ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜಕೀಯ

ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಲ್ಲಿ ತೆರಿಗೆ ಹಣ ಪೋಲು: ಬಿಜೆಪಿ ವಕ್ತಾರ ಎಸ್. ಪ್ರಕಾಶ್ ಆಕ್ರೋಶ

ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಲ್ಲಿ ತೆರಿಗೆ ಹಣ ಪೋಲು: ಎಸ್. ಪ್ರಕಾಶ್

S Prakash: ಗ್ಯಾರಂಟಿ ಅನುಷ್ಠಾನ ಸಮಿತಿಯು ಒಂದೇ ಒಂದು ಅರ್ಹ ಹೆಸರನ್ನು ಸೇರಿಸಿಲ್ಲ ಅಥವಾ ಅನರ್ಹರ ಹೆಸರನ್ನು ರದ್ದು ಮಾಡಲು ಶಿಫಾರಸು ಮಾಡಿಲ್ಲ. ಓಡಾಡಲು ಕಾರು, ಸಂಬಳ, ಆಪ್ತ ಸಹಾಯಕರನ್ನು ಹೊಂದಿದ ಇವರು ಆರಾಮವಾಗಿ ಇದ್ದಾರೆ. ಏನೂ ಕೆಲಸ ಮಾಡದ ಇವರನ್ನು ಯಾಕೆ ಸಾಕಬೇಕು? ಇವರ ಅವಶ್ಯಕತೆ ಇದೆಯೇ ಎಂದು ಬಿಜೆಪಿ ರಾಜ್ಯ ವಕ್ತಾರ ಎಸ್. ಪ್ರಕಾಶ್ ಪ್ರಶ್ನಿಸಿದ್ದಾರೆ.

ಮತಾಂತರ ಆದವರನ್ನು ಪರಿಶಿಷ್ಟ ಪಂಗಡ ಪಟ್ಟಿಯಿಂದ ಕೈಬಿಡಿ: ಶಾಂತಾರಾಮ ಸಿದ್ದಿ ಆಗ್ರಹ

ಮತಾಂತರ ಆದವರನ್ನು ಎಸ್‌ಟಿ ಪಟ್ಟಿಯಿಂದ ಕೈಬಿಡಿ: ಶಾಂತಾರಾಮ ಸಿದ್ದಿ

Shantaram Siddi: 12 ಕೋಟಿ ಬುಡಕಟ್ಟು ಸಮುದಾಯದ ಜನರಿದ್ದಾರೆ, ಅವರಲ್ಲಿ 1-2 ಕೋಟಿ ಜನ ಮತಾಂತರಗೊಂಡಿದ್ದಾರೆ. ಗಿರಿಜನರಿಗೆ ಸಿಗಬೇಕಾದ ಸೌಲಭ್ಯಗಳನ್ನು ಮತಾಂತರಿ ಬುಡಕಟ್ಟಿನವರೇ ಹೆಚ್ಚಾಗಿ ಪಡೆದುಕೊಳ್ಳುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಇವರು ಇತ್ತ ಬುಡಕಟ್ಟು ಹಾಗೂ ಅತ್ತ ಮತಾಂತರಗೊಂಡ ಧರ್ಮದ ಎರಡೂ ಕಡೆಯ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಆರೋಪಿಸಿದ್ದಾರೆ.

Bidadi Township: ಬಿಡದಿ ಟೌನ್‌ಶಿಪ್‌ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್

ಬಿಡದಿ ಟೌನ್‌ಶಿಪ್‌ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಎಂ. ಲಕ್ಷ್ಮಣ್

ನಮ್ಮ ರಾಜ್ಯದಲ್ಲಿ ಐಟಿ ಹಾಗೂ ಇತರೆ ಕ್ಷೇತ್ರದ ಉದ್ಯಮಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಬಿಡದಿ ಟೌನ್‌ಶಿಪ್‌ ನಿರ್ಮಾಣವಾಗುತ್ತಿದೆ. ಇದರ ಹಿಂದೆ ಯಾವುದೇ ರೀತಿಯ ರಿಯಲ್ ಎಸ್ಟೇಟ್ ಉದ್ದೇಶವಿಲ್ಲ. ಈ ಯೋಜನೆಯಲ್ಲಿ ಲೂಟಿ ಮಾಡಲು ಅವಕಾಶ ಎಲ್ಲಿದೆ ಎಂಬುದನ್ನು ಸಾಬೀತುಪಡಿಸಲಿ ಎಂದು ಬಿಜೆಪಿ ಮತ್ತು ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಆಗ್ರಹಿಸಿದ್ದಾರೆ.

ಆರ್‌ಎಸ್‌ಎಸ್‌ ವಿರುದ್ಧ ಕಾನೂನಿನ ಮೊರೆ ಯಾಕೆ ಹೋಗಿಲ್ಲ; ಪ್ರಿಯಾಂಕ್‌ ಖರ್ಗೆಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಆರ್‌ಎಸ್‌ಎಸ್‌ ವಿರುದ್ಧ ಕಾನೂನಿನ ಮೊರೆ ಯಾಕೆ ಹೋಗಿಲ್ಲ: ಛಲವಾದಿ

ಪ್ರಿಯಾಂಕ್ ಖರ್ಗೆಯವರ ಪ್ರಶ್ನೆಗೆ ಮೋಹನ್ ಭಾಗವತ್ ಅವರು ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಅವರಿಗೆ ಉತ್ತರ ಸಿಕ್ಕಿದೆ ಎಂದುಕೊಳ್ಳುವೆ. ದೇಶದ ಕಾನೂನು ಒಂದೇ ಎನ್ನುವಿರಲ್ಲವೇ? ಹಾಗಿದ್ದರೆ ನೀವು ಕಾನೂನಿನ ಮೊರೆ ಯಾಕೆ ಹೋಗಿಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾದೇಶ ಪ್ರಧಾನಿ ಸಲಹೆಗಾರನಿಗೆ ತಡೆ: ಭಾರತದ ವಿರುದ್ಧ ಢಾಕಾ ತೀವ್ರ ಅಸಮಾಧಾನ

ಭಾರತ ಪ್ರವಾಸ ರದ್ದುಪಡಿಸಿದ ಬಾಂಗ್ಲಾ ಪ್ರಧಾನಿ ಸಲಹೆಗಾರ

Dr Zahed Ur Rahman: ಬಾಂಗ್ಲಾದೇಶ ಪ್ರಧಾನಿಯ ಹಿರಿಯ ಸಲಹೆಗಾರ ಡಾ. ಜಾಹೇದ್ ಉರ್ ರಹಮಾನ್ ಅವರನ್ನು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ತಡೆದು ವಿಚಾರಣೆ ನಡೆಸಿದ ಘಟನೆ ರಾಜತಾಂತ್ರಿಕ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಾಂಗ್ಲಾದೇಶ, ಭಾರತ ಉಪ ಹೈಕಮಿಷನರ್ ಅವರನ್ನು ಕರೆಸಿ ತನ್ನ ಆಕ್ಷೇಪವನ್ನು ದಾಖಲಿಸಿದೆ.

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಿಎಂ ಸೂಚನೆ

ಕೃಷಿ, ತೋಟಗಾರಿಕೆ, ರೇಷ್ಮೆ ಮೀನುಗಾರಿಕೆ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್‌ ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ರಾಜ್ಯಗಳಲ್ಲಿರುವ ಮಾದರಿ ಯೋಜನೆ, ಮಾರ್ಗಗಳನ್ನು ಅಧ್ಯಯನ ಮಾಡಿ ರಾಜ್ಯದ ಕೃಷಿ ಸಂಸ್ಕೃತಿ ಮತ್ತು ಬೆಳೆ ಮಾದರಿಗಳಿಗೆ ಅನುಗುಣವಾಗಿ ಕಾರ್ಯರೂಪಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಅಮೆರಿಕ-ಇರಾನ್ ಒಪ್ಪಂದಕ್ಕೆ ಇಸ್ರೇಲ್‌ನಲ್ಲಿ ಭಾರಿ ವಿರೋಧ: ಡೊನಾಲ್ಡ್‌ ಟ್ರಂಪ್ ಘೋಷಣೆಗೆ ಸಚಿವ ಬೆನ್-ಗ್ವಿರ್ ಕಿಡಿ

ಟ್ರಂಪ್-ಇರಾನ್ ಒಪ್ಪಂದಕ್ಕೆ ಇಸ್ರೇಲ್ ಆಕ್ರೋಶ

US-Iran Peace Agreement: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಇರಾನ್ ಒಪ್ಪಂದಕ್ಕೆ ಇಸ್ರೇಲ್‌ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಈ ಒಪ್ಪಂದ ಇಸ್ರೇಲ್‌ಗೆ ಭಾದಕವಲ್ಲ ಎಂದು ಸ್ಪಷ್ಟಪಡಿಸಿದ್ದು, ದೇಶದ ಭದ್ರತೆಗೆ ಧಕ್ಕೆಯಾಗುವ ಯಾವುದೇ ಒಪ್ಪಂದವನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ 10 ಬೇಡಿಕೆಗಳ ಈಡೇರಿಕೆಗೆ ಸಿಎಂಗೆ ಮನವಿ

ದೈಹಿಕ ಶಿಕ್ಷಣ ಶಿಕ್ಷಕರ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹ

CM DK Shivakumar: ದೈಹಿಕ ಶಿಕ್ಷಣ ಶಿಕ್ಷಕರ ಭರ್ತಿ ಮಾಡಿ, ಹೆಚ್ಚುವರಿ 1 ಲಕ್ಷ ಹುದ್ದೆಗಳು ಸೇರಿದಂತೆ ಒಂದೇ ಬಾರಿಗೆ 1.56 ಲಕ್ಷ ಹುದ್ದೆಗಳ ನೇಮಕ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿದಂತೆ ವಿವಿಧ ಸಂಘಟನೆಗಳು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿವೆ.

HD Deve Gowda: ಬೆಂಗಳೂರಿನ ಉಡುಪಿ ಶ್ರೀ ಕೃಷ್ಣ ಭವನದಲ್ಲಿ ಮಸಾಲೆ ದೋಸೆ ಸವಿದ ಎಚ್.ಡಿ. ದೇವೇಗೌಡ್ರು Video

ಉಡುಪಿ ಶ್ರೀ ಕೃಷ್ಣ ಭವನದಲ್ಲಿ ಮಸಾಲೆ ದೋಸೆ ಸವಿದ ಎಚ್.ಡಿ. ದೇವೇಗೌಡ್ರು

ಬೆಂಗಳೂರು ನಗರದ ಶಾರದಾ ಪೀಠದ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು, ಬಳೇಪೇಟೆಯ ಉಡುಪಿ ಶ್ರೀ ಕೃಷ್ಣ ಭವನ ಹೋಟೆಲ್‌ನಲ್ಲಿ ಉಪಾಹಾರ ಸೇವಿಸಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿಚಾರಣೆ

ಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್

Abhishek Banerjee: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ಇಡಿ ಕೋಲ್ಕತ್ತಾದಲ್ಲಿ ವಿಚಾರಣೆ ನಡೆಸಿದೆ. ಅಕ್ರಮ ಹಣ ವರ್ಗಾವಣೆ, ನೇಮಕಾತಿ ಅಕ್ರಮ ಹಾಗೂ ಹಗರಣದಿಂದ ಸಂಗ್ರಹವಾದ ಹಣದ ಜಾಡು ಕುರಿತು ತನಿಖೆ ಮುಂದುವರಿದಿದೆ.

Guarantee schemes: ಗ್ಯಾರಂಟಿ ಯೋಜನೆಗಳ ಲಕ್ಷಾಂತರ ಫಲಾನುಭವಿಗಳ ಕಡಿತ ಸರಿಯಲ್ಲ: ಬಿ.ವೈ. ವಿಜಯೇಂದ್ರ ಕಿಡಿ

ಗ್ಯಾರಂಟಿ ಫಲಾನುಭವಿಗಳ ಕಡಿತ ಸರಿಯಲ್ಲ: ಬಿ.ವೈ. ವಿಜಯೇಂದ್ರ ಕಿಡಿ

BY Vijayendra: ರಾಜ್ಯದ ಕಾಂಗ್ರೆಸ್ ಸರ್ಕಾರವು ತಾನೇ ಘೋಷಿಸಿದ್ದ ಗ್ಯಾರಂಟಿಗಳ ಬಗ್ಗೆ ವ್ಯತಿರಿಕ್ತ ಹೇಳಿಕೆಗಳನ್ನು ಕೊಡುವುದಲ್ಲದೇ, ಮಾನದಂಡದ ಬದಲಾವಣೆಗಳನ್ನು ಸರ್ಕಾರವೇ ಕೈಗೆತ್ತಿಕೊಂಡಿದೆ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ತನಿಖೆಯನ್ನು ಸಿಬಿಐಗೆ ವಹಿಸಿ: ಸಿಎಂ ಡಿಕೆಶಿಗೆ ಸಿ.ಟಿ.ರವಿ ಪತ್ರ

ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ತನಿಖೆ ಸಿಬಿಐಗೆ ವಹಿಸಿ: ಸಿ.ಟಿ.ರವಿ

Dharmasthala Case: ಧರ್ಮಸ್ಥಳದಂತಹ ಪ್ರತಿಷ್ಠಿತ ಸಂಸ್ಥೆಯ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಅಭಿಯಾನ ನಡೆಸಲು ಹಣ ಎಲ್ಲಿಂದ ಬಂತು? ಇದರ ಹಿಂದೆ ಯಾರು ಇದ್ದರು? ಇದು ಕೆಲವರ ವೈಯಕ್ತಿಕ ಕೃತ್ಯವೋ ಅಥವಾ ಇದರ ಹಿಂದೆ ದೊಡ್ಡ ಜಾಲವೇ ಕಾರ್ಯನಿರ್ವಹಿಸುತ್ತಿದೆಯೋ? ಎಂಬುವ ಸತ್ಯ ಹೊರಬರಬೇಕಾಗಿದೆ ಎಂದು ಎಂಎಲ್‌ಸಿ ಸಿ.ಟಿ.ರವಿ ಅವರು ಒತ್ತಾಯಿಸಿದ್ದಾರೆ.

ನೋ ಎಂಟ್ರಿ ಎಂದು ಹೇಳಿ ಬಳಿಕ ಟಿಎಂಸಿ ಬಂಡುಕೋರರನ್ನು ಸ್ವಾಗತಿಸಲು ರೆಡಿಯಾದ ಎನ್‌ಸಿಪಿಐ

ಟಿಎಂಸಿ ಬಂಡುಕೋರರನ್ನು ಸ್ವಾಗತಿಸಲು ಸಿದ್ದವಾದ ಹೊಸ ಪಕ್ಷ

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಹುಟ್ಟಿಕೊಂಡ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ ಸೇರಲು ಬಯಸಿದ್ದ ತೃಣಮೂಲ ಬಂಡುಕೋರರನ್ನು ಆರಂಭದಲ್ಲಿ ಸ್ವೀಕರಿಸುವುದಿಲ್ಲ ಎಂದು ಹೇಳಿ, ಇದೀಗ ಸ್ವಾಗತಿಸಲು ಸಿದ್ಧವಾಗಿದೆ. ಪಕ್ಷವು ಆರಂಭದಲ್ಲಿ 20 ತೃಣಮೂಲ ಬಂಡುಕೋರರನ್ನು ಜೊತೆ ಸೇರಿಸಲು ವಿರೋಧ ವ್ಯಕ್ತಪಡಿಸಿತ್ತು. ಈ ವಿಷಯದಿಂದಲೇ ಈಗ ಪಕ್ಷ ದೇಶ ಮಟ್ಟದಲ್ಲಿ ಚರ್ಚೆಯಲ್ಲಿದೆ.

Guarantee schemes: ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ

ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳನ್ನು ಮೊದಲ ದಿನದಿಂದಲೇ ವಿರೋಧಿಸುತ್ತಾ ಬಂದಿದೆ. ಮೊದಲು ಗ್ಯಾರಂಟಿ ಯೋಜನೆಗಳ ಜಾರಿಯೇ ಅಸಾಧ್ಯ ಎಂದರು. ನಂತರದ ದಿನಗಳಲ್ಲಿ ಹಣಕಾಸಿನ ಕೊರತೆಯಿಂದ ಸರ್ಕಾರ ದಿವಾಳಿಯಾಗಲಿದೆ ಎಂದರು. ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎನ್ನುವ ಪುಕಾರು ಹಬ್ಬಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಫ್ರಾನ್ಸ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಗೆ ಭರ್ಜರಿ ಸ್ವಾಗತ; ʼಧುರಂಧರ್‌ʼ ಚಿತ್ರದ ಹಾಡು ಬಳಸಿ ವಿಡಿಯೊ ಶೇರ್‌ ಮಾಡಿದ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್

ಫ್ರಾನ್ಸ್‌ನಲ್ಲಿ ನರೇಂದ್ರ ಮೋದಿ–ಎಮ್ಯಾನುಯೆಲ್ ಮ್ಯಾಕ್ರೋನ್ ಭೇಟಿ

Emmanuel Macron: ಫ್ರಾನ್ಸ್‌ನ ನೈಸ್ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಲ್ಲಿನ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭೇಟಿಯ ಬಳಿಕ ಇಬ್ಬರೂ ನಾಯಕರು ಸೆಲ್ಫಿ ಹಂಚಿಕೊಂಡಿದ್ದು, ಭಾರತ–ಫ್ರಾನ್ಸ್ ಸಂಬಂಧಗಳು ಮತ್ತಷ್ಟು ಬಲಗೊಳ್ಳಲಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ವ್ಯಾಪಾರ, ರಕ್ಷಣಾ, ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಗೆ ಉಭಯ ರಾಷ್ಟ್ರಗಳು ಒಪ್ಪಿಗೆ ಸೂಚಿಸಿವೆ.

1999ರಲ್ಲಿ ಕೇವಲ 3 ಎಕರೆ ಪಿತ್ರಾರ್ಜಿತ ಆಸ್ತಿ 2018ಕ್ಕೆ 1400 ಕೋಟಿ ಹೇಗಾಯ್ತು?: ಸಿಎಂ ಡಿಕೆಶಿಗೆ ಎಚ್‌ಡಿಕೆ ಪ್ರಶ್ನೆ

1999ರಲ್ಲಿ 3 ಎಕರೆ ಆಸ್ತಿ 2018ಕ್ಕೆ 1400 ಕೋಟಿ ಹೇಗಾಯ್ತು?: ಎಚ್‌ಡಿಕೆ

ಬಿಡದಿ ಟೌನ್‌ಶೀಪ್‌ ಹೆಸರಲ್ಲಿ ನೇರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವೇ ಜನರ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ನೇರವಾಗಿ ಮುಖ್ಯಮಂತ್ರಿಗಳೇ ರಿಯಲ್ ಎಸ್ಟೇಟ್ ಮಾಫಿಯಾ ದೊರೆಗಳ ಜೊತೆ ಕೈ ಜೋಡಿಸಿ ಈ ದಂಧೆ ನಡಿಸುತ್ತಿದ್ದಾರೆ. ಬಹುಪಾಲು ರೈತರು ಭೂಮಿ ಕೊಡಲು ತಯಾರಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

CJP protest in Bengaluru: ನೀಟ್‌ ಅಕ್ರಮ ಖಂಡಿಸಿ ಬೆಂಗಳೂರಲ್ಲಿ ಕಾಕ್ರೋಚ್‌ ಪಾರ್ಟಿ ಪ್ರತಿಭಟನೆ; ನಟ ಪ್ರಕಾಶ್‌ ರಾಜ್‌ ಬೆಂಬಲ

ನೀಟ್‌ ಅಕ್ರಮ ಖಂಡಿಸಿ ಬೆಂಗಳೂರಿನಲ್ಲಿ ಕಾಕ್ರೋಚ್‌ ಪಾರ್ಟಿ ಪ್ರತಿಭಟನೆ

ಬೆಂಗಳೂರಿನಲ್ಲಿ ಪ್ರತಿಭಟನೆಗೂ ಮುನ್ನಾ ಸಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಸಂಜೆ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.

ಸರ್ಕಾರದ ಜಾಹೀರಾತಲ್ಲಿ ಡಿಸಿಎಂ ಪರಮೇಶ್ವರ್‌ ಫೋಟೊ ಮಾಯ; ಏನಾಯ್ತು ಕಾಂಗ್ರೆಸ್‌ನ ಅಹಿಂದ ಜಪ ಎಂದು ಜೋಶಿ ಟೀಕೆ

ಹಳೇ ರಾಜಕೀಯ ನೀತಿಯನ್ನೇ ಮುಂದುವರಿಸಿದ ಕಾಂಗ್ರೆಸ್: ಜೋಶಿ

Pralhad Joshi: ಅಹಿಂದ ಸಿದ್ಧಾಂತದಡಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ ಪರ ಹೋರಾಡುವುದಾಗಿ ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷ ಸದಾ ಈ ಸಮುದಾಯಗಳ ನಾಯಕರನ್ನು ನಿರ್ಲಕ್ಷಿಸುತ್ತಲೇ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Bidadi Township: ಬಿಡದಿ ಟೌನ್‌ಶಿಪ್ ಸರ್ಕಾರಿ ರಿಯಲ್ ಎಸ್ಟೇಟ್ ಯೋಜನೆ: ಎಚ್.ಡಿ. ಕುಮಾರಸ್ವಾಮಿ ಕಿಡಿ

ಬಿಡದಿ ಟೌನ್‌ಶಿಪ್ ಸರ್ಕಾರಿ ರಿಯಲ್ ಎಸ್ಟೇಟ್ ಯೋಜನೆ: ಎಚ್‌ಡಿಕೆ

ಯಾವುದೇ ಯೋಜನೆ ಕೈಗೊಳ್ಳುವ ಮೊದಲು ರೈತರ ಒಪ್ಪಿಗೆ ಪಡೆಯಬೇಕು. ಅದನ್ನು ಮಾಡದೇ ಈ ಸರ್ಕಾರ ಸಾರ್ವಕಾಧಿಕಾರಿ ಮನೋಭಾವದಿಂದ ರೈತರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಬಿಡದಿ ಟೌನ್‌ಶಿಪ್‌ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Guarantee schemes: ಮತ್ತೆ ಅರ್ಜಿ ಸಲ್ಲಿಸಲು ಹೇಳಿದ್ದೇವೆಯೇ ಹೊರತು ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಸ್ಪಷ್ಟನೆ

ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿಕೆಶಿ

DK Shivakumar: ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗೆ ಫಲಾನುಭವಿಗಳು ಮತ್ತೆ ಅರ್ಜಿ ಸಲ್ಲಿಸಬೇಕಿದೆ.

ಟಿಎಂಸಿಯ ಪ್ರಮುಖ ಹುದ್ದೆಯಿಂದ ಸಾಯೋನಿ ಘೋಷ್, ಮಾಲಾ ರಾಯ್ ವಜಾ; ಆಂತರಿಕ ಬಿಕ್ಕಟ್ಟಿನ ನಡುವೆ ಮಮತಾ ಬ್ಯಾನರ್ಜಿ ದೃಢ ನಿರ್ಧಾರ

ಪ್ರಮುಖ ಹುದ್ದೆಗಳಿಂದ ಸಾಯೋನಿ ಘೋಷ್, ಮಾಲಾ ರಾಯ್ ವಜಾ

ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಹೆಚ್ಚಾಗಿರುವಾಗಲೇ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಸಾಯೋನಿ ಘೋಷ್, ಮಾಲಾ ರಾಯ್ ಅವರನ್ನು ಪ್ರಮುಖ ಹುದ್ದೆಗಳಿಂದ ವಜಾಗೊಳಿಸಿದ್ದಾರೆ. ಇವರ ಬದಲಿಗೆ ಯುವ ಮತ್ತು ಮಹಿಳಾ ವಿಭಾಗದ ಅಧ್ಯಕ್ಷರನ್ನಾಗಿ ಅರ್ನಬ್ ಬ್ಯಾನರ್ಜಿಮತ್ತು ಅಲಿಫಾ ಅಹ್ಮದ್ ಅವರ ನೇಮಕ ಮಾಡಲಾಗಿದೆ.

ಕೇಂದ್ರದಿಂದ ಅಗತ್ಯಕ್ಕಿಂತ ಹೆಚ್ಚೇ ರಸಗೊಬ್ಬರ ಪೂರೈಕೆ; ರಾಜ್ಯ ಸರ್ಕಾರವೇ ಸರಿ ವಿತರಿಸಿಲ್ಲ ಎಂದ ಜೋಶಿ

ಕೇಂದ್ರದಿಂದ ಅಗತ್ಯಕ್ಕಿಂತ ಹೆಚ್ಚೇ ರಸಗೊಬ್ಬರ ಪೂರೈಕೆ: ಜೋಶಿ

Pralhad Joshi: ಮುಂಗಾರು ಹಂಗಾಮಿಗೂ ಮುನ್ನವೇ ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ರಸಗೊಬ್ಬರವನ್ನು ಪೂರೈಸಲಾಗಿದೆ. ಮುಂಗಡ ದಾಸ್ತಾನಿಗೆ ಅನುವಾಗುವಂತೆ ಜನವರಿ-ಮಾರ್ಚ್ ಅವಧಿಯಲ್ಲೇ ಅಗತ್ಯಕ್ಕಿಂತ ಹೆಚ್ಚುವರಿ 0.33 ಲಕ್ಷ ಮೆಟ್ರಿಕ್ ಟನ್ ಯೂರಿಯಾ, 1.29 ಲಕ್ಷ ಮೆಟ್ರಿಕ್ ಟನ್ ಡಿಎಪಿ ಮತ್ತು 1.58 ಲಕ್ಷ ಮೆಟ್ರಿಕ್ ಟನ್ ಎನ್‌ಪಿಕೆಎಸ್ ಅನ್ನು ನೀಡಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Corruption Free Karnataka: ಅಧಿಕಾರಿಗಳು ಲಂಚ ಕೇಳುವಂತಿಲ್ಲ; ಕಮಿಷನ್‌ 0 ಪರ್ಸೆಂಟೇಜ್‌ಗೆ ತರುತ್ತೇವೆ ಎಂದ ಸಿಎಂ ಡಿಕೆಶಿ

ಯಾವುದೇ ಅಧಿಕಾರಿಗಳು ಲಂಚ ಕೇಳುವಂತಿಲ್ಲ: ಸಿಎಂ ಎಚ್ಚರಿಕೆ

CM DK Shivakumar Meeting: ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಸರ್ಕಾರಿ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ 7 ಗಂಟೆಗಳ ಕಾಲ ಸುದೀರ್ಘ ಸಭೆ ನಡೆಸಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ.

Guarantee schemes: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಸಲ್ಲಿಸಬೇಕು: ಸಿಎಂ ಸೂಚನೆ

ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಕೆ ಕಡ್ಡಾಯ: ಸಿಎಂ

ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿದೆಯೇ ಇಲ್ಲವೇ ಎಂದು ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಎಲ್ಲಾ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿದೆ. ನಾವು ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಯಾರನ್ನೂ ತೆಗೆದುಹಾಕುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

Loading...