ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬಾಬರಿ ಮಸೀದಿ ನಿರ್ಮಿಸುತ್ತೇವೆ ಎಂದ ಟಿಎಂಸಿ ಶಾಸಕ ಅಮಾನತು

ಬಾಬರಿ ಮಸೀದಿ ನಿರ್ಮಿಸುತ್ತೇವೆ ಎಂದ ಕಾಂಗ್ರೆಸ್ ಶಾಸಕನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಭರತ್‌ಪುರ ಶಾಸಕ ಹುಮಾಯೂನ್ ಕಬೀರ್ ಅವರು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಬರಿ ಮಸೀದಿ ನಿರ್ಮಿಸುವುದಾಗಿ ಘೋಷಿಸಿದ್ದರು. ಇದು ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ಇದರಿಂದಾಗಿ ತೃಣಮೂಲ ಕಾಂಗ್ರೆಸ್ ಇದೀಗ ಅವರನ್ನು ಅಮಾನತುಗೊಳಿಸಿದೆ.

ಟಿಎಂಸಿ ಶಾಸಕ ಅಮಾನತು

(ಸಂಗ್ರಹ ಚಿತ್ರ) -

ಮುರ್ಷಿದಾಬಾದ್: ಬಿಜೆಪಿಯ (BJP) ಬೆಂಬಲದಿಂದ ರಾಜಕೀಯ ಸಮಸ್ಯೆಗಳನ್ನು ಕೋಮುವಾದಿ ವಿಷಯವಾಗಿ ಮಾಡುವ ಆರೋಪದಲ್ಲಿ ತೃಣಮೂಲ ಕಾಂಗ್ರೆಸ್ ನ ( Trinamool Congress) ಮುರ್ಷಿದಾಬಾದ್ ಶಾಸಕ ಹುಮಾಯೂನ್ ಕಬೀರ್ (MLA Humayun Kabir) ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ. ಅವರಿಗೆ ಈ ಹಿಂದೆ ಹಲವು ಬಾರಿ ಎಚ್ಚರಿಕೆಯನ್ನು ನೀಡಲಾಗಿತ್ತು. ಆದರೆ ಅವರು ಇದನ್ನು ನಿರ್ಲಕ್ಷಿಸಿರುವುದರಿಂದ ಪಕ್ಷದಿಂದ ಅವರನ್ನು ಅಮಾನತುಗೊಳಿಸಿರುವುದಾಗಿ ಟಿಎಂಸಿಯ ಹಿರಿಯ ನಾಯಕ (Trinamool Congress leader) ಮತ್ತು ಕೋಲ್ಕತ್ತಾ ಮೇಯರ್ (Kolkata Mayor) ಫಿರ್ಹಾದ್ ಹಕೀಮ್ (Firhad Hakim) ತಿಳಿಸಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಬರಿ ಮಸೀದಿ ನಿರ್ಮಿಸುವುದಾಗಿ ಘೋಷಿಸುವ ಮೂಲಕ ಹೊಸ ವಿವಾದವನ್ನು ಉಂಟು ಮಾಡಿದ ಭರತ್‌ಪುರ ಶಾಸಕ ಹುಮಾಯೂನ್ ಕಬೀರ್ ಅವರನ್ನು ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಗುರುವಾರ ಅಮಾನತುಗೊಳಿಸಿದೆ.

ಕಬೀರ್ ಅವರು ಬಿಜೆಪಿ ಬೆಂಬಲದೊಂದಿಗೆ ರಾಜಕೀಯ ಸಮಸ್ಯೆಗಳನ್ನು ಕೋಮುವಾದಿ ವಿಚಾರವನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಟಿಎಂಸಿಯ ಹಿರಿಯ ನಾಯಕ ಫಿರ್ಹಾದ್ ಹಕೀಮ್ ಅವರು ಪಕ್ಷದ ನಿರ್ಧಾರವನ್ನು ಗುರುವಾರ ಘೋಷಿಸಿದ್ದಾರೆ.

Modi-Putin: ಒಂದೇ ಕಾರಿನಲ್ಲಿ ತೆರಳಿದ್ದ ಮೋದಿ- ಪುಟಿನ್‌ ಅಂದು ಚರ್ಚಿಸಿದ್ದೇನು? ಕೊನೆಗೂ ರಹಸ್ಯ ಬಿಚ್ಚಿಟ್ಟ ರಷ್ಯಾ ಅಧ್ಯಕ್ಷ

ಈ ಹಿಂದೆ ಕಬೀರ್ ಅವರಿಗೆ ಮೂರು ಬಾರಿ ಎಚ್ಚರಿಕೆ ನೀಡಲಾಗಿದೆ. ಆದರೂ ಅವರು ತಮ್ಮ ನಡೆಯನ್ನು ಬದಲಿಸಲಿಲ್ಲ. ಹೀಗಾಗಿ ಇದೀಗ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗುತ್ತಿದೆ. ಇನ್ನು ಮುಂದೆ ಪಕ್ಷಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಹಕೀಮ್ ತಿಳಿಸಿದ್ದಾರೆ.

ಕಬೀರ್ ಅವರು ಇತ್ತೀಚೆಗೆ ಬಾಬರಿ ಮಸೀದಿ ನಿರ್ಮಿಸುತ್ತೇನೆ ಎಂಡಿ ಜೆ;ಒಡ್ಡಿ. ಇದು ಪ್ರಚೋದನಕಾರಿ ಮತ್ತು ಅನಗತ್ಯ ಎಂದಿರುವ ಹಕೀಮ್, ನಾವು ಅವರಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದೇವೆ. ಇದೀಗ ಟಿಎಂಸಿಯ ನಿರ್ಧಾರದಂತೆ ಅವರನ್ನು ಅಮಾನತುಗೊಳಿಸುತ್ತಿದ್ದೇವೆ ಎಂದು ತಿಳಿಸಿದರು.



ಪಕ್ಷದ ಆಂತರಿಕ ವಿಷಯಗಳು ಸೇರಿದಂತೆ ಹಲವು ವಿಷಯಗಳ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಕಬೀರ್ ಅವರು ಡಿಸೆಂಬರ್ 6 ರಂದು ಬೆಲ್ದಂಗಾದಲ್ಲಿ ಪ್ರಸ್ತಾವಿತ ಮಸೀದಿಗೆ ಅಡಿಪಾಯ ಹಾಕಲಾಗುವುದು ಎಂದು ಘೋಷಿಸಿದ್ದರು. ಬಳಿಕ ತಾವು ಹೊಸ ರಾಜಕೀಯ ಪಕ್ಷವನ್ನು ಕಟ್ಟುವುದಾಗಿ ಹೇಳಿದ್ದು, ಟಿಎಂಸಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು.

ಕೇವಲ ರಸಗುಲ್ಲಾಕ್ಕಾಗಿ ಮದುವೆ ಮನೆ ರಣರಂಗ: ಇನ್ನು ಈ ಕಣ್ಣಲ್ಲಿ ಏನೇನ್ ನೋಡ್ಬೇಕೊ ಕಾಣೆ ಎಂದ ನೆಟ್ಟಿಗರು

ಕಬೀರ್ ಅವರಿಗೆ ಈ ರೀತಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಲು ಬಿಜೆಪಿ ಪ್ರೋತ್ಸಾಹಿಸುತ್ತಿದೆ. ಇದು ಕೋಮು ಸಾಮರಸ್ಯಕ್ಕೆ ಹಾನಿ ಮಾಡುವ ಉದ್ದೇಶವಾಗಿದೆ. ಇದನ್ನು ಪಕ್ಷ ಸಹಿಸುವುದಿಲ್ಲ ಎಂದು ಟಿಎಂಸಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಬೀರ್, ನಾನು ಮಮತಾ ಬ್ಯಾನರ್ಜಿಯವರ ಪಕ್ಷದಲ್ಲಿದ್ದೇನೆ. ಅವರು ನನ್ನನ್ನು ಹೊರಹೋಗುವಂತೆ ಕೇಳಿದರೆ ನಾನು ಹೋಗುತ್ತೇನೆ. ಇದೀಗ ನನ್ನನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಶುಕ್ರವಾರ ಟಿಎಂಸಿಗೆ ರಾಜೀನಾಮೆ ನೀಡುತ್ತೇನೆ. ಇದಕ್ಕೆ ಮುರ್ಷಿದಾಬಾದ್‌ನ ಜನರು ಉತ್ತರ ನೀಡುತ್ತಾರೆ. ನಾನು ಬಿಜೆಪಿ ಮತ್ತು ಟಿಎಂಸಿ ವಿರುದ್ಧ ಹೋರಾಡುತ್ತೇನೆ ಎಂದರು.