ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಿಡದಿ ಟೌನ್‍ಶಿಫ್; ಗೂಂಡಾಗಳನ್ನು ಬಿಟ್ಟು ರೈತರನ್ನು ಬೆದರಿಸಬೇಡಿ ಎಂದು ಬಿ.ವೈ. ವಿಜಯೇಂದ್ರ ಕಿಡಿ

BY Vijayendra: ರಾತ್ರೋ ರಾತ್ರಿ ಗೂಂಡಗಳು ಮನೆಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಕೆಲವು ರೈತರು ಹೇಳಿದ್ದಾರೆ. ಆದರೆ ನಮ್ಮ ಪ್ರಾಣ ಕೊಡ್ತೇವೆ ಜಮೀನು ಬಿಟ್ಟು ಕೊಡಲ್ಲ ಎಂದು ರೈತರು ಹೇಳಿದ್ದಾರೆ. ಅನ್ನಕೊಡುವ ರೈತರ ಪರವಾಗಿ ನಿಲ್ಲಬೇಕಾದ ಮುಖ್ಯಮಂತ್ರಿಗಳು ರಿಯಲ್ ಎಸ್ಟೇಟ್ ಪರವಾಗಿ ಇದ್ದಾರೆ. ಸರ್ಕಾರ ಯಾವುದೇ ಕಾರಣಕ್ಕೂ ರೈತರ ಜತೆ ಚೆಲ್ಲಾಟ ಮಾಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬಿಡದಿ ಟೌನ್‍ಶಿಪ್; ಸರ್ಕಾರ ರಾಜಕೀಯ ಮಾಡುವುದು ಬೇಡ: ಬಿವೈವಿ

ಬಿಡದಿಯಲ್ಲಿ ರೈತರನ್ನು ಭೇಟಿಯಾದ ಬಿಜೆಪಿ ನಿಯೋಗ. -

Profile
Siddalinga Swamy Jun 17, 2026 4:59 PM

ಬೆಂಗಳೂರು, ಜೂ.17: ಬಿಡದಿ ಟೌನ್‍ಶಿಪ್ ವಿಷಯದಲ್ಲಿ ಸರ್ಕಾರ ರಾಜಕೀಯ ಮಾಡುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ. ಬಿಡದಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ಬಿಡದಿ ಮತ್ತು ಸುತ್ತಮುತ್ತಲಿನ ರೈತರು ಟೌನ್‍ಶಿಪ್ ವಿರೋಧಿಸಿ ನಿರಂತರ ಹೋರಾಟ ಮಾಡುತ್ತಾ ಇದ್ದಾರೆ. ಆದರೆ ಸರ್ಕಾರ ಮತ್ತೊಂದು ಕಡೆ ಶೇ. 80ರಷ್ಟು ರೈತರು ಭೂಸ್ವಾಧೀನಕ್ಕೆ ಒಪ್ಪಿದ್ದಾರೆ ಎನ್ನುತ್ತಿದೆ. ಇಲ್ಲಿನ ಭೂಮಿ ಬರಡಾಗಿದೆ ಎಂದು ಹೇಳುತ್ತಿದೆ ಎಂದರು.

ಬಿಡದಿ ಟೌನ್‍ಶಿಪ್‍ಗೆ ಪ್ರಧಾನಿ ಒಪ್ಪಿಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಆದರೆ ಪ್ರಧಾನಿಗಳು ಒಪ್ಪಿಗೆ ನೀಡಿಲ್ಲ. ರಾಜ್ಯ ಸರ್ಕಾರ ಈ ವಿಷಯದಲ್ಲಿ ಹುಡುಗಾಟಿಕೆ ಮಾಡುತ್ತಿದೆ. ಇಂದು ಹಲವಾರು ಹಳ್ಳಿಗಳಿಗೆ ಭೇಟಿ ನೀಡಿದ್ದೇವೆ. ರೈತರನ್ನು ಮಾತನಾಡಿಸಿದ್ದೇವೆ. ಇಲ್ಲಿನ ವಾಸ್ತವ ತಿಳಿಸಲು ಮುಂದಾಗಿದ್ದೇವೆ ಹೊರತು ರಾಜಕೀಯ ಬೇಳೆ ಬೇಯಿಸಿಕೊಳ್ಳುವುದಿಲ್ಲ ಎಂದರು.

ದೇಶಕ್ಕೆ ಅನ್ನ ನೀಡುವ ರೈತ ಎಲ್ಲೇ ಇರಲಿ ಅವರ ಪರವಾಗಿ ಬಿಜೆಪಿ ಇರಲಿದೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರೂ ರೈತರ ಪರವಾಗಿದ್ದರು. ಆದರೆ ಈ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು. ಇಲ್ಲಿನ ರೈತರು ತೆಂಗು, ಅಡಿಕೆ, ರೇಷ್ಮೆ ಬೆಳೆಯುತ್ತಿದ್ದಾರೆ. ಇಂತಹ ಫಲವತ್ತಾದ ಭೂಮಿಯನ್ನು ರೈತರಿಂದ ಬಲವಂತವಾಗಿ ಕಸಿಯಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

BY Vijayendra (23)

ಗೂಂಡಾಗಳಿಂದ ಬೆದರಿಕೆ

ರಾತ್ರೋ ರಾತ್ರಿ ಗೂಂಡಗಳು ಮನೆಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಕೆಲವು ರೈತರು ಹೇಳಿದ್ದಾರೆ. ಆದರೆ ನಮ್ಮ ಪ್ರಾಣ ಕೊಡ್ತೇವೆ ಜಮೀನು ಬಿಟ್ಟು ಕೊಡಲ್ಲ ಎಂದು ರೈತರು ಹೇಳಿದ್ದಾರೆ. ಅನ್ನಕೊಡುವ ರೈತರ ಪರವಾಗಿ ನಿಲ್ಲಬೇಕಾದ ಮುಖ್ಯಮಂತ್ರಿಗಳು ರಿಯಲ್ ಎಸ್ಟೇಟ್ ಪರವಾಗಿ ಇದ್ದಾರೆ. ಸರ್ಕಾರ ಯಾವುದೇ ಕಾರಣಕ್ಕೂ ರೈತರ ಜತೆ ಚೆಲ್ಲಾಟ ಮಾಡಬಾರದು ಎಂದರು.

ಡಿ.ಕೆ. ಶಿವಕುಮಾರ್ ಅವರೇ ರಿಯಲ್ ಎಸ್ಟೇಟ್ ದಂಧೆ ಮಾಡಲು ಬೇಕಾದಷ್ಟು ಜಾಗ ಇದೆ. ಇಲ್ಲಿನ ಸಣ್ಣ ಹಿಡುವಳಿದಾರರು ಬದುಕುಬೇಕು. ಹೈನುಗಾರಿಕೆ ಮಾಡಿದವರು, ರೇಷ್ಮೆ ಬೆಳೆದವರು ಬೀದಿಗೆ ಬಿದ್ದರೆ ಭಗವಂತ ನಿಮ್ಮನ್ನು ಕ್ಷಮಿಸಲ್ಲ. ಪ್ರಧಾನಿ ಟೌನ್ ಶಿಪ್‍ಗೆ ಒಪ್ಪಿಗೆ ನೀಡಿದ್ದಾರೆ ಎಂದು ಹೇಳುವ ನಿಮಗೆ ನಾಚಿಕೆ ಆಗಬೇಕು. ಮೋದಿ ಅವರ ಹೆಸರನ್ನು ಇಲ್ಲಿ ಎಳೆದುತಂದ ಡಿಕೆಶಿ ಅವರಿಗೆ ನಾಚಿಕೆ ಆಗಬೇಕು. ಮೋದಿ ಅವರು ಎಂದೂ ರೈತ ವಿರೋಧಿಯಾಗಿ ನಡೆದುಕೊಂಡಿಲ್ಲ ಎಂದು ಹೇಳಿದರು. ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದರೆ ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ತನ್ನಿ, ಕೆಲಸ ಕೊಡಿ. ಫಲವತ್ತಾದ ಜಮೀನು ರಾಜ್ಯದ ಯಾವುದೇ ಭಾಗದಲ್ಲೂ ಕಸಿಯಲು ಬಿಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಗುಡುಗಿದರು.

ಸಿಎಂ ಆದ ಮೇಲೂ ಆತ ಬ್ಲೂ ಫಿಲ್ಮ್ ‌ಮಾಡಿಸುವುದು, ಪೋಸ್ಟರ್ ಅಂಟಿಸುವುದು ಬಿಟ್ಟಿಲ್ಲ: ಡಿಕೆಶಿ ವಿರುದ್ಧ ಎಚ್‌ಡಿಕೆ ಆಕ್ರೋಶ

ಈ ಸಂದರ್ಭದಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಸಂಸದ ಡಾ. ಸಿ.ಎನ್. ಮಂಜುನಾಥ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಮನಗರ ಜಿಲ್ಲಾಧ್ಯಕ್ಷ ಆನಂದಸ್ವಾಮಿ ಉಪಸ್ಥಿತರಿದ್ದರು.