ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kolkata Physical Abuse Case: ಅವಳ್ಯಾಕೆ ಹೊರಗೆ ಹೋಗ್ಬೇಕಿತ್ತು? ಕೋಲ್ಕತ್ತಾ ಅತ್ಯಾಚಾರ ಕೇಸ್‌ ಬಗ್ಗೆ ನಾಲಿಗೆ ಹರಿಬಿಟ್ಟ TMC ನಾಯಕ

ಕೋಲ್ಕತ್ತಾದಲ್ಲಿ ಬುಧವಾರ ನಡೆದ ಕಾನೂನು ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಟಿಎಂಸಿ ಶಾಸಕ ಮದನ್ ಮಿತ್ರ, ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ವಿದ್ಯಾರ್ಥಿನಿ ಕೂಡ ಸ್ವಲ್ಪ ಜವಾಬ್ದಾರಳಾಗಿದ್ದಾಳೆ ಎಂದು ಹೇಳಿದ್ದು ವಿವಾದವನ್ನು ಉಂಟು ಮಾಡಿತ್ತು. ಒಂದು ವೇಳೆ ಅವಳು ಅಪರಾಧದ ಸ್ಥಳಕ್ಕೆ ಹೋಗದಿದ್ದರೆ ಅದು ಎಂದಿಗೂ ನಡೆಯುತ್ತಿರಲಿಲ್ಲ ಎಂದು ಅವರು ಹೇಳಿದ್ದರು.

ಗ್ಯಾಂಗ್‌ರೇಪ್‌ ಸಂತ್ರಸ್ತೆ ಬಗ್ಗೆ TMC ನಾಯಕನಿಂದ ಶಾಕಿಂಗ್‌ ಹೇಳಿಕೆ

ಕೋಲ್ಕತ್ತಾ: ಕಾನೂನು ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ( Kolkata Physical Abuse Case) ಸಂಬಂಧಿಸಿ ಟಿಎಂಸಿ ಶಾಸಕ (Trinamool Congress MLA) ಮದನ್ ಮಿತ್ರ (Madan Mitra) ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಶಾಸಕ ಮದನ್ ಮಿತ್ರ ಯುವತಿ ಘಟನಾ ಸ್ಥಳಕ್ಕೆ ಯಾಕೆ ಹೋಗಬೇಕಿತ್ತು ಎಂದು ಪ್ರಶ್ನಿಸಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಬಳಿಕ ಟಿಎಂಸಿ ಕೂಡ ಅವರ ಹೇಳಿಕೆಯನ್ನು ಖಂಡಿಸಿತು. ಇದಾದ ಬಳಿಕ ಪ್ರತಿಕ್ರಿಯಿಸಿದ ಅವರು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

ಕೋಲ್ಕತ್ತಾದಲ್ಲಿ ಬುಧವಾರ ನಡೆದ ಕಾನೂನು ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಟಿಎಂಸಿ ಶಾಸಕ ಮದನ್ ಮಿತ್ರ, ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ವಿದ್ಯಾರ್ಥಿನಿ ಕೂಡ ಸ್ವಲ್ಪ ಜವಾಬ್ದಾರಳಾಗಿದ್ದಾಳೆ ಎಂದು ಹೇಳಿದ್ದು ವಿವಾದವನ್ನು ಉಂಟು ಮಾಡಿತ್ತು. ಒಂದು ವೇಳೆ ಅವಳು ಅಪರಾಧದ ಸ್ಥಳಕ್ಕೆ ಹೋಗದಿದ್ದರೆ ಅದು ಎಂದಿಗೂ ನಡೆಯುತ್ತಿರಲಿಲ್ಲ ಎಂದು ಅವರು ಹೇಳಿದ್ದರು.

ಮದನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ತೃಣಮೂಲ ಕಾಂಗ್ರೆಸ್ ಅವರ ಹೇಳಿಕೆಯನ್ನು ಖಂಡಿಸಿತು.ಇದರ ಬಳಿಕ ಸ್ಪಷ್ಟನೆ ನೀಡಿದ ಮಿತ್ರ ಅವರು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಹೇಳಿದರು. ಮಿತ್ರ ಅವರು ಪಕ್ಷದ ವಿದ್ಯಾರ್ಥಿ ಘಟಕದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹೇಳಿರುವ ಟಿಎಂಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದೆ.



ಮದನ್ ಮಿತ್ರ ಅವರು ಶನಿವಾರ ಮಾತನಾಡಿ, ಆ ಹುಡುಗಿ ಅಲ್ಲಿಗೆ ಹೋಗದೇ ಇರುತ್ತಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ. ಅವಳು ಎಲ್ಲಿಗೆ ಹೋಗುತ್ತಿದ್ದೇನೆಂದು ಯಾರಿಗಾದರೂ ಹೇಳಿದ್ದರೆ ಅಥವಾ ತನ್ನ ಇಬ್ಬರು ಸ್ನೇಹಿತರನ್ನು ಕರೆದುಕೊಂಡು ಹೋಗಿದ್ದರೆ ಅದು ಆಗುತ್ತಿರಲಿಲ್ಲ. ಅಪರಾಧ ಎಸಗಿದ ಜನರು ಪರಿಸ್ಥಿತಿಯ ಲಾಭ ಪಡೆದುಕೊಂಡರು ಎಂದು ಹೇಳಿದ್ದರು.

ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನಲ್ಲಿ ಬುಧವಾರ 24 ವರ್ಷದ ಕಾನೂನು ವಿದ್ಯಾರ್ಥಿನಿಯ ಮೇಲೆ ಕಾಲೇಜಿನ ಹಳೆ ವಿದ್ಯಾರ್ಥಿ, ವಕೀಲರಾಗಿರುವ ಮೋನೋಜಿತ್ ಮಿಶ್ರಾ ಎಂಬಾತ ಅತ್ಯಾಚಾರ ನಡೆಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ಮಿಶ್ರಾ ಸೇರಿದಂತೆ ಇಬ್ಬರು ಹಿರಿಯ ವಿದ್ಯಾರ್ಥಿಗಳಾದ ಜೈಬ್ ಅಹ್ಮದ್ ಮತ್ತು ಪ್ರಮಿತ್ ಮುಖೋಪಾಧ್ಯಾಯ ಹಾಗೂ ಭದ್ರತಾ ಸಿಬ್ಬಂದಿಯೊಬ್ಬನನ್ನು ಬಂಧಿಸಲಾಗಿದೆ.

ತೃಣಮೂಲ ಕಾಂಗ್ರೆಸ್ ವಿದ್ಯಾರ್ಥಿ ವಿಭಾಗದ ಸಭೆಯಲ್ಲಿ ವಿದ್ಯಾರ್ಥಿನಿ ಭಾಗವಹಿಸುತ್ತಿದ್ದಳು. ಮಿಶ್ರಾ ಮತ್ತು ಇತರ ಇಬ್ಬರು ವಿದ್ಯಾರ್ಥಿಗಳು ತನ್ನನ್ನು ಭದ್ರತಾ ಸಿಬ್ಬಂದಿಯ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.

ಇದು ಆಡಳಿತಾರೂಢ ಟಿಎಂಸಿ ಪಕ್ಷದ ವಿರುದ್ಧ ವಿಪಕ್ಷಗಳ ವಾಗ್ದಾಳಿಗೆ ಕಾರಣವಾಯಿತು. ಈ ನಡುವೆ ಮಿತ್ರ ಹೇಳಿಕೆ ಪಕ್ಷಕ್ಕೆ ಮತ್ತಷ್ಟು ಮುಜುಗರವನ್ನು ಉಂಟು ಮಾಡಿತ್ತು. ಆದರೆ ಅವರ ಹೇಳಿಕೆಯನ್ನು ಖಂಡಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಿ ಪಕ್ಷವು ತಾನು ಇದರಿಂದ ದೂರ ಇರುವುದಾಗಿ ತೋರಿಸಿಕೊಂಡಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ, ಸ್ನೇಹಿತನೊಬ್ಬ ತನ್ನ ಸ್ನೇಹಿತನ ಮೇಲೆ ಅತ್ಯಾಚಾರ ಮಾಡಿದರೆ ಏನು ಮಾಡಬಹುದು, ಪೊಲೀಸರು ಶಾಲೆಗಳಲ್ಲಿ ಇರುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ಸುರಕ್ಷತೆ ಮತ್ತು ಭದ್ರತೆಯ ಸ್ಥಿತಿ ಎಲ್ಲೆಡೆ ಒಂದೇ ಆಗಿರುತ್ತದೆ. ಪುರುಷರ ಮನಸ್ಥಿತಿ ಹೀಗೆಯೇ ಇರುವವರೆಗೆ ಈ ಘಟನೆಗಳು ಸಂಭವಿಸುತ್ತಲೇ ಇರುತ್ತವೆ ಎಂದು ಅವರು ಹೇಳಿದರು.

ಈ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, ಇದು ತೃಣಮೂಲ ಕಾಂಗ್ರೆಸ್‌ನ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದೆ.

ಇದನ್ನೂ ಓದಿ: Kolkata Physical Abuse Case: ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌; ಸಿಸಿಟಿವಿಯಲ್ಲಿ ಸಿಕ್ತು ಮಹತ್ವದ ಸಾಕ್ಷಿ

ಬಿಜೆಪಿ ವಕ್ತಾರೆ ಪ್ರಿಯಾಂಕಾ ತಿಬ್ರೆವಾಲ್ ಪ್ರತಿಕ್ರಿಯಿಸಿ ಇದು ಹೊಸದೇನಲ್ಲ. ಪ್ರಮುಖ ಆರೋಪಿ ತೃಣಮೂಲ ನಾಯಕಿಯಾಗಿರುವುದರಿಂದ ಅವರು ಬದುಕುಳಿದವರ 'ವ್ಯಕ್ತಿತ್ವ ಹತ್ಯೆ' ಮಾಡಲು ಪ್ರಯತ್ನಿಸುತ್ತಾರೆ. ಅವರು ಆಕೆ ಯಾಕೆ ಸಮಯಕ್ಕೆ ಸರಿಯಾಗಿ ಅಲ್ಲಿಗೆ ಬಂದಳು, ಆಕೆ ಏಕೆ ಒಂಟಿಯಾಗಿ ಹೋದಳು ಮತ್ತು ಆಕೆ ತನ್ನ ಸ್ನೇಹಿತರನ್ನು ಏಕೆ ನಂಬಿದ್ದಳು ಎಂದೇ ಕೇಳುತ್ತಾರೆ. ತೃಣಮೂಲ ವಿದ್ಯಾರ್ಥಿ ನಾಯಕಿಯೊಬ್ಬರು ಕಾಲೇಜಿನಲ್ಲಿ ಏಕೆ ಸಮಯಕ್ಕೆ ಸರಿಯಾಗಿ ಇದ್ದರು ಎಂದು ಅವರೇ ಉತ್ತರಿಸಬೇಕು. ಹಳೆ ವಿದ್ಯಾರ್ಥಿಯನ್ನು ಕಾಲೇಜಿಗೆ ಏಕೆ ಅನುಮತಿಸಲಾಯಿತು? ಇದು ಅಧಿಕಾರದ ದುರುಪಯೋಗವಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಈ ನಡುವೆ ಟಿಎಂಸಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ನಮ್ಮ ನಿಲುವು ದೃಢವಾಗಿದೆ. ಮಹಿಳೆಯರ ವಿರುದ್ಧದ ಅಪರಾಧಗಳಿಗೆ ನಾವು ಶೂನ್ಯ ಸಹಿಷ್ಣುತೆಯನ್ನು ಹೊಂದಿದ್ದೇವೆ ಮತ್ತು ಈ ಘೋರ ಅಪರಾಧದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಕಠಿಣ ಶಿಕ್ಷೆಯನ್ನು ಒತ್ತಾಯಿಸುತ್ತೇವೆ ಎಂದು ಹೇಳಿದೆ.