Rahul Gandhi: ಮಹಾರಾಷ್ಟ್ರದಲ್ಲಿ ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ; ಗಂಭೀರ ಆರೋಪ ಮಾಡಿದ ರಾಹುಲ್‌ ಗಾಂಧಿ

ವಿಪಕ್ಷ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ಕುರಿತು ಚುನಾವಣಾ ಆಯೋಗದಿಂದ ವರದಿ ಕೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ರಾಹುಲ್ ಗಾಂಧಿಯವರ ಆರೋಪಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಪಕ್ಷಗಳ ಪ್ರಶ್ನೆಗಳಿಗೆ ಲಿಖಿತ ಉತ್ತರವನ್ನು ನೀಡುವುದಾಗಿ ಹೇಳಿದೆ.

Rahul Gandhi (1)
Profile Vishakha Bhat Feb 7, 2025 4:54 PM

ಮುಂಬೈ: ಕಳೆದ ವರ್ಷ ಡಿಸೆಂಬರ್‌ನಲ್ಲಿ ಮಹಾರಾಷ್ಟ್ರದಲ್ಲಿ (Maharashtra) ವಿಧಾನ ಸಭಾ ಚುನಾವಣೆ ನಡೆದು ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚುನಾವಣೆಯಲ್ಲಿ ಅಕ್ರಮವಾಗಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಾ ಬಂದಿದ್ದವು. ಇದೀಗ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಶುಕ್ರವಾರ ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ಕುರಿತು ಚುನಾವಣಾ ಆಯೋಗದಿಂದ ವರದಿ ಕೇಳಿದ್ದಾರೆ. ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರ ರಾಜ್ಯದ ನಿಜವಾದ ಜನಸಂಖ್ಯೆಗಿಂತ ಹೆಚ್ಚಿನ ನೋಂದಾಯಿತ ಮತದಾರರು ಕಂಡುಬಂದಿದ್ದಾರೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.



ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಶಿವಸೇನೆಯ (ಯುಬಿಟಿ) ಸಂಜಯ್ ರಾವತ್ ಮತ್ತು ಸುಪ್ರಿಯಾ ಸುಳೆ ಎನ್‌ಸಿಪಿ (ಎಸ್‌ಪಿ) ಸಮ್ಮುಖದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ ಲೋಕಸಭಾ ಚುನಾವಣೆಯ ನಂತರದ 5 ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ 39 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ. ಹಿಂದಿನ 5 ವರ್ಷಗಳಲ್ಲಿ 2019ರಲ್ಲಿ 32 ಲಕ್ಷವಾಗಿತ್ತು ಎಂದು ಆರೋಪಿಸಿದ್ದಾರೆ.



2019 ರ ವಿಧಾನಸಭಾ ಚುನಾವಣೆ ಮತ್ತು 2024 ರ ಲೋಕಸಭೆ ಚುನಾವಣೆಯ ನಡುವೆ 32 ಲಕ್ಷ ಹೊಸ ಮತದಾರರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ. ಆದರೆ, ಲೋಕಸಭೆ ಚುನಾವಣೆಯ ನಂತರ ದು ತಿಂಗಳಲ್ಲಿ 39 ಲಕ್ಷ ಮತದಾರರು ಸೇರ್ಪಡೆಗೊಂಡಿದ್ದಾರೆ. ಪ್ರಶ್ನೆ ಏನೆಂದರೆ, ಈ 39 ಲಕ್ಷ ಮತದಾರರು ಯಾರು?" ಎಂದು ಗಾಂಧಿ ಕೇಳಿದರು. ಮಹಾರಾಷ್ಟ್ರ ಚುನಾವಣೆಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ಹೇಳುತ್ತಲೇ ಇದ್ದೇವೆ. ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಗಳ ಮತದಾರರ ಪಟ್ಟಿಗಳು ನಮಗೆ ಬೇಕು” ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಏತನ್ಮಧ್ಯೆ, ರಾಹುಲ್ ಗಾಂಧಿಯವರ ಆರೋಪಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಪಕ್ಷಗಳ ಪ್ರಶ್ನೆಗಳಿಗೆ ಲಿಖಿತ ಉತ್ತರವನ್ನು ನೀಡುವುದಾಗಿ ಹೇಳಿದೆ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?