ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜಕೀಯ

ಡಿಕೆಶಿ ಸಿಎಂ ಆಗಿರುವುದನ್ನು ಸಹಿಸಲಾಗದೇ ಬಿಡದಿ ಟೌನ್‌ಶಿಪ್‌ಗೆ ಜೆಡಿಎಸ್, ಬಿಜೆಪಿ ನಾಯಕರ ವಿರೋಧ: ಶಾಸಕ ಬಾಲಕೃಷ್ಣ ಕಿಡಿ

ಡಿಕೆಶಿ ಸಿಎಂ ಆಗಿರುವುದನ್ನು ಬಿಜೆಪಿ, ಜೆಡಿಎಸ್ ನಾಯಕರಿಗೆ ಸಹಿಸಲಾಗುತ್ತಿಲ್ಲ

ಬಿಜೆಪಿ ನಾಯಕರ ನಿಯೋಗ ಬಿಡದಿಗೆ ಭೇಟಿ ನೀಡಿ ಬಿಡದಿ ಟೌನ್ ಶಿಪ್ ವಿರುದ್ಧ ಹೋರಾಟ ಮಾಡಿರುವ ಬಗ್ಗೆ ಮಾಗಡಿ ಶಾಸಕ ಎಚ್‌.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಟೌನ್ ಶಿಪ್ ಯೋಜನೆಯನ್ನು ಡಿ.ಕೆ. ಶಿವಕುಮಾರ್ ಸಿಎಂ ಆದ ಬಳಿಕ ಕೈಗೊಂಡ ಯೋಜನೆಯಲ್ಲ. ಈ ವಿಚಾರವಾಗಿ ವಿಜಯೇಂದ್ರ ಅವರ ಜೊತೆಗೆ ಚರ್ಚೆ ಮಾಡಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ʼಹಸಿರು ಹೈಡ್ರೋಜನ್ ಪ್ರಮಾಣೀಕರಣ ಪೋರ್ಟಲ್ʼ ಆರಂಭ; ದೆಹಲಿಯಲ್ಲಿ ಸಚಿವ ಪ್ರಲ್ಹಾದ್‌ ಜೋಶಿ ಚಾಲನೆ

ʼಹಸಿರು ಹೈಡ್ರೋಜನ್ ಪ್ರಮಾಣೀಕರಣ ಪೋರ್ಟಲ್ʼ ಆರಂಭ

Pralhad Joshi: MNRE ಅಭಿವೃದ್ಧಿಪಡಿಸಿದ ʼಹಸಿರು ಹೈಡ್ರೋಜನ್ ಪ್ರಮಾಣೀಕರಣ ಪೋರ್ಟಲ್ʼ ಭಾರತದ ಹಸಿರು ಹೈಡ್ರೋಜನ್ ಪ್ರಮಾಣೀಕರಣ ಯೋಜನೆಯಡಿ ಪಾರದರ್ಶಕ, ಪ್ರಮಾಣೀಕರಣ ಮತ್ತು ನಿಯಂತ್ರಣವನ್ನು ಸುಗಮಗೊಳಿಸುತ್ತದೆ. ಇದಕ್ಕೆ ಅನುಗುಣವಾಗಿ ಈಗಾಗಲೇ 6 ರಾಜ್ಯಗಳು ಹಸಿರು ಹೈಡ್ರೋಜನ್ ನೀತಿಗಳನ್ನು ಪ್ರಕಟಿಸಿವೆ.

ವಂಡರ್‌ ಲಾದಲ್ಲಿ ಮಜಾ ಮಾಡುತ್ತಿರುವ ಕಾಂಗ್ರೆಸ್ ಶಾಸಕರೇ ಒಮ್ಮೆ ಬನ್ನಿಗಿರಿ ನೋಡಲು ಬನ್ನಿ: ನಿಖಿಲ್ ಕುಮಾರಸ್ವಾಮಿ

ರೈತರನ್ನು ಸಿಎಂ ಡಿಕೆಶಿ ಸಂಪೂರ್ಣವಾಗಿ ಕಡೆಗಣಿಸಿದ್ದಾರೆ: ನಿಖಿಲ್

Nikhil Kumaraswamy: 'ಇಂಟಿಗ್ರೇಟೆಡ್ ಟೌನ್‌ಶಿಪ್' ಹೆಸರಿನಲ್ಲಿ ಬಡವರ ಭೂಮಿಯನ್ನು ರಿಯಲ್ ಎಸ್ಟೇಟ್ ದಂಧೆಗೆ ಒಪ್ಪಿಸಿ, 'ಪ್ರೀಮಿಯಂ' ಹೆಸರಿನಲ್ಲಿ ಬರೋಬ್ಬರಿ ₹33,562 ಕೋಟಿ ಆದಾಯ ಲೂಟಿ ಮಾಡಲು ನಡೆಸುತ್ತಿರುವ ಸಂಚುʼ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

MLC Election: ನಾಳೆ ವಿಧಾನ ಪರಿಷತ್‌ ಚುನಾವಣೆ; ಕ್ರಾಸ್‌ ವೋಟಿಂಗ್‌ ಭೀತಿ ಹಿನ್ನೆಲೆ ಸಿಎಂ ಡಿಕೆಶಿ ನೇತೃತ್ವದಲ್ಲಿ ಅಣಕು ಮತದಾನ

ನಾಳೆ ಎಂಎಲ್‌ಸಿ ಚುನಾವಣೆ ಹಿನ್ನೆಲೆ ಡಿಕೆಶಿ ನೇತೃತ್ವದಲ್ಲಿ ಅಣಕು ಮತದಾನ

ವಿಧಾನಸಭೆಯಿಂದ ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ನಾಲ್ವರು ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಆದರೆ ಏಳನೇ ಸ್ಥಾನಕ್ಕೆ ಜಟಾಪಟಿ ಶುರುವಾಗಿದೆ.

"ಸಚಿವೆಯ ಮುಖಕ್ಕೆ ಕೆಜಿಗಟ್ಟಲೆ ಮೇಕಪ್": ನಾಲಗೆ ಹರಿಬಿಟ್ಟ ವೈಎಸ್ಆರ್ ಕಾಂಗ್ರೆಸ್ ನಾಯಕ; ಭುಗಿಲೆದ್ದ ವಿವಾದ

ನಾಲಗೆ ಹರಿಬಿಟ್ಟ ವೈಎಸ್ಆರ್ ಕಾಂಗ್ರೆಸ್ ನಾಯಕ

YSR Congress Party Leader Sparks Controversy: ಆಂಧ್ರ ಪ್ರದೇಶದ ಗೃಹ ಸಚಿವೆ, ಟಿಡಿಪಿ ನಾಯಕಿ ವಂಗಲಪುಡಿ ಅನಿತಾ ಮುಖಕ್ಕೆ ಕೆಜಿಗಳಷ್ಟು ಮೇಕಪ್ ಮೆತ್ತುತ್ತಾರೆ ಎಂದು ವೈಎಸ್ಆರ್ ಕಾಂಗ್ರೆಸ್ ನಾಯಕ ಗುಡಿವಾಡ ಅಮರನಾಥ್ ಟೀಕಿಸಿದ್ದಾರೆ. ಈ ಹೇಳಿಕೆಗೆ ಟಿಡಿಪಿ ನಾಯಕರಿಂದ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಮಾಜಿ ಸಚಿವರು ಅಗೌರವದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

Mango prices drop: ಮಾವು ಬೆಲೆ ಕುಸಿತ; ರೈತರ ನೆರವಿಗೆ ಧಾವಿಸಲು ಕೇಂದ್ರ ಕೃಷಿ ಸಚಿವರಿಗೆ ಎಚ್‍.ಡಿ.ಕುಮಾರಸ್ವಾಮಿ ಪತ್ರ

ಮಾವು ಬೆಲೆ ಕುಸಿತ; ರೈತರ ನೆರವಿಗೆ ಧಾವಿಸಲು ಕೇಂದ್ರಕ್ಕೆ ಎಚ್‌ಡಿಕೆ ಮನವಿ

ಕರ್ನಾಟಕವು ಅತಿಹೆಚ್ಚು ಮಾವು ಬೆಳೆಯುವ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಪ್ರಸಕ್ತ ಋತುವಿನಲ್ಲಿ ಸುಮಾರು 10 ಲಕ್ಷ ಮೆಟ್ರಿಕ್ ಟನ್ ಮಾವು ಬೆಳೆಯಲಾಗಿದೆ. ಆದರೆ, ಬೆಲೆ ಕುಸಿತ ಹಾಗೂ ಪ್ರತಿಕೂಲಕರ ಹವಾಮಾನದಿಂದ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಎಂದು ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಸಚಿವರ ಗಮನ ಸೆಳೆದಿದ್ದಾರೆ.

ಭಾರತ–ಅಮೆರಿಕ ಸಂಬಂಧದಲ್ಲಿ ಬಿರುಕು? ಡೊನಾಲ್ಡ್‌ ಟ್ರಂಪ್ ನೀತಿಗಳಿಂದ ಹೆಚ್ಚಿದ ಉದ್ವಿಗ್ನತೆ

ಭಾರತ–ಅಮೆರಿಕ ಬಾಂಧವ್ಯದಲ್ಲಿ ಬಿರುಕು?

ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಮರಳಿದ ಬಳಿಕ ಭಾರತ–ಅಮೆರಿಕ ಸಂಬಂಧಗಳು ಹಲವು ವಿಷಯಗಳಲ್ಲಿ ಸವಾಲುಗಳನ್ನು ಎದುರಿಸುತ್ತಿವೆ. ಹೆಚ್ಚುವರಿ ಸುಂಕ, ವಲಸೆ ನೀತಿ, ಪಾಕಿಸ್ತಾನದೊಂದಿಗಿನ ಅಮೆರಿಕದ ಭಾಂದವ್ಯ ಹಾಗೂ ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಉಂಟಾದ ಭಿನ್ನಾಭಿಪ್ರಾಯಗಳು ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿವೆ. ಇದರಿಂದ ಭಾರತ–ಅಮೆರಿಕ ಬಾಂಧವ್ಯದ ಭವಿಷ್ಯದ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ.

ತೃಣಮೂಲ ಕಾಂಗ್ರೆಸ್‌ನಂತೆ ವಿಭಜನೆಯಾಗುತ್ತಾ ಅಖಿಲೇಶ್ ನೇತೃತ್ವದ ಸಮಾಜವಾದಿ ಪಕ್ಷ? ಉತ್ತರ ಪ್ರದೇಶ ಸಚಿವರು ನೀಡಿದ ಸೂಚನೆ ಏನು?

ಟಿಎಂಸಿಯಂತೆ ವಿಭಜನೆಯಾಗುತ್ತಾ ಅಖಿಲೇಶ್ ನೇತೃತ್ವದ ಎಸ್‌ಪಿ?

Samajwadi Party Crisis: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ (SP)ಯಲ್ಲಿ ವಿಭಜನೆಯ ಊಹಾಪೋಹಗಳು ಕೇಳಿಬಂದಿವೆ. ಸಮಾಜವಾದಿ ಪಕ್ಷದ ಹಿರಿಯ ನಾಯಕ ರಾಮ್ ಗೋಪಾಲ್ ಯಾದವ್ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿದ್ದಾರೆ ಎಂದು ಸಚಿವ ಓಂ ಪ್ರಕಾಶ್ ರಾಜಭರ್ ಹೇಳಿದ್ದಾರೆ.

ಬಿಡದಿ ಟೌನ್‍ಶಿಫ್; ಗೂಂಡಾಗಳನ್ನು ಬಿಟ್ಟು ರೈತರನ್ನು ಬೆದರಿಸಬೇಡಿ ಎಂದು ಬಿ.ವೈ. ವಿಜಯೇಂದ್ರ ಕಿಡಿ

ಬಿಡದಿ ಟೌನ್‍ಶಿಪ್; ಸರ್ಕಾರ ರಾಜಕೀಯ ಮಾಡುವುದು ಬೇಡ: ಬಿವೈವಿ

BY Vijayendra: ರಾತ್ರೋ ರಾತ್ರಿ ಗೂಂಡಗಳು ಮನೆಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಕೆಲವು ರೈತರು ಹೇಳಿದ್ದಾರೆ. ಆದರೆ ನಮ್ಮ ಪ್ರಾಣ ಕೊಡ್ತೇವೆ ಜಮೀನು ಬಿಟ್ಟು ಕೊಡಲ್ಲ ಎಂದು ರೈತರು ಹೇಳಿದ್ದಾರೆ. ಅನ್ನಕೊಡುವ ರೈತರ ಪರವಾಗಿ ನಿಲ್ಲಬೇಕಾದ ಮುಖ್ಯಮಂತ್ರಿಗಳು ರಿಯಲ್ ಎಸ್ಟೇಟ್ ಪರವಾಗಿ ಇದ್ದಾರೆ. ಸರ್ಕಾರ ಯಾವುದೇ ಕಾರಣಕ್ಕೂ ರೈತರ ಜತೆ ಚೆಲ್ಲಾಟ ಮಾಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬಿಡದಿ ಟೌನ್‌ಶಿಪ್‌ಗೆ ಬಲವಂತವಾಗಿ ರೈತರ ಜಮೀನು ಸ್ವಾಧೀನ: ವಿಜಯೇಂದ್ರ ಆಕ್ರೋಶ

ರಾಜ್ಯ ಸರ್ಕಾರದ ಆದ್ಯತೆ ರಿಯಲ್ ಎಸ್ಟೇಟ್ ಹೊರತು ರೈತರಲ್ಲ: ಬಿವೈವಿ

B.Y. Vijayendra: ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ತಮ್ಮ ಸರ್ಕಾರದ ಆದ್ಯತೆ ರಿಯಲ್ ಎಸ್ಟೇಟ್ ಎಂಬುದನ್ನು ತೋರಿಸಿದ್ದಾರೆ. ಈ ಸರ್ಕಾರಕ್ಕೆ ರೈತರ ಮೇಲೆ ಕಾಳಜಿಯಿಲ್ಲ. ಬಿಡದಿಯಲ್ಲಿ ಟೌನ್‍ಶಿಪ್ ಮಾಡಲು ಮುಂದಾಗಿರುವ ಸರ್ಕಾರ ಬಲಾತ್ಕಾರವಾಗಿ, ಅಕ್ರಮವಾಗಿ ರೈತರ ಜಮೀನು ಕಸಿಯಲು ಮುಂದಾಗಿದೆ. ಇದನ್ನು ಬಿಜೆಪಿ ವಿರೋಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಜೀವ ಬೆದರಿಕೆ ಹಿನ್ನೆಲೆ ಶ್ರೀ ಪ್ರಣವಾನಂದರಾಮ್ ಸ್ವಾಮೀಜಿಗೆ ಭದ್ರತೆ ನೀಡಿ: ಸ್ವಾಮೀಜಿಗಳಿಂದ ಸಿಎಂಗೆ ಮನವಿ

ಶ್ರೀ ಪ್ರಣವಾನಂದರಾಮ್ ಸ್ವಾಮೀಜಿಗೆ ಭದ್ರತೆ ನೀಡಲು ಸಿಎಂಗೆ ಮನವಿ

ಶ್ರೀ ಪ್ರಣಾವಾನಂದರಾಮ್ ಮಹಾಸ್ವಾಮಿಗಳು ಈಡಿಗ ಹಾಗೂ ಹಿಂದುಳಿದ ಸಮಾಜಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಗೋಕರ್ಣದಲ್ಲಿ ನಡೆದ ಸಮಾಜ ಸಭೆಯಲ್ಲಿ ಧ್ವನಿ ಎತ್ತಿದ್ದರು. ಹೀಗಾಗಿ ಸ್ವಾಮೀಜಿಗೆ ಜೀವ ಬೆದರಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಬೇಕು ಎಂದು ವಿವಿಧ ಸ್ವಾಮೀಜಿಗಳು ಮನವಿ ಮಾಡಿದ್ದಾರೆ.

ಸಿಎಂ ಆದ ಮೇಲೂ ಆತ ಬ್ಲೂ ಫಿಲ್ಮ್ ‌ಮಾಡಿಸುವುದು, ಪೋಸ್ಟರ್ ಅಂಟಿಸುವುದು ಬಿಟ್ಟಿಲ್ಲ: ಡಿಕೆಶಿ ವಿರುದ್ಧ ಎಚ್‌ಡಿಕೆ ಆಕ್ರೋಶ

ಸಿಎಂ ಆದ ಮೇಲೆಯೂ ಹಳೇ ಚಾಳಿ ಬಿಟ್ಟಿಲ್ಲ: ಡಿಕೆಶಿ ವಿರುದ್ಧ ಎಚ್‌ಡಿಕೆ ಆಕ್ರೋಶ

HD Kumaraswamy: ನನ್ನ ಬದುಕು ತೆರೆದ ಪುಸ್ತಕ. ನನ್ನ ಬಗ್ಗೆ ನನ್ನ ಕಾರ್ಯಕರ್ತರಿಗೆ, ಜನತೆಗೆ ಗೊತ್ತು. ಇಂತಹ ಬೆದರಿಕೆ, ಅಪಪ್ರಚಾರಕ್ಕೆ ಹೆದರುವ ಪ್ರಶ್ನೆ ಇಲ್ಲ. ಈ ಪೋಸ್ಟರ್‌ಗಳಿಗೆ ಬೆದರುವ ಪ್ರಶ್ನೆಯೇ ಇಲ್ಲ. ಜನರಿಗಾಗಿ, ರೈತರಿಗಾಗಿ ನಮ್ಮ ಪಕ್ಷದ ಹೋರಾಟ ಮುಂದುವರಿಯುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಬಂಡಾಯದ ಬಿರುಗಾಳಿ? ಉದ್ಧವ್ ಸೇನೆ ಸಂಸದರಿಗೆ 15 ಕೋಟಿ ರೂ. ಆಮಿಷದ ಆರೋಪ

ಉದ್ಧವ್ ಸೇನೆಗೆ ಮತ್ತೆ ಬಂಡಾಯ ಭೀತಿ? ಸಂಸದರಿಗೆ 15 ಕೋಟಿ ರೂ. ಆಮಿಷದ ಆರೋಪ

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಬಂಡಾಯದ ಭೀತಿ ಎದುರಾಗಿದೆ. ಶಿವಸೇನೆ (ಯುಬಿಟಿ) ಸಂಸದರನ್ನು ಸೆಳೆಯಲು ತಲಾ ₹15 ಕೋಟಿ ಆಮಿಷ ನೀಡಲಾಗುತ್ತಿದೆ ಎಂದು ಸಂಜಯ್ ರಾವತ್ ಆರೋಪಿಸಿದ್ದು, ಕೆಲ ಸಂಸದರು ಏಕನಾಥ್ ಶಿಂಧೆ ಬಣದ ಸಂಪರ್ಕದಲ್ಲಿದ್ದಾರೆ ಎಂಬ ವರದಿಗಳು ರಾಜಕೀಯ ಚರ್ಚೆಗೆ ಕಾರಣವಾಗಿವೆ.

TMC: ಭವಾನಿಪುರ ಸೋಲು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಭವಾನಿಪುರ ಸೋಲು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

Mamata Banerjee: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ತಿಂಗಳು ಕಳೆದರೂ ಟಿಎಂಸಿಗೆ, ಮಮತಾ ಬ್ಯಾನರ್ಜಿಗೆ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಭವಾನಿಪುರ ಕ್ಷೇತ್ರದಲ್ಲಿ ಸೋತ ಮಮತಾ ಬ್ಯಾನರ್ಜಿ ಫಲಿತಾಂಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕನ ಮೇಲೆ ಜೈಪುರದಲ್ಲಿ ಹಲ್ಲೆ: ನಿರುದ್ಯೋಗವೇ ಕಾರಣ ಎಂದ ಅಭಿಜಿತ್‌ ದೀಪ್ಕೆ

ಯುವಕರಿಗೆ ಉದ್ಯೋಗವಿದ್ದರೆ ಹಲ್ಲೆ ಆಗುತ್ತಿರಲಿಲ್ಲ: ಅಭಿಜಿತ್‌ ದಿಪ್ಕೆ

Abhijeet Dipke: ರಾಜಸ್ಥಾನದ ಜೈಪುರದಲ್ಲಿ ನಡೆದ ಪ್ರತಿಭಟನೆ ವೇಳೆ ತಮ್ಮ ಮೇಲಾದ ಹಲ್ಲೆ ಮತ್ತು ಕಪಾಳಮೋಕ್ಷದ ಘಟನೆಗೆ ದೇಶದ ಹೆಚ್ಚುತ್ತಿರುವ ನಿರುದ್ಯೋಗವೇ ಕಾರಣ ಎಂದು ಕಾಕ್ರೋಚ್ ಜನತಾ ಪಾರ್ಟಿಯ ಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ದಾಳಿಕೋರರು ರಾಜಕೀಯ ಪಕ್ಷವೊಂದಕ್ಕೆ ಸೇರಿದವರು ಎಂದು ಸಿಜೆಪಿಯ ನಾಯಕರು ಆರೋಪಿಸಿದ್ದಾರೆ.

Priyank Kharge: ಆರ್‌ಎಸ್‌ಎಸ್‌ ಕಚೇರಿಗೆ ಹೋಗಲು ಸಿದ್ಧ, ಉಡಾಫೆ ಬಿಟ್ಟು ನನ್ನ ಪ್ರಶ್ನೆಗಳಿಗೆ ಉತ್ತರಿಸಲಿ: ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ ಕಚೇರಿಗೆ ಹೋಗಲು ಸಿದ್ಧ, ನನ್ನ ಪ್ರಶ್ನೆಗಳಿಗೆ ಉತ್ತರಿಸಲಿ

ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಸುಮಾರು 20 ಲಕ್ಷ ಜನರನ್ನು ಸೇರಿಸುತ್ತಿದ್ದಾರೆ. ನೀವು ಯಾರು?, ಯಾಕೆ ಇಷ್ಟು ಜನರನ್ನು ಸೇರಿಸುತ್ತಿದ್ದೀರಿ ಎಂದು ನಮಗೆ ಗೊತ್ತಾಗಬೇಕಲ್ಲವೇ? , ನಿಮ್ಮ ಸಂಘದ ರಚನೆ, ಪದಾಧಿಕಾರಿಗಳ ಬಗ್ಗೆ ತಿಳಿಯಬೇಕಲ್ಲವೇ?, ಇಷ್ಟು ದೊಡ್ಡ ಪ್ರಮಾಣದಲ್ಲಿ ಜನರನ್ನು ಸೇರಿಸುವ ನಿಮಗೆ ದೇಣಿಗೆ ಹೇಗೆ ಬರುತ್ತಿದೆ, ಯಾರು ಕೊಡುತ್ತಿದ್ದಾರೆ ಎಂದು ಕೇಳಬೇಕಲ್ಲವೇ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಲ್ಲಿ ತೆರಿಗೆ ಹಣ ಪೋಲು: ಬಿಜೆಪಿ ವಕ್ತಾರ ಎಸ್. ಪ್ರಕಾಶ್ ಆಕ್ರೋಶ

ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಲ್ಲಿ ತೆರಿಗೆ ಹಣ ಪೋಲು: ಎಸ್. ಪ್ರಕಾಶ್

S Prakash: ಗ್ಯಾರಂಟಿ ಅನುಷ್ಠಾನ ಸಮಿತಿಯು ಒಂದೇ ಒಂದು ಅರ್ಹ ಹೆಸರನ್ನು ಸೇರಿಸಿಲ್ಲ ಅಥವಾ ಅನರ್ಹರ ಹೆಸರನ್ನು ರದ್ದು ಮಾಡಲು ಶಿಫಾರಸು ಮಾಡಿಲ್ಲ. ಓಡಾಡಲು ಕಾರು, ಸಂಬಳ, ಆಪ್ತ ಸಹಾಯಕರನ್ನು ಹೊಂದಿದ ಇವರು ಆರಾಮವಾಗಿ ಇದ್ದಾರೆ. ಏನೂ ಕೆಲಸ ಮಾಡದ ಇವರನ್ನು ಯಾಕೆ ಸಾಕಬೇಕು? ಇವರ ಅವಶ್ಯಕತೆ ಇದೆಯೇ ಎಂದು ಬಿಜೆಪಿ ರಾಜ್ಯ ವಕ್ತಾರ ಎಸ್. ಪ್ರಕಾಶ್ ಪ್ರಶ್ನಿಸಿದ್ದಾರೆ.

ಮತಾಂತರ ಆದವರನ್ನು ಪರಿಶಿಷ್ಟ ಪಂಗಡ ಪಟ್ಟಿಯಿಂದ ಕೈಬಿಡಿ: ಶಾಂತಾರಾಮ ಸಿದ್ದಿ ಆಗ್ರಹ

ಮತಾಂತರ ಆದವರನ್ನು ಎಸ್‌ಟಿ ಪಟ್ಟಿಯಿಂದ ಕೈಬಿಡಿ: ಶಾಂತಾರಾಮ ಸಿದ್ದಿ

Shantaram Siddi: 12 ಕೋಟಿ ಬುಡಕಟ್ಟು ಸಮುದಾಯದ ಜನರಿದ್ದಾರೆ, ಅವರಲ್ಲಿ 1-2 ಕೋಟಿ ಜನ ಮತಾಂತರಗೊಂಡಿದ್ದಾರೆ. ಗಿರಿಜನರಿಗೆ ಸಿಗಬೇಕಾದ ಸೌಲಭ್ಯಗಳನ್ನು ಮತಾಂತರಿ ಬುಡಕಟ್ಟಿನವರೇ ಹೆಚ್ಚಾಗಿ ಪಡೆದುಕೊಳ್ಳುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಇವರು ಇತ್ತ ಬುಡಕಟ್ಟು ಹಾಗೂ ಅತ್ತ ಮತಾಂತರಗೊಂಡ ಧರ್ಮದ ಎರಡೂ ಕಡೆಯ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಆರೋಪಿಸಿದ್ದಾರೆ.

Bidadi Township: ಬಿಡದಿ ಟೌನ್‌ಶಿಪ್‌ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್

ಬಿಡದಿ ಟೌನ್‌ಶಿಪ್‌ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಎಂ. ಲಕ್ಷ್ಮಣ್

ನಮ್ಮ ರಾಜ್ಯದಲ್ಲಿ ಐಟಿ ಹಾಗೂ ಇತರೆ ಕ್ಷೇತ್ರದ ಉದ್ಯಮಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಬಿಡದಿ ಟೌನ್‌ಶಿಪ್‌ ನಿರ್ಮಾಣವಾಗುತ್ತಿದೆ. ಇದರ ಹಿಂದೆ ಯಾವುದೇ ರೀತಿಯ ರಿಯಲ್ ಎಸ್ಟೇಟ್ ಉದ್ದೇಶವಿಲ್ಲ. ಈ ಯೋಜನೆಯಲ್ಲಿ ಲೂಟಿ ಮಾಡಲು ಅವಕಾಶ ಎಲ್ಲಿದೆ ಎಂಬುದನ್ನು ಸಾಬೀತುಪಡಿಸಲಿ ಎಂದು ಬಿಜೆಪಿ ಮತ್ತು ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಆಗ್ರಹಿಸಿದ್ದಾರೆ.

ಆರ್‌ಎಸ್‌ಎಸ್‌ ವಿರುದ್ಧ ಕಾನೂನಿನ ಮೊರೆ ಯಾಕೆ ಹೋಗಿಲ್ಲ; ಪ್ರಿಯಾಂಕ್‌ ಖರ್ಗೆಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಆರ್‌ಎಸ್‌ಎಸ್‌ ವಿರುದ್ಧ ಕಾನೂನಿನ ಮೊರೆ ಯಾಕೆ ಹೋಗಿಲ್ಲ: ಛಲವಾದಿ

ಪ್ರಿಯಾಂಕ್ ಖರ್ಗೆಯವರ ಪ್ರಶ್ನೆಗೆ ಮೋಹನ್ ಭಾಗವತ್ ಅವರು ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಅವರಿಗೆ ಉತ್ತರ ಸಿಕ್ಕಿದೆ ಎಂದುಕೊಳ್ಳುವೆ. ದೇಶದ ಕಾನೂನು ಒಂದೇ ಎನ್ನುವಿರಲ್ಲವೇ? ಹಾಗಿದ್ದರೆ ನೀವು ಕಾನೂನಿನ ಮೊರೆ ಯಾಕೆ ಹೋಗಿಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾದೇಶ ಪ್ರಧಾನಿ ಸಲಹೆಗಾರನಿಗೆ ತಡೆ: ಭಾರತದ ವಿರುದ್ಧ ಢಾಕಾ ತೀವ್ರ ಅಸಮಾಧಾನ

ಭಾರತ ಪ್ರವಾಸ ರದ್ದುಪಡಿಸಿದ ಬಾಂಗ್ಲಾ ಪ್ರಧಾನಿ ಸಲಹೆಗಾರ

Dr Zahed Ur Rahman: ಬಾಂಗ್ಲಾದೇಶ ಪ್ರಧಾನಿಯ ಹಿರಿಯ ಸಲಹೆಗಾರ ಡಾ. ಜಾಹೇದ್ ಉರ್ ರಹಮಾನ್ ಅವರನ್ನು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ತಡೆದು ವಿಚಾರಣೆ ನಡೆಸಿದ ಘಟನೆ ರಾಜತಾಂತ್ರಿಕ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಾಂಗ್ಲಾದೇಶ, ಭಾರತ ಉಪ ಹೈಕಮಿಷನರ್ ಅವರನ್ನು ಕರೆಸಿ ತನ್ನ ಆಕ್ಷೇಪವನ್ನು ದಾಖಲಿಸಿದೆ.

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಿಎಂ ಸೂಚನೆ

ಕೃಷಿ, ತೋಟಗಾರಿಕೆ, ರೇಷ್ಮೆ ಮೀನುಗಾರಿಕೆ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್‌ ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ರಾಜ್ಯಗಳಲ್ಲಿರುವ ಮಾದರಿ ಯೋಜನೆ, ಮಾರ್ಗಗಳನ್ನು ಅಧ್ಯಯನ ಮಾಡಿ ರಾಜ್ಯದ ಕೃಷಿ ಸಂಸ್ಕೃತಿ ಮತ್ತು ಬೆಳೆ ಮಾದರಿಗಳಿಗೆ ಅನುಗುಣವಾಗಿ ಕಾರ್ಯರೂಪಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಅಮೆರಿಕ-ಇರಾನ್ ಒಪ್ಪಂದಕ್ಕೆ ಇಸ್ರೇಲ್‌ನಲ್ಲಿ ಭಾರಿ ವಿರೋಧ: ಡೊನಾಲ್ಡ್‌ ಟ್ರಂಪ್ ಘೋಷಣೆಗೆ ಸಚಿವ ಬೆನ್-ಗ್ವಿರ್ ಕಿಡಿ

ಟ್ರಂಪ್-ಇರಾನ್ ಒಪ್ಪಂದಕ್ಕೆ ಇಸ್ರೇಲ್ ಆಕ್ರೋಶ

US-Iran Peace Agreement: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಇರಾನ್ ಒಪ್ಪಂದಕ್ಕೆ ಇಸ್ರೇಲ್‌ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಈ ಒಪ್ಪಂದ ಇಸ್ರೇಲ್‌ಗೆ ಭಾದಕವಲ್ಲ ಎಂದು ಸ್ಪಷ್ಟಪಡಿಸಿದ್ದು, ದೇಶದ ಭದ್ರತೆಗೆ ಧಕ್ಕೆಯಾಗುವ ಯಾವುದೇ ಒಪ್ಪಂದವನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ 10 ಬೇಡಿಕೆಗಳ ಈಡೇರಿಕೆಗೆ ಸಿಎಂಗೆ ಮನವಿ

ದೈಹಿಕ ಶಿಕ್ಷಣ ಶಿಕ್ಷಕರ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹ

CM DK Shivakumar: ದೈಹಿಕ ಶಿಕ್ಷಣ ಶಿಕ್ಷಕರ ಭರ್ತಿ ಮಾಡಿ, ಹೆಚ್ಚುವರಿ 1 ಲಕ್ಷ ಹುದ್ದೆಗಳು ಸೇರಿದಂತೆ ಒಂದೇ ಬಾರಿಗೆ 1.56 ಲಕ್ಷ ಹುದ್ದೆಗಳ ನೇಮಕ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿದಂತೆ ವಿವಿಧ ಸಂಘಟನೆಗಳು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿವೆ.

Loading...