ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ರಾಜಕೀಯ
PM Narendra Modi: ಮೋದಿ ಹೊಸ ದಾಖಲೆ! ಪ್ರಧಾನಿಯಾಗಿ 4,078 ದಿನಗಳು ಪೂರ್ಣ- ಇಂದಿರಾ ಗಾಂಧಿಯ ರೆಕಾರ್ಡ್‌ ಬ್ರೇಕ್‌

ಇಂದಿರಾ ಗಾಂಧಿ ದಾಖಲೆ ಮುರಿದ ಪ್ರಧಾನಿ ಮೋದಿ!

ಪ್ರಧಾನಿ ನರೇಂದ್ರ ಮೋದಿ ಜುಲೈ 25, 2025 ರಂದು ಸತತ 4,078 ದಿನಗಳನ್ನು ಅಧಿಕಾರದಲ್ಲಿ ಪೂರೈಸುತ್ತಿದ್ದಂತೆ, ಅವರು ಹಲವಾರು ಐತಿಹಾಸಿಕ ಹೆಗ್ಗಳಿಕೆಗಳಿಗೂ ಪಾತ್ರರಾಗಿದ್ದಾರೆ. ಅವರು ಅತಿ ಸುದೀರ್ಘವಾಗಿ ಪ್ರಧಾನಿ ಹುದ್ದೆಯಲ್ಲಿ ಮುಂದುವರಿದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೇ ಸತತ 4,077 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ದಾಖಲೆಯನ್ನು ಮೋದಿ ಮುರಿದಿದ್ದಾರೆ.

Himanta Biswa Sarma: ಮುಸ್ಲಿಮರ ಸಂಖ್ಯೆ 2041ರ ವೇಳೆಗೆ ಹಿಂದೂ ಜನಸಂಖ್ಯೆಗೆ  ಸಮನಾಗಬಹುದು: ಹಿಮಂತ ಬಿಸ್ವಾ ಶರ್ಮಾ

ಹಿಂದೂ ಜನಸಂಖ್ಯೆಗೆ ಸಮವಾಗಿ ಬೆಳೆಯಲಿದೆ ಮುಸ್ಲಿಂ ಸಮುದಾಯ

ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ದಿಬ್ರುಗಢದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ, ರಾಜ್ಯದ ಮುಸ್ಲಿಂ ಜನಸಂಖ್ಯೆಯು ಪ್ರಸ್ತುತ ಬೆಳವಣಿಗೆಯ ದರದಲ್ಲಿ ಮುಂದುವರಿದರೆ 2041ರ ವೇಳೆಗೆ ಹಿಂದೂ ಜನಸಂಖ್ಯೆಯೊಂದಿಗೆ ಸಮಾನವಾಗಲಿದೆ ಎಂದು ಹೇಳಿದ್ದಾರೆ.

Electoral Fraud: ರಾಜ್ಯದಲ್ಲಿ ಚುನಾವಣಾ ಅಕ್ರಮ; ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಬೆಂಬಲ

ಚುನಾವಣಾ ಅಕ್ರಮ; ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬೆಂಬಲ!

CM Siddaramaiah: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದಾರೆ. ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Vice President: ಬಿಜೆಪಿಯವರೇ ನೂತನ ಉಪರಾಷ್ಟ್ರಪತಿ: ನಿತೀಶ್ ಕುಮಾರ್ ಆಯ್ಕೆಯ ವದಂತಿ ತಳ್ಳಿ ಹಾಕಿದ ಪಕ್ಷ

ಯಾರಾಗಲಿದ್ದಾರೆ ಮುಂದಿನ ಉಪರಾಷ್ಟ್ರಪತಿ?

ಮುಂದಿನ ಉಪರಾಷ್ಟ್ರಪತಿಯಾಗಿ ಬಿಜೆಪಿಯ ಹಿರಿಯ ನಾಯಕರೊಬ್ಬರು ಆಯ್ಕೆಯಾಗಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಜಗದೀಪ್ ಧನಕರ್ ಅವರ ಆಕಸ್ಮಿಕ ರಾಜೀನಾಮೆಯಿಂದ ಖಾಲಿಯಾದ ಈ ಹುದ್ದೆಗೆ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್‌ ಅವರಂತಹ ಮಿತ್ರಪಕ್ಷದ ನಾಯಕರನ್ನು ಪರಿಗಣಿಸುವ ಊಹಾಪೋಹಗಳನ್ನು ಬಿಜೆಪಿ ಅಲ್ಲೆಳೆದಿದೆ.

Cabinet Meeting: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 49 ಕೈದಿಗಳ ಬಿಡುಗಡೆಗೆ ರಾಜ್ಯ ಸರ್ಕಾರ ನಿರ್ಧಾರ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 49 ಕೈದಿಗಳ ಬಿಡುಗಡೆಗೆ ಸರ್ಕಾರ ನಿರ್ಧಾರ

life imprisonment: ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ನಡೆದಿದ್ದು, ಬಹುಮಹಡಿ ಕಟ್ಟಡಗಳಿಗೆ ಫೈರ್‌ ಸೆಸ್‌ (Fire Cess) ವಿಧಿಸುವುದು, ಗಿಗ್ ಕಾರ್ಮಿಕರ ಸುಗ್ರೀವಾಜ್ಞೆ ವಿಧೇಯಕವಾಗಿ ಪರಿವರ್ತಿಸುವುದು ಸೇರಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

Cabinet Meeting: ಬಾಲ್ಯವಿವಾಹ ಅಷ್ಟೇ ಅಲ್ಲ, ನಿಶ್ಚಿತಾರ್ಥವು ಶಿಕ್ಷಾರ್ಹ: ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ತೀರ್ಮಾನ

ಬಾಲ್ಯವಿವಾಹ ಅಷ್ಟೇ ಅಲ್ಲ, ನಿಶ್ಚಿತಾರ್ಥವು ಶಿಕ್ಷಾರ್ಹ; ಕಾಯ್ದೆ ತಿದ್ದುಪಡಿ

Child Marriage: ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇನ್ನುಮುಂದೆ ಬಾಲ್ಯವಿವಾಹ ಅಷ್ಟೇ ಅಲ್ಲ, ನಿಶ್ಚಿತಾರ್ಥ ಮಾಡಿಕೊಂಡರೂ ಶಿಕ್ಷೆಯಾಗಲಿದೆ. ಇದಕ್ಕೆ ಸಂಬಂಧಿಸಿ ಕಾನೂನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

Cabinet Meeting: ಬಹುಮಹಡಿ ಕಟ್ಟಡಗಳಿಗೆ ಆಸ್ತಿ ತೆರಿಗೆಯೊಂದಿಗೆ ಶೇ.1 ಫೈರ್‌ ಸೆಸ್‌; ಸಚಿವ ಸಂಪುಟ ಅನುಮೋದನೆ

ಫೈರ್‌ ಸೆಸ್‌, ಆಂಬ್ಯುಲೆನ್ಸ್ ನಿರ್ವಹಣೆ ವಿಧೇಯಕಕ್ಕೆ ಸಂಪುಟ ಒಪ್ಪಿಗೆ

Cabinet Meeting: ಫೈರ್‌ ಸೆಸ್‌ ವಿಧಿಸುವುದು, ಗಿಗ್ ಕಾರ್ಮಿಕರ ಸುಗ್ರೀವಾಜ್ಞೆ ವಿಧೇಯಕವಾಗಿ ಪರಿವರ್ತಿಸುವುದು, ಆಂಬ್ಯುಲೆನ್ಸ್ ನಿರ್ವಹಣೆಗೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಸೇರಿ ಪ್ರಮುಖ ನಿರ್ಣಯಗಳನ್ನು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ.

PM Modi: ಪ್ರಧಾನಿ ಮೋದಿಗೆ ಭಾರತೀಯ ಸಮುದಾಯದಿಂದ ಲಂಡನ್‌ನಲ್ಲಿ ಭವ್ಯ ಸ್ವಾಗತ

ಪ್ರಧಾನಿ ಮೋದಿಗೆ ಲಂಡನ್‌ನಲ್ಲಿ ಸ್ವಾಗತ ಹೇಗಿತ್ತು ನೋಡಿ

ಬಹುನಿರೀಕ್ಷಿತ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಸಮಗ್ರ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಸಲುವಾಗಿ ಎರಡು ದಿನಗಳ ಪ್ರವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ. ಬುಧವಾರ ಸಂಜೆ ಲಂಡನ್‌ಗೆ ಆಗಮಿಸಿದ ವೇಳೆ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಭಾರತೀಯ ಸಮುದಾಯದ ನೂರಾರು ಮಂದಿ ಮೋದಿ, ಮೋದಿ, ಭಾರತ್ ಮಾತಾ ಕಿ ಜೈ, ವಂದೇ ಮಾತರಂ ಘೋಷಣೆಗಳೊಂದಿಗೆ ಅವರನ್ನು ಬರಮಾಡಿಕೊಂಡರು.

Mahadayi Project: ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಕೆಶಿ ಕಿಡಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಕೆಶಿ ಕಿಡಿ

DK Shivakumar: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಮಾತನಾಡಿದ್ದಾರೆ. ಅವರಿಗೆ ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ಗೌರವವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

Eshwar Khandre: ಅರಣ್ಯಗಳಲ್ಲಿ ಹೊರ ರಾಜ್ಯದವರ ಜಾನುವಾರು ಮೇಯಿಸಲು ಮಾತ್ರ ನಿಷೇಧ: ಈಶ್ವರ ಖಂಡ್ರೆ ಸ್ಪಷ್ಟನೆ

ನೆರೆ ರಾಜ್ಯದವರಿಗೆ ಮಾತ್ರ ಅರಣ್ಯಗಳಲ್ಲಿ ಜಾನುವಾರು ಮೇಯಿಸಲು ಕಡಿವಾಣ

Eshwar Khandre: ಅರಣ್ಯ ಹಕ್ಕು ಕಾಯ್ದೆ-2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

MP Fund: ಶಿಕ್ಷಣಕ್ಕೆ ಡಿಜಿಟಲ್ ಸ್ಪರ್ಶ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ 100 ಶಾಲೆಗಳ ಸ್ಮಾರ್ಟ್ ಕ್ಲಾಸ್ ಯೋಜನೆಗೆ 1.46 ಕೋಟಿ ರೂ. ಅನುದಾನ

ಡಾ. ಹೆಗ್ಗಡೆಯವರಿಂದ 100 ಶಾಲೆಗಳಿಗೆ 1.46 ಕೋಟಿ ರೂ. ಅನುದಾನ

ರಾಜ್ಯಸಭಾ ಸದಸ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷ ರೂ.ಯಂತೆ ಒಟ್ಟು 1.46 ಕೋಟಿ ರೂ. ಮೊತ್ತದ ಅನುದಾನವನ್ನು ಮಂಜೂರು ಮಾಡಿದ್ದಾರೆ.

Bengaluru Stampede: ಕಾಲ್ತುಳಿತ ಪ್ರಕರಣ; ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಸಚಿವ ಸಂಪುಟ ನಿರ್ಧಾರ

ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಸಚಿವ ಸಂಪುಟ ನಿರ್ಧಾರ

karnataka cabinet meeting: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು. ಹೀಗಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

Pralhad Joshi: 1.2 ಲಕ್ಷ ಕೋಟಿ ರೂ. ವಸೂಲಿಗೆ ಅಧಿಕಾರಿಗಳಿಗೆ ಟಾರ್ಗೆಟ್‌: ರಾಜ್ಯ ಸರ್ಕಾರದ ವಿರುದ್ಧ ಜೋಶಿ ಆರೋಪ

1.2 ಲಕ್ಷ ಕೋಟಿ ರೂ. ವಸೂಲಿಗೆ ಅಧಿಕಾರಿಗಳಿಗೆ ಟಾರ್ಗೆಟ್‌: ಜೋಶಿ

ಜಿಎಸ್‌ಟಿ‌ ಕೌನ್ಸಿಲ್‌ನಲ್ಲಿ ಯಾವುದೇ ತೀರ್ಮಾನ‌ ತೆಗೆದುಕೊಳ್ಳುವಲ್ಲಿ ರಾಜ್ಯ ಸರ್ಕಾರಗಳೇ ಮಹತ್ವದ ಪಾತ್ರ ವಹಿಸುತ್ತವೆ. ರಾಜ್ಯ ಸರ್ಕಾರಕ್ಕೆ 3ನೇ ಎರಡು ಭಾಗದಷ್ಟು ಅಧಿಕಾರವಿದ್ದರೆ, ಕೇಂದ್ರ ಸರ್ಕಾರಕ್ಕೆ ಒಂದು ಭಾಗ ಮಾತ್ರ ಅಧಿಕಾರವಿದೆ. ರಾಜ್ಯ ‌ಸರ್ಕಾರಗಳ ನಿರ್ಣಯವೇ ಅಂತಿಮವಾಗಿರುತ್ತದೆ. ಹಾಗಿದ್ದರೂ ಸಿದ್ದರಾಮಯ್ಯ ಸರ್ಕಾರ ಬರೀ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

GST Protest Karnataka: ಜಿಎಸ್‌ಟಿ ತೆರಿಗೆ ಬಾಕಿ ಮನ್ನಾ ಘೋಷಣೆ ಮಾಡಿದ ಸಿಎಂ; ಪ್ರತಿಭಟನೆ ಹಿಂಪಡೆದ ವ್ಯಾಪಾರಿಗಳು

ಜಿಎಸ್‌ಟಿ ತೆರಿಗೆ ಬಾಕಿ ಮನ್ನಾ ಘೋಷಣೆ ಮಾಡಿದ ಸಿಎಂ; ಪ್ರತಿಭಟನೆ ವಾಪಸ್‌

GST Protest Karnataka: ರಾಜ್ಯದಲ್ಲಿ ಜಿಎಸ್‌ಟಿ ನೋಟಿಸ್‌ ವಿರೋಧಿಸಿ ಹೂವು, ಹಣ್ಣು, ತರಕಾರಿ, ಹಾಲು, ಬೇಕರಿ, ಕಾಂಡಿಮೆಂಟ್ಸ್​ಗಳನ್ನು ಮಾರುವ ಸಣ್ಣ ಪುಟ್ಟ ವ್ಯಾಪಾರಿಗಳು ಜುಲೈ 23ರಿಂದ ಮೂರು ದಿನ ಪ್ರತಿಭಟನೆ ಮಾಡುವುದಾಗಿ ಘೋಷಿಸಿದ್ದರು. ಅಲ್ಲದೇ ಜುಲೈ 25ರಂದು ಬೆಂಗಳೂರು ಬಂದ್‌ ಮಾಡಲು ಕೆಲ ಸಂಘಟನೆಗಳು ಘೋಷಣೆ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವರ್ತಕರು ಕೈಬಿಟ್ಟಿದ್ದಾರೆ.

Caste Census: ರಾಜ್ಯದಲ್ಲಿ ಸೆ.22ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಸೆ.22ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

CM Siddaramaiah: ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Forest Department: ಇನ್ನುಮುಂದೆ ರಾಜ್ಯದ ಅರಣ್ಯಗಳಲ್ಲಿ ಜಾನುವಾರು ಮೇಯಿಸುವುದಕ್ಕೆ ನಿಷೇಧ!

ರಾಜ್ಯದ ಅರಣ್ಯಗಳಲ್ಲಿ ಜಾನುವಾರು ಮೇಯಿಸುವುದಕ್ಕೆ ನಿಷೇಧ

Forest Department: ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು, ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

Pralhad Joshi: ರಾಜ್ಯದಲ್ಲಿ ಸಣ್ಣ ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್: ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ: ಜೋಶಿ ಸ್ಪಷ್ಟನೆ

ಸಣ್ಣ ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಜೋಶಿ ಸ್ಪಷ್ಟನೆ

Pralhad Joshi: ಜಿಎಸ್‌ಟಿ (GST)ಯಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ʼCGSTʼ ಮತ್ತು ರಾಜ್ಯ ಸರ್ಕಾರಗಳ‌ ಅಡಿಯಲ್ಲಿ ʼSGSTʼ ಎಂದು ಎರಡು ಭಾಗವಿದೆ. ಆದರಂತೆ ಕರ್ನಾಟಕದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಸ್ಪಷ್ಟಪಡಿಸಿದ್ದಾರೆ.

KUSUM-B scheme: ಕುಸುಮ್ ಬಿ ಯೋಜನೆಯಡಿ 40 ಸಾವಿರ ಪಂಪ್‌ ಸೆಟ್‌ ನೀಡಲು ಅನುಮೋದನೆ: ಸಿಎಂ

ಕುಸುಮ್ ಬಿ ಯೋಜನೆಯಡಿ 40 ಸಾವಿರ ಪಂಪ್‌ ಸೆಟ್‌ ನೀಡಲು ಅನುಮೋದನೆ: ಸಿಎಂ

KUSUM-B scheme: 25 ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ ಎಂದು ಸಿಎಂ ಸಿದ್ದರಾಮಯಯ ತಿಳಿಸಿದ್ದಾರೆ.

Krishna Byre Gowda: ಭೂಕುಸಿತ, ಕಡಲ ಕೊರೆತ ತಡೆಗೆ 800 ಕೋಟಿ ಅನುದಾನ-ಕೃಷ್ಣ ಬೈರೇಗೌಡ

ಭೂಕುಸಿತ, ಕಡಲ ಕೊರೆತ ತಡೆಗೆ 800 ಕೋಟಿ ಅನುದಾನ- ಕೃಷ್ಣ ಬೈರೇಗೌಡ

Krishna Byre Gowda: ರಾಜ್ಯದ 6 ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ತೀವ್ರವಾಗಿದ್ದು, ಈ ಭಾಗದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗಾಗಿ 500 ಕೋಟಿ ರೂ. ಮೀಸಲಿಡಲಾಗುತ್ತಿದೆ. ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲು ಕೊರೆತ ಸಮಸ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೂರು ಕೋಟಿಯಂತೆ 300 ಕೋಟಿ ರೂ. ಒದಗಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Jagdeep Dhankhar: ಕಾರ್ಯಾವಧಿ ಮುಗಿಯೋ ಮುನ್ನವೇ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಾಯಕರು ಇವರೇ ನೋಡಿ!

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಇವರು..!

74 ವರ್ಷದ ಜಗದೀಪ್ ಧನ್‌ಕರ್ ಅವರು ಸೋಮವಾರ ಭಾರತದ ಉಪರಾಷ್ಟ್ರಪತಿಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರಪತಿಗಳಿಗೆ ಕಳುಹಿಸಿದ ಅಧಿಕೃತ ಪತ್ರದಲ್ಲಿ ಆರೋಗ್ಯ ಕಾರಣಗಳನ್ನು ರಾಜೀನಾಮೆಗೆ ಕಾರಣವಾಗಿ ಉಲ್ಲೇಖಿಸಿದ್ದಾರೆ. 2022ರಿಂದ ಉಪರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿದ್ದ ಧನ್‌ಖರ್‌ರ ಅವಧಿ 2027ರವರೆಗೆ ಇತ್ತು. ಸಂವಿಧಾನದ 67(ಎ) ಲೇಖನದಂತೆ ರಾಜೀನಾಮೆ ತಕ್ಷಣದಿಂದ ಜಾರಿಗೆ ಬಂದಿದೆ.

Jagdeep Dhankhar: ಜಗದೀಪ್ ಧನ್‌ಕರ್ ರಾಜೀನಾಮೆ- ಮುಂದಿನ ಉಪರಾಷ್ಟ್ರಪತಿ ಚುನಾವಣೆ ಯಾವಾಗ?

ಧನ್‌ಕರ್ ರಾಜೀನಾಮೆ- ಮುಂದಿನ ಉಪರಾಷ್ಟ್ರಪತಿ ಚುನಾವಣೆ ಯಾವಾಗ?

The Next VP Election: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್‌ಖರ್ ಅವರು ಆರೋಗ್ಯ ಕಾರಣಗಳಿಂದ ಸೋಮವಾರ ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕಾರಣದಿಂದ, ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ ಸಿಂಗ್ ಅವರು ಸಂವಿಧಾನದ ನಿಯಮಗಳಂತೆ ರಾಜ್ಯಸಭೆಯ ತಾತ್ಕಾಲಿಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. 2022ರ ಆಗಸ್ಟ್‌ನಲ್ಲಿ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಹರಿವಂಶ್ ನಾರಾಯಣ ಸಿಂಗ್, ಮುಂದಿನ ಉಪರಾಷ್ಟ್ರಪತಿ ಚುನಾವಣೆಯವರೆಗೆ ಈ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

Jagdeep Dhankhar: ಕಟು ಮಾತಿನ ಮೂಲಕ ವಿರೋಧ ಪಕ್ಷಗಳನ್ನು ಕೆರಳಿಸಿದ್ದ ಜಗದೀಪ್ ಧನ್‌ಕರ್‌

ವಿರೋಧ ಪಕ್ಷಗಳನ್ನು ಪದೇ ಪದೆ ಕೆರಳಿಸಿದ್ದರು ಧನ್‌ಕರ್‌!

ಆರೋಗ್ಯ ಸಮಸ್ಯೆಗಳ (health reasons) ಕಾರಣದಿಂದ ಜಗದೀಪ್ ಧನ್‌ಕರ್‌ (Jagdeep Dhankhar ) ಭಾರತದ ಉಪರಾಷ್ಟ್ರಪತಿ (Vice President of India) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆಯ ಮೊದಲ ಮಳೆಗಾಲದ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಅವರು ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

Tamil Nadu Assembly Election: ಸಮಿಶ್ರ ಸರ್ಕಾರ ರಚನೆಗೆ ಎನ್‌ಡಿಎ ತಂತ್ರ ರೂಪಿಸುತ್ತಿರುವಾಗಲೇ ಮಾಜಿ ಸಚಿವ ಅನ್ವರ್ ರಾಜಾ ಡಿಎಂಕೆಗೆ ಸೇರ್ಪಡೆ

ಅನ್ವರ್ ರಾಜಾ ಡಿಎಂಕೆಗೆ ಸೇರ್ಪಡೆ

ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನವೇ ಎಐಎಡಿಎಂಕೆ ಹಿರಿಯ ನಾಯಕ ಮತ್ತು ಮಾಜಿ ಸಚಿವ ಅನ್ವರ್ ರಾಜಾ ಆಡಳಿತಾರೂಢ ಡಿಎಂಕೆಗೆ ಸೇರಿದ್ದಾರೆ. ಇದು ಎನ್‌ಡಿಎ ಬಹುದೊಡ್ಡ ಆಘಾತ ನೀಡಿದೆ. ತಮಿಳುನಾಡು ವಿಧಾನಸಭಾ ಚುನಾವಣೆ 2026ರಲ್ಲಿ ನಡೆಯಲಿದೆ.

Shivamogga News: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌, ಪರಿಶೀಲನೆ

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌

Madhu Bangarappa: ಶಿವಮೊಗ್ಗ ನಗರದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ ಹಾಗೂ ಜನರಲ್ ಮೆಡಿಸಿನ್ ವಾರ್ಡ್ ಸೇರಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ,‌ ರೋಗಿಗಳೊಂದಿಗೆ, ಸಾರ್ವಜನಿಕರು ಹಾಗೂ ಆಸ್ಪತ್ರೆ ನಾನ್ ಕ್ಲಿನಿಕಲ್ ಸಿಬ್ಬಂದಿಗಳೊಂದಿಗೆ ಮಾತನಾಡಿ, ಕುಂದು ಕೊರತೆ ಆಲಿಸಿದರು.

Loading...