Thursday, 19th September 2024

ವಿಎಚ್‌ಪಿ ಮುಖಂಡನ ಮೇಲೆ ಗುಂಡಿನ ದಾಳಿ

ಜಮ್ಶೆಡ್‌ಪುರ: ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ಜಾರ್ಖಂಡ್‌ನಲ್ಲಿ ಗುರುವಾರ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಬಬ್ಲು ಕುಮಾರ್ ಸಿಂಗ್ ಅವರು ವಿಎಚ್‌ಪಿ ಬಗ್ಬೇರ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಬ್ಲು ಕುಮಾರ್ ಸಿಂಗ್ ಎಂಬವರ ಮೇಲೆ ಇಬ್ಬರು ದುಷ್ಕರ್ಮಿಗಳು ಆರು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಶಂಕಿತ ಆರೋಪಿಯೊಬ್ಬ ಒಂದು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *