ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kota Srinivasa Poojary: ಹಿಂದೂಗಳಲ್ಲಿ ದೊಡ್ಡ ಗೊಂದಲ ಸೃಷ್ಟಿಸಲು ಹೊರಟಿದೆ ಕಾಂಗ್ರೆಸ್ ಸರ್ಕಾರ: ಕೋಟ ಶ್ರೀನಿವಾಸ ಪೂಜಾರಿ

Kota srinivasa Poojary: ಜಾತಿ ಸಮೀಕ್ಷೆಯ ವೇಳೆ ವಿವಿಧ ಕ್ರಿಶ್ಚಿಯನ್ ಜಾತಿಗಳನ್ನು ಸೇರಿಸಿ ಹಿಂದೂಗಳಲ್ಲಿ ದೊಡ್ಡ ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ಮಾಜಿ ಸಚಿವ ಮತ್ತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರು: ಜಾತಿ ಸಮೀಕ್ಷೆಯ ವೇಳೆ ವಿವಿಧ ಕ್ರಿಶ್ಚಿಯನ್ ಜಾತಿಗಳನ್ನು ಸೇರಿಸಿ ಹಿಂದೂಗಳಲ್ಲಿ ದೊಡ್ಡ ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ಮಾಜಿ ಸಚಿವ ಮತ್ತು ಸಂಸದ ಕೋಟ ಶ್ರೀನಿವಾಸ ಪೂಜಾರಿ (kota srinivasa Poojary) ಆರೋಪಿಸಿದ್ದಾರೆ.‌ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾಂತರಾಜು ವರದಿಗಾಗಿ ಸಿದ್ದರಾಮಯ್ಯ (CM Siddaramaiah) ಅವರ ಸರ್ಕಾರ 165 ಕೋಟಿ ರೂ. ಖರ್ಚು ಮಾಡಿತ್ತು. ಅವರೇ ರಚಿಸಿದ ಆಯೋಗ ಅದಾಗಿತ್ತು. ಅದನ್ನು ಸ್ವೀಕರಿಸಿದ್ದಾಗಿ ಹೇಳಿದರೂ ಪ್ರಕಟಿಸಲಿಲ್ಲ; ಅನುಷ್ಠಾನವನ್ನೂ ಮಾಡಿಲ್ಲ ಎಂದು ಟೀಕಿಸಿದರು.

ಹೈಕಮಾಂಡ್ ಹೇಳಿದ ಕಾರಣಕ್ಕೆ 165 ಕೋಟಿ ರೂ. ಖರ್ಚು ಮಾಡಿದ ವ್ಯವಸ್ಥೆಯನ್ನು ಮೂಲೆಗುಂಪು ಮಾಡಿದ್ದಾರೆ. ಈಗ ಹೊಸ ಜಾತಿ ಜನಗಣತಿ, ಸಾಮಾಜಿಕ, ಶೈಕ್ಷಣಿಕ ಗಣತಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಮತ್ತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ಎಡಪಂಥೀಯರ ವಿಚಾರ ಜನರ ಮೇಲೆ ಹೇರುವ ಕಾಂಗ್ರೆಸ್ ಆಡಳಿತ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಜಾತಿ ಸಮೀಕ್ಷೆಯಂಥ ಐಡಿಯವನ್ನು ಸಿದ್ದರಾಮಯ್ಯ ಅವರಿಗೆ ಯಾರು ಕೊಡುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದು ಎಡಪಂಥೀಯರ ಕುತಂತ್ರ ಎಂದು ಕೆಲವರು ನನಗೆ ಹೇಳಿದ್ದಾರೆ; ಎಡಪಂಥೀಯರಿಗೆ ತಲೆ ಜಿಡ್ಡು ಹಿಡಿದಿದೆ. ಕಾಂಗ್ರೆಸ್ಸಿನವರಿಗೆ ತಲೆಯೇ ಇಲ್ಲ; ಅದಕ್ಕಾಗಿ ಎಡಪಂಥೀಯರ ವಿಚಾರಗಳನ್ನು ಪಡೆದು ಇವರು ಜನರ ಮೇಲೆ ಹೇರಲು ಹೊರಟಿದ್ದಾರೆ ಎಂದು ಟೀಕಿಸಿದರು.

ಸಮೀಕ್ಷೆಗೂ ಜನಗಣತಿಗೂ ವ್ಯತ್ಯಾಸವಿದೆ. ಜನಗಣತಿಯನ್ನು ರಾಜ್ಯ ಸರ್ಕಾರ ಮಾಡಲು ಸಾಧ್ಯವಿಲ್ಲ; ಅದೇನಿದ್ದರೂ ಕೇಂದ್ರ ಸರ್ಕಾರ ಮಾಡಬೇಕು. ಈ ಸಮೀಕ್ಷೆ ಹೆಸರಿನಲ್ಲಿ ಇವರು ಜನಗಣತಿ ಮಾಡಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದರು. ಕಾಂಗ್ರೆಸ್ಸಿನ ಅನೇಕ ಸಚಿವರಿಗೂ ಇದು ಇಚ್ಛೆ ಇಲ್ಲ; ಇದರಿಂದ ಅನೇಕ ಗೊಂದಲವಾಗುತ್ತಿದೆ ಎಂದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಈ ಸುದ್ದಿಯನ್ನೂ ಓದಿ | Govinda Karajola: ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿಗೆ ತಯಾರಿ: ಗೋವಿಂದ ಕಾರಜೋಳ