ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Green gram procurement: ಹೆಸರು ಖರೀದಿ ಅವಧಿ ವಿಸ್ತರಣೆ; ಜೋಶಿ ಮನವಿಗೆ ಕೇಂದ್ರ ಸ್ಪಂದನೆ

ಕರ್ನಾಟಕದಲ್ಲಿ 2025-26ರ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರುಕಾಳು ಖರೀದಿಗೆ ಬೆಂಬಲ ಬೆಲೆ ಯೋಜನೆಯಡಿ ಮತ್ತಷ್ಟು ಸಮಯ ಹೆಚ್ಚಿಸುವಂತೆ ಪ್ರಲ್ಹಾದ್‌ ಜೋಶಿ ಅವರು ಕೇಂದ್ರ ಕೃಷಿ ಸಚಿವರ ಗಮನ ಸೆಳೆದಿದ್ದರು. ಕೇಂದ್ರ ಸರ್ಕಾರ ಈ ಮನವಿ ಪುರಸ್ಕರಿಸಿ ಇದೀಗ ಹೆಸರುಕಾಳು ಬೆಂಬಲ ಯೋಜನೆ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

ಹೆಸರು ಖರೀದಿಗೆ ಮತ್ತಷ್ಟು ಕಾಲಾವಕಾಶ; ಜೋಶಿ ಮನವಿಗೆ ಕೇಂದ್ರ ಸ್ಪಂದನೆ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (ಸಂಗ್ರಹ ಚಿತ್ರ) -

Profile
Siddalinga Swamy Dec 29, 2025 10:58 PM

ನವದೆಹಲಿ, ಡಿ.29: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ (Pralhad Joshi) ಮನವಿ ಮೇರೆಗೆ ಕೇಂದ್ರ ಸರ್ಕಾರ (Central Government), ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಗೆ ಅವಧಿ ವಿಸ್ತರಿಸಿದೆ. ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಕಾಲಾವಕಾಶ ವಿಸ್ತರಣೆ ಬಗ್ಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಸಚಿವ ಜೋಶಿ ಅವರಿಗೆ ಪತ್ರ ಬರೆದು ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕದಲ್ಲಿ 2025-26ರ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರುಕಾಳು ಖರೀದಿಗೆ ಬೆಂಬಲ ಬೆಲೆ ಯೋಜನೆಯಡಿ ಮತ್ತಷ್ಟು ಸಮಯ ಹೆಚ್ಚಿಸುವಂತೆ ಪ್ರಲ್ಹಾದ್‌ ಜೋಶಿ ಅವರು ಕೇಂದ್ರ ಕೃಷಿ ಸಚಿವರ ಗಮನ ಸೆಳೆದಿದ್ದರು. ಕೇಂದ್ರ ಸರ್ಕಾರ ಈ ಮನವಿ ಪುರಸ್ಕರಿಸಿ ಇದೀಗ ಹೆಸರುಕಾಳು ಬೆಂಬಲ ಯೋಜನೆ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಇದಕ್ಕಾಗಿ ಸಚಿವ ಪ್ರಲ್ಹಾದ್‌ ಜೋಶಿ ಅವರು ಪ್ರಧಾನಿ ನರೇಂದ್ರ ಜೋಶಿ ಮತ್ತು ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಜಿಲ್ಲಾವಾರು ಖರೀದಿ ಕೇಂದ್ರಕ್ಕೆ ಒತ್ತಾಯ

ಕೇಂದ್ರ ಸರ್ಕಾರದ ಈ ಮಹತ್ವದ ನಿರ್ಧಾರದಿಂದ‌ ಕೃಷಿಕರ ಉತ್ಪನ್ನಗಳಿಗೆ ನ್ಯಾಯಯುತ ಬೆಂಬಲ ಬೆಲೆಯನ್ನು ಖಚಿತಪಡಿಸಿದೆ ಎಂದು ತಿಳಿಸಿರುವ ಅವರು, ರಾಜ್ಯ ಸರ್ಕಾರ ಈ ಕೂಡಲೇ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯಾದ್ಯಂತ ಖರೀದಿ ಕೇಂದ್ರಗಳನ್ನು ಆರಂಭಿಸಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಜೋಶಿ ಒತ್ತಾಯಿಸಿದ್ದಾರೆ.‌

ರಾಹುಲ್, ಸಿಎಂಗೆ ವಾಸ್ತವ ಒಪ್ಪಿಕೊಳ್ಳುವ ನೈಜತೆಯಿಲ್ಲ: ಪ್ರಲ್ಹಾದ್‌ ಜೋಶಿ ತಿರುಗೇಟು

ರಾಜ್ಯದ ರೈತರ ಹಿತ ಕಾಪಾಡಲೆಂದು ಪ್ರಧಾನಿ ನರೇಂದ್ರ ಮೋದಿ ಅವರು ಸತತವಾಗಿ ಸ್ಪಂದಿಸುತ್ತಲೇ ಬಂದಿದ್ದಾರೆ. ಅಂತೆಯೇ ರಾಜ್ಯ ಸರ್ಕಾರ ಸಹ ರೈತರಿಗೆ ಇದರ ಲಾಭ ದೊರೆಕಿಸಿಕೊಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದ್ದಾರೆ.