ಗೊಂದಲಗಳ ಸೃಷ್ಟಿಸುವುದರಲ್ಲಿ ಕಾಂಗ್ರೆಸ್ ನಾಯಕರೇ ಮುಂಚೂಣಿಯಲ್ಲಿದ್ದಾರೆ: ಛಲವಾದಿ ನಾರಾಯಣಸ್ವಾಮಿ
Chalavadi Narayanaswamy: ಗೊಂದಲಗಳನ್ನು ಸೃಷ್ಟಿಸುವುದರಲ್ಲಿ ಕಾಂಗ್ರೆಸ್ ನಾಯಕರೇ ಮುಂಚೂಣಿಯಲ್ಲಿದ್ದಾರೆ. ಯತೀಂದ್ರ ಅವರ ಹೇಳಿಕೆ ನೋಡಿದ್ದೇನೆ. ನನ್ನ ತಂದೆಗೆ ವಯಸ್ಸಾಗಿದೆ. ಅವರ ರಾಜಕೀಯ ಹೆಚ್ಚು ಕಮ್ಮಿ ಮುಗಿದಂತಾಗಿದೆ. ಅವರ ನಾಯಕತ್ವದ ಅಂತ್ಯದ ದಿನಗಳಾಗಿವೆ. ಅದರಿಂದ ಅವರ ಜತೆ ಕೆಲಸ ಮಾಡಿದ ಜಾರಕಿಹೊಳಿಯವರು ಅವರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದಿದ್ದಾರೆ. ಇದು ಪಕ್ಷದ ತೀರ್ಮಾನವೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕೇಳಿದ್ದಾರೆ.

-

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರವು (State Congress Government) ಇಡೀ ರಾಜ್ಯದಲ್ಲಿ ಅಭಿವೃದ್ಧಿಯನ್ನು ಕುಂಠಿತಗೊಳಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಬಗ್ಗೆ ಕೇಳಿದರೆ ದಾರಿ ತಪ್ಪಿಸುವ ಉತ್ತರಗಳನ್ನು ಕೊಡುತ್ತ ಬೇರೆ ಬೇರೆ ವಿಚಾರಗಳನ್ನು ಮಾತನಾಡುತ್ತಾರೆ. ರಸ್ತೆ ಗುಂಡಿ ಮುಚ್ಚಲು ಇವರಿಗೆ ಸಾಧ್ಯವಾಗಿಲ್ಲ. ಈಗ ರಸ್ತೆಯಲ್ಲಿ ಗುಂಡಿ ಇದೆಯ ಎಂದರೆ ಸರ್ಕಾರದಲ್ಲೇ ಗುಂಡಿ ಬಿದ್ದಿದೆ ಎಂದು ಆರೋಪಿಸಿದರು.
ನಾಯಕರ ಮಕ್ಕಳಲ್ಲಿ ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಯತೀಂದ್ರ, ಮತ್ತೊಂದು ಕಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಮಗ ಇಬ್ಬರೂ ಸೇರಿ ಕಾಂಗ್ರೆಸ್ಗೇ ಗುಂಡಿ ತೋಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ಗೇ ಗುಂಡಿ ತೋಡಿ ಈಗ ತಂದೆಯವರನ್ನೇ ಅಪಮಾನಗೊಳಿಸುವ ಮತ್ತು ಅವರನ್ನೇ ಜನರು ಈಗ ಅನುಮಾನದಿಂದ ನೋಡುವ ಪರಿಸ್ಥಿತಿಯನ್ನು ಅವರೇ ಉದ್ಭವ ಮಾಡುತ್ತಿದ್ದಾರೆ ಎಂದು ದೂರಿದರು.
ಕಾಲಹರಣ ಮಾಡುವುದನ್ನು ಬಿಡಲು ಒತ್ತಾಯ
ನಿಮ್ಮಿಂದ ಯಾರಿಗೆ ಪ್ರಯೋಜನವಾಗುತ್ತಿದೆ? ಇಡೀ ರಾಜ್ಯದ ಜನರು ನಿಮಗೆ ಹಿಡಿಶಾಪ ಹಾಕುತ್ತಿದ್ದಾರೆ. ಆದರೂ ನೀವು ಎಚ್ಚತ್ತುಕೊಂಡಿಲ್ಲ. ಕಾಲಹರಣ ಮಾಡುವುದನ್ನು ಬಿಡಿ; ಮಳೆಗಾಲದ ಪರಿಸ್ಥಿತಿ ಎದುರಿಸುವುದು, ಇವತ್ತು ರಾಜ್ಯದ ರೈತರ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಅಗತ್ಯವಿದ್ದು ನೀವು ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ದೂರಿದರು.
ಕಾಂಗ್ರೆಸ್ ಸರ್ಕಾರ ಈ ರಾಜ್ಯಕ್ಕೆ ಮಾರಕವಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಪರಿಹಾರ ಕೊಡುವ ಸರ್ಕಾರ ಇದಲ್ಲ ಎಂದು ಹೇಳಲು ಬಯಸುವುದಾಗಿ ತಿಳಿಸಿದರು. ದಾರಿ ತಪ್ಪಿಸುವ ಮಾತನಾಡುವುದು ಮತ್ತು ಹೊಣೆಗೇಡಿ ಸರ್ಕಾರವಾಗಿ ಇವರು ವರ್ತಿಸುತ್ತಾರೆ ಎಂದು ಆಕ್ಷೇಪಿಸಿದರು.
ಈ ಸುದ್ದಿಯನ್ನೂ ಓದಿ | Karnataka Weather: ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ; ಭರ್ಜರಿ ಮಳೆ ಸಾಧ್ಯತೆ!
ಗೊಂದಲಗಳನ್ನು ಸೃಷ್ಟಿಸುವುದರಲ್ಲಿ ಕಾಂಗ್ರೆಸ್ ನಾಯಕರೇ ಮುಂಚೂಣಿಯಲ್ಲಿದ್ದಾರೆ. ಯತೀಂದ್ರ ಅವರ ಹೇಳಿಕೆ ನೋಡಿದ್ದೇನೆ. ನನ್ನ ತಂದೆಗೆ ವಯಸ್ಸಾಗಿದೆ. ಅವರ ರಾಜಕೀಯ ಹೆಚ್ಚು ಕಮ್ಮಿ ಮುಗಿದಂತಾಗಿದೆ. ಅವರ ನಾಯಕತ್ವದ ಅಂತ್ಯದ ದಿನಗಳಾಗಿವೆ. ಅದರಿಂದ ಅವರ ಜತೆ ಕೆಲಸ ಮಾಡಿದ ಜಾರಕಿಹೊಳಿಯವರು ಅವರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದಿದ್ದಾರೆ. ಇದು ಪಕ್ಷದ ತೀರ್ಮಾನವೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕೇಳಿದರು.