ಮಮತಾ ಬ್ಯಾನರ್ಜಿ, ಸ್ಟಾಲಿನ್...; 2026ರ ವಿಧಾನಸಭಾ ಚುನಾವಣೆಯಲ್ಲಿ ಸೋತ ರಾಜಕೀಯ ಧುರೀಣರು
ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಹಲವಾರು ಘಟಾನುಘಟಿ ರಾಜಕಾರಣಿಗಳು ಸೋಲು ಅನುಭವಿಸಿದ್ದಾರೆ. ಇದರಲ್ಲಿ ಮುಖ್ಯವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಸೇರಿದ್ದಾರೆ.
ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಪುದುಚೇರಿ, ಕೇರಳದಲ್ಲಿ ನಡೆದ 2026ರ ವಿಧಾನ ಸಭಾ ಚುನಾವಣೆಯಲ್ಲಿ ಹಲವು ಪ್ರಮುಖ ರಾಜಕೀಯ ನಾಯಕರು ಸೋಲು ಅನುಭವಿಸಿದ್ದಾರೆ. ಇದರಲ್ಲಿ ಮುಖ್ಯವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಸೇರಿದ್ದಾರೆ.
ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸಿದ್ದ ಎರಡು ಕ್ಷೇತ್ರಗಳಲ್ಲೂ ಸೋಲು ಅನುಭವಿಸಿದ್ದಾರೆ. ಭವಾನಿಪುರ ಕ್ಷೇತ್ರದಲ್ಲಿ ಅವರು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ 15,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲು ಅನುಭವಿಸಿದರು. ಇನ್ನು ನಂದಿಗ್ರಾಮ್ ನಲ್ಲಿ ಕೂಡ ಸುವೇಂದು ಅಧಿಕಾರಿ ವಿರುದ್ಧ 2,000 ಕ್ಕಿಂತ ಕಡಿಮೆ ಮತಗಳ ಅಂತರದಿಂದ ಸೋಲು ಅನುಭವಿಸಿದರು.
ಎಂಕೆ ಸ್ಟಾಲಿನ್
ಡಿಎಂಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಎಂಕೆ ಸ್ಟಾಲಿನ್ ಅವರು ಕೊಳತ್ತೂರು ಕ್ಷೇತ್ರದಿಂದ ಸೋಲು ಅನುಭವಿಸಿದರು. ಅವರ ಪ್ರತಿಸ್ಪರ್ಧಿ ಟಿವಿಕೆಯ ವಿ.ಎಸ್. ಬಾಬು ಅವರು 82,997 ಮತಗಳನ್ನು ಪಡೆದರೆ ಸ್ಟಾಲಿನ್ ಅವರು 74,202 ಮತಗಳನ್ನು ಗಳಿಸಿದರು. ಸ್ಟಾಲಿನ್ ಅವರು ಈ ಹಿಂದೆ ಇಲ್ಲಿ ಮೂರು ಬಾರಿ ಗೆದ್ದಿದ್ದರು.
ಗೌರವ್ ಗೊಗೊಯ್
ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಬಿಜೆಪಿಯ ಹಿತೇಂದ್ರ ನಾಥ್ ಗೋಸ್ವಾಮಿ ವಿರುದ್ಧ ಜೋರ್ಹತ್ ಕ್ಷೇತ್ರದಲ್ಲಿ ಸೋಲು ಅನುಭವಿಸಿದರು. 20 ವರ್ಷಗಳಿಗೂ ಹೆಚ್ಚು ಕಾಲ ಈ ಸ್ಥಾನವನ್ನು ಪ್ರತಿನಿಧಿಸುತ್ತಿದ್ದ ಅವರು ಈ ಬಾರಿ 23,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲು ಅನುಭವಿಸಿದರು.
ಕೆ.ಕೆ.ಶೈಲಜಾ
ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ಪೆರಾವೂರ್ ಸ್ಥಾನದಿಂದ ಸೋಲು ಅನುಭವಿಸಿದರು. ಇವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕ ಸನ್ನಿ ಜೋಸೆಫ್ 76,000 ಕ್ಕೂ ಹೆಚ್ಚು ಮತಗಳಿಂದ ಗೆಲುವು ದಾಖಲಿಸಿದ್ದಾರೆ.
ವಿ. ವೈಥಿಲಿಂಗಂ
ಪುದುಚೇರಿಯ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ನಾಯಕ ವಿ. ವೈಥಿಲಿಂಗಂ ಅವರನ್ನು ಅಖಿಲ ಭಾರತ ಎನ್ಆರ್ ಕಾಂಗ್ರೆಸ್ ಸ್ಥಾಪಕ ಮತ್ತು ನಾಯಕ, ಮುಖ್ಯಮಂತ್ರಿ ಎನ್ ರಂಗಸಾಮಿ ಅವರು ತಟ್ಟಂಚವಾಡಿ ಕ್ಷೇತ್ರದಲ್ಲಿ 4,441 ಮತಗಳ ಅಂತರದಿಂದ ಸೋಲಿಸಿದರು.
ವಿ.ಪಿ. ರಾಮಲಿಂಗಮೆ
ಪುದುಚೇರಿ ವಿಧಾನ ಸಭಾ ಚುನಾವಣೆ ಕಣದಲ್ಲಿ ಬಿಜೆಪಿ ಮುಖ್ಯಸ್ಥ ವಿ.ಪಿ. ರಾಮಲಿಂಗಮೆ ಅವರು ರಾಜಭವನ ಕ್ಷೇತ್ರದಲ್ಲಿ ಡಿಎಂಕೆಯ ವಿಘ್ನೇಶ್ ಕಣ್ಣನ್ ವಿರುದ್ಧ 7,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲು ಅನುಭವಿಸಿದರು.