ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕನ್ನಡದಲ್ಲೇ ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ನರೇಂದ್ರ ಮೋದಿ; ಕೇಂದ್ರ ಸಚಿವ ತಿರು ಎಲ್‌. ಮುರುಗನ್‌ ನಿವಾಸದಲ್ಲಿ ಹಬ್ಬ ಆಚರಣೆ

ಹಿಂದೂಗಳ ಪ್ರಮುಖ ಹಬ್ಬ ಸಂಕ್ರಾಂತಿ. ಸೂರ್ಯ ಉತ್ತರಾಯಣಕ್ಕೆ ಪ್ರವೇಶಿಸುವ ಈ ಸಂಕ್ರಮಣ ಕಾಲವನ್ನು ಸುಗ್ಗಿಯ ಹಬ್ಬ ಎಂದೂ ಕರೆಯಲಾಗುತ್ತದೆ. ಈ ಬಾರಿ ಮಕರ ಸಂಕ್ರಾಂತಿ ಜನವರಿ 14ರ ಮಧ್ಯಾಹ್ನ ಆರಂಭವಾಗಿ 15ರವರೆಗೂ ವಿಸ್ತರಣೆಯಾಗಿರುವುದು ವಿಶೇಷ. ಹಬ್ಬದ ಪ್ರಯುಕ್ತ ದೆಹಲಿಯಲ್ಲಿರುವ ಕೇಂದ್ರ ಸಚಿವ ತಿರು ಎಲ್‌. ಮುರುಗನ್‌ ಅವರ ನಿವಾಸದಲ್ಲಿ ಆಯೋಜಿಸಿದ್ದ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಜತೆಗೆ ಕನ್ನಡದಲ್ಲೇ ಕನ್ನಡಿಗರಿಗೆ ಮಕರ ಸಂಕ್ರಾಂತಿಯ ಶುಭಾಶಯ ತಿಳಿಸಿದರು.

ಕನ್ನಡದಲ್ಲೇ ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಸಂಕ್ರಾಂತಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ -

Ramesh Ballamoole
Ramesh Ballamoole Jan 14, 2026 7:37 PM