ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ʻಉಗ್ರಂʼ ಮಂಜು; ಈ ಮದುವೆಗೆ ಯಾರೆಲ್ಲಾ ಹೋಗಿದ್ರು ನೋಡಿ

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಹಾಗೂ 'ಬಿಗ್‌ ಬಾಸ್ ಕನ್ನಡ' ಖ್ಯಾತಿಯ ಉಗ್ರಂ ಮಂಜು ಅವರು ಇಂದು (ಜ.23) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ, ಗುರು-ಹಿರಿಯರ ಸಮ್ಮುಖದಲ್ಲಿ ಮಂಜು ಅವರು ಸಾಯಿ ಸಂಧ್ಯಾ ಅವರ ಕೊರಳಿಗೆ ತಾಳಿ ಕಟ್ಟುವ ಮೂಲಕ ಹೊಸ ಬದುಕಿಗೆ ನಾಂದಿ ಹಾಡಿದರು. ಧರ್ಮಸ್ಥಳದಲ್ಲಿ ನಡೆದ ಈ ಮದುವೆ ಸಮಾರಂಭದಲ್ಲಿ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಭಾಗಿಯಾಗಿದ್ದರು. ಮಂಜು ಅವರ ಕೈಹಿಡಿದಿರುವ ಸಾಯಿ ಸಂಧ್ಯಾ ಅವರು ವೃತ್ತಿಯಲ್ಲಿ ಟ್ರಾನ್ಸ್‌ಪ್ಲಾಂಟ್ ಕೋ-ಆರ್ಡಿನೇಟರ್ ಆಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರ ಆಡಳಿತ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Photos: ಧರ್ಮಸ್ಥಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ʻಉಗ್ರಂʼ ಮಂಜು

-

Avinash GR
Avinash GR Jan 23, 2026 8:53 PM