ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜಕೀಯ

ತಾತನಾದ ಸಂಭ್ರಮದಲ್ಲಿದಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸಂಸದ ತೇಜಸ್ವಿ ಸೂರ್ಯ ಅಭಿನಂದನೆ

ʼತಾತʼ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸಂಸದ ತೇಜಸ್ವಿ ಸೂರ್ಯ ಅಭಿನಂದನೆ

D.K. Shivakumar: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪುತ್ರಿ ಐಶ್ವರ್ಯಾ ಹೆಗ್ಡೆ ಶುಕ್ರವಾರ (ಮೇ 1) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಿಜೆಪಿ ನಾಯಕ, ಸಂಸದ ತೇಜಸ್ವಿ ಸೂರ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಪಂಜಾಬ್‌ ಸಿಎಂ ಭಗವಂತ್ ಮಾನ್ ಕುಡಿದು ಸದನಕ್ಕೆ ಆಗಮಿಸಿದ್ದಾರೆ: ಪ್ರತಿಪಕ್ಷಗಳ ಆರೋಪ

ಸಿಎಂ ಭಗವಂತ್ ಮಾನ್ ವಿರುದ್ಧ ಸಿಡಿದೆದ್ದ ಪ್ರತಿಪಕ್ಷ ನಾಯಕರು

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮದ್ಯ ಸೇವನೆ ಮಾಡಿರಬೇಕು. ಅವರನ್ನು ತಕ್ಷಣ ಪರೀಕ್ಷೆಗೆ ಒಳಪಡಿಸುವಂತೆ ಪ್ರತಿಪಕ್ಷಗಳು ಒತ್ತಾಯಿಸಿದ ಘಟನೆ ಪಂಜಾಬ್ ವಿಧಾನಸಭೆಯಲ್ಲಿ ಶುಕ್ರವಾರ ನಡೆದಿದೆ. ಇದಕ್ಕೂ ಮೊದಲು ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ವಾ ಅವರು ಸ್ಪೀಕರ್‌ಗೆ ಈ ಕುರಿತು ಪತ್ರ ಬರೆದು ಮಾನ್ ಅವರ ನಡವಳಿಕೆ ತೊಂದರೆಯನ್ನು ಉಂಟು ಮಾಡುತ್ತಿರುವುದಾಗಿ ಹೇಳಿದ್ದಾರೆ.

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: 2025ರ ಹೇಳಿಕೆಗೆ ಎಫ್‌ಐಆರ್ ದಾಖಲಿಸುವಂತೆ ಕೋರಿದ್ದ ಅರ್ಜಿ ವಜಾ

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ವಜಾ

ಅಲಹಾಬಾದ್ ಹೈಕೋರ್ಟ್ ರಾಹುಲ್ ಗಾಂಧಿ ಅವರ 2025ರ ಹೇಳಿಕೆ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ, ಕೆಳ ನ್ಯಾಯಾಲಯದ ಆದೇಶವನ್ನು ಸಮರ್ಥಿಸಿದೆ. ಅರ್ಜಿದಾರರ ವಾದಗಳಿಗೆ ಕಾನೂನುಬದ್ಧ ಆಧಾರವಿಲ್ಲ ಎಂದು ಹೇಳಿದ ನ್ಯಾಯಾಲಯ, ಈ ಮೂಲಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಡಬಲ್ ಡೆಕ್ಕರ್, ಪಾರ್ಕಿಂಗ್ ಕಟ್ಟಡ, ಮೇಲ್ಸೇತುವೆ, ಅಂಡರ್ ಪಾಸ್ ʼಬ್ರ್ಯಾಂಡ್‌ ಬೆಂಗಳೂರುʼ ನಿರ್ಮಿಸಲು ಸಹಕಾರಿ: ಡಿ.ಕೆ. ಶಿವಕುಮಾರ್‌

ಬೆಂಗಳೂರು ನಗರದಲ್ಲಿ ಸುಮಾರು 44 ಕಿ.ಮೀ. ಉದ್ದದ ಡಬಲ್ ಡೆಕ್ಕರ್: ಡಿಕೆಶಿ

DK Shivakumar: ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ ಮೆಟ್ರೋ ಮಾರ್ಗದ ಕಂಬಗಳಿಗೆ ಡೈನಾಮಿಕ್ ಲೈಟಿಂಗ್ ವ್ಯವಸ್ಥೆ, ಕೆ.ಆರ್. ಮಾರುಕಟ್ಟೆಯಲ್ಲಿ ನೆಲಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆ, ಬನಶಂಕರಿ ಬಸ್ ನಿಲ್ದಾಣದ ಜಂಕ್ಷನ್‌ನಲ್ಲಿ ಸ್ಕೈವಾಕ್ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಡಿಸಿಎಂ ಡಿ.ಕೆ. ಶಿವಕುಮಾರ್‌ ಚಾಲನೆ ನೀಡಿದರು.

ಶ್ರಮಿಕರ ಕಲ್ಯಾಣಕ್ಕಾಗಿ ಕೇಂದ್ರದ ಬಿಜೆಪಿ ಸರ್ಕಾರದಿಂದ ಹಲವು ಯೋಜನೆ ಅನುಷ್ಠಾನ: ವಿಜಯೇಂದ್ರ

ಶ್ರಮಿಕರ ಕಲ್ಯಾಣಕ್ಕಾಗಿ ಕೇಂದ್ರದಿಂದ ಹಲವು ಯೋಜನೆ ಅನುಷ್ಠಾನ: ಬಿವೈವಿ

BY Vijayendra: ಇತ್ತೀಚೆಗೆ ಕೇಂದ್ರ ಸರ್ಕಾರವು 29 ಹಳೆಯ ಕಾರ್ಮಿಕ ಕಾನೂನುಗಳನ್ನು ಸರಳೀಕರಿಸಿ 4 ಹೊಸ ಕಾರ್ಮಿಕ ಸಂಹಿತೆಗಳನ್ನು ರೂಪಿಸಿತು. ಇದರಿಂದ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಎನ್‍ಡಿಎ ಸರ್ಕಾರದ ಈ ನಿರ್ಧಾರ ಮಹತ್ವದಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿ.ಕೆ. ಶಿವಕುಮಾರ್

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ: ಡಿ.ಕೆ. ಶಿವಕುಮಾರ್

DK Shivakumar: ಜಿಬಿಎ ವ್ಯಾಪ್ತಿಯ ಎಲ್ಲಾ ಐದು ಪಾಲಿಕೆಗಳಲ್ಲಿ ಮೇ 16ರಿಂದ ಪ್ರತಿ ಶನಿವಾರ ಸುಮಾರು 50 ಕಡೆಗಳಲ್ಲಿ ಓಪನ್ ಹೌಸ್ ಕೌಂಟರ್ ತೆರೆದು. 'ನಮ್ಮ ಇ ಖಾತಾ' ಆಂದೋಲನ ನಡೆಸಲಾಗುವುದು. ಜನರಿಗೆ ಭೂಮಿ ಗ್ಯಾರಂಟಿ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಗುರುವಿಗೆ ತಿರುಗಿ ಬಿದ್ದ ಶಿಷ್ಯ: ಮಮತಾ ಬ್ಯಾನರ್ಜಿಯನ್ನು ಸಿಎಂ ಪಟ್ಟದಿಂದ ಇಳಿಸುವರೇ ಬಿಜೆಪಿಯ ಸುವೇಂದು ಅಧಿಕಾರಿ ?

ಗುರುವಿಗೆ ತಿರುಗಿ ಬಿದ್ದ ಶಿಷ್ಯನಿಗೆ ಒಲಿಯುವುದೇ ಅಧಿಕಾರ ?

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಮತಾ ಬ್ಯಾನರ್ಜಿ ವಿರುದ್ದದ ಪ್ರಬಲ ಸ್ಪರ್ಧಿ ಸುವೇಂದು ಅಧಿಕಾರಿ. ಅವರ ಗರಡಿಯಲ್ಲೇ ಪಳಗಿರುವ ಸುವೇಂದು ಅಧಿಕಾರಿ 1998ರಲ್ಲಿ ತೃಣ ಮೂಲ ಕಾಂಗ್ರೆಸ್ ಸೇರಿದ್ದು, 2006 ರಲ್ಲಿ ಕಾಂತಿ ದಕ್ಷಿಣ ಕ್ಷೇತ್ರದಿಂದ ಶಾಸಕರಾಗಿ ಬಂಗಾಳ ವಿಧಾನಸಭೆಯನ್ನು ಪ್ರವೇಶಿಸಿದ್ದರು. 2020ರಲ್ಲಿ ಪಕ್ಷ ತೊರೆದು ವಿಧಾನ ಸಭಾ ಚುನಾವಣೆಗೂ ಮೊದಲು ಬಿಜೆಪಿ ಸೇರಿದ್ದರು. ಆ ಬಳಿಕ ಪಶ್ಚಿಮ ಬಂಗಾಳದ ಚುನಾವಣಾ ಕಣವನ್ನು ಯುದ್ಧ ಭೂಮಿಯಾಗಿ ಮಾರ್ಪಡಿಸಿದ್ದಾರೆ.

ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಕುರ್ಚಿ ಇರುತ್ತದೋ ಇಲ್ಲವೋ ಗೊತ್ತಿಲ್ಲ: ಬೊಮ್ಮಾಯಿ Video

ಮೇ 4ರ ನಂತರ ಸಿದ್ದರಾಮಯ್ಯ ಕುರ್ಚಿ ಇರುತ್ತದೊ ಇಲ್ಲವೊ ಗೊತ್ತಿಲ್ಲ: ಬೊಮ್ಮಾಯಿ

Basavaraj Bommai: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನನಗೂ ಸಿಎಂ ಆಗುವ ಆಸೆ ಇದೆ. ಹಲವರಿಗೂ ಆಸೆ ಇದೆ ಎಂದು ಹೇಳಿದ್ದಾರೆ. ಆದರೆ ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೋ, ಇಲ್ಲವೋ ಗೊತ್ತಿಲ್ಲ. ನಾವೂ ಯಾವ ಬದಲಾವಣೆ ಆಗಲಿದೆ ಎಂದು ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬೌರಿಂಗ್ ಆಸ್ಪತ್ರೆ ದುರಂತ: ಕಾಂಗ್ರೆಸ್ ಸರ್ಕಾರ ಬದುಕಿದೆಯೋ, ಸತ್ತಿದೆಯೋ ಗೊತ್ತಿಲ್ಲ ಎಂದ ಬೊಮ್ಮಾಯಿ Video

ಕಾಂಗ್ರೆಸ್ ಸರ್ಕಾರ ಬದುಕಿದೆಯೋ, ಸತ್ತಿದೆಯೋ ಗೊತ್ತಿಲ್ಲ: ಬೊಮ್ಮಾಯಿ

Basavaraj Bommai: ಮಳೆ ಬಂದರೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹವಾಮಾನ ಇಲಾಖೆ ಹೇಳುತ್ತಲೇ ಬಂದಿದೆ ಆದರೂ ಯಾವುದೇ ತಯಾರಿ ಕೂಡ ಮಾಡಿಕೊಂಡಿಲ್ಲ. ಒಂದು ರೀತಿಯಲ್ಲಿ ಈ ಸರ್ಕಾರ ಜನರ ಪಾಲಿಗೆ ಸತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಆರ್‌ವಿ ರಸ್ತೆ-ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ ವಾಹನ ಸಂಚಾರಕ್ಕೆ ಡಿಸಿಎಂ ಡಿಕೆಶಿ ಚಾಲನೆ

ಬೆಂಗಳೂರಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ ವಾಹನ ಸಂಚಾರಕ್ಕೆ ಚಾಲನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಕೈಗೊಂಡಿರುವ ಬೆಂಗಳೂರಿನ ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಕ್ರವಾರ ಚಾಲನೆ ನೀಡಿದ್ದಾರೆ. ಆ‌ರ್.ವಿ. ರಸ್ತೆ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ರೈಲು ಸಹ ರಸ್ತೆ ಮೇಲ್ಸೇತುವೆ ಸಂಚಾರಕ್ಕೆ ಹಸಿರು ನಿಶಾನೆ, ಬನಶಂಕರಿ ಜಂಕ್ಷನ್‌ನಲ್ಲಿ ವಾಕ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಸೇರಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಡಿಸಿಎಂ ಭಾಗಿಯಾಗಿದ್ದರು.

ಬ್ಯಾಲೆಟ್ ಪೆಟ್ಟಿಗೆ ತೆರೆಯಲಾಗಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್‌ ಪ್ರತಿಭಟನೆ; "ಇದೆಲ್ಲ ಬರಿ ವದಂತಿ" ಎಂದ ಬಿಜೆಪಿ

ಕೋಲ್ಕತ್ತಾ ಸ್ಟ್ರಾಂಗ್ ರೂಮ್ ಮುಂದೆ ಟಿಎಂಸಿ ಧರಣಿ

ತೃಣಮೂಲ ಕಾಂಗ್ರೆಸ್ ನಾಯಕರು ಕೋಲ್ಕತ್ತಾದ ಸ್ಟ್ರಾಂಗ್ ರೂಮ್ ಹೊರಗೆ ಧರಣಿ ನಡೆಸಿ, ಅಧಿಕೃತ ಪ್ರತಿನಿಧಿಗಳಿಲ್ಲದೆ ಇವಿಎಂ ಮತಪೆಟ್ಟಿಗೆಗಳನ್ನು ಅಕ್ರಮವಾಗಿ ತೆರೆಯಲಾಗುತ್ತಿದೆ ಎಂದು ಆರೋಪಿಸಿದರು. ಅನಿರೀಕ್ಷಿತ ಚಟುವಟಿಕೆಗಳ ಬಗ್ಗೆ ಅವರು ಪ್ರಶ್ನೆ ಎತ್ತಿದರೆ, ಬಿಜೆಪಿ ಈ ಆರೋಪಗಳನ್ನು ಸಂಪೂರ್ಣ ವದಂತಿ ಎಂದು ತಳ್ಳಿ ಹಾಕಿತು. ಚುನಾವಣಾ ಆಯೋಗವು ಸ್ಟ್ರಾಂಗ್ ರೂಂಗಳು ಸುರಕ್ಷಿತವಾಗಿವೆ ಎಂದು ಸ್ಪಷ್ಟಪಡಿಸಿದೆ.

Cabinet Meeting: ಬೆಂಗಳೂರು-ಹೈದರಾಬಾದ್ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗೆ ಸಚಿವ ಸಂಪುಟ ಅನುಮೋದನೆ

ಬೆಂ-ಹೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗೆ ಸಚಿವ ಸಂಪುಟ ಅನುಮೋದನೆ

Bengaluru-Hyderabad high-speed rail corridor project: ಸುಸ್ಥಿರ ಪ್ರಯಾಣಿಕ ಸಾರಿಗೆ ವ್ಯವಸ್ಥೆ ಬಲಪಡಿಸುವ ಉದ್ದೇಶಿತ ಹೈದರಾಬಾದ್ - ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯ ಅನುಷ್ಠಾನಕ್ಕೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಭರ್ಜರಿ ಟ್ವಿಸ್ಟ್‌: 2 ಕ್ಷೇತ್ರಗಳ 15 ಬೂತ್‌ಗಳಲ್ಲಿ ನಾಳೆ ಮರು ಮತದಾನ

ಪಶ್ಚಿಮ ಬಂಗಾಳದಲ್ಲಿ ನಾಳೆ ಮರು ಮತದಾನ

ಪಶ್ಚಿಮ ಬಂಗಾಳದಲ್ಲಿ ಮರು ಮತದಾನಕ್ಕೆ ಭಾರತೀಯ ಚುನಾವಣಾ ಆಯೋಗವು ಚಿಂತನೆ ನಡೆಸುತ್ತಿದೆ. ಮತಗಟ್ಟೆವಾರು ವರದಿಗಳು ಮತ್ತು ದೂರುಗಳ ಪರಿಶೀಲನೆ ಆಧರಿಸಿ ಚುನಾವಣೆ ಫಲಿತಾಂಶಕ್ಕೂ ಮೊದಲೇ ಅಂದರೆ ಮೇ 2ರಂದು ಕೆಲವು ಬೂತ್‌ಗಳಲ್ಲಿ ಮರು ಮತದಾನ ನಡೆಸಲು ನಿರ್ಧರಿಸಲಾಗಿದೆ.

ಮತ ಎಣಿಕೆಗೆ 3 ದಿನ ಬಾಕಿ ಇರುವಾಗಲೇ ಪಶ್ಚಿಮ ಬಂಗಾಳದಲ್ಲಿ ಹೈಡ್ರಾಮ; ಭವಾನಿಪುರ ಸ್ಟ್ರಾಂಗ್ ರೂಂಗೆ ಮಮತಾ ಬ್ಯಾನರ್ಜಿ ಭೇಟಿ: ಮತ ಎಣಿಕೆ ಅಕ್ರಮಗಳ ಬಗ್ಗೆ ಎಚ್ಚರಿಕೆ

ಭವಾನಿಪುರ ಸ್ಟ್ರಾಂಗ್ ರೂಂಗೆ ಮಮತಾ ಬ್ಯಾನರ್ಜಿ ದಾಳಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಾನಿಪುರ ಸ್ಟ್ರಾಂಗ್ ರೂಮ್‌ಗೆ ಭೇಟಿ ನೀಡಿ ಮತ ಎಣಿಕೆಯಲ್ಲಿ ಅಕ್ರಮಗಳ ಬಗ್ಗೆ ಎಚ್ಚರಿಕೆ ನೀಡಿ, ಪಾರದರ್ಶಕತೆ ಕಾಪಾಡುವಂತೆ ಸೂಚಿಸಿದ್ದಾರೆ. ಭವಾನಿಪುರ ಕ್ಷೇತ್ರದ ಇವಿಎಂ ಸ್ಟ್ರಾಂಗ್ ರೂಂಗೆ ಭೇಟಿ ನೀಡಿದ ನಂತರ ಅವರು ಈ ಗಂಭೀರ ಆರೋಪ ಮಾಡಿದ್ದಾರೆ.

ಭಾರತದ ವಿದೇಶಾಂಗ ಸಚಿವ ಜೈಶಂಕರ್‌ಗೆ ಇರಾನ್ ಸಚಿವ ಸೈಯದ್‌ ಅಬ್ಬಾಸ್‌ ಅರಾಗ್ಚಿ ಕರೆ: ಕದನ ವಿರಾಮದ ಕುರಿತು ಮಹತ್ವದ ಚರ್ಚೆ

ಜೈಶಂಕರ್‌ ಜತೆ ಇರಾನ್ ಸಚಿವ ಅರಾಗ್ಚಿ ಮಾತುಕತೆ

ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಭಾರತ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಕರೆ ಮಾಡಿ ಪಶ್ಚಿಮ ಏಷ್ಯಾದ ಪ್ರಸ್ತುತ ಯುದ್ಧ ಪರಿಸ್ಥಿತಿ ಮತ್ತು ಕದನ ವಿರಾಮದ ಬಗ್ಗೆ ಚರ್ಚೆ ನಡೆಸಿದರು. ಉಭಯ ದೇಶಗಳು ಮುಂದಿನ ದಿನಗಳಲ್ಲಿ ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡಿವೆ.

ಸಶಸ್ತ್ರ ಪಡೆಗಳಿಗೆ ಸಾವಯವ ಆಹಾರ ಪೂರೈಕೆಗೆ ಒತ್ತು; ಜೋಶಿ ನೇತೃತ್ವದಲ್ಲಿ ಭಾರತೀಯ ಸೇನೆಯ ಉನ್ನತ ಅಧಿಕಾರಿಗಳ ಸಭೆ

ಸಶಸ್ತ್ರ ಪಡೆಗಳಿಗೆ ಸಾವಯವ ಆಹಾರ ಪೂರೈಕೆಗೆ ಕೇಂದ್ರ ಒತ್ತು

Pralhad Joshi: ದೆಹಲಿಯ ಕೃಷಿ ಭವನದಲ್ಲಿ ಗುರುವಾರ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಭಾರತೀಯ ಸೇನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪೌಷ್ಟಿಕ ಆಹಾರ ಪೂರೈಕೆ ಬಗ್ಗೆ ಚರ್ಚೆ ನಡೆಸಿದರು.

4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ: ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮೀ? ಮೇ 4ರ ಫಲಿತಾಂಶದತ್ತ ಎಲ್ಲರ ಚಿತ್ತ

ಮೇ 4ರಂದು ವಿಧಾನಸಭಾ ಚುನಾವಣೆಗಳ ಫಲಿತಾಂಶ

Assembly elections: ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳಂ ಮತ್ತು ಪುದುಚೇರಿಯ 2026ರ ಎಕ್ಸಿಟ್ ಪೋಲ್‌ಗಳು ಏಪ್ರಿಲ್ 29ರಂದು ಅಂತಿಮ ಹಂತದ ಮತದಾನ ಮುಗಿದ ನಂತರ ಬಿಡುಗಡೆಯಾಗಿವೆ. ಪಶ್ಚಿಮ ಬಂಗಾಳ ಮತ್ತು ಕೇರಳಂನಲ್ಲಿ ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಅತಂತ್ರ ವಿಧಾನಸಭೆಯತ್ತ ಬೊಟ್ಟು ಮಾಡಿವೆ.

ಟುಡೇಸ್ ಚಾಣಕ್ಯ ಎಕ್ಸಿಟ್ ಪೋಲ್ ಸಮೀಕ್ಷೆ ಔಟ್‌: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಭದ್ರಕೋಟೆ ಛಿದ್ರ ಛಿದ್ರ, ಅಸ್ಸಾಂನಲ್ಲಿ ಬಿಜೆಪಿಗೆ ಜಯ; ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ?

ಎಕ್ಸಿಟ್ ಪೋಲ್ ಸಮೀಕ್ಷೆ: ಬಂಗಾಳದಲ್ಲಿ ಬಿಜೆಪಿಗೆ ಭರ್ಜರಿ ಜಯ

2026 ವಿಧಾನಸಭಾ ಚುನಾವಣೆಯ ಎಕ್ಸಿಟ್ ಪೋಲ್‌ಗಳು ದೇಶದ ರಾಜಕೀಯ ಚಿತ್ರಣವನ್ನು ಬದಲಾಯಿಸುವ ಸೂಚನೆ ನೀಡಿವೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭರ್ಜರಿ ಬಹುಮತ, ಅಸ್ಸಾಂನಲ್ಲಿ ಮೂರನೇ ಬಾರಿ ಅಧಿಕಾರ ಸಾಧ್ಯತೆ, ತಮಿಳುನಾಡಿನಲ್ಲಿ ಡಿಎಂಕೆ ಮತ್ತೆ ಸರ್ಕಾರ ರಚಿಸುವ ಬಗ್ಗೆ ಭವಿಷ್ಯ ನುಡಿಯಲಾಗುತ್ತಿದೆ. ತಮಿಳುನಾಡಿನಲ್ಲಿ ನಟ ವಿಜಯ್ ಅವರ ಟಿವಿಕೆ ಪಕ್ಷ ಅಚ್ಚರಿ ಸಾಧನೆ ಮಾಡಬಹುದು. ಕೇರಳದಲ್ಲಿ ಯುಡಿಎಫ್-ಎಲ್‌ಡಿಎಫ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಬಿಜೆಪಿ ನಿರ್ಣಾಯಕ ಪಾತ್ರ ವಹಿಸಬಹುದು ಎಂದು ಟುಡೇಸ್ ಚಾಣಕ್ಯ ಎಕ್ಸಿಟ್ ಪೋಲ್ ಸಮೀಕ್ಷೆ ತಿಳಿಸಿದೆ.

ನಾಯಕತ್ವ ಬದಲಾವಣೆ ವಿಚಾರ; ಖರ್ಗೆ ಸಾಹೇಬರನ್ನೇ ಕೇಳಿ ಎಂದ ಡಿ.ಕೆ. ಶಿವಕುಮಾರ್‌

ನಾಯಕತ್ವ ಬದಲಾವಣೆ ವಿಚಾರ; ಖರ್ಗೆ ಸಾಹೇಬರನ್ನು ಕೇಳಿ ಎಂದ ಡಿಕೆಶಿ

DK Shivakumar: ಆದಷ್ಟು ಬೇಗ ಅಧಿಕಾರ ಹಂಚಿಕೆ ಗೊಂದಲ ಬಗೆಹರಿಸುವಿರಾ, ಮಲ್ಲಿಕಾರ್ಜುನ ಖರ್ಗೆ ಬದಲಾವಣೆ ಇಲ್ಲ ಎಂದಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಗೊಂದಲವೇ ಇಲ್ಲ. ನೀವುಗಳು ಏನಿದ್ದರೂ ಮಲ್ಲಿಕಾರ್ಜುನ ಖರ್ಗೆ ಸಾಹೇಬರನ್ನು ಕೇಳಿ. ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇದು ಪಕ್ಷ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿ.ಕೆ. ಶಿವಕುಮಾರ್

ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಕೆಶಿ

DK Shivakumar: ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರುಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ ಕೂಡಲೇ ಈ ವಾರದೊಳಗೆ ಎತ್ತಿನಹೊಳೆ ಕೆಲಸ ಪ್ರಾರಂಭ ಮಾಡಿ ಎಂದು ಗುತ್ತಿಗೆದಾರರಿಗೆ ಸೂಚಿಸಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗಳ ಫಲಿತಾಂಶಕ್ಕೆ ದಿನಗಣನೆ: ಕ್ಯುಆರ್ ಕೋಡ್ ಆಧಾರಿತ ಗುರುತು ವ್ಯವಸ್ಥೆ ಪರಿಚಯಿಸಿದ ಚುನಾವಣಾ ಆಯೋಗ

ವಿಧಾನಸಭಾ ಚುನಾವಣೆ ಫಲಿತಾಂಶ: ಕ್ಯುಆರ್ ಕೋಡ್ ಗುರುತು ವ್ಯವಸ್ಥೆ

ಮತದಾನ ಎಣಿಕೆ ಕೇಂದ್ರಗಳಲ್ಲಿ ಭದ್ರತೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಕ್ಯುಆರ್ ಕೋಡ್ ಆಧಾರಿತ ಗುರುತು ವ್ಯವಸ್ಥೆಯನ್ನು ಚುನಾವಣಾ ಆಯೋಗವು ಪರಿಚಯಿಸಿದೆ. ಎಣಿಕೆ ಕೇಂದ್ರಗಳಿಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವುದನ್ನು ತಡೆಯಲು ಭಾರತೀಯ ಚುನಾವಣಾ ಆಯೋಗವು (ಇಸಿಐ) ಇಸಿನೆಟ್‌ನಲ್ಲಿ ಕ್ಯುಆರ್ ಕೋಡ್ ಆಧಾರಿತ ಭಾವಚಿತ್ರದ ಗುರುತಿನ ಚೀಟಿ ಮಾದರಿ ಪರಿಚಯಿಸಿದೆ.

Sustainable Data Park: ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆ

ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆ

Sustainable Data Park: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ ಡೇಟಾ ಕೇಂದ್ರಗಳು (ಸಸ್ಟೇನಬಲ್ ಡೇಟಾ ಸೆಂಟರ್ಸ್) ಅಗತ್ಯವಿದ್ದು ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಡೇಟಾ ಪಾರ್ಕ್ ಸ್ಥಾಪಿಸಲು ಗುರುವಾರ ನಡೆದ ಸಂಬಂಧಿತ ಸಚಿವರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಅವಘಡ: ಅಧಿಕಾರಿಯ ತಲೆದಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಆದೇಶ

ಬೌರಿಂಗ್ ಆಸ್ಪತ್ರೆ ದುರಂತ: ಅಧಿಕಾರಗಳ ತಲೆದಂಡಕ್ಕೆ ಸೂಚನೆ

CM Siddaramaiah: ಭಾರಿ ಮಳೆಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಯ ತಲೆದಂಡವಾಗಿದೆ. ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್ ಅಮಾನತುಗೊಳಿಸಿ ನೊಟೀಸ್‌ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಡೊನಾಲ್ಡ್‌ ಟ್ರಂಪ್–ವ್ಲಾಡಿಮಿರ್ ಪುಟಿನ್ 90 ನಿಮಿಷ ಮಾತುಕತೆ: ಇರಾನ್ ಯುದ್ಧ, ಉಕ್ರೇನ್ ಕದನ ವಿರಾಮದ ಬಗ್ಗೆ ಮಹತ್ವದ ಚರ್ಚೆ: ಜಾಗತಿಕ ಕುತೂಹಲ ಕೆರಳಿಸಿದ ನಾಯಕರ ನಡೆ

ಉಕ್ರೇನ್ ಕದನ ವಿರಾಮ ಕುರಿತು ಟ್ರಂಪ್-ಪುಟಿನ್ ಮಹತ್ವದ ಚರ್ಚೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುಮಾರು 90 ನಿಮಿಷಗಳ ದೂರವಾಣಿ ಮಾತುಕತೆ ನಡೆಸಿದ್ದು, ಇರಾನ್ ಯುದ್ಧ ಮತ್ತು ಉಕ್ರೇನ್ ಕದನ ವಿರಾಮದ ಕುರಿತು ಚರ್ಚೆ ನಡೆಸಿದ್ದಾರೆ. ಈ ಸಂಭಾಷಣೆ ಜಾಗತಿಕ ರಾಜಕೀಯದಲ್ಲಿ ಮಹತ್ವ ಪಡೆದಿದ್ದು, ಮುಂದಿನ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

Loading...