ಸಂಚಲನ ಮೂಡಿಸಿದ ಊರ್ಮಿಳಾ ಮಾತೊಂಡ್ಕರ್ ಗೋಲ್ಡನ್ ಲೆಹೆಂಗಾ
ಊರ್ಮಿಳಾ ಮಾತೊಂಡ್ಕರ್ ಧರಿಸಿದ್ದ ಗೋಲ್ಡನ್ ಕೇಪ್ ಲೆಹೆಂಗಾ ಇದೀಗ ಲೆಹೆಂಗಾ ಪ್ರಿಯರನ್ನು ಸೆಳೆದಿದೆ. ಎಥ್ನಿಕ್ವೇರ್ ಕೆಟಗರಿಯ ಹಿಟ್ ಲಿಸ್ಟ್ ಸೇರಿದೆ. ಇದ್ಯಾವ ಬಗೆಯ ಲೆಹೆಂಗಾ? ಊರ್ಮಿಳಾ ಲುಕ್ ಹೇಗಿದೆ? ಈ ಕುರಿತ ವಿವರ ಇಲ್ಲಿದೆ.
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮಹತ್ವದ ಗೆಲುವು ದಾಖಲಿಸಿರುವ ಗಿಲ್ಲಿ ನಟ ಅವರು ಇಂದು (ಜ.22) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಗೃಹ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಗಿಲ್ಲಿ ನಟ ಆಶೀರ್ವಾದ ಪಡೆದುಕೊಂಡಿದ್ದಾರೆ. ಗಿಲ್ಲಿ ಜನಪ್ರಿಯತೆಯ ಬಗ್ಗೆ ಸಿದ್ದರಾಮಯ್ಯ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಗಿಲ್ಲಿ ನಟನ ಪೋಷಕರ ಬಗ್ಗೆ ವಿಚಾರಿಸಿದ್ದಾರೆ.
Bigg Boss kannada12: ಈ ಸಾಲಿನ ಬಿಗ್ಬಾಸ್ ಗ್ರ್ಯಾಂಡ್ ಫಿನಾಲೆಯಲ್ಲಿ ಗಿಲ್ಲಿ ನಟನ ಔಟ್ಫಿಟ್ಟನ್ನು ಸೆಲೆಬ್ರೆಟಿ ಡಿಸೈನರ್ ಹಾಗೂ ಸ್ಟೈಲಿಸ್ಟ್ ಚಂದನ್ ಗೌಡ ಡಿಸೈನ್ ಮಾಡಿದ್ದಾರೆ. ಈಗಾಗಲೇ ಸಾಕಷ್ಟು ಸೆಲೆಬ್ರೆಟಿಗಳಿಗೆ ಹಾಗೂ ಬಿಗ್ಬಾಸ್ ಕಂಟೆಸ್ಟಂಟ್ಗಳಿಗೆ ಡಿಸೈನರ್ವೇರ್ಗಳನ್ನು ಸಿದ್ಧಪಡಿಸಿರುವ ಚಂದನ್ ಗೌಡ, ಗಿಲ್ಲಿಗೂ ಕೂಡ ಎಕ್ಸ್ಕ್ಲೂಸಿವ್ ಡಿಸೈನರ್ವೇರ್ ಸಿದ್ಧಪಡಿಸಿದ್ದಾರೆ. ಈ ಕುರಿತಂತೆ ಇಲ್ಲಿದೆ ವರದಿ.
AMB Cinemas Bengaluru: ದಕ್ಷಿಣ ಭಾರತದ ಅತ್ಯಂತ ಪ್ರತಿಷ್ಠಿತ ಮಲ್ಟಿಪ್ಲೆಕ್ಸ್ ಸರಪಳಿಯಾದ ಎಎಂಬಿ ಸಿನಿಮಾಸ್ (AMB Cinemas), ತನ್ನ ನೂತನ ಶಾಖೆಯನ್ನು ಜನವರಿ 16 ರಂದು ಬೆಂಗಳೂರಿನಲ್ಲಿ ಉದ್ಘಾಟಿಸಲು ಸಜ್ಜಾಗಿದೆ. ಹೈದರಾಬಾದ್ನಲ್ಲಿ ಈಗಾಗಲೇ ಅತ್ಯುತ್ತಮ ಸಿನೆಮಾ ಅನುಭವಕ್ಕೆ ಹೆಸರಾಗಿರುವ ಮಹೇಶ್ ಬಾಬು ಒಡೆತನದ ಎಎಂಬಿ ಸಿನಿಮಾಸ್, ಈಗ ಅದೇ ವೈಭವವನ್ನು ಉದ್ಯಾನ ನಗರಿ ಬೆಂಗಳೂರಿಗೂ ತರುತ್ತಿದೆ. ಈ ಮಲ್ಟಿಪ್ಲೆಕ್ಸ್ನ ಒಳಾಂಗಣದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದರ ವೈಶಿಷ್ಠ್ಯಗಳ ಬಗ್ಗೆ ಇಲ್ಲಿದೆ ಮಾಹಿತಿ.
ವಿಶ್ವಾದ್ಯಂತ 250 ಮಿಲಿಯನ್ಗಿಂತಲೂ ಹೆಚ್ಚು ವೀಕ್ಷಕರು IMDb ವೆಬ್ ಸೈಟ್ಗೆ ಭೇಟಿ ನೀಡಿದ ಆಧಾರದ ಮೇಲೆ 2026ರ ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಸಾಲಿನಲ್ಲಿ ಶಾರುಖ್ ಖಾನ್ ಅವರ ಕಿಂಗ್ ಸಿನಿಮಾವು ಮೊದಲ ಸ್ಥಾನದಲ್ಲಿದ್ದರೆ, ಯಶ್ ನಟಿಸಿ, ನಿರ್ಮಾಣ ಮಾಡುತ್ತಿರುವ ರಾಮಾಯಣ: ಭಾಗ 1 ಮತ್ತು ಟಾಕ್ಸಿಕ್ ಸಿನಿಮಾಗಳು ಕ್ರಮವಾಗಿ ಎರಡನೇ ಮತ್ತು ಐದನೇ ಸ್ಥಾನ ಪಡೆದುಕೊಂಡಿದೆ. ಮಿಕ್ಕಂತೆ ಯಾವೆಲ್ಲಾ ಸಿನಿಮಾಗಳಿವೆ? ಇಲ್ಲಿದೆ ನೋಡಿ ಫುಲ್ ಲಿಸ್ಟ್.
ಹಿಂದೂಗಳ ಪ್ರಮುಖ ಹಬ್ಬ ಸಂಕ್ರಾಂತಿ. ಸೂರ್ಯ ಉತ್ತರಾಯಣಕ್ಕೆ ಪ್ರವೇಶಿಸುವ ಈ ಸಂಕ್ರಮಣ ಕಾಲವನ್ನು ಸುಗ್ಗಿಯ ಹಬ್ಬ ಎಂದೂ ಕರೆಯಲಾಗುತ್ತದೆ. ಈ ಬಾರಿ ಮಕರ ಸಂಕ್ರಾಂತಿ ಜನವರಿ 14ರ ಮಧ್ಯಾಹ್ನ ಆರಂಭವಾಗಿ 15ರವರೆಗೂ ವಿಸ್ತರಣೆಯಾಗಿರುವುದು ವಿಶೇಷ. ಹಬ್ಬದ ಪ್ರಯುಕ್ತ ದೆಹಲಿಯಲ್ಲಿರುವ ಕೇಂದ್ರ ಸಚಿವ ತಿರು ಎಲ್. ಮುರುಗನ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಜತೆಗೆ ಕನ್ನಡದಲ್ಲೇ ಕನ್ನಡಿಗರಿಗೆ ಮಕರ ಸಂಕ್ರಾಂತಿಯ ಶುಭಾಶಯ ತಿಳಿಸಿದರು.
ಸಂಕ್ರಾಂತಿ ಹಬ್ಬದಂದು ಅಂದವಾಗಿ ಕಾಣಿಸಲು ನೀವು ಒಂದಿಷ್ಟು ಸಿಂಪಲ್ ಸ್ಟೈಲಿಂಗ್ ಐಡಿಯಾಗಳನ್ನು ಫಾಲೋ ಮಾಡಿ ಎನ್ನುತ್ತಾರೆ ಫ್ಯಾಷನ್ ಎಕ್ಸ್ಪರ್ಟ್ಸ್. ಫ್ಯಾಷನ್ ಡಿಸೈನರ್ ಸಿಂಧೂ ಪ್ರಕಾರ, ಹಬ್ಬದಂದು ಸಾಂಪ್ರದಾಯಿಕ ಲುಕ್ಗೆ ಮಾನ್ಯತೆ ನೀಡಬೇಕು ಎನ್ನುತ್ತಾರೆ. ಈ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದಾರೆ.
ಸ್ಟಾರ್ ಸುವರ್ಣ ವಾಹಿನಿಯು ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸಾಂಪ್ರದಾಯಿಕವಾಗಿ ಅದ್ದೂರಿಯಿಂದ ಆಚರಿಸಲು ಸಜ್ಜಾಗಿದೆ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದ ದಿನದಂದು ಎಳ್ಳು ಬೆಲ್ಲ, ನೆಲಗಡಲೆ, ಹುರಿಗಡಲೆ, ಸಕ್ಕರೆ ಅಚ್ಚು, ಕೊಬ್ಬರಿ, ಬೆರೆಸಿದ ವಿಶೇಷ ಸಿಹಿಯನ್ನು ದೇವರಿಗೆ ನೈವೇದ್ಯ ಮಾಡಿ ನಂತರ ತಮ್ಮ ಆತ್ಮೀಯರೊಂದಿಗೆ ಹಂಚಿ ಸಂತೋಷವನ್ನು ಪಡುತ್ತಾರೆ. ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯು "ಸುವರ್ಣ ಸಂಕ್ರಾಂತಿ ಸಂಭ್ರಮ" ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಸ್ಟಾರ್ ಸುವರ್ಣ ಪರಿವಾರದ ಎಲ್ಲಾ ತಾರೆಗಳು ಭಾಗಿಯಾಗಲಿದ್ದಾರೆ. ಇದೇ ಶುಕ್ರವಾರ (ಜ.16) ಸಂಜೆ 6.30 ರಿಂದ 9.30 ರವರೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಪೊಂಗಲ್ ಹಬ್ಬದ ಸೆಲೆಬ್ರೇಷನ್ ಇದೀಗ ಕೇವಲ ಕೇರಳದ ಮಾನಿನಿಯರಿಗೆ ಸೀಮಿತವಾಗಿಲ್ಲ! ಬದಲಿಗೆ ಹಬ್ಬದ ಸೀರೆ ಉಡುವುದು ಎಲ್ಲಾ ಮಾನಿನಿಯರನ್ನು ಕೂಡ ಸೆಳೆದಿದೆ. ಇದಕ್ಕೆ ಪೂರಕ ಎಂಬಂತೆ, ಪೊಂಗಲ್ ಸೆಲೆಬ್ರೇಟ್ ಮಾಡಲು ಈಗಾಗಲೇ ಮಾರುಕಟ್ಟೆಯಲ್ಲಿ ನಾನಾ ಬಗೆಯ ಸೀರೆಗಳು ಕಾಲಿಟ್ಟಿವೆ. ಪೊಂಗಲ್ ಸೆಲೆಬ್ರೇಟ್ ಮಾಡುವ ಮಾನಿನಿಯರಿಗೆ 5 ಸಿಂಪಲ್ ಫ್ಯಾಷನ್ ಹಾಗೂ ಸ್ಟೈಲಿಂಗ್ ಟಿಪ್ಸನ್ನು ಸ್ಟೈಲಿಸ್ಟ್ಗಳು ನೀಡಿದ್ದಾರೆ. ಟ್ರೈ ಮಾಡಿ, ನೋಡಿ.
Sankranti Fashion: ಸಂಕ್ರಾಂತಿ ಹಬ್ಬದಂದು ಅಂದವಾಗಿ ಕಾಣಿಸಲು ನೀವು ಒಂದಿಷ್ಟು ಸಿಂಪಲ್ ಸ್ಟೈಲಿಂಗ್ ಐಡಿಯಾಗಳನ್ನು ಫಾಲೋ ಮಾಡಿ ಎನ್ನುತ್ತಾರೆ ಫ್ಯಾಷನ್ ಎಕ್ಸ್ಪರ್ಟ್ಸ್. ಹಬ್ಬದಂದು ಸಾಂಪ್ರದಾಯಿಕ ಲುಕ್ಗೆ ಮಾನ್ಯತೆ ನೀಡಬೇಕು ಎನ್ನುತ್ತಾರೆ. ಈ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದಾರೆ.
ಕುಣಿಗಲ್ ನಗರದ ಇತಿಹಾಸದಲ್ಲೇ ಮೊಟ್ಡ ಮೊದಲ ಬಾರಿಗೆ ಸುಮಾರು 35 ಸಾವಿರ ಜನರ ಸಮ್ಮುಖದಲ್ಲಿ 'ಕುಣಿಗಲ್ ಉತ್ಸವ' ನಡೆಯಿತು. ಸಿನಿಮಾ ಸೆಟ್ಗಿಂತಲೂ ಅದ್ದೂರಿಯಾಗಿ ಹಾಕಲಾಗಿದ್ದ ಬೃಹತ್ ಸೆಟ್ನಲ್ಲಿ ಶಾಸಕ ಡಾ. ರಂಗನಾಥ್ ಅವರ ನೇತೃತ್ವದಲ್ಲಿ ಈ ವರ್ಣರಂಜಿತ ಸಮಾರಂಭ ನಡೆಯಿತು. ಮೂರು ದಿನಗಳ ಕಾಲ ನಡೆದ ಈ ಅದ್ದೂರಿ ಉತ್ಸವದ ಕೊನೆಯ ದಿನದ ಸಮಾರಂಭವು ಕಿಚ್ಚ ಸುದೀಪ್, ಮಾಲಾಶ್ರೀ, ಅನು ಪ್ರಭಾಕರ್, ನೆನಪಿರಲಿ ಪ್ರೇಮ್, ಡಾಲಿ ಧನಂಜಯ್, ಜೈದ್ ಖಾನ್, ಆರಾಧನಾ ರಾಮ್, ನಿರ್ಮಾಪಕ ಸಂಜಯ್ ಗೌಡ್ರು ಸೇರಿದಂತೆ ಅನೇಕ ಸ್ಯಾಂಡಲ್ವುಡ್ ತಾರೆಗಳ ಆಗಮನದಿಂದ ರಂಗೇರಿತ್ತು. ಕೊರೆವ ಚಳಿಯನ್ನೂ ಲೆಕ್ಕಿಸದೇ 35 ರಿಂದ 40 ಸಾವಿರ ಸಂಖ್ಯೆಯಲ್ಲಿ ನೆರೆದಿದ್ದ ಜನರು ಸತತ ಮೂರು ಗಂಟೆಗಳ ಕಾಲ ನಡೆದ ನವೀನ್ ಸಜ್ಜು, ಚಂದನ್ ಶೆಟ್ಟಿ ಅವರ ಸಂಗೀತ ಸಂಜೆ ಕಾರ್ಯಕ್ರಮವನ್ನು ಖುಷಿಯಿಂದ ಆನಂದಿಸಿದರು.
Sankranti Shopping: ವರ್ಷದ ಮೊದಲ ಹಬ್ಬ ಸಂಕ್ರಾಂತಿಯ ಶಾಪಿಂಗ್ ಎಲ್ಲೆಡೆ ಭರ್ಜರಿಯಾಗಿ ನಡೆಯುತ್ತಿದೆ. ಹಬ್ಬಕ್ಕೆ ಅಗತ್ಯವಿರುವ ಎಳ್ಳು-ಬೆಲ್ಲ, ಸಕ್ಕರೆ ಅಚ್ಚಿನ ಪ್ಯಾಕೆಟ್ಗಳು, ಡಿಸೈನರ್ ಬಾಕ್ಸ್ಗಳು, ಸಿಂಗಾರಕ್ಕಿಡುವ ಮಣ್ಣಿನ ಕುಡಿಕೆಗಳು ಸೇರಿದಂತೆ ಟ್ರೆಡಿಷನಲ್ ಉಡುಗೆ-ತೊಡುಗೆಗಳು ಮಾರುಕಟ್ಟೆಯಲ್ಲಿ ರಾರಾಜಿಸುತ್ತಿವೆ. ಈ ಕುರಿತಂತೆ ಇಲ್ಲಿದೆ ವರದಿ.