟನೆ ಗೊಳಿಸಿ, ಪಕ್ಷದ ಶಿಸ್ತು, ಬದ್ಧತೆ, ಸಂಸ್ಕೃತಿಯನ್ನು ಎತ್ತಿ ತೋರಿಸಬೇಕು ಎಂದು ತಿಳಿಸಿದರು.

ಶಾಸಕ ಮುನಿರತ್ನ ವಿರುದ್ಧ ವಿಶೇಷ ಸರ್ಕಾರಿ ವಕೀಲರನ್ನು ನೇಮಿಸಿ, ಕಠಿಣ ಶಿಕ್ಷೆಯಾಗುವಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ, ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.