ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜಕೀಯ

ʼʼಭ್ರಷ್ಟಾಚಾರ ಆರೋಪ ಹೊತ್ತ ನಾಗೇಂದ್ರ ಎಂದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಭಯʼʼ: ಬಿಜೆಪಿ ಆರೋಪಕ್ಕೆ ಕಾರಣವೇನು?

ʼʼನಾಗೇಂದ್ರ ಎಂದರೆ ಸಿಎಂಗೆ ಭಯವೇ?ʼʼ ಬಿ.ವೈ. ವಿಜಯೇಂದ್ರ ಪ್ರಶ್ನೆ

BY Vijayendra: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಾಗೇಂದ್ರ ಭ್ರಷ್ಟಾಚಾರದ ಆರೋಪ ಹೊತ್ತು ರಾಜೀನಾಮೆ ನೀಡಿದ್ದರು. ಈಗ ಮತ್ತೆ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಅನಿವಾರ್ಯತೆ ಯಾಕೆ ಬಂತು ನಿಮಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.

ʼʼಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರಿಗೆ ಅನ್ಯಾಯʼʼ: ಸಿಎಂ ಡಿ.ಕೆ. ಶಿವಕುಮಾರ್‌ ಭೇಟಿಯಾಗಿ ಪ್ರಕಾಶ್‌ ರಾಜ್‌ ಹೇಳಿದ್ದೇನು?

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅನ್ಯಾಯ; ಕ್ರಮ ಕೈಗೊಳ್ಳುವಂತೆ ಸಿಎಂಗೆ ಮನವಿ

Prakash Raj: ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ 'ಎದ್ದೇಳು ಕರ್ನಾಟಕ' ಮತ್ತಿತರ ಸಂಘಟನೆಗಳ ಪ್ರತಿನಿಧಿಗಳು ಭೇಟಿ ಮಾಡಿ ಎಸ್‌ಐಆರ್‌ ಲೋಪದೋಷದ ಬಗ್ಗೆ ಸಮಾಲೋಚನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು.

ಸೋನಿಯಾ ಗಾಂಧಿ ನಮ್ಮ ದೇಶದವರಲ್ಲ, ಅವರಲ್ಲಿ ಹರಿಯುತ್ತಿರುವುದು ಇಟಲಿ ರಕ್ತ ಎಂದ ಎಚ್‌.ಡಿ. ಕುಮಾರಸ್ವಾಮಿ

ʼʼಸೋನಿಯಾ ಗಾಂಧಿ ನಮ್ಮ ದೇಶದವರಲ್ಲʼʼ: ಎಚ್‌.ಡಿ. ಕುಮಾರಸ್ವಾಮಿ

HD Kumaraswamy: ಸೋನಿಯಾ ಗಾಂಧಿ ಅವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಸೋನಿಯಾ ಗಾಂಧಿ ಅವರೇನು ನಮ್ಮ ದೇಶದವರಾ? ಅವರು ಮದುವೆಯಾಗಿ ನಮ್ಮ ದೇಶಕ್ಕೆ ಬಂದರು ಅಷ್ಟೇ. ಅವರಲ್ಲಿ ಹರಿಯುತ್ತಿರುವುದು ಇಟಲಿಯ ರಕ್ತ ಅಲ್ಲವೇ? ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ʼʼಗುಜರಾತ್ ಕೇಂದ್ರಿತ ಅಭಿವೃದ್ಧಿ ಮಾದರಿ ಬದಲಾಗಬೇಕುʼʼ: ಬಿಜೆಪಿ ವಿರುದ್ಧ ತಿರುಗಿಬಿದ್ದ ಅಣ್ಣಾಮಲೈ

ಭಾರತದ ಅಭಿವೃದ್ಧಿ ಒಂದೇ ರಾಜ್ಯಕ್ಕೆ ಸೀಮಿತವಾಗಬಾರದು: ಅಣ್ಣಾಮಲೈ

Annamalai: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಮಾದರಿ ಗುಜರಾತ್ ಕೇಂದ್ರಿತವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಟೀಕಿಸಿದ್ದಾರೆ. ಎಐ, ಸೆಮಿಕಂಡಕ್ಟರ್ ಯೋಜನೆಗಳು ಹಾಗೂ ಪ್ರಮುಖ ಕ್ರೀಡಾಕೂಟಗಳಂತಹ ಅವಕಾಶಗಳು ಒಂದೇ ರಾಜ್ಯಕ್ಕೆ ಕೇಂದ್ರೀಕೃತವಾಗಬಾರದು ಎಂದು ಅವರು ಹೇಳಿದ್ದಾರೆ. ಬಿಜೆಪಿ ನಿರ್ಧಾರಗಳು ದೆಹಲಿ ಕೇಂದ್ರಿತವಾಗುತ್ತಿದ್ದು, ರಾಜ್ಯ ನಾಯಕರಿಗೆ ಹೆಚ್ಚಿನ ಅಧಿಕಾರ ನೀಡಬೇಕು ಎಂದೂ ಅಣ್ಣಾಮಲೈ ಆಗ್ರಹಿಸಿದ್ದಾರೆ.

ಚಾಮರಾಜನಗರದಲ್ಲಿ ಶೂಟೌಟ್‌; ಕರ್ನಾಟಕ-ತಮಿಳುನಾಡು ನಡುವೆ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ಕಾರಣವಾಯ್ತು ಮೂವರು ತಮಿಳರ ಸಾವು

ಚಾಮರಾಜನಗರ ಗುಂಡಿನ ದಾಳಿ; ತಮಿಳುನಾಡು ಸಿಎಂ ವಿಜಯ್‌ ಕಿಡಿ

Tamil Nadu CM C Joseph Vijay: ಚಾಮರಾಜನಗರದ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಶಂಕಿತ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ತಮಿಳರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ ಎಂದು ಹೇಳಿದರೆ, ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಘಟನೆಯನ್ನು ಹತ್ಯಾಕಾಂಡ ಎಂದು ಆರೋಪಿಸಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ. ಕರ್ನಾಟಕ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದು, ಪ್ರಕರಣದ ಕುರಿತು ಪ್ರತಿಭಟನೆಗಳೂ ನಡೆದಿವೆ.

ನೈಸ್ ಯೋಜನೆಯನ್ನು ಟೇಕ್ ಓವರ್ ಮಾಡಲು ಸಂಚು ನಡೆಯುತ್ತಿದೆ: ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

ನೈಸ್ ಯೋಜನೆಯನ್ನು ಟೇಕ್ ಓವರ್ ಮಾಡಲು ಹೊರಟಿದ್ದಾರೆ: ಎಚ್‌ಡಿಕೆ

HD Kumaraswamy: ನನಗೆ ಒಂದು ಮಾಹಿತಿ ಇದೆ, ನೈಸ್ ಯೋಜನೆಯನ್ನು ಆ ಕಂಪನಿಯಿಂದ ಯಾರೋ ಈಗ ಟೇಕ್ ಓವರ್ ಮಾಡಲು ಹೊರಟಿದ್ದಾರೆ. ಮುಖ್ಯಮಂತ್ರಿಯನ್ನು ಕೇಳುತ್ತೇನೆ, ಇದರಲ್ಲಿ ಯಾರ ಪಾಲಿದೆ? ಯಾರು ಅದನ್ನು ಟೇಕ್ ಓವರ್ ಮಾಡಲು ಹೊರಟಿದ್ದಾರೆ? ಇವೆಲ್ಲವನ್ನೂ ಅವರೇ ಹೇಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Vande Mataram Row: ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ದೂರು; ಎಫ್‌ಐಆರ್‌ ದಾಖಲಿಸದಿದ್ದರೆ ಹೈಕೋರ್ಟ್‌ ಮೊರೆ ಹೋಗುವುದಾಗಿ ಬಿಜೆಪಿ ಮುಖಂಡ ವಿಕಾಸ್ ಎಚ್ಚರಿಕೆ

ʼವಂದೇ ಮಾತರಂʼ ವಿವಾದ: ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ದೂರು

BJP Leader Vikas Puttur: ಸ್ವಾತಂತ್ರ್ಯ ದಿನಾಚರಣೆಯಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಸೇರಿ ಕಾಂಗ್ರೆಸ್‌ ನಾಯಕರು ರಾಷ್ಟ್ರೀಯ ಗೀತೆ ʼವಂದೇ ಮಾತರಂʼಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ವಿಕಾಸ್‌ ಪುತ್ತೂರು ದೂರು ದಾಖಲಿಸಿದ್ದಾರೆ.

ʼವಂದೇ ಮಾತರಂʼ ಗೀತೆಗೆ ಅಗೌರವ; ಸಿಡಿದೆದ್ದ ಬಿಜೆಪಿ ಯುವ ಮೋರ್ಚಾ: ಸೋನಿಯಾ, ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಪಟ್ಟು

ʼವಂದೇ ಮಾತರಂʼಗೆ ಅಗೌರವ; ಸೋನಿಯಾ, ರಾಹುಲ್ ಕ್ಷಮೆಯಾಚನೆಗೆ ಬಿಜೆಪಿ ಪಟ್ಟು

Vande Mataram Row: ʼವಂದೇ ಮಾತರಂʼ ಗೀತೆಗೆ ಅಗೌರವ ತೋರಿದ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಭಾನುವಾರ (ಆಗಸ್ಟ್‌ 16) ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮುಸ್ಲಿಂ ನಾಯಕ, ಪುತ್ರನ ಗುಂಡಿಟ್ಟು ಹತ್ಯೆ; ಉದ್ವಿಗ್ನ ಸ್ಥಿತಿ

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ನಾಯಕ, ಪುತ್ರನ ಗುಂಡಿಕ್ಕಿ ಹತ್ಯೆ

Crime News: ಕಾಂಗ್ರೆಸ್ ನಾಯಕ ಮತ್ತು ಅವರ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಯಿತು. ದಾಳಿಕೋರರು ಮೊದಲು ಗುಂಡು ಹಾರಿಸಿ ನಂತರ ಹರಿತವಾದ ಆಯುಧಗಳಿಂದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟರು.

ʼʼಯಾವುದೇ ಸಂಘಟನೆಯಾದರೂ ಕಾನೂನು ಪಾಲಿಸಬೇಕುʼʼ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಹತ್ವದ ಹೇಳಿಕೆ

ಕಾವೇರಿ ವಿಚಾರದಲ್ಲಿ ರೈತರ ಹಿತವೇ ಮುಖ್ಯ: ಸಿಎಂ ಡಿಕೆಶಿ

D.K. Shivakumar: ಕೊಡಗಿನ ಭಾಗಮಂಡಲ ಭಗಂಡೇಶ್ವರ ದೇಗುಲದಲ್ಲಿ ಭಾನುವಾರ ಪೂಜೆ ಸಲ್ಲಿಸಿ ಮಾಧ್ಯಮಗಳ ಜತೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ʼʼಯಾವುದೇ ಸಂಘಟನೆಯಾಗಲಿ ಕಾನೂನು ಪಾಲಿಸಬೇಕು. ಸರ್ಕಾರಕ್ಕೆ ಅನುಮತಿ ಕೋರಿ ಅರ್ಜಿ ಬಂದರೆ, ನಿಯಮಾನುಸಾರ ಅಗತ್ಯ ಅನುಮತಿ ಹಾಗೂ ಸಿಬ್ಬಂದಿ ವ್ಯವಸ್ಥೆ ಮಾಡಲಾಗುವುದುʼʼ ಎಂದರು.

ʼʼತಂದೆ ಯಾರೆಂದು ತಾಯಿ ಬಳಿ ಕೇಳಿʼʼ: ತಮಿಳುನಾಡು ಸಿಎಂ ವಿಜಯ್‌ ಟೀಕಿಸುವ ಭರದಲ್ಲಿ ನಾಲಗೆ ಹರಿಯಬಿಟ್ಟ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

ವಿಜಯ್‌ ತಾಯಿಯ ಬಗ್ಗೆ ಬಿಜೆಪಿ ನಾಯಕನ ವಿವಾದಾತ್ಮಕ ಹೇಳಿಕೆ

CM Vijay: ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ವಿವಾದ ಮೈಮೇಲೆ ಎಳದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ಟೀಕಿಸುವ ವೇಳೆ ತಾಯಿಯ ಬಗ್ಗೆ ವೈಯಕ್ತಿಕ ಹೇಳಿಕೆ ನೀಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಸೇರಿ ಹಲವು ನಾಯಕರು ಹೇಳಿಕೆಯನ್ನು ಖಂಡಿಸಿ, ರಾಜಕೀಯದಲ್ಲಿ ಸಭ್ಯತೆ ಕಾಪಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರ್‌ಎಸ್‌ಎಸ್ ಯಾವ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದೆ? ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಆರ್‌ಎಸ್‌ಎಸ್ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Priyank Kharge attacks the RSS: 80ನೇ ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆ ವೇಳೆ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಹುತಾತ್ಮರಾದ 500 ಕಾಂಗ್ರೆಸ್ ಸದಸ್ಯರ ಪಟ್ಟಿಯನ್ನು ತಾನು ನೀಡಬಲ್ಲೆ. ಅಂತಹ 50 ಮಂದಿಯ ಪಟ್ಟಿಯನ್ನು ನೀಡಲಿ ಎಂದು ಆರ್‌ಎಸ್‌ಎಸ್‌ಗೆ ಸವಾಲು ಹಾಕಿದರು.

ಆಧುನಿಕ ಭದ್ರತಾ ಸವಾಲು ಎದುರಿಸಲು ಬೃಹತ್ ಸಿವಿಲ್ ಡಿಫೆನ್ಸ್ ಪಡೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಜಾಗತಿಕ ರಕ್ಷಣಾ ಶಕ್ತಿಯಾಗಲು ಭಾರತಕ್ಕೆ ಮೋದಿ ಕರೆ

Narendra Modi: ಆಧುನಿಕ ಭದ್ರತಾ ಸವಾಲುಗಳು ಮತ್ತು ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಬೃಹತ್ ಸಿವಿಲ್ ಡಿಫೆನ್ಸ್ ಸ್ವಯಂಸೇವಕರ ಪಡೆಯನ್ನು ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಆಧುನಿಕ ತಂತ್ರಜ್ಞಾನ, ತರಬೇತಿ ಮತ್ತು ತುರ್ತು ಪ್ರತಿಕ್ರಿಯ ವ್ಯವಸ್ಥೆಗಳ ಮೂಲಕ ನಾಗರಿಕರ ಸುರಕ್ಷತೆಯನ್ನು ಬಲಪಡಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಇದೇ ವೇಳೆ, ‘ಸುದರ್ಶನ ಚಕ್ರ’ ವ್ಯವಸ್ಥೆ ಹಾಗೂ ದೇಶೀಯ ರಕ್ಷಣಾ ಉತ್ಪಾದನೆಯನ್ನು ಮತ್ತಷ್ಟು ಬಲಪಡಿಸುವುದಾಗಿ ಮೋದಿ ಹೇಳಿದ್ದಾರೆ.

ʼʼಬ್ರಿಟಿಷರಿಂದ ಮುಕ್ತಿಯಷ್ಟೇ ಸ್ವಾತಂತ್ರ್ಯವಲ್ಲʼʼ: ದೇಶದ ಸದ್ಯದ ಸ್ಥಿತಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಕಳವಳ

ದೇಶದ ಸದ್ಯದ ಸ್ಥಿತಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಕಳವಳ

80th Independence Day: 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದೇಶದ ಜನತೆಯನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಂದೇಶ ಹಂಚಿಕೊಂಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿ ನಮನ ಸಲ್ಲಿಸಿದ್ದಾರೆ.

ಮೋದಿ ‘ಹಗ್’ ರಾಜತಾಂತ್ರಿಕತೆಗೆ ರಾಹುಲ್ ಗಾಂಧಿ ವ್ಯಂಗ್ಯ: ಇಂದಿರಾ ಗಾಂಧಿ ಫೋಟೋ ಶೇರ್‌ ಮಾಡಿ ಬಿಜೆಪಿ ತಿರುಗೇಟು

ರಾಹುಲ್ ಗಾಂಧಿ ಹೇಳಿಕೆಗೆ ನಿಶಿಕಾಂತ್ ದುಬೆ ಕೌಂಟರ್..!

ಪ್ರಧಾನಿ ನರೇಂದ್ರ ಮೋದಿ ಅವರ ‘ಹಗ್ ಡಿಪ್ಲೊಮಸಿ’ ಕುರಿತು ರಾಹುಲ್ ಗಾಂಧಿ ವ್ಯಂಗ್ಯವಾಡಿದ ಬೆನ್ನಲ್ಲೇ ಬಿಜೆಪಿ ಸಂಸದ ನಿಶಿಕಾಂತ್ ದುಬೆ ತಿರುಗೇಟು ನೀಡಿದ್ದಾರೆ. ಇಂದಿರಾ ಗಾಂಧಿ ಅವರ ವಿದೇಶಿ ನಾಯಕರೊಂದಿಗಿನ ಹಳೆಯ ಫೋಟೋಗಳು ಹಾಗೂ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮೋದಿ ಅವರನ್ನು ಅಪ್ಪಿಕೊಂಡಿದ್ದ ಚಿತ್ರವನ್ನು ಹಂಚಿಕೊಂಡು ದುಬೆ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಹೇಳಿಕೆ ವಿರುದ್ಧ ಹಲವು ಬಿಜೆಪಿ ನಾಯಕರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ration card: ರೇಷನ್‌ ಕಾರ್ಡ್‌ ರದ್ದಾಗುವ ಆತಂಕದಲ್ಲಿದ್ದ ಜನರಿಗೆ ಗುಡ್‌ ನ್ಯೂಸ್‌; ಪರಿಷ್ಕರಣೆ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತ

ರೇಷನ್‌ ಕಾರ್ಡ್‌ ಪರಿಷ್ಕರಣೆ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತ

Ration card verification: ಅನರ್ಹ ಪಡಿತರ ಚೀಟಿ, ನಕಲಿ ದಾಖಲೆ ನೀಡಿ ಪಡೆದಿರುವ ರೇಷನ್‌ ಕಾರ್ಡ್‌ಗಳನ್ನು ಗುರುತಿಸಿ ರದ್ದು ಮಾಡುವ ಪ್ರಕ್ರಿಯೆಯಿಂದಾಗಿ ಜನಸಾಮಾನ್ಯರಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಹೀಗಾಗಿ ಜನರ ಹಿತರಕ್ಷಣೆ ಹಾಗೂ ಪ್ರಸ್ತುತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಡಿತರ ಚೀಟಿ ಪರಿಶೀಲನಾ ಕಾರ್ಯಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಆಹಾರ ಸಚಿವ ರಿಜ್ವಾನ್‌ ಅರ್ಷದ್‌ ಮಾಹಿತಿ ನೀಡಿದ್ದಾರೆ.

Belagavi News: ಬೆಳಗಾವಿಯಲ್ಲಿ 44 ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆ ವಿತರಣೆ

ಬೆಳಗಾವಿಯಲ್ಲಿ 44 ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆ ವಿತರಣೆ

Belagavi News: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಕೆ.ಎಚ್. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗಾವಿ ಗ್ರಾಮೀಣ ಭಾಗದ 2025-26ನೇ ಸಾಲಿನ ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭ ಜರುಗಿತು.

ದೇಶ, ಪಂಜಾಬ್‌ನ  ಶಾಂತಿ ಬಯಸದ ಸಾಕಷ್ಟು ಶಕ್ತಿಗಳಿವೆ: ಗುಂಡಿನ ದಾಳಿ ಬಳಿಕ ಸುಖಬೀರ್ ಸಿಂಗ್ ಬಾದಲ್ ಮೊದಲ ಪ್ರತಿಕ್ರಿಯೆ

ಎಲ್ಲವೂ ದೇವರ ಕೈಯಲ್ಲಿದೆ, ನಾನೀಗ ಹೆದರುವುದಿಲ್ಲ: ಸುಖಬೀರ್ ಸಿಂಗ್ ಬಾದಲ್

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದ ದಾಳಿಯ ಬಳಿಕ ಮೊದಲ ಬಾರಿಗೆ ಮಾತನಾಡಿದ ಅಕಾಲಿ ದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು ನನಗೆ ಯಾವುದೇ ಭಯವಿಲ್ಲ. ನಾನು ಪರಿಪೂರ್ಣನಾಗಿದ್ದೇನೆ. ಪಂಜಾಬ್ ಮತ್ತು ಈ ದೇಶದಲ್ಲಿರುವ ಬಹಳಷ್ಟು ಶಕ್ತಿಗಳು ಇಲ್ಲಿ ಶಾಂತಿಯನ್ನು ಬಯಸುತ್ತಿಲ್ಲ ಎಂದು ಹೇಳಿದರು.

ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಶಾಸಕ ಶ್ರೀನಿವಾಸ ಮಾನೆ ನೇಮಕ

ರಾಜ್ಯ ಗೃಹ ಮಂಡಳಿ ಅಧ್ಯಕ್ಷರಾಗಿ ಶಾಸಕ ಶ್ರೀನಿವಾಸ ಮಾನೆ ನೇಮಕ

ಸಚಿವ ಸ್ಥಾನ ಸಿಗದೇ ಹೋದ ಶಾಸಕರಿಗೆ ನಿಗಮ- ಮಂಡಳಿಗಳ ಅಧ್ಯಕ್ಷ ಹುದ್ದೆಗಳನ್ನು ನೀಡುವ ಮೂಲಕ ಶಾಸಕರ ಅಸಮಾಧಾನ ತಣಿಸಲು ಸಿಎಂ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಶ್ರೀನಿವಾಸ ಮಾನೆ ಅವರಿಗೆ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ಸಿಕ್ಕಿದೆ.

2028ರ ಚುನಾವಣೆ ಹೇಗೆ ಎದುರಿಸಬೇಕು ಎನ್ನೋದು ನನಗೆ ಗೊತ್ತಿದೆ; ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು ಎಂದ ಸಿಎಂ

2028ರ ಚುನಾವಣೆ ಹೇಗೆ ಎದುರಿಸಬೇಕು ಎನ್ನೋದು ನನಗೆ ಗೊತ್ತಿದೆ: ಸಿಎಂ

Karnataka Assembly session 2026: ವಿಧಾನಸಭೆಯಲ್ಲಿ ಶುಕ್ರವಾರ ಸಚಿವ ಸಂಪುಟ ಸಹೋದ್ಯೋಗಿಗಳನ್ನು ಸದನಕ್ಕೆ ಪರಿಚಯಿಸಿ ಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ. ನನ್ನ 40 ವರ್ಷಗಳ ರಾಜಕೀಯದಲ್ಲಿ ಏಳು ಬೀಳುಗಳನ್ನು ಕಂಡಿದ್ದು, ನನ್ನದೇ ಆದ ಅನುಭವದಲ್ಲಿ ಹೊಸ ಆಲೋಚನೆಗಳನ್ನು ಹೊಂದಿದ್ದೇನೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವೆ ಎಂದು ಸಿಎಂ ತಿಳಿಸಿದ್ದಾರೆ.

President’s Medal: ಕರ್ನಾಟಕದ 18 ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿಗೆ 'ರಾಷ್ಟ್ರಪತಿ ಪದಕ' ಘೋಷಣೆ

ಕರ್ನಾಟಕದ 18 ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಘೋಷಣೆ

ಕರ್ನಾಟಕದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿಷ್ಠೆ, ಶಿಸ್ತು ಮತ್ತು ಅಪ್ರತಿಮ ಸೇವೆಯನ್ನು ಪರಿಗಣಿಸಿ ಒಬ್ಬ ಅಧಿಕಾರಿಗೆ ‘ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ’ ಹಾಗೂ 17 ಮಂದಿ ಅಧಿಕಾರಿ, ಸಿಬ್ಬಂದಿಗೆ ‘ಶ್ಲಾಘನೀಯ ಸೇವಾ ಪದಕ’ ಪ್ರಕಟಿಸಲಾಗಿದೆ. ರಾಷ್ಟ್ರಮಟ್ಟದ ಗೌರವಕ್ಕೆ ಭಾಜನರಾಗಿರುವ ಪೊಲೀಸರ ಪಟ್ಟಿ ಇಲ್ಲಿದೆ.

Sandhya Kiran scheme: ಪಿಂಚಣಿದಾರರಿಗೆ ‘ಸಂಧ್ಯಾ ಕಿರಣ’ ಭದ್ರತೆ; ನಗದುರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಅಸ್ತು

ಪಿಂಚಣಿದಾರರಿಗೆ ‘ಸಂಧ್ಯಾ ಕಿರಣ’ ಆರೋಗ್ಯ ಯೋಜನೆಗೆ ಸಂಪುಟ ಅಸ್ತು

Sandhya Kiran cashless healthcare scheme: ರಾಜ್ಯ ಸರ್ಕಾರಿ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು ಹಾಗೂ ಅರ್ಹ ಅವಲಂಬಿತ ದಿವ್ಯಾಂಗ ಮಕ್ಕಳಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ. ಆರಂಭಿಕ ಹಂತದಲ್ಲಿ 70 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸುಮಾರು 3.11 ಲಕ್ಷ ರಾಜ್ಯ ಸರ್ಕಾರಿ ಪಿಂಚಣಿದಾರರು ಹಾಗೂ ಅವರ ಅರ್ಹ ಅವಲಂಬಿತರನ್ನು ಒಳಗೊಂಡಂತೆ ಒಟ್ಟು ಸುಮಾರು 4.93 ಲಕ್ಷ ಫಲಾನುಭವಿಗಳು ಯೋಜನೆಯ ವ್ಯಾಪ್ತಿಗೆ ಬರಲಿದ್ದಾರೆ.

ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 400 ಹೊಸ ಬಸ್ ಖರೀದಿಗೆ ಸಂಪುಟ ಒಪ್ಪಿಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಕೆಕೆಆರ್‌ಟಿಸಿಗೆ 400 ಹೊಸ ಬಸ್ ಕೊಳ್ಳಲು ಸಂಪುಟ ಒಪ್ಪಿಗೆ

Priyank Kharge: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್‌ಟಿಸಿ) 400 ಹೊಸ ಬಸ್‌ಗಳನ್ನು ಖರೀದಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ಜಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕೇರಳಂ ಪಿಎಸ್‌ಸಿಯಲ್ಲಿಯೂ ಭಾರಿ ಅಕ್ರಮ: ಕಠಿಣ ಕ್ರಮದ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಸತೀಶನ್

ಕೇರಳಂ ಪಿಎಸ್‌ಸಿಯಲ್ಲಿ ಗಂಭೀರ ಅಕ್ರಮ

VD Satheesan: ಕೇರಳಂ ಪಿಎಸ್‌ಸಿ ಪರೀಕ್ಷೆ ಮತ್ತು ಸರ್ಕಾರಿ ನೇಮಕಾತಿಗಳಲ್ಲಿನ ಅಕ್ರಮಗಳ ಕುರಿತು ಕ್ರೈಂ ಬ್ರಾಂಚ್ ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ವಿ.ಡಿ. ಸತೀಶನ್ ಎಚ್ಚರಿಸಿದ್ದಾರೆ. ಎಲ್‌ಪಿಎಸ್‌ಟಿ ನೇಮಕಾತಿ, ಶಬರಿಮಲೆ ತುಪ್ಪ ಪೂರೈಕೆ ಅಕ್ರಮ ಹಾಗೂ ಮೆಡಿಸೆಪ್ ಯೋಜನೆ ಕುರಿತೂ ಅವರು ಪ್ರತಿಕ್ರಿಯಿಸಿದ್ದಾರೆ.

Loading...