ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜಕೀಯ

ಗುಜರಾತ್‌ನಲ್ಲೊಂದು ಅಪರೂಪದ ಘಟನೆ:  ಹಿಂದೂ ಮಹಿಳಾ ಅಭ್ಯರ್ಥಿಯನ್ನು ಗೆಲ್ಲಿಸಿದ ಮುಸ್ಲಿಂ ಮತದಾರರು

ಗೋಧ್ರಾ ಪುರಸಭೆಯಲ್ಲೊಂದು ಐತಿಹಾಸಿಕ ಗೆಲುವು

ಅಹಮದಾಬಾದ್ ಗೋಧ್ರಾ ಪುರಸಭೆ ಚುನಾವಣೆಯಲ್ಲೊಂದು ಐತಿಹಾಸಿಕ ಗೆಲುವು ದಾಖಲಾಗಿದೆ. ಶೇಕಡಾ 100ರಷ್ಟು ಮುಸ್ಲಿಂ ಮತದಾರರಿರುವ ಕ್ಷೇತ್ರವಾದ ವಾರ್ಡ್ ಸಂಖ್ಯೆ 7ರಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ. ಇದು ಕೋಮು ಸೌಹಾರ್ದತೆ ಮತ್ತು ಸಾಮಾಜಿಕ ಒಗ್ಗಟ್ಟಿನ ಅಪರೂಪದ ಉದಾಹರಣೆಯಾಗಿ ಈಗ ಗುರುತಿಸಿಕೊಂಡಿದೆ.

ರಾಜ್ಯದಲ್ಲಿ ಸಿಎಂ, ನಾಯಕತ್ವ ಬದಲಾವಣೆ ಗೊಂದಲ ಶೀಘ್ರ ನಿವಾರಣೆ: ಗೃಹ ಸಚಿವ ಪರಮೇಶ್ವರ್

ಸಿಎಂ, ನಾಯಕತ್ವ ಬದಲಾವಣೆ ಗೊಂದಲ ಶೀಘ್ರ ನಿವಾರಣೆ: ಸಚಿವ ಪರಮೇಶ್ವರ್

G Parameshwar: ನಮ್ಮ ಪಕ್ಷದಲ್ಲಿ ಹೈಕಮಾಂಡ್ ಅತ್ಯುನ್ನತವಾದುದು. ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳು ಮತ್ತು ಜನರ ಆಶಯಗಳ ಬಗ್ಗೆ ವರಿಷ್ಠರಿಗೆ ಸಂಪೂರ್ಣ ಅರಿವಿದೆ. ನಾಯಕತ್ವದ ಕುರಿತಾದ ಯಾವುದೇ ಗೊಂದಲಗಳಿಗೆ ಅವರೇ ಶೀಘ್ರದಲ್ಲಿ ಅಧಿಕೃತ ತೆರೆ ಎಳೆಯಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬಾಂಬರ್ಸ್‌ನ ʼಬ್ರದರ್ಸ್ʼ ಅನ್ನೋ ಪಕ್ಷವನ್ನು ಭಾರತ ಸ್ವೀಕರಿಸದು: ಜೋಶಿ

ಕಾಂಗ್ರೆಸ್ ಪಕ್ಷದ 'ಬ್ರದರ್ʼ ಒಬ್ಬ ಭಯೋತ್ಪಾದಕ: ಜೋಶಿ

Pralhad Joshi: ಭಯೋತ್ಪಾದನೆಯಲ್ಲಿ ತೊಡಗಿದವರನ್ನು ʼಬ್ರದರ್ಸ್ʼ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಇದೀಗ ನ್ಯಾಯಾಲಯದ ತೀರ್ಪಿನಿಂದ ಮುಖಭಂಗವಾಗಿದೆ. ಕಾಂಗ್ರೆಸ್ ಪಕ್ಷದ 'ಬ್ರದರ್ʼ ಒಬ್ಬ ಭಯೋತ್ಪಾದಕ' ಎಂದರೆ ಕಾಂಗ್ರೆಸ್‌ನ ಓಲೈಕೆ ರಾಜಕಾರಣ ಅದೆಷ್ಟು ಅಪಾಯಕಾರಿ ಮಾತು ಆತಂಕಕಾರಿ ಎಂಬುದು ಬಹಿರಂಗಗೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಾಳೆ 2ನೇ ಹಂತದ ಮತದಾನ ಮುಗಿಯುತ್ತಿದ್ದಂತೆ ಹೊರ ಬೀಳಲಿದ ಎಕ್ಸಿಟ್ ಪೋಲ್ ರಿಸಲ್ಟ್‌; ವೀಕ್ಷಿಸೋದು ಎಲ್ಲಿ, ಹೇಗೆ? ಅಭಿಪ್ರಾಯ ಸಮೀಕ್ಷೆಗಿಂತ ಇದು ಹೇಗೆ ಭಿನ್ನ?

ಎಕ್ಸಿಟ್ ಪೋಲ್ ಎಂದರೇನು? ರಾಜಕಾರಣಿಗಳಿಗೆ ಇದೇಕೆ ಮುಖ್ಯ?

What is an exit poll: ಏಪ್ರಿಲ್ 29ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಮತ್ತು ಕೊನೆಯ ಹಂತದ ಮತದಾನ ನಡೆಯಲಿದೆ. ಆ ನಂತರ ಮೂಲಕ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 2026ರ ವಿಧಾನಸಭಾ ಚುನಾವಣೆ ಪ್ರಕ್ರಿಯೆಗೆ ತೆರ ಬೀಳಲಿದೆ. ಹೀಗಾಗಿ ನಾಳೆ ಸಂಜೆಯೇ ಎಕ್ಸಿಟ್‌ ಪೋಲ್‌ ರಿಸಲ್ಟ್‌ ಹೋರ ಬೀಳಲಿದೆ. ಯಾವ ರಾಜ್ಯದಲ್ಲಿ ಯಾರು ಅಧಿಕಾರಕ್ಕೆ ಬರಬಹುದು ಎನ್ನುವುದರ ಚಿತ್ರಣ ಎಕ್ಸಿಟ್‌ ಪೋಲ್‌ ಮೂಲಕ ತಿಳಿಯಬಹುದು.

ಟಿಎಂಸಿ ಭದ್ರಕೋಟೆಯ ಮೇಲೆ ಎಲ್ಲರ ಕಣ್ಣು: ಎರಡನೇ ಹಂತದ ಮತದಾನಕ್ಕೂ ಮುನ್ನ ಪಶ್ಚಿಮ ಬಂಗಾಳ ಸಂಪೂರ್ಣ ಮೌನ

ಎರಡನೇ ಹಂತದ ಮತದಾನಕ್ಕೆ ಸಜ್ಜಾಗಿದೆ ಟಿಎಂಸಿ ಭದ್ರಕೋಟೆ

ದೇಶವೇ ಈಗ ಟಿಎಂಸಿಯ ಭದ್ರಕೋಟೆಯಾಗಿರುವ ಪಶ್ಚಿಮ ಬಂಗಾಳದ ಕಡೆಗೆ ದೃಷ್ಟಿ ನೆಟ್ಟಿದೆ. ಎರಡನೇ ಹಂತದ ಮತದಾನಕ್ಕೂ ಮುನ್ನ ಪಶ್ಚಿಮ ಬಂಗಾಳದಲ್ಲಿ ಈಗ ಸಂಪೂರ್ಣ ಮೌನ ಆವರಿಸಿದೆ. ಮೊದಲ ಹಂತದ ಮತದಾನದಲ್ಲಿ ದಾಖಲೆ ಬರೆದ ಮೇಲೆ ಇದೀಗ ಎರಡನೇ ಹಂತದ ಮತದಾನದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

Internal Reservation: ಒಳಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ; ನೇಮಕಾತಿಗಳಿಗೆ ಪರಿಷ್ಕೃತ ಅಧಿಸೂಚನೆ

ಎಸ್‌ಸಿ ಒಳಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಏಪ್ರಿಲ್‌ 24ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇ.15 ಎಸ್‌ಸಿ ಮೀಸಲಾತಿಯಲ್ಲೇ ವರ್ಗೀಕರಣಕ್ಕೆ ನಿರ್ಧರಿಸಿದ್ದ ಮಾಡಿದ್ದ ಸರ್ಕಾರ, ಎಸ್‌ಸಿ ಎಡಗೈ ಜಾತಿಗಳಿಗೆ ಶೇ. 5.25, ಬಲಗೈ ಜಾತಿಗಳಿಗೆ 5.25, ಬೋವಿ, ಲಂಬಾಣಿ, ಕೊರಚ, ಕೊರಮ ಸೇರಿ 59 ಅಲೆಮಾರಿ ಜಾತಿಗಳಿಗೆ 4.5 ಮೀಸಲಾತಿ ನೀಡಲು ತೀರ್ಮಾನಿಸಲಾಗಿತ್ತು. ಇದೀಗ ಒಳ ಮೀಸಲಾತಿ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

“ಸಚಿವ ಸುಧಾಕರ್ ಹೆಬ್ಬೆಟ್ಟು ಒತ್ತಲು ಆರೋಗ್ಯ ವಿಚಾರ ಮುಚ್ಚಿಟ್ರಾ?”; ಮಾಜಿ ಸಿಎಂ ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ? Video

ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

Kumaraswamy lashes out at the government: ಸಚಿವ ಸುಧಾಕರ್‌ ಅವರ ಆರೋಗ್ಯ ಕುರಿತು ರಾಜ್ಯ ಸರ್ಕಾರ ವಾಸ್ತವಾಂಶವನ್ನು ಜನರ ಮುಂದೆ ಇಡಬೇಕು. ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿದ್ದರೆ ನಾನು ಅದನ್ನು ಪ್ರಶ್ನೆ ಮಾಡುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಕೆಲವು ವಿಷಯಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗುತ್ತಿದೆ ಎಂಬ ಅನುಮಾನವನ್ನು ಅವರು ವ್ಯಕ್ತಪಡಿಸಿದ್ದಾರೆ.

KSDL ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿ 2,016 ಕೋಟಿ ರುಪಾಯಿ ವಹಿವಾಟು, 507 ಕೋಟಿ ಲಾಭ!

507 ಕೋಟಿ ಲಾಭ ಕಂಡ ಕೆಎಸ್‌ಡಿಎಲ್‌, ಮೊದಲ ಬಾರಿ 2,016 ಕೋಟಿ ವಹಿವಾಟು

KSDL: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆ.ಎಸ್.ಡಿ.ಎಲ್) 2025-26ನೇ ಹಣಕಾಸು ವರ್ಷದಲ್ಲಿ ಇದೇ ಮೊದಲ ಬಾರಿಗೆ 2,016 ಕೋಟಿ ರುಪಾಯಿ ವಹಿವಾಟು ನಡೆಸಿದ್ದು, 507 ಕೋಟಿ ರುಪಾಯಿ ಲಾಭ ಗಳಿಸಿದೆ. ಈ ಕುರಿತ ವಿವರ ಇಲ್ಲಿದೆ.

"ನಾವು ಸಂಸದರನ್ನಾಗಿ ಮಾಡಿದ್ದಕ್ಕೆ ನಿಮಗೆ ಮದುವೆಯಾಯಿತು": ರಾಘವ್ ಚಡ್ಡಾ ವಿರುದ್ಧ ಆಪ್ ವಾಗ್ದಾಳಿ

ರಾಘವ್ ಚಡ್ಡಾ ವಿರುದ್ಧ ಮುಂದುವರಿದ ಆಪ್ ವಾಗ್ದಾಳಿ

ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ರಾಘವ್ ಚಡ್ಡಾ ವಿರುದ್ಧ ಆಮ್ ಆದ್ಮಿ ಪಾರ್ಟಿ ತೀವ್ರ ಟೀಕೆ ನಡೆಸಿದ್ದು, ಅವರನ್ನು ಪಕ್ಷದ ವಿರುದ್ಧ ದ್ರೋಹ ಮಾಡಿದವರು ಎಂದು ಆರೋಪಿಸಿದೆ. ಪಕ್ಷದ ಹಿರಿಯ ನಾಯಕರು ಚಡ್ಡಾ ಅವರ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿ, ರಾಜಕೀಯವನ್ನು ಉದ್ಯೋಗ ಬದಲಾವಣೆಗೆ ಹೋಲಿಸಿರುವುದು ಸರಿಯಲ್ಲ ಎಂದು ಹೇಳಿದ್ದಾರೆ. ಇತ್ತ, ಚಡ್ಡಾ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡು, ಹಲವು ವರ್ಷಗಳ ಕಾಲ ಪಕ್ಷಕ್ಕಾಗಿ ಕೆಲಸ ಮಾಡಿದರೂ ತಮ್ಮ ಅಭಿಪ್ರಾಯಗಳಿಗೆ ಮಹತ್ವ ಸಿಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

KAS officers Promotion: ಶೇ.33ರಷ್ಟು ಕೆಎಎಸ್‌ ಅಧಿಕಾರಿಗಳಿಗೆ ಪದೋನ್ನತಿ ಶೀಘ್ರ: ಸಿಎಂ ಸಿದ್ದರಾಮಯ್ಯ ಭರವಸೆ

ಶೇ.33ರಷ್ಟು ಕೆಎಎಸ್‌ ಅಧಿಕಾರಿಗಳ ಪದೋನ್ನತಿ ಶೀಘ್ರ: ಸಿಎಂ ಭರವಸೆ

CM Siddaramaiah: ಸರ್ಕಾರ ರೂಪಿಸುವ ನೀತಿಗಳು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವಲ್ಲಿ ಅಧಿಕಾರಿಗಳ ಪಾತ್ರ ಹಿರಿದು. ಜನಸೇವೆಗೆ ದೊರಕಿರುವ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು. ತೃಪ್ತಿದಾಯಕವಾಗಿ ಕೆಲಸ ಮಾಡಿರುವುದಕ್ಕಿಂತ ದೊಡ್ಡ ಪ್ರಮಾಣಪತ್ರ ಇನ್ನೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಮೇಲಿನ ದಾಳಿ: ಭಾರತದಲ್ಲೂ ಇಂತಹದ್ದೇ ವಾತಾವರಣವಿದೆ ಎಂದು ನಾಲಗೆ ಹರಿಯಬಿಟ್ಟ ಕಾಂಗ್ರೆಸ್ ಶಾಸಕ

ಟ್ರಂಪ್ ಮೇಲಿನ ದಾಳಿ ರೀತಿಯ ಪರಿಸ್ಥಿತಿ ಭಾರತದಲ್ಲೂ ಇದೆ ಎಂದ ಶಾಸಕ

ಅಮೆರಿಕ ವೈಟ್ ಹೌಸ್ ಕಾರ್ಯಕ್ರಮದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ವಿಜಯ್ ವಡೆಟ್ಟಿವಾರ್ ನೀಡಿದ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಟ್ರಂಪ್ ಅವರ ನೀತಿಗಳು ಮತ್ತು ಕ್ರಮಗಳ ಹಿನ್ನೆಲೆಯಲ್ಲಿ ದಾಳಿಯು ಅನಿವಾರ್ಯವಾಗಿತ್ತು ಎಂಬರ್ಥದ ಹೇಳಿಕೆ ನೀಡಿರುವುದಾಗಿ ಆರೋಪಿಸಿ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಕಾಂಗ್ರೆಸ್ ರಾಜಕೀಯ ಹಿಂಸಾಚಾರವನ್ನು ಸಮರ್ಥಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

Karnataka CM Row: ಮೇ 15ರೊಳಗೆ ಡಿಸಿಎಂ ಡಿಕೆಶಿಗೆ ಹೈಕಮಾಂಡ್‌ನಿಂದ ಬರ್ತ್‌ಡೇ ಗಿಫ್ಟ್: ಶಾಸಕ ರಂಗನಾಥ್

ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್‌ನಿಂದ ಬರ್ತ್‌ಡೇ ಗಿಫ್ಟ್: ಶಾಸಕ ರಂಗನಾಥ್

ಕಾಂಗ್ರೆಸ್‌ ಪಕ್ಷಕ್ಕಾಗಿ ಶ್ರಮಿಸಿರುವ ಡಿ.ಕೆ.ಶಿವಕುಮಾರ್‌ ಅವರಿಗೆ ಒಳ್ಳೆಯ ಸ್ಥಾನ ಸಿಗಬೇಕು ಎಂಬುವುದು ನಮ್ಮ ಆಸೆಯಾಗಿದೆ. ಅವರ ಹುಟ್ಟುಹಬ್ಬಕ್ಕೆ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ ಎಂದು ಹೇಳುವ ಮೂಲಕ ಸಿಎಂ ಸ್ಥಾನ ಬದಲಾವಣೆಯ ವದಂತಿಗಳಿಗೆ ಕುಣಿಗಲ್‌ ಶಾಸಕ ರಂಗನಾಥ್‌ ಅವರು ಪರೋಕ್ಷವಾಗಿ ಪುಷ್ಟಿ ನೀಡಿದ್ದಾರೆ.

ರವಿ ಬೆಳೆಗೆರೆ ಪತ್ರಿಕೆ ಲೋಕದ ಪಾತಕಿ: ಪ್ರತಾಪ್ ಸಿಂಹ ಆಕ್ರೋಶ

ರವಿ ಬೆಳೆಗೆರೆ ಹೀಯಾಳಿಸಿಯೇ ಬರೆಯುತ್ತಿದ್ದರು: ಪ್ರತಾಪ್ ಸಿಂಹ

Pratap Simha: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ 'ಸಾಧನಾ ಸೌರಭ' ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮತ್ತು ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ಪ್ರತಿಷ್ಠಿತ 'ರಾಷ್ಟ್ರೀಯ ಸೌರಭ ಸಮ್ಮಾನ್' ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ʼಹಾಯ್ ಬೆಂಗಳೂರುʼ ಪತ್ರಿಕೆಯಲ್ಲಿ ರವಿ ಬೆಳೆಗೆರೆ ವ್ಯಕ್ತಿತ್ವವನ್ನು ತೀವ್ರವಾಗಿ ಟೀಕಿಸುತ್ತಿದ್ದರು. ರವಿ ಬೆಳೆಗೆರೆ ಪತ್ರಿಕಾ ಲೋಕದ ಒಬ್ಬ ಪಾತಕಿʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

West Bengal Assembly Polls: ಮಾತುವಾ ದೇಗುಲಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ರಾಜಕೀಯ ಬದಲಾವಣೆ ಇಲ್ಲಿಂದಲೇ ಆರಂಭವಾಗುತ್ತ?

ಮಾತುವಾ ದೇಗುಲಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Narendra Modi: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದ್ದು, ದಾಖಲೆಯ ಶೇಕಡಾ 92ರಷ್ಟು ಹಕ್ಕು ಚಲಾವಣೆಯಾಗಿದೆ. ಎರಡನೇ ಮತ್ತು ಅಂತಿಮ ಹಂತ ಏಪ್ರಿಲ್‌ 29ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೊನೆಯ ಹಂತದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಏಪ್ರಿಲ್‌ 26) ವಿವಿಧ ಕಡೆ ಆಯೋಜಿಸಿದ್ದ ಬಿಜೆಪಿ ರ‍್ಯಾಲಿಯಲ್ಲಿ ಭಾಗವಹಿಸಿ ಆಡಳಿತರೂಢ ಟಿಎಂಸಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಮೋದಿ ಉತ್ತರ 24 ಪರಗಣ ಜಿಲ್ಲೆಯ ಠಾಕೂರ್ ನಗರದಲ್ಲಿರುವ ಠಾಕೂರ್ಬರಿ ಮಾತುವಾ ಮಹಾಸಂಘದ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಮಾತುವಾ ಪಶ್ಚಿಮ ಬಂಗಾಳದಲ್ಲಿ ನಿರ್ಣಾಯಕ ಸಮುದಾಯವಾಗಿದ್ದು, ಕನಿಷ್ಠ 34 ವಿಧಾನಸಭಾ ಕ್ಷೇತ್ರಗಳ ಮೇಲೆ ನೇರವಾಗಿ ಪ್ರಭಾವ ಬೀರುತ್ತದೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಈ ಸಮುದಾಯದಿಂದ ಉತ್ತಮ ಬೆಂಬಲ ಲಭಿಸಿತ್ತು. ಹೀಗಾಗಿ ಪ್ರಧಾನಿ ಮೋದಿ ಭೇಟಿ ರಾಜಕೀಯವಾಗಿ ಮಹತ್ವದ ತಿರುವು ಪಡೆದುಕೊಳ್ಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅರವಿಂದ್ ಕೇಜ್ರಿವಾಲ್ ಹೊಸ ಬಂಗಲೆಯನ್ನು "ಶೀಶ್ ಮಹಲ್ 2" ಎಂದು ಕರೆದ ಬಿಜೆಪಿ; ಆಪ್ ಕೆಂಡಾಮಂಡಲ

"ಶೀಶ್ ಮಹಲ್ 2" ಬಿಜೆಪಿ- ಆಪ್ ನಡುವೆ ವಾಗ್ವಾದ

ಸಂಸದ ರಾಘವ್ ಚಡ್ಡಾ ಅವರು ಬಿಜೆಪಿ ಸೇರಿದ ಬಳಿಕ ಆಪ್ ಮತ್ತು ಬಿಜೆಪಿ ನಡುವೆ ವಾಗ್ಯುದ್ಧ ಆರಂಭವಾಗಿದೆ. ದೆಹಲಿ ಉಪಮುಖ್ಯಮಂತ್ರಿ ಪರ್ವೇಶ್ ವರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಲಾದ ಹೊಸ ಬಂಗಲೆಯ ಚಿತ್ರವನ್ನು ಹಂಚಿಕೊಂಡಿದ್ದು, ಇದನ್ನು ಬಿಜೆಪಿ "ಶೀಶ್ ಮಹಲ್ 2" ಎಂದು ಕರೆದಿದೆ. ಇದರಿಂದ ಕೆರಳಿದ ಆಪ್ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಮೀಸಲಾತಿ ವಿರೋಧಿಸಿ 'ಮಹಿಳಾ ಪರ' ಎಂದು ಬೊಗಳೆ ಬಿಡುತ್ತಿದೆ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ ವಾಗ್ದಾಳಿ

ಮೀಸಲಾತಿ ವಿರೋಧಿಸಿ 'ಮಹಿಳಾ ಪರ' ಎಂದು ಬೊಗಳೆ ಬಿಡುತ್ತಿದೆ ಕಾಂಗ್ರೆಸ್: ಜೋಶಿ

ಜವಾಹರಲಾಲ್ ನೆಹರು ಎಸ್ಸಿ, ಎಸ್ಟಿ ಮೀಸಲಾತಿ, ರಾಜೀವ ಗಾಂಧಿ ಒಬಿಸಿ ಮೀಸಲಾತಿ ವಿರೋಧಿಸಿದ್ದರೆ, ಇದೀಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮಹಿಳಾ ಮೀಸಲಾತಿಯನ್ನು ಧಿಕ್ಕರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹದ್‌ ಜೋಶಿ ಆರೋಪಿಸಿದ್ದಾರೆ.

ಜೆನ್‌ ಝೀ ಎಫೆಕ್ಟ್: ಬಿಜೆಪಿ ಸೇರಿದ ಮೇಲೆ 10 ಲಕ್ಷ ಫಾಲೋವರ್ಸ್​ಗಳನ್ನು ಕಳೆದುಕೊಂಡ ರಾಘವ್ ಚಡ್ಡಾ

10 ಲಕ್ಷ ಫಾಲೋವರ್ಸ್ ಕಳೆದುಕೊಂಡ ರಾಘವ್ ಚಡ್ಡಾ

ಆಪ್ ಸಂಸದರಾಗಿದ್ದ ರಾಘವ್ ಚಡ್ಡಾ ಬಿಜೆಪಿ ಸೇರಿದ ಬಳಿಕ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ 10 ಲಕ್ಷ ಫಾಲೋವರ್ಸ್​ಗಳನ್ನು ಕಳೆದುಕೊಂಡಿದ್ದಾರೆ. ರಾಘವ್ ಚಡ್ಡಾ ಅವರ ನಡೆಯು ಜೆನ್‌ ಝೀ ಇಷ್ಟವಾಗಿಲ್ಲ ಎನ್ನಲಾಗಿದೆ. ಯುವಜನರ ಮೆಚ್ಚಿನ ನಾಯಕನಾಗಿ ಹೊರಹೊಮ್ಮಿದ್ದ ಅವರು ಕಳೆದ 24 ಗಂಟೆಗಳಲ್ಲಿ ಅವರು 10 ಲಕ್ಷ ಫಾಲೋವರ್ಸ್​ಗಳನ್ನು ಕಳೆದುಕೊಂಡಿದ್ದಾರೆ.

ನ್ಯಾ. ನಾಗಮೋಹನ್‍ದಾಸ್ ವರದಿ ಅವೈಜ್ಞಾನಿಕ ಎಂದು ತಿರಸ್ಕರಿಸಿದ್ದೀರಾ? : ಸಿಎಂಗೆ ಕಾರಜೋಳ ಪ್ರಶ್ನೆ

ನ್ಯಾ.ನಾಗಮೋಹನ್‍ದಾಸ್ ವರದಿ ಅವೈಜ್ಞಾನಿಕ ಎಂದು ತಿರಸ್ಕರಿಸಿದ್ದೀರಾ?: ಕಾರಜೋಳ

Govind Karjol: ನ್ಯಾ. ನಾಗಮೋಹನ್‍ದಾಸ್ ಅವರ ವರದಿಯಲ್ಲಿ ಶೇ.17 ಎಂದಿದ್ದರೂ ಶೇ.15ಕ್ಕೆ ಸೀಮಿತ ಮಾಡಿ ಕೊಡಬಹುದಾಗಿತ್ತು. ಯಾಕೆ ಕೊಟ್ಟಿಲ್ಲ. ನಿನ್ನೆ ದಿನ ಬೆಟ್ಟ ಅಗೆದು ಇಲಿ ಹುಡುಕಿದಂತೆ ಸಿದ್ದರಾಮಯ್ಯ ಅವರು ಒಳ ಮೀಸಲಾತಿಯನ್ನು ಜಾರಿ ನಿರ್ಧಾರ ಪ್ರಕಟಿಸಿ ತಮ್ಮ ಬೆನ್ನನ್ನು ತಾವೇ ಚಪ್ಪರಿಸಿಕೊಂಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಟೀಕಿಸಿದ್ದಾರೆ.

Liquor Price Hike: ಮದ್ಯಪ್ರಿಯರಿಗೆ ಮತ್ತೆ ಶಾಕ್‌ ಕೊಟ್ಟ ಸರ್ಕಾರ; ರಾಜ್ಯದಲ್ಲಿ ಮೇ 1ರಿಂದ ಮದ್ಯದ ಬೆಲೆ ಏರಿಕೆ ಸಾಧ್ಯತೆ!

ಮದ್ಯಪ್ರಿಯರಿಗೆ ಮತ್ತೆ ಶಾಕ್‌; ಮೇ 1ರಿಂದ ಮದ್ಯದ ಬೆಲೆ ಏರಿಕೆ ಸಾಧ್ಯತೆ!

ರಾಜ್ಯದ ಮದ್ಯ ಅಬಕಾರಿ ತೆರಿಗೆ ವ್ಯವಸ್ಥೆಯನ್ನು ಪರಿಶೀಲಿಸಲು ಕರ್ನಾಟಕ ಸರ್ಕಾರ ರಚಿಸಿದ್ದ ಸಂಪನ್ಮೂಲ ಸಂಗ್ರಹ ಸಮಿತಿ ಇತ್ತೀಚೆಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ ಮದ್ಯದ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲು ಶಿಫಾರಸು ಮಾಡಲಾಗಿತ್ತು. ಹೀಗಾಗಿ ಶೀಘ್ರದಲ್ಲೇ ಅಬಕಾರಿ ತೆರಿಗೆ ಪರಿಷ್ಕರಣೆಯಾಗಲಿದ್ದು, ಮದ್ಯದ ದರ ಏರಿಕೆ ಸಾಧ್ಯತೆ ಇದೆ.

ರಾಘವ್ ಚಡ್ಡಾ ಬಿಜೆಪಿ ಸೇರಿದ ಬಳಿಕ ಮೊದಲ ಬಾರಿಗೆ ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?

ರಾಘವ್ ಚಡ್ಡಾ ಬಿಜೆಪಿ ಸೇರ್ಪಡೆ: ಅರವಿಂದ್ ಕೇಜ್ರಿವಾಲ್ ಫಸ್ಟ್ ರಿಯಾಕ್ಷನ್

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕ ಹುದ್ದೆಯಿಂದ ವಜಾಗೊಂಡ ಆಪ್ ಸಂಸದ ರಾಘವ್ ಚಡ್ಡಾ ಶುಕ್ರವಾರ ಬಿಜೆಪಿ ಸೇರಿದ ಬಳಿಕ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಅವರು ಕೇವಲ ಒಂದು ಸಾಲಿನ ಪ್ರತಿಕ್ರಿಯೆ ನೀಡಿದರು.

ಬೆಂಗಳೂರಿನಲ್ಲಿ ಕಟ್ಟಡಗಳ ಎತ್ತರದ ನಿರ್ಬಂಧ ಸಡಿಲಿಸಿ; ಕೇಂದ್ರ ರಕ್ಷಣಾ ಸಚಿವರಿಗೆ ಡಿ.ಕೆ.ಶಿವಕುಮಾರ್‌ ಮನವಿ

ಬೆಂಗಳೂರಿನಲ್ಲಿ ಕಟ್ಟಡಗಳ ಎತ್ತರದ ನಿರ್ಬಂಧ ಸಡಿಲಿಕೆಗೆ ಡಿಕೆಶಿ ಮನವಿ

DK Shivakumar: ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳು ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿದ್ದು, ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.

Internal Reservation: ಒಳಮೀಸಲಾತಿ ಬಗ್ಗೆ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರ; ಎಲ್ಲಾ ಸಮುದಾಯಗಳಿಗೂ ಸಮಾನ ನ್ಯಾಯ ಎಂದ ಸಿಎಂ

ಒಳಮೀಸಲಾತಿಯಿಂದ ಎಲ್ಲಾ ಸಮುದಾಯಗಳಿಗೂ ಸಮಾನ ನ್ಯಾಯ: ಸಿಎಂ

ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗದಿಪಡಿಸಿ ಪರಿಶಿಷ್ಟ ಜಾತಿಗೆ ಶೇ.15 ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗಿದೆ. ಈ ನಿರ್ಧಾರದಿಂದ ಎಲ್ಲ ಸಮುದಾಯಗಳಿಗೂ ಸಮಾನ ನ್ಯಾಯ ಸಿಗಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ದಾಖಲೆಯ ಮತದಾನ: ಯಾರಿಗೆ ಲಾಭ, ಯಾರಿಗೆ ನಷ್ಟ?

ಮತದಾನದಲ್ಲಿ ದಾಖಲೆ: ಫಲಿತಾಂಶ ಮೇಲೆ ಏನು ಪರಿಣಾಮ?

ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯು ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಪರಿಣಾಮ ಬೀರಿರುವುದು ಸ್ಪಷ್ಟವಾಗಿದೆ. ಯಾಕೆಂದರೆ ಈ ಬಾರಿ ನಡೆದ ಮೊದಲ ಹಂತದ ಮತದಾನದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಮತದಾನವಾಗಿದೆ. ಇದರಿಂದ ಯಾರಿಗೆ ಲಾಭ, ಯಾರಿಗೆ ನಷ್ಟ ಎಂಬುದನ್ನು ಕಂಡುಕೊಳ್ಳುವುದು ಕಠಿಣವಾಗಿದ್ದು, ಇದು ಸಮೀಕ್ಷೆಯನ್ನುಫಲಿತಾಂಶವನ್ನು ಕೂಡ ಅನಿಶ್ಚಿತಗೊಳಿಸಿದೆ.

Cabinet meeting: ಹೊಸ ಒಳ ಮೀಸಲಾತಿ ಅನ್ವಯ 56,432 ಹುದ್ದೆಗಳ ನೇಮಕಾತಿಗೆ ತುರ್ತು ಕ್ರಮ: ಸಿಎಂ ಘೋಷಣೆ

ಹೊಸ ಒಳ ಮೀಸಲಾತಿ ಅನ್ವಯ 56,432 ಹುದ್ದೆಗಳ ನೇಮಕಾತಿ: ಸಿಎಂ

Govt Job Recruitment: ಎಡಗೈ 5.25, ಬಲಗೈ 5.25 ಹಾಗೂ ಇತರೆ ವರ್ಗದವರಿಗೆ 4.5 ಒಳ ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ 56,432 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Loading...