ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ನನ್ನದು ಕೃಷ್ಣ ತತ್ವ, ಕಾಂಗ್ರೆಸ್‌ನದ್ದು ಕಂಸ ತತ್ವ; ಸಿದ್ದರಾಮಯ್ಯ, ಮಹದೇವಪ್ಪಗೆ ಎಚ್‌ಡಿಕೆ ತಿರುಗೇಟು

Bhagavad Gita in school syllabus: ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ ಇಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ನನ್ನದು ಕೃಷ್ಣ ತತ್ವ, ಕಾಂಗ್ರೆಸ್‌ನದ್ದು ಕಂಸ ತತ್ವ ಎಂದ ಕುಮಾರಸ್ವಾಮಿ

ಸಿದ್ದರಾಮಯ್ಯ, ಎಚ್‌.ಸಿ.ಮಹದೇವಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ -

Prabhakara R
Prabhakara R Dec 7, 2025 3:53 PM

ನವದೆಹಲಿ, ಡಿ.7: ಭಗವದ್ಗೀತೆಯನ್ನು (Bhagavad Gita) ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಎಚ್.ಸಿ. ಮಹದೇವಪ್ಪ ಇಬ್ಬರಿಗೂ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ನಾನು ಕೃಷ್ಣ ತತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ ಇಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ. ಬಹುಶಃ ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು!? ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ?; ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ತಿರುಗೇಟು

ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ 'ಮಾರ್ಗ' ಯಾವುದು? ಕಂಸ ಮಾರ್ಗವೇ!!?? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ಮಹದೇವಪ್ಪನವರೇ... ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಕೊನೆಗೆ ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.