ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಾಜಕೀಯ

ಮೋದಿ ಪ್ರಧಾನಿಯಾಗಿರುವಷ್ಟು ಅವಧಿ ನೆಹರೂ ದೇಶಕ್ಕಾಗಿ ಜೈಲಿನಲ್ಲಿದ್ದರು; ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಕೇಂದ್ರದ ವಿರುದ್ಧ ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಗುಡುಗು

Vande Mataram Row: ʼʼಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಹುದ್ದೆಯಲ್ಲಿರುವಷ್ಟು ಸಮಯ ನೆಹರೂ ದೇಶಕ್ಕಾಗಿ ಜೈಲಿನಲ್ಲಿ ಕಾಲ ಕಳೆದಿದ್ದರುʼʼ ಎಂದು ಲೋಕಸಭೆಯಲ್ಲಿ ವಯನಾಡು ಸಂಸದೆ ಪ್ರಿಯಾಂಕಾ ಗಾಂದಿ ವಾಗ್ದಾಳಿ ನಡೆಸಿದರು. ಆ ಮೂಲಕ ನೆಹರೂ ಅವರನ್ನು ಟೀಕಿಸುವ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರನ್ನು ಪ್ರಿಯಾಂಕಾ ತರಾಟೆಗೆ ತೆಗೆದುಕೊಂಡರು.

BJP Protest: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

Nelamangala News: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರವನ್ನು ಆಗ್ರಹಿಸಿ, ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ವತಿಯಿಂದ ನೆಲಮಂಗಲದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಗ್ರಾಮಾಂತರ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ಭೃಂಗೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

Telangana Rising Global Summit-2025: ಹೈದರಾಬಾದ್‌, ಬೆಂಗಳೂರು ಪರಸ್ಪರ ಸ್ಪರ್ಧಿಗಳಲ್ಲ: ಡಿ.ಕೆ.ಶಿವಕುಮಾರ್‌

ಹೈದರಾಬಾದ್‌, ಬೆಂಗಳೂರು ಪರಸ್ಪರ ಸ್ಪರ್ಧಿಗಳಲ್ಲ: ಡಿ.ಕೆ.ಶಿವಕುಮಾರ್‌

ನಾವು ಬೆಂಗಳೂರು, ಹೈದರಾಬಾದ್‌ ನಗರಗಳನ್ನು ಬಿಟ್ಟು ಭಾರತದ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ನಾವು ಸ್ಪರ್ಧಿಗಳಲ್ಲ, ಪರಸ್ಪರ ಸ್ನೇಹ, ಸಹಕಾರದಿಂದ ಒಟ್ಟಾಗಿ ಅಭಿವೃದ್ಧಿ ಪಥದಲ್ಲಿ ಸಾಗುವ ಮೂಲಕ ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ತೆಲಂಗಾಣ ರೈಸಿಂಗ್‌ ಜಾಗತಿಕ ಶೃಂಗಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಕರೆ ನೀಡಿದ್ದಾರೆ.

ಬಂಕಿಮ್ ಚಂದ್ರ ಚಟರ್ಜಿಯನ್ನು ನಿರ್ಲಕ್ಷಿಸಿದ ಬಂಗಾಳ ಸರ್ಕಾರ: ವಂದೇ ಮಾತರಂ ಚರ್ಚೆಯ ನಡುವೆ ಮರಿಮೊಮ್ಮಗ ಹೇಳಿದ್ದೇನು?

'ವಂದೇ ಮಾತರಂ' ಚರ್ಚೆಯ ನಡುವೆ ಚಟರ್ಜಿ ಮರಿಮೊಮ್ಮಗ ಹೇಳಿದ್ದೇನು?

Vande Mataram Debate: ಬಂಕಿಮ್ ಚಂದ್ರ ಚಟರ್ಜಿ ಅವರ ʼವಂದೇ ಮಾತರಂʼ ಗೀತೆಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಚರ್ಚೆ, ರಾಜಕೀಯ ಮಧ್ಯೆ ಅವರ ಅಗಾಧ ಕೊಡುಗೆಯನ್ನು ಮರೆಯಲಾಗಿದೆ ಎಂದು ಮರಿಮೊಮ್ಮಗ ಸಜಲ್ ಚಟರ್ಜಿ ಆರೋಪಿಸಿದ್ದಾರೆ.

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಅನ್ನೋದು ಮಹಾನ್ ಅಪರಾಧವೇ?; ಸಿಎಂ, ಸಚಿವ ಮಹದೇವಪ್ಪಗೆ ಕುಮಾರಸ್ವಾಮಿ ಪ್ರಶ್ನೆ

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಅನ್ನೋದು ಮಹಾನ್ ಅಪರಾಧವೇ?: ಎಚ್‌ಡಿಕೆ

Bhagavad Gita in school syllabus: ಸಮಾಜ ಯಾವ ದಿಕ್ಕಿಗೆ ಹೋಗುತ್ತಿದೆ ಎಂಬುದನ್ನು ನಾವು ನಿತ್ಯವೂ ನೋಡುತ್ತಿದ್ದೇವೆ. ಒಳ್ಳೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಮಕ್ಕಳಿಗೆ ಚಿಕ್ಕಂದಿನಿಂದಲೇ ಭಗವದ್ಗೀತೆ ಕಲಿಸಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Laxmi Hebbalkar: ಮಠಗಳ ಸೇವಾ ಕಾರ್ಯ ಸರ್ಕಾರಕ್ಕೆ ಸ್ಫೂರ್ತಿ: ಲಕ್ಷ್ಮಿ ಹೆಬ್ಬಾಳ್ಕರ್

ಮಠಗಳ ಸೇವಾ ಕಾರ್ಯ ಸರ್ಕಾರಕ್ಕೆ ಸ್ಫೂರ್ತಿ: ಲಕ್ಷ್ಮಿ ಹೆಬ್ಬಾಳ್ಕರ್

ಸರ್ಕಾರಕ್ಕೆ ಸಮಾನವಾಗಿ ಸಾಮಾಜಿಕ ಕೆಲಸ ಕಾರ್ಯಗಳನ್ನು ನಮ್ಮ ಶ್ರೀಮಠಗಳು ಮಾಡುತ್ತಿವೆ. ಅಕ್ಷರ ದಾಸೋಹ, ಅನ್ನ, ಆರೋಗ್ಯ ದಾಸೋಹಗಳನ್ನು ಸರ್ಕಾರ ಕಾಪಿ ಮಾಡುತ್ತಿವೆ. ಮಠಗಳ ಕೆಲಸವೇ ಸರ್ಕಾರಕ್ಕೆ ಸ್ಫೂರ್ತಿಯಾಗಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ 200 ರೈತರ ಆತ್ಮಹತ್ಯೆ ನಿಮ್ಮ ಕೊಡುಗೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

ಮಂಡ್ಯ ಜಿಲ್ಲೆಯಲ್ಲಿ 200 ರೈತರ ಆತ್ಮಹತ್ಯೆ ನಿಮ್ಮ ಕೊಡುಗೆ; ಕುಮಾರಸ್ವಾಮಿ

HD Kumaraswamy: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ, ಈಗ ಏನೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ: ಡಿ.ಕೆ. ಶಿವಕುಮಾರ್

ಉ.ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ: ಡಿಕೆಶಿ

DK Shivakumar: ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ರಾಹುಲ್ ಗಾಂಧಿ ಪ್ರತಿಪಕ್ಷ ನಾಯಕರೇ? ನಿರಾಧಾರ ಆರೋಪಗಳ ಸರದಾರರೇ?

ರಾಹುಲ್ ಗಾಂಧಿ ನಿರಾಧಾರ ಆರೋಪಗಳ ಸರದಾರರೇ?

Rahul Gandhi: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರಕಾರದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾರೆ. ಈ ಸಲ ನಿರಾಧಾರವಾದ ಗಂಭೀರ ಆಪಾದನೆಯನ್ನು ಮಾಡಿದ್ದಾರೆ. ಕೇಂದ್ರ ಸರಕಾರವು ಪ್ರತಿಪಕ್ಷಗಳನ್ನು ಕಡೆಗಣಿಸುತ್ತಿದೆ. ವಿದೇಶಿ ಗಣ್ಯ ವ್ಯಕ್ತಿಗಳು ಆಗಮಿಸಿದಾಗ ಅವರು ತಮ್ಮನ್ನು ಭೇಟಿಯಾಗಲು ಬಿಡುತ್ತಿಲ್ಲ ಎಂದು ರಾಹುಲ್‌ ಗಾಂಧಿಯವರು ಆರೋಪಿಸಿದ್ದಾರೆ. ಹಾಗಾದರೆ ವಾಸ್ತವವೇನು? ಇಲ್ಲಿದೆ ವಿವರ.

Maize Procurement: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ; ಹಾವೇರಿಯಲ್ಲಿ ರೈತರ ಸಂಭ್ರಮಾಚರಣೆ

ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ

Maize growers protest: ಹಾವೇರಿ ಸೇರಿ ವಿವಿಧೆಡೆ ಪ್ರತಿಭಟನೆ ನಡೆಸಿದ್ದ ಮೆಕ್ಕೆಜೋಳ ಬೆಳೆಗಾರರು, ಪ್ರತಿ ರೈತನಿಂದ 100 ಕ್ವಿಂಟಲ್​​​ ಮೆಕ್ಕೆಜೋಳ ಖರೀದಿಸಬೇಕು, ಪ್ರತಿ ಕ್ವಿಂಟಲ್‌ಗೆ 3000 ರೂ. ನೀಡಬೇಕು ಎಂದು ಆಗ್ರಹಿಸಿದ್ದರು. ಆದರೆ, ಇದೀಗ 50 ಕ್ವಿಂಟಲ್ ಖರೀದಿಗೆ ಸರ್ಕಾರ ಒಪ್ಪಿದೆ.

ನನ್ನದು ಕೃಷ್ಣ ತತ್ವ, ಕಾಂಗ್ರೆಸ್‌ನದ್ದು ಕಂಸ ತತ್ವ; ಸಿದ್ದರಾಮಯ್ಯ, ಮಹದೇವಪ್ಪಗೆ ಎಚ್‌ಡಿಕೆ ತಿರುಗೇಟು

ನನ್ನದು ಕೃಷ್ಣ ತತ್ವ, ಕಾಂಗ್ರೆಸ್‌ನದ್ದು ಕಂಸ ತತ್ವ ಎಂದ ಕುಮಾರಸ್ವಾಮಿ

Bhagavad Gita in school syllabus: ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ ಇಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

Year Ender 2025: ಈ ವರ್ಷದಲ್ಲಿ ರಾಜಕೀಯಕ್ಕೆ ಪ್ರವೇಶ ಪಡೆದ ಹೊಸಬರು

ರಾಜಕೀಯ ಪ್ರವೇಶ ಪಡೆದ ಹೊಸ ಮುಖಗಳು

ವರ್ಷಾಂತ್ಯದಲ್ಲಿ ಈಗ ನಾವಿದ್ದೇವೆ. ರಾಜಕೀಯದಲ್ಲಿ ಈ ಬಾರಿ ಎಲ್ಲರ ಗಮನ ಸೆಳೆದಿದ್ದು ಬಿಹಾರ ವಿಧಾನ ಸಭಾ ಚುನಾವಣೆ. ಇದರಲ್ಲಿ ಎನ್ ಡಿಎ ಭಾರಿ ಪ್ರಮಾಣದ ಗೆಲುವು ಸಾಧಿಸಿದ್ದು ಒಂದು ದಾಖಲೆಯಾದರೆ ಈ ವರ್ಷದಲ್ಲಿ ಹೊಸದಾಗಿ ಹಲವಾರು ಮಂದಿ ರಾಜಕೀಯಕ್ಕೆ ಪ್ರವೇಶ ಪಡೆದಿದ್ದಾರೆ.

ಡೀಪ್‌ಫೇಕ್‌ಗೆ ಪೂರ್ವಾನುಮತಿ ಕಡ್ಡಾಯಗೊಳಿಸಲು ಲೋಕಸಭೆಯಲ್ಲಿ ಮಸೂದೆ ಮಂಡನೆ

ಡೀಪ್‌ಫೇಕ್‌ಗೆ ಕಡಿವಾಣ; ಮಸೂದೆ ಮಂಡನೆ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಡೀಪ್‌ಫೇಕ್‌ ವಿಡಿಯೊ ವೈರಲ್ ಆದ ಬೆನ್ನಲ್ಲೇ ಇದೀಗ ಲೋಕಸಭೆಯಲ್ಲಿ ಡೀಪ್‌ಫೇಕ್‌ಗೆ ಕಡಿವಾಣ ಹಾಕಲು ಮಸೂದೆಯನ್ನು ಮಂಡಿಸಲಾಗಿದೆ. ಈ ಮಸೂದೆಯ ಪ್ರಕಾರ ಡೀಪ್‌ಫೇಕ್ ವಿಷಯದಲ್ಲಿ ಯಾವುದೇ ವ್ಯಕ್ತಿಯನ್ನು ಚಿತ್ರೀಕರಿಸಲು ಮುಂದಾದರೆ ಅದಕ್ಕೆ ಪೂರ್ವಾನುಮತಿಯನ್ನು ಕಡ್ಡಾಯಗೊಳಿಸುವ ಉದ್ದೇಶವನ್ನು ಇದು ಹೊಂದಿದೆ.

Expensive watch row: ನನ್ನ ದುಡ್ಡಲ್ಲಿ ನಾನು ಎಷ್ಟು ವಾಚ್ ಬೇಕಾದ್ರೂ ಖರೀದಿ ಮಾಡ್ತೇನೆ ಎಂದ ಡಿಕೆಶಿ

ನನ್ನ ದುಡ್ಡಲ್ಲಿ ನಾನು ಎಷ್ಟು ವಾಚ್ ಬೇಕಾದ್ರೂ ಖರೀದಿ ಮಾಡ್ತೇನೆ: ಡಿಕೆಶಿ

ನಾನು 1 ಸಾವಿರ ರೂಪಾಯಿ ವಾಚನ್ನೂ ಕಟ್ಟುವೆ, 10 ಲಕ್ಷ ರೂಪಾಯಿ ವಾಚನ್ನೂ ಕಟ್ಟುವೆ. ಅದು ನನಗೆ ಬಿಟ್ಟ ವಿಚಾರ. ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ. ಪಾಪ, ವಿರೋಧ ಪಕ್ಷದ ನಾಯಕರಿಗೆ ಅನುಭವದ ಕೊರತೆ ಇದೆ. ಅವರಿಗೆ ಚುನಾವಣೆ ನಿಂತ ಅನುಭವವೂ ಇಲ್ಲ. ಹೀಗಾಗಿ ಗೊತ್ತಿಲ್ಲದೆ ಮಾತನಾಡಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿರುವುದರಿಂದ ಪ್ರತಿಕ್ರಿಯೆ ನೀಡಿದ್ದೇನೆ. ಬೇರೆಯವರಾಗಿದ್ದರೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Pralhad Joshi: ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ರಾಷ್ಟ್ರ ಭಾರತ: ಪ್ರಲ್ಹಾದ್‌ ಜೋಶಿ

ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ರಾಷ್ಟ್ರ ಭಾರತ: ಜೋಶಿ

Solar Energy: ಕಳೆದ 11 ವರ್ಷಗಳಲ್ಲಿ ದೇಶದ ಸೌರ ಸಾಮರ್ಥ್ಯ ಕೇವಲ 2.8 GW ಇತ್ತು. ಇದೀಗ ಸುಮಾರು 130 GW ಗೆ ಬೆಳೆದಿದೆ. ಇದು 4,500% ಕ್ಕಿಂತ ಹೆಚ್ಚು ಏರಿಕೆಯಾಗಿದೆ. 2022 ಮತ್ತು 2024ರ ನಡುವೆ, ಭಾರತ ಜಾಗತಿಕ ಸೌರ ಸೇರ್ಪಡೆಗಳಿಗೆ 46 GW ಕೊಡುಗೆ ನೀಡಿದ್ದು, ಮೂರನೇ ಅತಿದೊಡ್ಡ ಕೊಡುಗೆದಾರ ರಾಷ್ಟ್ರವಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Karnataka CM Row: ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡವೇ ಬೇಡ ಎಂದ ಕೆ.ಎನ್‌. ರಾಜಣ್ಣ!

ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ ಎಂದ ಕೆ.ಎನ್‌. ರಾಜಣ್ಣ!

KN Rajanna: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿದ್ದ ಚರ್ಚೆ, ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನಡುವೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸ್ಪಲ್ಪ ತಣ್ಣಗಾಗಿದೆ. ಈ ನಡುವೆ ಮಾಜಿ ಸಚಿವ ಕೆ.ಎನ್‌.ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ.

ಭೂಮಿಗೆ ಹೊರೆಯಾದವರಿಗೆ ಯಮರಾಜ ಕಾಯುತ್ತಿರುತ್ತಾನೆ: ದುಷ್ಕರ್ಮಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ  ಸಿಎಂ ಯೋಗಿ ಆದಿತ್ಯನಾಥ್‌

ಸರ್ಕಾರ ನಡೆಸಿದ ಎನ್ ಕೌಂಟರ್ ಸಮರ್ಥಿಸಿಕೊಂಡ ಯೋಗಿ

ಅಭಿವೃದ್ಧಿ ಪ್ರಾರಂಭವಾಗಬೇಕಾದರೆ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಯ ಪುನಃ ಸ್ಥಾಪನೆ ಅತ್ಯಗತ್ಯ. ಭೂಮಿಗೆ ಹೊರೆಯಾದವರಿಗೆ ಯಮರಾಜ ಕಾಯುತ್ತಿರುತ್ತಾನೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ರಾಜ್ಯದಲ್ಲಿ ನಡೆದಿರುವ ಎನ್ ಕೌಂಟರ್ ಬಗ್ಗೆ ಸಮರ್ಥಿಸಿಕೊಂಡರು. ಶನಿವಾರ ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಶೃಂಗಸಭೆಯಲ್ಲಿ ಅವರು ಮಾತನಾಡಿದರು.

ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಆರನೇ ಗ್ಯಾರಂಟಿ 'ಭೂಮಿ ಗ್ಯಾರಂಟಿ' ಅನುಷ್ಠಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಆರನೇ ಗ್ಯಾರಂಟಿ 'ಭೂಮಿ ಗ್ಯಾರಂಟಿ' ಅನುಷ್ಠಾನ: ಡಿ.ಕೆ. ಶಿವಕುಮಾರ್

DK Shivakumar: ಹಾಸನದಲ್ಲಿ ಶನಿವಾರ ಆಯೋಜಿಸಿದ್ದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 142 ಭರವಸೆಗಳನ್ನು ಈಡೇರಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಜೇಬಿಗೆ 1 ಲಕ್ಷ ಕೋಟಿ ಹಾಕಿದ್ದೇವೆ ಎಂದು ಡಿಸಿಎಂ ಹೇಳಿದ್ದಾರೆ.

HD Kumaraswamy: ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದ ಎಚ್.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಎಚ್‌ಡಿಕೆ

Karnataka Government: ಮಂಡ್ಯದ ವಿಸಿ ಫಾರಂನಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ, ಕುಮಾರಣ್ಣ ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಜಿಲ್ಲೆಗೆ ಏನಾದರೂ ಕೈಗಾರಿಕೆ ತರಬಹುದು ಎಂಬ ನಿರೀಕ್ಷೆ ಜನರಲ್ಲಿದೆ. ಕನಿಷ್ಠ ಒಂದು ಕಾರ್ಖಾನೆಯನ್ನಾದರು ಮಂಡ್ಯಕ್ಕೆ ತರಲು ಒಂದು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಇನ್ನೂ ಸರ್ಕಾರ ನಮಗೆ ಜಾಗ ನೀಡಿಲ್ಲ ಎಂದು ಹೇಳಿದ್ದಾರೆ.

HD Kumaraswamy: ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ?; ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ತಿರುಗೇಟು

ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ?: ಎಚ್‌ಡಿಕೆ

ಕುಮಾರಸ್ವಾಮಿ ಮನುವಾದಿ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ? ಹಾಗಾದರೆ, ಸಿದ್ದರಾಮಯ್ಯ ಅವರು ಮಕ್ಕಳಿಗೆ ಏನು ಬೋಧಿಸಲು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

HD Kumaraswamy: ನನ್ನ ಹೇಳಿಕೆಯಿಂದ ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಕ್ಷಮೆ ಕೇಳುವೆ: ಎಚ್.ಡಿ. ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ ಎಚ್.ಡಿ. ಕುಮಾರಸ್ವಾಮಿ

ರಾಜ್ಯದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ಕೂಗು ಜೋರಾದ ವೇಳೆ ಡಿ.ಕೆ.ಶಿವಕುಮಾರ್‌ ಪರ ಆದಿಚುಂಚನಗಿರಿ ಶ್ರೀಗಳು ಬೆಂಬಲ ಸೂಚಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, ನಾನು ಎರಡು ಬಾರಿ ಸಿಎಂ ಆದೆ. ಅಧಿಕಾರ ಹೋದಾಗ ನಾನು ಮಠಾಧೀಶರ ನೆರವು ಕೇಳಿಲ್ಲ ಎಂದು ಹೇಳಿದ್ದರು. ಇದೀಗ ತಮ್ಮ ಹೇಳಿಕೆಯಿಂದ ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸುವೆ ಎಂದು ತಿಳಿಸಿದ್ದಾರೆ.

HD Kumaraswamy: ಮೈಶುಗರ್‌ ಶಾಲೆ ಶಿಕ್ಷಕರಿಗೆ ನೆರವಾದ ಎಚ್.ಡಿ. ಕುಮಾರಸ್ವಾಮಿ; 19,94,200 ರೂ. ಚೆಕ್‌ ಹಸ್ತಾಂತರ

ಮೈಶುಗರ್‌ ಶಾಲೆ ಶಿಕ್ಷಕರಿಗೆ ವೇತನ ನೀಡಲು ಎಚ್.ಡಿ. ಕುಮಾರಸ್ವಾಮಿ ನೆರವು

Mandya Mysugar School: ಹದಿನೈದು ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ. ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಶನಿವಾರ 19,94,200 ಮೊತ್ತದ ಚೆಕ್‌ ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದ್ದಾರೆ.

Karnataka Weather: ಮುಂದಿನ 2 ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಉಳಿದೆಡೆ ಒಣ ಹವೆ

ಮುಂದಿನ 2 ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಬಹುತೇಕ ಕಡೆ ಶನಿವಾರ ಕೂಡ ಒಣ ಹವೆಯ ವಾತಾವರಣ ಕಂಡುಬಂದಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ.

National Herald Case: ಇಡಿ ಸಮನ್ಸ್; ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ಎಂದ ಡಿ.ಕೆ. ಶಿವಕುಮಾರ್‌

ಇಡಿ ಕಿರುಕುಳ ಖಂಡನೀಯ ಎಂದ ಡಿ.ಕೆ. ಶಿವಕುಮಾರ್

ಇಡಿ ಸಮನ್ಸ್ ನೀಡಿರುವ ಬಗ್ಗೆ ಮಾಧ್ಯಮಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇಡಿ ಚಾರ್ಜ್ ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ ಎಂದು ತಿಳಿಸಿದ್ದಾರೆ.

Loading...