Delhi Election 2025: ಕೇಜ್ರಿವಾಲ್‌ಗೆ ಶಾಕ್; ಚುನಾವಣೆ ಹೊಸ್ತಿಲಲ್ಲೇ ಎಎಪಿ ತೊರೆದ 7 ಹಾಲಿ ಶಾಸಕರು!

ದೆಹಲಿ ಚುನಾವಣೆಗೆ ದಿನಗಣನೆ ಶುರುವಾಗಿದೆ. ಇನ್ನು ಐದು ದಿನಗಳಲ್ಲಿ ಚುನಾವಣೆ ನಡೆಯಲಿದ್ದು, ಎಎಪಿ ಹ್ಯಾಟ್ರಿಕ್‌ ಗೆಲುವು ಸಾಧಿಸುವ ಉತ್ಸಾಹದಲ್ಲಿದೆ. ಆದರೆ ಇದೀಗ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ ಆಘಾತ ಎದುರಾಗಿದೆ. ಟಿಕೆಟ್ ಸಿಗದೆ ನಿರಾಶರಾಗಿ ಪಕ್ಷದ ವಿರುದ್ದ ಮುನಿಸಿಕೊಂಡಿದ್ದ 7 ಹಾಲಿ ಶಾಸಕರು ಎಎಪಿ ಪಕ್ಷವನ್ನು ತೊರೆದಿದ್ದು,ಪಕ್ಷದ ಮೇಲಿದ್ದ ನಂಬಿಕೆ ಹೋಗಿದೆ ಎಂದಿದ್ದಾರೆ.

Delhi Election 2025 (2)
Profile Deekshith Nair Jan 31, 2025 8:41 PM

ನವದೆಹಲಿ: ದೆಹಲಿ ಚುನಾವಣೆಗೆ(Delhi Election 2025) ದಿನಗಣನೆ ಶುರುವಾಗಿದೆ. ಮತ ಪ್ರಚಾರದ ಭರಾಟೆಯು ತಾರಕಕ್ಕೇರಿದೆ. ಇನ್ನು ಐದು ದಿನಗಳಲ್ಲಿ ಚುನಾವಣೆ ನಡೆಯಲಿದ್ದು, ಎಎಪಿ(AAP) ಹ್ಯಾಟ್ರಿಕ್‌ ಗೆಲುವು ಸಾಧಿಸುವ ಉತ್ಸಾಹದಲ್ಲಿದೆ. ಆದರೆ ಇದೀಗ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ(Arvind Kejriwal) ಆಘಾತ ಎದುರಾಗಿದೆ. ಈ ಬಾರಿಯ ಚುನಾವಣೆಗೆ ಟಿಕೆಟ್ ಸಿಗದೆ ನಿರಾಶರಾಗಿ ಪಕ್ಷದ ವಿರುದ್ದ ಮುನಿಸಿಕೊಂಡಿದ್ದ 7 ಹಾಲಿ ಶಾಸಕರು ಎಎಪಿ ಪಕ್ಷವನ್ನು ತೊರೆದಿದ್ದು,ಪಕ್ಷದ ಮೇಲಿದ್ದ ನಂಬಿಕೆ ಹೋಗಿದೆ ಎಂದಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಶಾಸಕರು ರಾಜೀನಾಮೆ ನೀಡಿದ್ದಾರೆ. ಇದು ಮತ್ತೊಮ್ಮೆ ದೆಹಲಿ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಅರವಿಂದ್ ಕೇಜ್ರಿವಾಲ್‌ಗೆ ನುಂಗಲಾರದ ತುತ್ತಾಗಿದೆ. ರಾಜೀನಾಮೆ ನೀಡಿದ ಶಾಸಕರ ಪೈಕಿ ನರೇಶ್ ಯಾದವ್ (ಮೆಹ್ರೌಲಿ), ರೋಹಿತ್ ಕುಮಾರ್ (ತ್ರಿಲೋಕಪುರಿ), ರಾಜೇಶ್ ರಿಷಿ (ಜನಕ್ಪುರಿ), ಮದನ್ ಲಾಲ್ (ಕಸ್ತೂರ್ಬಾ ನಗರ), ಪವನ್ ಶರ್ಮಾ (ಆದರ್ಶ ನಗರ), ಮತ್ತು ಭಾವನಾ ಗೌಡ್ (ಪಾಲಂ). ಬಿಎಸ್ ಜೂನ್ (ಬಿಜ್ವಾಸನ್) ಸೇರಿದ್ದಾರೆ.



ಪಕ್ಷವನ್ನು ತೊರೆದಿರುವ ಏಳು ಶಾಸಕರೂ ಎಎಪಿ ಮತ್ತು ಕೇಜ್ರಿವಾಲ್‌ ವಿರುದ್ಧ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಪಾಲಂ ಕ್ಷೇತ್ರದ ಭಾವನಾ ಗೌಡ್ ತಮ್ಮ ರಾಜೀನಾಮೆ ಪತ್ರದಲ್ಲಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಬಗ್ಗೆ ತಮ್ಮ ನಿರಾಶೆ ವ್ಯಕ್ತಪಡಿಸಿದ್ದು, "ನಿಮ್ಮ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದೇನೆ" ಎಂದು ಬೇಸರಿಂದ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ:Delhi Election 2025: ದೆಹಲಿ ಚುನಾವಣೆ;ಬಿಜೆಪಿಯ ಮತ್ತೊಂದು ಪ್ರಣಾಳಿಕೆ ರಿಲೀಸ್‌- ಉಚಿತ ಶಿಕ್ಷಣ ಘೋಷಣೆ

ನರೇಶ್ ಯಾದವ್ ಈ ಹಿಂದೆ ಮೆಹ್ರೌಲಿ ಕ್ಷೇತ್ರದ ಅಭ್ಯರ್ಥಿಯಾಗಿದ್ದರು. ಡಿಸೆಂಬರ್‌ನಲ್ಲಿ ಕುರಾನ್ ಅಪವಿತ್ರ ಪ್ರಕರಣದಲ್ಲಿ ಪಂಜಾಬ್ ನ್ಯಾಯಾಲಯದಿಂದ ಅವರು ದೋಷಿ ಎಂದು ಸಾಬೀತಾಗಿತ್ತು. ನ್ಯಾಯಾಲಯವು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ನರೇಶ್ ಈ ಬಾರಿಯ ಚುನಾವಣೆಗೆ ಪಕ್ಷವು ಟಿಕೆಟ್‌ ನೀಡುತ್ತದೆ ಎಂಬ‌ ನಂಬಿಕೆಯಲ್ಲಿದ್ದರು. ಫೆಬ್ರವರಿ 5 ರಂದು ನಡೆಯಲಿರುವ ದೆಹಲಿ ಚುನಾವಣೆಗೆ ಎಎಪಿ ತನ್ನ ಐದನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದಾಗ, ನರೇಶ್ ಯಾದವ್ ಬದಲಿಗೆ ಮಹೇಂದರ್ ಚೌಧರಿ ಅವರನ್ನು ಎಎಪಿ ತನ್ನ ಮೆಹ್ರೌಲಿ ಅಭ್ಯರ್ಥಿಯಾಗಿ ಘೋಷಿಸಿತು. ಪಕ್ಷದ ಈ ನಡೆಯಿಂದ ನರೇಶ್ ಯಾದವ್‌ ತೀವ್ರ ಅಸಮಾಧಾನಗೊಂಡಿದ್ದರು.

ಟಿಕೆಟ್‌ ಸಿಗದ ಕಾರಣಕ್ಕೆ ಪಕ್ಷಕ್ಕೆ ಪತ್ರ ಬರೆದಿರುವ ನರೇಶ್ ಯಾದವ್, "ಆಮ್‌ ಆದ್ಮಿ ತನ್ನ ಪ್ರಾಮಾಣಿಕ ರಾಜಕೀಯ ಎಂಬ ಸ್ಥಾಪಕ ತತ್ವವನ್ನು ಕೈಬಿಟ್ಟಿದೆ. ಭ್ರಷ್ಟಾಚಾರವನ್ನು ಕಡಿಮೆ ಮಾಡುವ ಪ್ರತಿಜ್ಞೆಯನ್ನು ಈಡೇರಿಸುವ ಬದಲು ಪಕ್ಷವು ಭ್ರಷ್ಟಾಚಾರದಲ್ಲೇ ಮುಳುಗಿದೆ" ಎಂದು ಕಿಡಿಕಾರಿದ್ದಾರೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಹಲವಾರು ತಿಂಗಳುಗಳ ಕಾಲ ಜೈಲಿನಲ್ಲಿರಿಸಿದ್ದ ದೆಹಲಿ ಮದ್ಯ ನೀತಿ ಪ್ರಕರಣವನ್ನು ಪತ್ರದಲ್ಲಿ ಉಲ್ಲೇಖಿಸಿರುವ ನರೇಶದ ಜೈಲಿಗೆ ಹೋಗಿ ಬಂದವರೂ ಟಿಕೆಟ್ ಪಡೆದಿದ್ದಾರೆ ಎಂದು ನಿರಾಶೆ ವ್ಯಕ್ತಪಡಿಸಿದ್ದಾರೆ.

ಇನ್ನು ಪಕ್ಷ ತೊರೆದಿರುವ 7 ಶಾಸಕರ ಪೈಕಿ ತ್ರಿಲೋಕಪುರಿ ಕ್ಷೇತ್ರದ ಶಾಸಕ ರೋಹಿತ್ ಕುಮಾರ್ ಮೆಹ್ರೌಲಿಯಾ ಮತ್ತು ಜನಕ್‌ಪುರಿ ಶಾಸಕ ರಾಜೇಶ್ ರಿಷಿ ಕೂಡ ಪಕ್ಷವನ್ನು ಟೀಕಿಸಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಮತ್ತು ಎಎಪಿ ವಿರುದ್ದ ಅಸಮಾಧಾನವನ್ನು ಹೊರ ಹಾಕಿದ್ದು,ಪಕ್ಷ ಭ್ರಷ್ಟಚಾರದ ಕೊಳಚೆ ಗುಂಡಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Rajath Kishan (2)
7:07 AM January 30, 2025

BBK11 Rajath Kishan: ನಂದೂ ಹಳೆ ಕತೆಗಳಿವೆ.. ಆದರೆ ಆ ಹುಡುಗಿಯ ಫೋಟೊ ಬಿಡಬಾರದಿತ್ತು: ರಜತ್