2025ರ ಐಪಿಎಲ್ ಚಾಂಪಿಯನ್ಸ್ ಆರ್ಸಿಬಿ ಆಟಗಾರರನ್ನು ಗೌರವಿಸಿದ ಕರ್ನಾಟಕ ಸರ್ಕಾರ!
2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರು ರನ್ಗಳಿಂದ ರೋಚಕ ಗೆಲುವು ಪಡೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಕನಸನ್ನು ನನಸಾಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆಗಮಿಸಿದ ಆರ್ಸಿಬಿ ತಂಡದ ಆಟಗಾರರನ್ನು ಕರ್ನಾಟಕ ಸರ್ಕಾರ ವಿಧಾನಸೌಧದ ಬಳಿಕ ಮೈಸೂರು ಪೇಟ ಹಾಕಿ ಸನ್ಮಾನಿಸಲಾಯಿತು.



ಆರ್ಸಿಬಿ ಆಟಗಾರರಿಗೆ ಸನ್ಮಾನ
ಸತತ 18 ವರ್ಷಗಳ ಐಪಿಎಲ್ ಟ್ರೋಫಿ ಗೆದ್ದು ರಾಜಧಾನಿ ಬೆಂಗಳೂರಿಗೆ ಆಗಮಿಸಿದ ರಜತ್ ಪಾಟಿದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರನ್ನು ಕರ್ನಾಟಕ ಸರ್ಕಾರ ಸನ್ಮಾನಿಸಿದೆ.

ಕೊಹ್ಲಿಗೆ ಮೈಸೂರು ಪೇಟ ಹಾಕಿದ ಸಿದ್ದು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪೇಟ ಹಾಕಿ ಸನ್ಮಾನಿಸಿದ್ದಾರೆ.

ಆರ್ಸಿಬಿ ಕ್ಯಾಪ್ಟನ್ಗೂ ಮೈಸೂರು ಪೇಟ
ತಮ್ಮ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಚೊಚ್ಚಲ ಕಪ್ ಗೆದ್ದುಕೊಟ್ಟ ನಾಯಕ ರಜತ್ ಪಾಟಿದಾರ್ ಅವರಿಗೂ ಕೂಡ ಮೈಸೂರು ಪೇಟ ಹಾಕಿ ಗೌರವಿಸಲಾಯಿತು.

ರಾಜ್ಯಪಾಲರ ಉಪಸ್ಥಿತಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರನ್ನು ಸನ್ಮಾನ ಮಾಡುವ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೂಡ ಉಪಸ್ಥಿತಿದ್ದರು.

ಕರ್ನಾಟಕಕ್ಕೆ ಹೆಮ್ಮೆ
ಸತತ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೊಚ್ಚಲ ಚಾಂಪಿಯನ್ ಆಗಿದೆ. ಇದು ಬೆಂಗಳೂರು ಮಾತ್ರವಲ್ಲ, ಇಡೀ ಕರ್ನಾಟಕಕ್ಕೆ ಹೆಮ್ಮೆ ಸಂಗತಿಯಾಗಿದೆ.

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮ
ವಿಧಾನಸೌಧದಲ್ಲಿ ಸನ್ಮಾನ ಸ್ವೀಕರಿಸಿದ ಬಳಿಕ ಆರ್ಸಿಬಿ ಆಟಗಾರರು ಎಂ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿ ಚೊಚ್ಚಲ ಐಪಿಎಲ್ ಕಪ್ ಗೆಲುವನ್ನು ಸಂಭ್ರಮಿಸಿದ್ದಾರೆ.