ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜಕೀಯ

Anant Nag: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ನಟ ಅನಂತ್ ನಾಗ್‌ಗೆ ಪ್ರಧಾನಿ ಮೋದಿ, ಸಿಎಂ ಡಿಕೆಶಿ ಸೇರಿ ಗಣ್ಯರಿಂದ ಅಭಿನಂದನೆ

ನಟ ಅನಂತ್ ನಾಗ್‌ಗೆ ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

Dadasaheb Phalke Award 2024: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ, ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ ಗೌರವಾನ್ವಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಪ್ರಶಸ್ತಿಯನ್ನು ಸೆಪ್ಟೆಂಬರ್ 22 ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ.

“ಅಮೆರಿಕ ಪ್ರಭಾವವಿಲ್ಲ”: ಯುಪಿಐ ಶುಲ್ಕದ ಮೇಲಿನ ಬಾಹ್ಯ ಒತ್ತಡ ಆರೋಪಕ್ಕೆ ಕೇಂದ್ರ ಸರ್ಕಾರ ತಿರುಗೇಟು

ಯುಪಿಐ ಶುಲ್ಕದ ಮೇಲಿನ ಬಾಹ್ಯ ಒತ್ತಡ ಆರೋಪಕ್ಕೆ ಕೇಂದ್ರ ಹೇಳಿದ್ದೇನು?

UPI Charges: ಯುಪಿಐ ಪಾವತಿಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ದರ ಪರಿಚಯಿಸುವ ನಿರ್ಧಾರವು ವಿದೇಶಿ ಪ್ರಭಾವದಿಂದ ಪ್ರೇರಿತವಾಗಿದೆ ಎಂಬ ಆರೋಪಗಳನ್ನು ಕೇಂದ್ರ ಸರ್ಕಾರವು ತಳ್ಳಿಹಾಕಿದೆ. ವ್ಯಕ್ತಿಯಿಂದ ವ್ಯಕ್ತಿಗೆ ನಡೆಯುವ ಹಣ ವರ್ಗಾವಣೆಗಳು ಯಾವಾಗಲೂ ಸಂಪೂರ್ಣ ಉಚಿತವಾಗಿರಲಿವೆ ಎಂದು ಕೇಂದ್ರ ಸರ್ಕಾರವು ಸ್ಪಷ್ಟಪಡಿಸಿದೆ.

ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು: ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್‌ ಸೂಚನೆ

ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು: ಡಿಸಿಎಂ

Dr G Parameshwara: ರಾಜ್ಯದಾದ್ಯಂತ 43.81 ಲಕ್ಷ ಮತದಾರರ ಮ್ಯಾಪಿಂಗ್ ಆಗಿಲ್ಲ. ಹೆಸರು ತಿದ್ದುಪಡಿ ಸೇರಿದಂತೆ ಇನ್ನಿತರ ವಿಚಾರಗಳಿಗೆ ನೋಟಿಸ್ ನೀಡಲಾಗಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವ ಡಾ. ಜಿ.ಪರಮೇಶ್ವರ ಸೂಚನೆ ನೀಡಿದ್ದಾರೆ.

ಅಮೆರಿಕದ ಸೆಮಿಕಂಡಕ್ಟರ್ ಚಿಪ್ ತಯಾರಿಕಾ ಕಂಪನಿ ಅಪ್ಲೈಡ್ ಮೆಟೀರಿಯಲ್ಸ್‌ನಿಂದ ರಾಜ್ಯದಲ್ಲಿ 3,600 ಕೋಟಿ ರುಪಾಯಿ ಹೂಡಿಕೆ: ಎಂ.ಬಿ. ಪಾಟೀಲ್‌

ಅಪ್ಲೈಡ್ ಮೆಟೀರಿಯಲ್ಸ್‌ನಿಂದ 3,600 ಕೋಟಿ ರುಪಾಯಿ ಹೂಡಿಕೆ: ಎಂ.ಬಿ. ಪಾಟೀಲ್‌

MB Patil: ಅಪ್ಲೈಡ್ ಮೆಟೀರಿಯಲ್ಸ್ ಕಂಪನಿಯು ರಾಜ್ಯದಲ್ಲಿ ಮುಂದಿನ 10 ವರ್ಷಗಳಲ್ಲಿ 3,600 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ. ಬೆಂಗಳೂರು ಸಿಗ್ನೇಚರ್ ಬಿಝಿನೆಸ್ ಪಾರ್ಕ್ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಯೋಜನೆಯಿಂದ 1,000 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

Ration Card e-KYC: ಪಡಿತರದಾರರಿಗೆ ಗುಡ್‌ನ್ಯೂಸ್‌; ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಲು ವಾರದೊಳಗೆ ಮೊಬೈಲ್‌ ಆ್ಯಪ್‌ ಬಿಡುಗಡೆ

ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಲು ವಾರದೊಳಗೆ ಮೊಬೈಲ್‌ ಆ್ಯಪ್‌ ಬಿಡುಗಡೆ

ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಹೀಗಾಗಿ ನ್ಯಾಯಬೆಲೆ ಅಂಗಡಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪಡಿತರದಾರರು ಆಗಮಿಸುತ್ತಿರುವುದರಿಂದ ತಾಂತ್ರಿಕ ಸಮಸ್ಯೆ ಉಂಟಾಗಿ ಇ-ಕೆವೈಸಿ ಪ್ರಕ್ರಿಯೆ ವಿಳಂಬವಾಗಿಗುತ್ತಿದೆ. ಈ ಹಿನ್ನೆಲೆಯಲ್ಲಿ ಆಹಾರ ಸಚಿವ ರಿಜ್ವಾನ್‌ ಅರ್ಷದ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ವೈಟ್‌ಫೀಲ್ಡ್‌ನಲ್ಲಿ ವಿಶ್ವ ದರ್ಜೆಯ ಬಹುಪಯೋಗಿ ವಸ್ತು ಪ್ರದರ್ಶನ ಸಭಾಂಗಣ, ಕನ್ವೆನ್ಷನ್ ಸೆಂಟರ್ ಅಭಿವೃದ್ಧಿ: ಎಂ.ಬಿ.ಪಾಟೀಲ್‌

ವೈಟ್‌ಫೀಲ್ಡ್‌ನಲ್ಲಿ ವಿಶ್ವ ದರ್ಜೆಯ ಕನ್ವೆನ್ಷನ್ ಸೆಂಟರ್ ಅಭಿವೃದ್ಧಿ

MB Patil: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಕರ್ನಾಟಕ ವ್ಯಾಪಾರ ಉತ್ತೇಜನಾ ಸಂಸ್ಥೆ (ಕೆಟಿಪಿಒ) ಹೊಂದಿರುವ 48.35 ಎಕರೆ ಪ್ರದೇಶದಲ್ಲಿ ವಿಶ್ವ ದರ್ಜೆಯ ಕನ್ವೆನ್ಷನ್ ಸೆಂಟರ್, ಸಭಾಂಗಣ, ಪ್ರದರ್ಶನಾಂಗಣ ಇತ್ಯಾದಿಗಳಿರುವ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಮುಸ್ಲಿಮರ ಬಗ್ಗೆ ಮಾತಾಡಿದ್ರೆ ಬೀಳುತ್ತೆ ಮೊಟ್ಟೆ, ಚಪ್ಪಲಿ ಏಟು; ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡ ಇಮ್ರಾನ್‌ ಪಾಷ ಎಚ್ಚರಿಕೆ

ಚಪ್ಪಲಿ ಏಟು ಬೀಳುತ್ತೆ: ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡ ಎಚ್ಚರಿಕೆ

Muslim leader Imran Pasha: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ಜಮೀರ್ ಅಹ್ಮದ್​ ಖಾನ್ ಅವರ ಆಪ್ತ ಇಮ್ರಾನ್ ಪಾಷಾ, ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಸದ್ಯ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ.

ಸೆ.18ರ ಸಚಿವ ಸಂಪುಟ ಸಭೆಯಲ್ಲಿ ತುಳು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ: ಶಾಸಕ ಅಶೋಕ್ ಕುಮಾರ್ ರೈ

ಸಚಿವ ಸಂಪುಟ ಸಭೆಯಲ್ಲಿ ತುಳು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ

Tulu as additional official language: ಮಂಗಳೂರಿನಲ್ಲಿ ಸೆಪ್ಟೆಂ ರ್ 18 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕೆಲವೊಂದು ಮಹತ್ವದ ಘೋಷಣೆಗಳನ್ನು ರಾಜ್ಯ ಸರ್ಕಾರ ಮಾಡು ಸಾಧ್ಯತೆ ಇದೆ. ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವುದು, ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡಬೇಕೆಂಬ ಬೇಡಿಕೆ ಜಿಲ್ಲೆಯ ಜನರದ್ದಾಗಿದೆ.

Koratagere News: ಕೊರಟಗೆರೆಯಲ್ಲಿ ನೂತನ ಬಿಜೆಪಿ ಕಚೇರಿ ಉದ್ಘಾಟನೆ

ಕೊರಟಗೆರೆಯಲ್ಲಿ ನೂತನ ಬಿಜೆಪಿ ಕಚೇರಿ ಉದ್ಘಾಟನೆ

Koratagere News: ಕೊರಟಗೆರೆ ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಪಕ್ಷದ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್, ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷದ ಸಂಘಟನೆಯನ್ನು ಸದೃಢಗೊಳಿಸುವ ಮೂಲಕ ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗಿ ಎಂದು ಕರೆ ನೀಡಿದ್ದಾರೆ.

ರಾಜಸ್ಥಾನ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ಭರ್ಜರಿ ಮುನ್ನಡೆ, ಕಾಂಗ್ರೆಸ್‌ಗೆ ಭಾರಿ ಮುಖಭಂಗ

ರಾಜಸ್ಥಾನ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ

Urban Local Body Polls: ರಾಜಸ್ಥಾನದ 309 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆದಿದ್ದು, ಆಡಳಿತಾರೂಢ ಬಿಜೆಪಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಹಲವು ವಾರ್ಡ್‌ಗಳಲ್ಲಿ ಬಿಜೆಪಿಗೆ ತೀವ್ರ ಪೈಪೋಟಿ ನೀಡಿದೆ. ಸೆಪ್ಟೆಂಬರ್ 9 ಮತ್ತು 11ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು.

ಟೀ, ಅಪ್ಪುಗೆ, ಶೇಕ್‌ ಹ್ಯಾಂಡ್‌: ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮೀಯ ಕ್ಷಣಗಳು; ಅಪರೂಪದ ದೃಶ್ಯ ವೈರಲ್‌

ಪುಟಿನ್, ಜಿನ್‌ಪಿಂಗ್ ಜತೆ ಮೋದಿ; ಬ್ರಿಕ್ಸ್‌ನ ಅಪರೂಪದ ದೃಶ್ಯಗಳು ವೈರಲ್

BRICS 2026: ಬ್ರಿಕ್ಸ್ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಶಿ ಜಿನ್‌ಪಿಂಗ್ ಸೇರಿದಂತೆ ಹಲವು ವಿಶ್ವ ನಾಯಕರೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದ ಅಪರೂಪದ ದೃಶ್ಯಗಳು ಗಮನ ಸೆಳೆದಿವೆ. ಚಹಾ ಮಾತುಕತೆ, ಹಸ್ತಲಾಘವ, ಅಪ್ಪುಗೆ ಸೇರಿದಂತೆ ಶೃಂಗಸಭೆಯ ಅನೌಪಚಾರಿಕ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕನಕಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ; ಗಣೇಶೋತ್ಸವದಲ್ಲಿ ಭಾಗಿ, ಕ್ಷೇತ್ರದ ಜನರ ಕುಶಲೋಪರಿ ವಿಚಾರಣೆ

ಕನಕಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ; ಗಣೇಶೋತ್ಸವದಲ್ಲಿ ಭಾಗಿ

CM DK Shivakumar: ಕನಕಪುರ ತಾಲೂಕಿನ ಚಿಕ್ಕೇಗೌಡನದೊಡ್ಡಿಯಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ 10ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ ವಿಘ್ನ ವಿನಾಶಕ ಶ್ರೀ ಗಣೇಶನಿಗೆ ಸಿಎಂ ಡಿ.ಕೆ. ಶಿವಕುಮಾರ್‌, ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.

ದುರ್ಗಾ ಪೂಜೆಗೂ ಮುನ್ನ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಿರುಗಾಳಿ: 17 ಎನ್‌ಸಿಪಿಐ ಸಂಸದರು ಬಿಜೆಪಿ ಸೇರ್ಪಡೆ

ದುರ್ಗಾ ಪೂಜೆಗೂ ಮುನ್ನ 17 ಎನ್‌ಸಿಪಿಐ ಸಂಸದರು ಬಿಜೆಪಿ ಸೇರ್ಪಡೆ

NCPI MPs to Join BJP: ದುರ್ಗಾ ಪೂಜೆಗೂ ಮುನ್ನ 17 ಎನ್‌ಸಿಪಿಐ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದು ಟಿಎಂಸಿ ಬಂಡಾಯ ನಾಯಕ ಜಗದೀಶ್ ಚಂದ್ರ ಬರ್ಮಾ ಬಸುಣಿಯಾ ಹೇಳಿದ್ದಾರೆ. ಆರಂಭದಲ್ಲಿ ನಮ್ಮ ಯೋಜನೆಯು ಬಿಜೆಪಿಗೆ ಸೇರುವುದೇ ಆಗಿತ್ತು. ಆದರೆ ಕೆಲವರ ಆಕ್ಷೇಪಣೆಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಮೊದಲು ಎನ್‌ಸಿಪಿಐ ಪಕ್ಷಕ್ಕೆ ತಾತ್ಕಾಲಿಕ ಸೇರಲಾಯಿತು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಗ್ಯಾರಂಟಿ ಯೋಜನೆಯನ್ನು ನಕಲು ಮಾಡಿದ್ರಾ ಟ್ರಂಪ್? ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ರಾಜ್ಯದ ಗ್ಯಾರಂಟಿ ಯೋಜನೆಯನ್ನು ನಕಲು ಮಾಡಿದ್ರಾ ಟ್ರಂಪ್?

Did Trump Copy Karnataka’s Guarantee Scheme: ಗ್ಯಾರಂಟಿ ಯೋಜನೆಯನ್ನು ಮಹಾರಾಷ್ಟ್ರದಲ್ಲಿ ನಕಲು ಮಾಡಿದರು. ಮಧ್ಯಪ್ರದೇಶದಲ್ಲಿ ನಕಲು ಮಾಡಿದರು. ರಾಜಸ್ಥಾನದಲ್ಲಿ ನಕಲು ಮಾಡಿದರು. ಬಿಹಾರದಲ್ಲೂ ನಮ್ಮನ್ನೇ ನಕಲು ಮಾಡಿದರು. ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ನಮ್ಮನ್ನು ನಕಲು ಮಾಡುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ; ಕೇಂದ್ರದ ನಿಯಮಾನುಸಾರ ಬರ ತಾಲೂಕುಗಳ ಘೋಷಣೆ ಎಂದ ಸಿಎಂ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ: ಸಿಎಂ

CM DK Shivakumar: ನಾನು ಅನೇಕ ಕಡೆ ಭೇಟಿ ನೀಡಿ ಬರ ಪರಿಶೀಲನೆ ಮಾಡಿದ್ದು, ಈಗಾಗಲೇ 102 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಉಳಿದ ಕಡೆ ಪರಿಶೀಲನೆ ನಡೆಯುತ್ತಿದೆ. ಯಾರೂ ಆತುರ ಪಡುವುದು ಬೇಡ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬಿಜೆಪಿ ಹೇಳಿದಂತೆ ಟಿ.ನರಸೀಪುರ ಇನ್ಸ್‌ಪೆಕ್ಟರ್‌ನ ಸಸ್ಪೆಂಡ್‌ ಮಾಡಕ್ಕಾಗಲ್ಲ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ಬಿಜೆಪಿ ಹೇಳಿದಂತೆ ಇನ್ಸ್‌ಪೆಕ್ಟರ್‌ನ ಸಸ್ಪೆಂಡ್‌ ಮಾಡಕ್ಕಾಗಲ್ಲ

ರಾಜ್ಯದಲ್ಲಿ ಗಣೇಶೋತ್ಸವ ಮತ್ತು ಈದ್ ಸೇರಿದಂತೆ ಎಲ್ಲ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಸರ್ವ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಹಬ್ಬಗಳ ವಿಚಾರದಲ್ಲಿ ವಿರೋಧ ಪಕ್ಷಗಳು ಅನಗತ್ಯವಾಗಿ ಹುಳಿ ಹಿಂಡುವ ಕೆಲಸ ಬಿಡಬೇಕು ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಟೀಕಿಸಿದ್ದಾರೆ.

ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಕುತಂತ್ರ: ಸಿಎಂ ಆರೋಪ

ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಕುತಂತ್ರ: ಸಿಎಂ ಆರೋಪ

ಗಣೇಶೋತ್ಸವ ಆಚರಣೆಗೆ ಸರ್ಕಾರ ಅನೇಕ ನಿರ್ಬಂಧ ಹೇರಿದೆ ಎಂಬ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಹೇಳಿಕೆ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತಿಕ್ರಿಯಿಸಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯವರು ಕೋಮು ಪ್ರಚೋದನೆ ಮಾಡುತ್ತಿದ್ದಾರೆ. ಗಣೇಶ ಹಬ್ಬವನ್ನು ಬಹಳ ಶಾಂತಿಯುತವಾಗಿ ಆಚರಣೆ ಮಾಡಬೇಕು. ಮೆರವಣಿಗೆ ಹೋಗುವಾಗ ಶಿಸ್ತು ಪಾಲನೆ ಆಗಬೇಕು ಎಂದು ಸಿಎಂ ತಿಳಿಸಿದ್ದಾರೆ.

“ಶೇಕಡಾ 80ರಷ್ಟು ಭಾರತೀಯರು ಮಾಂಸಾಹಾರಿಗಳು”: ಬ್ರಿಕ್ಸ್ ಔತಣಕೂಟದಲ್ಲಿ ಸಸ್ಯಾಹಾರಿ ಮೆನುವಿನ ಬಗ್ಗೆ ರಾಹುಲ್ ಗಾಂಧಿ ವಾಗ್ದಾಳಿ

ಬ್ರಿಕ್ಸ್ ಔತಣಕೂಟದಲ್ಲಿ ಸಸ್ಯಾಹಾರಿ ಮೆನುವಿನ ಬಗ್ಗೆ ರಾಹುಲ್ ವಾಗ್ದಾಳಿ

Rahul Gandhi: ಬ್ರಿಕ್ಸ್ ಶೃಂಗಸಭೆಯ ಔತಣಕೂಟದಲ್ಲಿ ನೀಡಲಾದ ಸಸ್ಯಾಹಾರಿ ಮೆನುವಿನ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ವಿದೇಶಿ ಗಣ್ಯರ ಮೇಲೆ ಸರ್ಕಾರವು ತನ್ನ ಆಹಾರದ ಆಯ್ಕೆಗಳನ್ನು ಹೇರುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಸಹ ಆರೋಪಿಸಿದ್ದಾರೆ.

BJP Protest in T Narasipura: ಟಿ.ನರಸೀಪುರ ಠಾಣೆ ಮುಂದೆ ಅಹೋರಾತ್ರಿ ಧರಣಿಗೆ ಮುಂದಾದ ಬಿಜೆಪಿ ನಾಯಕರು; ಪ್ರತಾಪ್ ಸಿಂಹ, ಅಶೋಕ್, ಯದುವೀರ್ ಸೇರಿ ಹಲವರು ಪೊಲೀಸರ ವಶಕ್ಕೆ

ಟಿ.ನರಸೀಪುರ ಠಾಣೆ ಮುಂದೆ ಪ್ರತಿಭಟನೆ; ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಟಿ.ನರಸೀಪುರದ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಅವರು ಗಣೇಶ ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿದರೆ ಗ್ರಹಚಾರ ಬಿಡಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು. ಈ ವಿಡಿಯೊ ವೈರಲ್‌ ಆದ ಬಳಿಕ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿ ನಾಯಕರು ಟಿ.ನರಸೀಪುರ ಠಾಣೆ ಮುಂದೆ ಅಹೋರಾತ್ರಿ ಧರಣಿ ನಡೆಸಲು ಮುಂದಾದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕುಮಾರಸ್ವಾಮಿ ಅವರ ಅಲ್ಲೋಲ ಕಲ್ಲೋಲ‌ವನ್ನು ಬಿಡಿಸಿ ಹೇಳಬೇಕೇ?; ನಮ್ಮನ್ನು ಸೀಳಿ ಇಡಿ, ಸಿಬಿಐಗೆ ನೀಡಲಿ ಎಂದ ಸಿಎಂ ಡಿಕೆಶಿ

ಕುಮಾರಸ್ವಾಮಿಯ ಅಲ್ಲೋಲ ಕಲ್ಲೋಲ‌ವನ್ನು ಬಿಡಿಸಿ ಹೇಳಬೇಕೇ? ಸಿಎಂ

ಕುಮಾರಸ್ವಾಮಿಯವರು ನನ್ನನ್ನು ಅಧಿಕಾರದಿಂದ ಇಳಿಸಿ ಬಿಡ್ತೇನೆ, ದೆಹಲಿಯಿಂದ ಬಾಂಬ್ ಹಾಕಿ ಬಿಡ್ತೇನೆ, ಅಲ್ಲೋಲ‌ ಕಲ್ಲೋಲ ಮಾಡಿ ಬಿಡ್ತೇನೆ ಅಂತ ಮಾತಾಡುತ್ತಿದ್ದಾರೆ. ನಮ್ಮನ್ನು ಏನು ಬೇಕಾದರೂ ಮಾಡಲಿ. ನಮ್ಮನ್ನು ಬೇಕಾದರೆ ಸೀಳಿ ಇಡಿ, ಸಿಬಿಐಗೆ ತೆಗೆದುಕೊಂಡು ಹೋಗಲಿ. ಆದರೆ ಅವರ ವಿರುದ್ಧ ತನಿಖೆ ಮಾಡಿದಾಗ ನ್ಯಾಯಾಲಯಕ್ಕೆ ಹೋಗಿ ಏಕೆ ತಡೆಯಾಜ್ಞೆ ತರಲಾಗುತ್ತಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ.

BRICS Summit 2026: ಭಾರತ–ಚೀನಾ ನಡುವಿನ ತೆರೆ ಸರಿಯುತ್ತಿದೆ; 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ ಕ್ಷಿ ಜಿನ್‌ಪಿಂಗ್‌ ಜತೆ ನರೇಂದ್ರ ಮೋದಿ ಚರ್ಚೆ

7 ವರ್ಷಗಳ ಬಳಿಕ ಭಾರತಕ್ಕೆ ಕ್ಷಿ ಜಿನ್‌ಪಿಂಗ್‌ ಭೇಟಿ

Xi Jinping: ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್‌ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಷಿ ಜಿನ್‌ಪಿಂಗ್‌ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸೌಹಾರ್ದತೆ, ವ್ಯಾಪಾರ, ಹೂಡಿಕೆ ಹಾಗೂ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ ನಡೆಯಿತು. ಭಿನ್ನಾಭಿಪ್ರಾಯಗಳು ವಿವಾದಗಳಾಗಿ ಬದಲಾಗಬಾರದು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದ್ದು, ಪರಸ್ಪರ ಗೌರವ, ಸಂವೇದನೆ ಮತ್ತು ಹಿತಾಸಕ್ತಿಗೆ ಎರಡೂ ದೇಶಗಳು ಒತ್ತು ನೀಡಬೇಕು ಎಂದರು.

KN Rajanna: ಸಚಿವ ಸತೀಶ್‌ ಜಾರಕಿಹೊಳಿ ಮೇಲೆ ಇ.ಡಿ ದಾಳಿ ರಾಜಕೀಯ ಪ್ರೇರಿತ: ಕೆ.ಎನ್. ರಾಜಣ್ಣ

ಸತೀಶ್‌ ಜಾರಕಿಹೊಳಿ ಮೇಲೆ ಇ.ಡಿ ದಾಳಿ ರಾಜಕೀಯ ಪ್ರೇರಿತ: ಕೆ.ಎನ್. ರಾಜಣ್ಣ

KN Rajanna: ಕೇಂದ್ರ ಸರ್ಕಾರವು ಎಲ್ಲಾ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸತೀಶ ಜಾರಕಿಹೊಳಿ ಅವರ ಬೆಳೆಯುತ್ತಿರುವ ಜನಪ್ರಿಯತೆಯನ್ನು ಕುಗ್ಗಿಸಲು ಈ ರೀತಿಯ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಶಾಸಕ ಕೆ.ಎನ್‌. ರಾಜಣ್ಣ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Priyank Kharge: ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್‌ ಸಿಂಹಗೆ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ

ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ

ಮಸೀದಿ ಮುಂಭಾಗ ಪಟಾಕಿ ಹೊಡೆದರೆ ಗ್ರಹಚಾರ ಬಿಡಿಸುತ್ತೇನೆ ಎಂದು ಟಿ.ನರಸೀಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಧನಂಜಯ ಅವರು ಹೇಳಿದ್ದ ವಿಡಿಯೊ ಎಲ್ಲೆಡೆ ವೈರಲ್‌ ಆಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಪ್ರತಾಪ್‌ ಸಿಂಹ ಅವರು, ಯಾರಿಗೆ ನೀವು ಧಮ್ಕಿ ಹಾಕ್ತೀರಿ?. ಇನ್ನೊಮ್ಮೆ ಆ ಮಾತು ನಿಮ್ಮ ಬಾಯಿಂದ ಬಂದರೆ, ನಾನೇ ಸ್ವತಃ ಪೊಲೀಸ್‌ ಠಾಣೆಗೆ ನುಗ್ಗುತ್ತೇನೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿರುಗೇಟು ನೀಡಿದ್ದಾರೆ.

Pratap Simha: ಪೊಲೀಸಪ್ಪಾ ಮಸೀದಿ ರೋಡಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀರಾ?; ಸ್ಟೇಷನ್‌ಗೆ ನುಗ್ತೀನಿ ಎಂದು ಪ್ರತಾಪ್‌ ಸಿಂಹ ಕಿಡಿ

ಮಸೀದಿ ರೋಡಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀರಾ?: ಪ್ರತಾಪ್‌ ಸಿಂಹ ಕಿಡಿ

T Narasipura Inspector Dhananjaya: ಅಸಹಾಯಕ ಹುಡುಗರ ಮುಂದೆ ನರಸೀಪುರದ ಇನ್ಸ್‌ಪೆಕ್ಟರ್‌ ವೀರಾವೇಶದಿಂದ ಮಾತನಾಡಿದ್ದು, ಬ್ರಿಟಿಷರ ಕಾಲದ ಅಧಿಕಾರಿಗಳಂತೆ ದರ್ಪ ಮೆರೆದಿದ್ದಾರೆ. ಮಸೀದಿಯಲ್ಲಿ ಅವರ ದೇವರು ಬಿಟ್ಟರೆ ಯಾರು ಇಲ್ಲಾ ಎಂದು ಕೂಗುತ್ತಾರೆ. ಮೊದಲು ಅವರ ಮೈಕ್‌ಗಳನ್ನು ನಿಲ್ಲಿಸುವ ತಾಕತ್‌ ಇದೆಯೇ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರಶ್ನಿಸಿದ್ದಾರೆ.

Loading...