Delhi Election 2025: ದೆಹಲಿ ರಾಜಕೀಯದಲ್ಲಿ ಭಾರೀ ಸಂಚಲನ; AAP ತೊರೆದಿದ್ದ 8 ಶಾಸಕರು ಬಿಜೆಪಿ ಸೇ‍ರ್ಪಡೆ

Delhi Election 2025: ಏಕಾಏಕಿ ರಾಜೀನಾಮೆ ಕೊಟ್ಟು ಆಮ್ ಆದ್ಮಿ ಪಕ್ಷಕ್ಕೆ(AAP) ಶಾಕ್‌ ಕೊಟ್ಟಿದ್ದ ಎಂಟು ಶಾಸಕರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದು ಚುನಾವಣೆಗೂ ಮುನ್ನವೇ ಆಪ್‌ಗೆ ಭಾರೀ ಹೊಡೆತ ನೀಡಿದೆ.

delhi election 2024
Profile Rakshita Karkera Feb 1, 2025 7:32 PM

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ(Delhi Election 2025) ಇನ್ನೇನು ದಿನಗಣನೆ ಶುರುವಾಗಿದೆ ಎನ್ನುವಾಗಲೇ ಏಕಾಏಕಿ ರಾಜೀನಾಮೆ ಕೊಟ್ಟು ಆಮ್ ಆದ್ಮಿ ಪಕ್ಷಕ್ಕೆ(AAP) ಶಾಕ್‌ ಕೊಟ್ಟಿದ್ದ ಎಂಟು ಶಾಸಕರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದು ಚುನಾವಣೆಗೂ ಮುನ್ನವೇ ಆಪ್‌ಗೆ ಭಾರೀ ಹೊಡೆತ ನೀಡಿದೆ. ವಂದನಾ ಗೌರ್ (ಪಾಲಂ), ರೋಹಿತ್ ಮೆಹ್ರೌಲಿಯಾ (ತ್ರಿಲೋಕಪುರಿ), ಗಿರೀಶ್ ಸೋನಿ (ಮದೀಪುರ), ಮದನ್ ಲಾಲ್ (ಕಸ್ತೂರ್ಬಾ ನಗರ), ರಾಜೇಶ್ ರಿಷಿ (ಉತ್ತಮ್ ನಗರ), ಬಿಎಸ್ ಜೂನ್ (ಬಿಜ್ವಾಸನ್), ನರೇಶ್ ಯಾದವ್ (ಮೆಹ್ರೌಲಿ) ಮತ್ತು ಪವನ್ ಶರ್ಮಾ (ಆದರ್ಶ ನಗರ) ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.



ಮುಖ್ಯವಾಗಿ, ಎಎಪಿ ತೊರೆದ ಎಂಟು ಶಾಸಕರಲ್ಲಿ ಏಳು ಜನರಿಗೆ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಲಾಯಿತು. ಪಕ್ಷದ ನಿರ್ಧಾರದ ಬಗ್ಗೆ ಅವರು ತೀವ್ರ ಅಸಮಾಧಾನಗೊಂಡಿದ್ದರು ಎಂದು ವರದಿಯಾಗಿದೆ. ಮೆಹ್ರೌಲಿ ಶಾಸಕ ನರೇಶ್ ಯಾದವ್ ಅವರಿಗೆ ಆರಂಭದಲ್ಲಿ ಟಿಕೆಟ್ ನೀಡಲಾಯಿತು, ಆದರೆ ಪಂಜಾಬ್ ಕುರಾನ್ ಅಪವಿತ್ರ ಪ್ರಕರಣದಲ್ಲಿ ಅವರ ವಿರುದ್ಧದ ಆರೋಪಗಳು ಸಾಬೀತಾದ ನಂತರ ಅವರು ಸೀಟನ್ನು ಬಿಟ್ಟುಕೊಡಬೇಕಾಯಿತು. ಅದರ ನಂತರ, ಪಕ್ಷವು ಅವರ ಬದಲಿಗೆ ಮಹೇಂದರ್ ಚೌಧರಿ ಅವರಿಗೆ ಸೀಟ್‌ ನೀಡಿತ್ತು. ನಿನ್ನೆ ನರೇಶ್ ಯಾದವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಪಕ್ಷ ತೊರೆದಿದ್ದರು.

ಎಎಪಿಗೆ ರಾಜೀನಾಮೆ ನೀಡಿದ ನಂತರ, ಶಾಸಕರು ತಮ್ಮ ರಾಜೀನಾಮೆ ಪತ್ರಗಳನ್ನು ವಿಧಾನಸಭಾ ಸ್ಪೀಕರ್‌ಗೆ ಸಲ್ಲಿಸಿ, ಸದನದ ಸದಸ್ಯತ್ವವನ್ನು ತ್ಯಜಿಸಿರುವುದಾಗಿ ತಿಳಿಸಿದ್ದಾರೆ. ಇಂದು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಮತ್ತು ದೆಹಲಿ ಘಟಕದ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಅವರ ಸಮ್ಮುಖದಲ್ಲಿ ಮಾಜಿ ಎಎಪಿ ನಾಯಕರು ಬಿಜೆಪಿ ಸೇರಿದರು.

ಈ ಸುದ್ದಿಯನ್ನೂ ಓದಿ: Delhi Election 2025: ಕೇಜ್ರಿವಾಲ್‌ಗೆ ಶಾಕ್; ಚುನಾವಣೆ ಹೊಸ್ತಿಲಲ್ಲೇ ಎಎಪಿ ತೊರೆದ 7 ಹಾಲಿ ಶಾಸಕರು!

ಹೊಸ ಸದಸ್ಯರನ್ನು ಸ್ವಾಗತಿಸಿ ಮಾತನಾಡಿದ್ದ ಪಾಂಡಾ, ಇದನ್ನು "ಐತಿಹಾಸಿಕ" ದಿನ ಎಂದು ಕರೆದರು, ಫೆಬ್ರವರಿ 5 ರ ಚುನಾವಣೆಯ ನಂತರ ದೆಹಲಿಯೂ ಎಎಪಿಯಿಂದ ಮುಕ್ತವಾಗಲಿದೆ ಎಂದು ಅವರು ಹೇಳಿದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Rajath Kishan (2)
7:07 AM January 30, 2025

BBK11 Rajath Kishan: ನಂದೂ ಹಳೆ ಕತೆಗಳಿವೆ.. ಆದರೆ ಆ ಹುಡುಗಿಯ ಫೋಟೊ ಬಿಡಬಾರದಿತ್ತು: ರಜತ್