ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kantara Chapter 1: 'ಕಾಂತಾರ: ಚಾಪ್ಟರ್‌ 1' ರಿಲೀಸ್‌ಗೆ ದಿನಗಣನೆ; ಕೊಲ್ಲೂರು ದೇಗುಲಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ

ಜಾಗತಿಕ ಸಿನಿಪ್ರಿಯರ ಗಮನ ಸೆಳೆದ ʼಕಾಂತಾರ: ಚಾಪ್ಟರ್‌ 1' ಅಕ್ಟೋಬರ್‌ 2ರಂದು ವಿಶ್ವಾದ್ಯಂತ ರಿಲೀಸ್‌ ಆಗಲಿದೆ. ಈಗಾಗಲೇ ಚಿತ್ರದ ಟ್ರೈಲರ್‌ ರಿಲೀಸ್‌ ಆಗಿದ್ದು, ಭಾರಿ ಸಂಚಲನ ಸೃಷ್ಟಿಸಿದೆ. ಇದೀಗ ಕರ್ನಾಟಕದಲ್ಲಿನ ಟಿಕೆಟ್‌ ಬುಕ್ಕಿಂಗ್‌ ಆರಂಭವಾಗಿದ್ದು, ಭರ್ಜರಿ ಪ್ರತಿಕ್ರಿಯೆ ಲಭಿಸಿದೆ. ನಿಧಾನವಾಗಿ ಚಿತ್ರತಂಡ ಪ್ರಚಾರಕ್ಕೆ ಇಳಿದಿದೆ. ಈ ಮಧ್ಯೆ ಚಿತ್ರದ ನಿರ್ದೇಶಕ, ನಾಯಕ ರಿಷಬ್‌ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ದಂಪತಿ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.

1/5

ʼಕಾಂತಾರ: ಚಾಪ್ಟರ್‌ 1ʼ ಚಿತ್ರದಲ್ಲಿ ವಸ್ತ್ರ ವಿನ್ಯಾಸಕಿಯಾಗಿ ಪ್ರಗತಿ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ. 4-5 ಶತಮಾನದಲ್ಲಿ ನಡೆಯುವ, ಕದಂಬ ರಾಜಾಡಳಿತ ಕಾಲದಲ್ಲಿ ಕರಾವಳಿಯಲ್ಲಿ ನಡೆಯುವ ಕಥೆ ಇದಾಗಿದ್ದು, ಕಲಾವಿದರ ಉಡುಗೆ-ತೊಡುಗೆಯನ್ನು ಕೂಡ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಚಿತ್ರದ ಕಾಸ್ಟ್ಯೂಮ್‌ಗಾಗಿ ಸೆಟ್‌ನಲ್ಲಿ ಪ್ರತಿದಿನ 40 ಟೈಲರ್, 30 ವಸ್ತ್ರ ವಿನ್ಯಾಸಕರು ಕೆಲಸ ಮಾಡಿದ್ದರು.

2/5

ಈಗಾಗಲೇ ಚಿತ್ರತಂಡ ಪ್ರಮೋಷನ್‌ ಕಾರ್ಯಕ್ಕೆ ಇಳಿದಿದ್ದು, ವಿವಿಧ ನಗರಗಳಲ್ಲಿ ಪ್ರೆಸ್‌ಮೀಟ್‌ ಆಯೋಜಿಸಲಾಗಿದೆ. ಇದೆಲ್ಲದರ ಮಧ್ಯೆ ರಿಷಬ್‌ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ತಮ್ಮ ಮಕ್ಕಳೊಂದಿಗೆ ಕೊಲ್ಲೂರು ದೇಗುಲಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು.

3/5

2022ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ʼಕಾಂತಾರʼ ಚಿತ್ರದ ಪ್ರೀಕ್ವೆಲ್‌ ಇದಾಗಿದ್ದು, ಸೆಟ್ಟೇರಿದಾಗಿನಿಂದಲೇ ಕುತೂಹಲ ಕೆರಳಿಸಿದೆ. ಹೊಂಬಾಳೆ ಫಿಲ್ಮ್ಸ್‌ ಅದ್ಧೂರಿಯಾಗಿ ನಿರ್ಮಿಸುವ ಈ ಚಿತ್ರದ ಶೂಟಿಂಗ್‌ ಸುಮಾರು 250 ದಿನಗಳ ಕಾಲ ನಡೆದಿದೆ.

4/5

ಕೊಲ್ಲೂರು, ಕುಂದಾಪುರ, ಕೆರಾಡಿ, ತೀರ್ಥಹಳ್ಳಿ ಸುತ್ತಮುತ್ತಲಿನ ಕಾಡುಗಳಲ್ಲಿ, ಗ್ರಾಮಗಳಲ್ಲಿ ಶೂಟಿಂಗ್‌ ನಡೆಸಲಾಗಿದೆ. ನೈಜ ಕಾಡಿನಲ್ಲಿಯೇ ಚಿತ್ರೀಕರಣ ಮಾಡಿದ್ದು ವಿಶೇಷ.

5/5

ವಿಶೇಷ ಎಂದರೆ ಅರಮನೆ ಪೂರ್ತಿ ಎಸಿ ಫ್ಲೋರ್‌ ಸೆಟ್ ಹಾಕಲಾಗಿತ್ತು. ಈ ಅರಮನೆ ಸೆಟ್‌ಗಾಗಿ ಬರೋಬ್ಬರಿ 10 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಸೆಟ್‌ನಲ್ಲಿ ಕೆಲಸ ಮಾಡುವವರಿಗೆ 10 ಲಕ್ಷ ರೂ. ವಿಮೆಯನ್ನೂ ಮಾಡಿಸಲಾಗಿತ್ತು.