ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಶಿಡ್ಲಘಟ್ಟ ಮಹಿಳಾ ಅಧಿಕಾರಿಗೆ ಧಮ್ಕಿ; ಕಾಂಗ್ರೆಸ್ ಮುಖಂಡನ ಬಂಧನಕ್ಕೆ ಎಚ್‌.ಡಿ.ಕುಮಾರಸ್ವಾಮಿ ಆಗ್ರಹ

HD Kumaraswamy: ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯವಾಗಿ ನಿಂದಿಸಿದ ಆರೋಪದ ಕುರಿತಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಎಚ್‌.ಡಿ.‌ ಕುಮಾರಸ್ವಾಮಿ (ಸಂಗ್ರಹ ಚಿತ್ರ)

ಬೆಂಗಳೂರು, ಜ.14: ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯವಾಗಿ ನಿಂದಿಸಿದ ಆರೋಪದ ಕುರಿತಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿದ ಕೇಂದ್ರ ಸಚಿವರು, ಮಹಿಳಾ ಅಧಿಕಾರ ಒಬ್ಬರನ್ನು ನಿಂದಿಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ತಾವು ಒಬ್ಬ ಮಹಿಳಾ ಅಧಿಕಾರಿ ಆಗಿದ್ದು, ತಮ್ಮ ಅಧೀನದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿ, ಅಸಹ್ಯ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣ ಖಂಡನೀಯ. ಈ ಸರ್ಕಾರದಲ್ಲಿ ಕಾನೂನುಬದ್ಧವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ರಕ್ಷಣೆ ಇಲ್ಲವೇ ಎಂದು ಸಚಿವರು ಮುಖ್ಯ ಕಾರ್ಯದರ್ಶಿ ಅವರನ್ನು ಪ್ರಶ್ನಿಸಿದ್ದಾರೆ.

ಒಬ್ಬ ಮಹಿಳಾ ಅಧಿಕಾರಿಗೆ ಈ ರೀತಿ ಅವಾಚ್ಯ ಶಬ್ದಗಳಿಂದ ನಿಂದಿಸಿದರೆ ಹೇಗೆ? ಮಹಿಳಾ ಅಧಿಕಾರಿಗಳ ಮೇಲೆ ನಡೆಯುತ್ತಿರುವ ಇಂತಹ ದೌರ್ಜನ್ಯಗಳನ್ನು ಸಹಿಸಬಾರದು, ಮಹಿಳಾ ಅಧಿಕಾರಿಗಳ ರಕ್ಷಣೆ ಸರ್ಕಾರದ ಹೊಣೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.‌

ಶಿಡ್ಲಘಟ್ಟ ಕೈ ಮುಖಂಡ ರಾಜೀವ್ ಗೌಡ ಬಂಧನವಾಗಲಿ: ಛಲವಾದಿ ನಾರಾಯಣಸ್ವಾಮಿ ಆಗ್ರಹ

ಮಹಿಳಾ ಅಧಿಕಾರಿಗಳ ಮೇಲೆ ಪದೇ ಪದೇ ಈ ರೀತಿ ದೌರ್ಜನ್ಯಗಳು ನಡೆಯುತ್ತಿವೆ. ಅಧಿಕಾರ ಇರಲಿ, ಇಲ್ಲದಿರಲಿ ಅಧಿಕಾರಿಗಳಿಗೆ ಗೌರವ ನೀಡಬೇಕು. ಅದರಲ್ಲೂ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಈ ರೀತಿ ನಡೆದುಕೊಂಡಿರುವುದು ಖಂಡನೀಯ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಮುಖ್ಯ ಕಾರ್ಯದರ್ಶಿ ಅವರಿಗೆ ಹೇಳಿದ್ದಾರೆ.