Monday, 16th September 2024

ಬಸ್‌ ಹರಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಬೆಂಗಳೂರು: ಬಿಎಂಟಿಸಿ ಬಸ್‌ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

22 ವರ್ಷದ ಶಿಲ್ಪಾ ಮೃತ ವಿದ್ಯಾರ್ಥಿನಿ. ಕೋಲಾರ ಮೂಲದ ವಿದ್ಯಾರ್ಥಿನಿ ಮೊದಲ ವರ್ಷದ ಉನ್ನತ ವ್ಯಾಸ0ಗ ಮಾಡುತ್ತಿದ್ದಳು. ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಅ.10ರಂದು ಬಸ್ ಹತ್ತುವಾಗ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಳು. ಈ ವೇಳೆ ಆಕೆಯ ಮೇಲೆ ಬಸ್ ಹತ್ತಿತ್ತು. ತೀವ್ರವಾಗಿ ಗಾಯಗೊಂಡಿದ್ದ ಶಿಲ್ಪಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬನ್ನೇರು ಘಟ್ಟದ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಬೆಳಗಿನ ಜಾವ 4 ಘಂಟೆ ಸುಮಾರಿಗೆ ಚಿಕಿತ್ಸೆ ಫಲಕರಿಸದೇ ಶಿಲ್ಪಾಶ್ರೀ ಮೃತಪಟ್ಟಿದ್ದಾಳೆ.

ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕೋಲಾರದ ಬಂಗಾರಪೇಟೆಗೆ ರವಾನೆ ಮಾಡಲಾಗಿದೆ.