ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chalavadi Narayanaswamy: ವಿಶ್ವವಿದ್ಯಾಲಯ ಮುಚ್ಚುವ ಬದಲು ಕಾಂಗ್ರೆಸ್‌ ಅನ್ನು ಮುಚ್ಚಿ ಬಿಡಿ: ಛಲವಾದಿ ನಾರಾಯಣಸ್ವಾಮಿ ಆಗ್ರಹ

Chalavadi Narayanaswamy: ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ಹಗರಣ ಮಾಡಿ ಸಿಕ್ಕಿ ಹಾಕಿಕೊಳ್ಳುತ್ತಿದೆ. ಹಗರಣ ಸಂಬಂಧ ಉತ್ತರಿಸದೆ ವಾಮಮಾರ್ಗದಿಂದ ತಪ್ಪಿಸಿಕೊಳ್ಳುತ್ತದೆ ಎಂದು ಟೀಕಿಸಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಪಾಲ್ಗೊಂಡ ಸಚಿವರು ಯಾರೆಂದು ಹೇಳಿ ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಖಜಾನೆಗೆ ಕನ್ನ ಹಾಕುವ ಕೆಲಸ: ಛಲವಾದಿ

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ.

Profile Siddalinga Swamy Mar 12, 2025 9:03 PM

ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬದಲು ನಿಮ್ಮ ಕಾಂಗ್ರೆಸ್ ಅನ್ನೇ ಮುಚ್ಚಿಬಿಡಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಗ್ರಹಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಬುಧವಾರ ಬಿಜೆಪಿ-ಜೆಡಿಎಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಚ್ಚಿ ಬಿಟ್ಟರೆ ದೇಶಕ್ಕೇನೂ ಆಗುವುದಿಲ್ಲ. ಕಾಂಗ್ರೆಸ್ ಇರುವವರೆಗೆ ಈ ದೇಶಕ್ಕೆ ಅಭಿವೃದ್ಧಿ, ನೆಮ್ಮದಿ ಇಲ್ಲ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ದೇಶಕ್ಕೆ ಗಂಡಾಂತರ ತರುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರಿಗೆ ಖಜಾನೆ ಹಣವನ್ನು ಕೊಡಲು ನಾವು ಬಿಡುವುದಿಲ್ಲ. ಇದನ್ನು ಸಂವಿಧಾನದ ಅಡಿಯಲ್ಲಿ ಕೊಡುತ್ತ ಇದ್ದೀರಾ? ಇದನ್ನು ಕೂಡಲೇ ನಿಲ್ಲಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಗ್ಯಾರಂಟಿ ಅನುಷ್ಠಾನ ಸಮಿತಿಗಳು ಕಾನೂನುಬಾಹಿರ ಮತ್ತು ಅಸಾಂವಿಧಾನಿಕ ಎಂದು ಆರೋಪಿಸಿದ ಅವರು, ಸಂವಿಧಾನದಂತೆ ಕೆಲಸ ಮಾಡುವುದು ಸರ್ಕಾರದ ಕರ್ತವ್ಯ. ಅವು ಸಾಂವಿಧಾನಿಕ ಹುದ್ದೆಗಳಲ್ಲ. ಆದ್ದರಿಂದ ಕೈಬಿಡಲೇಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ಸಿನವರು ಖಜಾನೆಗೆ ಕನ್ನ ಹಾಕುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ಹಗರಣ ಮಾಡಿ ಸಿಕ್ಕಿ ಹಾಕಿಕೊಳ್ಳುತ್ತಿದೆ. ಹಗರಣ ಸಂಬಂಧ ಉತ್ತರಿಸದೆ ವಾಮಮಾರ್ಗದಿಂದ ತಪ್ಪಿಸಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ. ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಪಾಲ್ಗೊಂಡ ಸಚಿವರು ಯಾರೆಂದು ಹೇಳಿ ಎಂದು ಆಗ್ರಹಿಸಿದ ಅವರು, ಕಾಂಗ್ರೆಸ್ಸಿನ ದುಂಡಾವರ್ತಿ ಕಥೆಗಳನ್ನು ರಾಜ್ಯಪಾಲರ ಮುಂದೆ ಬಿಚ್ಚಿ ಹೇಳಲಿದ್ದೇವೆ ಎಂದಿದ್ದಾರೆ.

ಈ ಸುದ್ದಿಯನ್ನೂ ಓದಿ | Karnataka Weather: ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ ದಾಖಲು; ರಾಜ್ಯದಲ್ಲಿ ಮುಂದಿನ 6 ದಿನ ಹೇಗಿರಲಿದೆ ಹವಾಮಾನ?

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್ತಿನ ನಾಯಕ ಬೋಜೆಗೌಡ ಮತ್ತು ಬಿಜೆಪಿ-ಜೆಡಿಎಸ್ ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.