ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ರಾಯಚೂರು

ರಾಯಚೂರಿನಲ್ಲಿ ಭೀಕರ ಸರಣಿ ಅಪಘಾತ; ಐವರು ಸ್ಥಳದಲ್ಲೇ ಸಾವು

ರಾಯಚೂರಿನಲ್ಲಿ ಭೀಕರ ಸರಣಿ ಅಪಘಾತ; ಐವರು ಸ್ಥಳದಲ್ಲೇ ಸಾವು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಮಂಗಳವಾರ ಲಾರಿ ಹಾಗೂ ಎರಡು ಗೂಡ್ಸ್ ವಾಹನಾಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಇಂದು ಸಂಜೆ ಕುರಿ ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನ ಹಾಗೂ ಟಾಟಾ ಏಸ್ ಗೆ ಲಾರಿ ಡಿಕ್ಕಿ ಹೊಡೆದಿದೆ.

ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್‌ ಶಾಸಕಿ ಮನೆಗೆ ನುಗ್ಗಿ ಜೀವ ಬೆದರಿಕೆ!

ಮರಳು ದಂಧೆ ವಿರುದ್ಧ ಸಮರ ಸಾರಿದ ಶಾಸಕಿಗೆ ಜೀವ ಬೆದರಿಕೆ!

ಜೀವ ಬೆದರಿಕೆ ಸಂಬಂಧ ರಾಯಚೂರು ಎಸ್ಪಿ ಅರುಣಾಂಶು ಗಿರಿ ಅವರ ಕಚೇರಿಗೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್‌ ಅವರು ತೆರಳಿ ದೂರು ನೀಡಿದ್ದಾರೆ. ಅಕ್ರಮ ಮರಳುಗಾರಿಕೆ ತಡೆಯಲು ಹೋದರೆ ಯಾರೂ ಇಲ್ಲದ ಸಮಯ ನೋಡಿ ಮನೆ ಬಳಿ ಬಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ತಮಗೆ ರಕ್ಷಣೆ ನೀಡಬೇಕು ಎಂದು ಶಾಸಕಿ ಕೋರಿದ್ದಾರೆ.

Siddaramananda Swamiji: ಕಾಗಿನೆಲೆ ಕನಕಗುರು ಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಇನ್ನಿಲ್ಲ

ಕಾಗಿನೆಲೆ ಕನಕಗುರು ಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಇನ್ನಿಲ್ಲ

ಸ್ವಾಮೀಜಿ (Siddaramananda Swamiji) ಇದೇ ಜ.12, 13, 14 ರಂದು ಅದ್ದೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿದ್ದರು. ಹಾಲುಮತ ಸಾಹಿತ್ಯ ಸಮ್ಮೇಳನ ಹಾಗೂ ಹಾಲುಮತ (Halumatha) ಪೂಜಾರಿಗಳ ಶಿಬಿರ ಅದ್ದೂರಿಯಾಗಿ ನಡೆದಿತ್ತು. ಕಳೆದ ಒಂದು ವಾರದಿಂದ ಸರಿಯಾಗಿ ಊಟ, ನಿದ್ದೆ ಮಾಡದೇ ಕಾರ್ಯಕ್ರಮಲ್ಲಿ ಭಾಗಿಯಾಗಿದ್ದರಿಂದ ಬುಧವಾರ ರಾತ್ರಿ ಲೋ ಬಿಪಿಯಿಂದ ಸ್ವಾಮೀಜಿ ಬಳಲಿದ್ದರು.

Karnataka Weather Forecast: ನಾಳೆ ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ, ಉತ್ತರ ಒಳನಾಡಿಗೆ ಶೀತ ಗಾಳಿ ಎಚ್ಚರಿಕೆ!

ನಾಳೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಧಾರವಾಡ, ಗದಗ, ಬೀದರ್‌, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಶೀತ ಅಲೆಯ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

CM Siddaramaiah: ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಬಡವರ ಬದುಕು ಸರ್ವನಾಶ: ಸಿಎಂ ಸಿದ್ದರಾಮಯ್ಯ

ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಬಡವರ ಬದುಕು ಸರ್ವನಾಶ: ಸಿದ್ದರಾಮಯ್ಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜಾರಿಗೊಳಿಸಿದ್ದ ಜನಪರವಾಗಿದ್ದ ಮ ನರೇಗಾ ಕಾನೂನನ್ನು, 20 ವರ್ಷಗಳ ನಂತರ ಪ್ರಧಾನಿ ಮೋದಿ ಅವರು ಮಹಾತ್ಮಾ ಗಾಂಧಿಯವರ ಹೆಸರನ್ನೂ ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಹೆಸರಿಟ್ಟಿದ್ದಾರೆ. ಕೇಂದ್ರದ ಈ ಕ್ರಮವನ್ನು ರಾಜ್ಯದ ಜನರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Raichur News: ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ಗದ್ದೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಕೂಲಿ ಕೆಲಸ ಮುಗಿಸಿ ಕೈಕಾಲು ತೊಳೆದುಕೊಂಡು ಮನೆಗೆ ಹೋಗಲು ಕಾಲುವೆ ಬಳಿ ಬಂದಿದ್ದರು. ಲಿಂಗಸುಗೂರು ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮಹಿಳೆಯರ ಶವ ಹೊರತೆಗೆದಿದ್ದಾರೆ. ಸದ್ಯ ಇಬ್ಬರು ಮಹಿಳೆಯರ ಮೃತದೇಹವನ್ನು ಲಿಂಗಸುಗೂರು ತಾಲೂಕಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

Karnataka Weather: ಆರೆಂಜ್‌ ಅಲರ್ಟ್‌; ಇಂದು ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಸಾಧ್ಯತೆ!

ಇಂದು ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಸಾಧ್ಯತೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಪ್ರಮುಖವಾಗಿ ಶುಭ್ರ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ತೀವ್ರ ಶೀತ ಗಾಳಿ; ನಾಳೆ ಬೀದರ್‌, ಕಲಬುರಗಿ ಸೇರಿ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ತೀವ್ರ ಶೀತ ಗಾಳಿ ಹಿನ್ನೆಲೆ ನಾಳೆ ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

Cold Wave Alert For Karnataka: ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಭಾನುವಾರ ತೀವ್ರ ಶೀತಗಾಳಿ ಸಾಧ್ಯತೆ ಮತ್ತು ಗದಗ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

MGNREGA Recruitment 2025: ಮನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಅವಕಾಶ

ರಾಯಚೂರು ಜಿಲ್ಲಾ ಪಂಚಾಯತ್‌ನಲ್ಲಿದೆ ಉದ್ಯೋಗಾವಕಾಶ

ರಾಯಚೂರು ಜಿಲ್ಲಾ ಪಂಚಾಯತ್‌ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ, ವಯೋಮಿತಿ ಇತರೆ ಅರ್ಹತೆಗಳನ್ನು ತಿಳಿದು ಅರ್ಜಿ ಸಲ್ಲಿಸಿ.

Karnataka Weather: ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು; ಕರ್ನಾಟಕದಲ್ಲಿ ನಾಳೆ ಹೇಗಿರಲಿದೆ ಹವಾಮಾನ?

ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ 7 ಡಿಗ್ರಿ ಸೆ. ದಾಖಲು

ಮುಂದಿನ 2 ದಿನಗಳವರೆಗೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗಲಿದೆ.

ಪ್ರೇಯಸಿಯನ್ನು ಗರ್ಭಿಣಿಯನ್ನಾಗಿಸಿ ಮತ್ತೊಂದು ಮದುವೆಯಾಗಲು ಮುಂದಾದ ಯುವಕನ ಕೃತ್ಯ ಇನ್‌ಸ್ಟಾಗ್ರಾಂನಿಂದ ಬಯಲು; ಮಂಟಪದಲ್ಲಿ ಹೈಡ್ರಾಮ

ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳನ್ನು ವರಿಸಲು ಮುಂದಾದವನಿಗೆ ತಕ್ಕ ಶಾಸ್ತಿ

Raichur News: ಪ್ರೇಯಸಿಯನ್ನು ಗರ್ಭಿಣಿಯನ್ನಾಗಿ ಮಾಡಿ ಬೇರೊಂದು ಯುವತಿಯೊಂದಿಗೆ ಮದುವೆಯಾಗಲು ಮುಂದಾದ ರಾಯಚೂರು ಮೂಲದ ರಿಷಬ್‌ ಎಂಬ ಯುವಕನ ಕೃತ್ಯ ಬಯಲಾಗಿದೆ. ಮಂಟಪಕ್ಕೆ ಆಗಮಿಸಿದ ಯುವತಿ ಮದುವೆಯನ್ನು ನಿಲ್ಲಿಸಿದ್ದಾಳೆ. ಸದ್ಯ ರಿಷಬ್‌ ವಿರುದ್ದ ತನಿಖೆ ನಡೆಯುತ್ತಿದೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ ಮೂರು ದಿನ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ !

ರಾಜ್ಯದಲ್ಲಿ ಮುಂದಿನ 3 ದಿನ ಶೀತ ಗಾಳಿ ಎಚ್ಚರಿಕೆ; ಮಾರ್ಗಸೂಚಿ ಬಿಡುಗಡೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಬುಧವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9.2 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Karnataka Weather: ಬೀದರ್‌ನಲ್ಲಿ ಮುಂದಿನ 4 ದಿನ ಶೀತ ಗಾಳಿ ಎಚ್ಚರಿಕೆ, ಉಳಿದೆಡೆ ಒಣ ಹವೆ

ಬೀದರ್‌ನಲ್ಲಿ ಮುಂದಿನ 4 ದಿನ ಶೀತ ಗಾಳಿ ಎಚ್ಚರಿಕೆ, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಸ್ಪಷ್ಟ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು /ಮಂಜು ಕವಿಯಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

JDS Protest: ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ರೆ ತುಂಗಭದ್ರಾ ಡ್ಯಾಂಗೆ ಮುತ್ತಿಗೆ: ನಿಖಿಲ್‌ ಕುಮಾರಸ್ವಾಮಿ ಎಚ್ಚರಿಕೆ

ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ರೆ ಟಿಬಿ ಡ್ಯಾಂಗೆ ಮುತ್ತಿಗೆ: ನಿಖಿಲ್‌

ರೈತರಿಗೆ ಬೇಕಿರುವುದು ನೀರು, ಗ್ಯಾರಂಟಿಗಳಲ್ಲ. ನೀರು ಕೊಟ್ಟರೆ ಅವರೇ ನಿಮಗೆ ಗ್ಯಾರಂಟಿಗೆ ಹಣ ಕೊಡ್ತಾರೆ. ಈ ಸರ್ಕಾರಕ್ಕೆ ಮಾನ, ಮರ್ಯಾದೆ ಏನು ಇಲ್ಲ. ಇದು ದಪ್ಪ ಚರ್ಮದ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Karnataka Weather: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಕರಾವಳಿ, ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರಬಹುದು.

Karnataka Weather: ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು; ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಉತ್ತರ ಒಳನಾಡಿನಲ್ಲಿ ತೀವ್ರ ಶೀತಗಾಳಿ; ಬೀದರ್‌ನಲ್ಲಿ ರಾಜ್ಯದಲ್ಲೇ ಅತಿ ಕನಿಷ್ಠ ಉಷ್ಣಾಂಶ ದಾಖಲು

ತೀವ್ರ ಶೀತಗಾಳಿ; ಬೀದರ್‌ನಲ್ಲಿ ಅತಿ ಕನಿಷ್ಠ ಉಷ್ಣಾಂಶ ದಾಖಲು

ಕರ್ನಾಟಕ ಹವಾಮಾನ ವರದಿ: ಕಳೆದ ಎರಡು ವಾರದಿಂದ ಕರ್ನಾಟಕದಲ್ಲಿ ಹಿಂಗಾರು ಮಳೆ ಆರ್ಭಟ ಕಡಿಮೆಯಾಗಿದೆ. ಈ ನಡುವೆ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ. ಇನ್ನು ಮುಂದಿನ ಆರು ದಿನ ರಾಜ್ಯದ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿದೆ.

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ನಿರೀಕ್ಷೆ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

ಇಂದು ಬಿರುಗಾಳಿ ಸಹಿತ ಮಳೆ ನಿರೀಕ್ಷೆ; ಸಮುದ್ರಕ್ಕಿಳಿಯದಂತೆ ಎಚ್ಚರಿಕೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಹೆಚ್ಚಿದೆ.

Karnataka Weather: ಇಂದು ಬೆಳಗಾವಿ, ಧಾರವಾಡ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭರ್ಜರಿ ಮಳೆ ನಿರೀಕ್ಷೆ

ಇಂದು ಬೆಳಗಾವಿ, ಧಾರವಾಡ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

RSS: ಆರೆಸ್ಸೆಸ್‌ ಪಥಸಂಚಲನದಲ್ಲಿ ಭಾಗವಹಿಸಿದ ಪಿಡಿಒ ಅಮಾನತು

ಆರೆಸ್ಸೆಸ್‌ ಪಥಸಂಚಲನದಲ್ಲಿ ಭಾಗವಹಿಸಿದ ಪಿಡಿಒ ಅಮಾನತು

Raichur news: ಪ್ರತಿಯೊಬ್ಬ ಸರ್ಕಾರಿ ನೌಕರನು ಉನ್ನತ ನೈತಿಕ ಆದರ್ಶಗಳನ್ನು ಹೊಂದಿರತಕ್ಕದ್ದು ಮತ್ತು ರಾಜಕೀಯವಾಗಿ ತಟಸ್ಥವಾಗಿರಬೇಕು ಹಾಗೂ ತನ್ನ ಪದೀಯ ಕರ್ತವ್ಯ ನಿರ್ವಹಣೆಯ ಮೇಲೆ ಪ್ರಭಾವ ಬೀರಬಹುದಾದ ಯಾರೇ ವ್ಯಕ್ತಿ ಅಥವಾ ಸಂಸ್ಥೆಯ ಯಾವುದೇ ಹಣಕಾಸು ಅಥವಾ ಇತರೆ ಆಮಿಷಗಳಿಗೆ ಒಳಗಾಗತಕ್ಕದ್ದಲ್ಲವೆಂಬ ನಿಯಮ ಮೀರಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಗಿದೆ.

MLA Karemma G: ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ್ ಕಾರು ಭೀಕರ ಅಪಘಾತ; ಲಿಂಗಸೂರು ಆಸ್ಪತ್ರೆಗೆ ದಾಖಲು

ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ್ ಕಾರು ಭೀಕರ ಅಪಘಾತ

ಜೆಡಿಎಸ್ (JDS) ಶಾಸಕಿ ಕರೆಮ್ಮಾ ನಾಯಕ್ ಅವರು ಚಲಿಸುತ್ತಿದ್ದ ಕಾರು ಲಿಂಗಸುಗೂರು ತಾಲೂಕಿನ ಗೊಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕರೆಮ್ಮಾ ನಾಯಕ್​ ಗೆ ಸಣ್ಣಪುಟ್ಟ ಗಾಯಗಳಾಗಿವೆ.

Drowned: ಕಾಂತಾರ ಸಿನಿಮಾ ಟಿಕೆಟ್‌ ಸಿಗದೆ ಈಜಲು ಹೋದ ಇಬ್ಬರು ಯುವಕರು ನಾಲೆಯಲ್ಲಿ ಮುಳುಗಿ ಸಾವು

ಕಾಂತಾರ ಸಿನಿಮಾ ಟಿಕೆಟ್‌ ಸಿಗದೆ ಈಜಲು ಹೋದ ಇಬ್ಬರು ಯುವಕರು ಮುಳುಗಿ ಸಾವು

Raichur News: ಮುದುಗಲ್‌ನಿಂದ ಮಸ್ಕಿಗೆ ‘ಕಾಂತಾರ ಚಾಪ್ಟರ್ 1’ ಸಿನಿಮಾ ನೋಡಲು ಬಂದಿದ್ದರು. ಮಧ್ಯಾಹ್ನದ ಪ್ರದರ್ಶನಕ್ಕೆ ಟಿಕೆಟ್ ಸಿಗದ ಕಾರಣ ನಾಲೆಯಲ್ಲಿ ಈಜಲು ಹೋಗಿದ್ದರು. ಈಜು ಬಾರದಿದ್ದ ಕಾರಣ ನಾಲೆಯಲ್ಲಿ ಯಲ್ಲಾಲಿಂಗ ಕೊಚ್ಚಿ ಹೋಗಿದ್ದಾನೆ. ಆತನ ರಕ್ಷಣೆ ಮಾಡಲು ಹೋಗಿ ವೆಂಕಟೇಶನೂ ಸಾವನ್ನಪ್ಪಿದ್ದಾನೆ.

Road Accident: ರಾಯಚೂರಿನಲ್ಲಿ ಕಾರು- ಬೈಕು ಡಿಕ್ಕಿ, ಅಕ್ಕ- ತಮ್ಮ ದುರ್ಮರಣ

ರಾಯಚೂರಿನಲ್ಲಿ ಕಾರು- ಬೈಕು ಡಿಕ್ಕಿ, ಅಕ್ಕ- ತಮ್ಮ ದುರ್ಮರಣ

Raichur News: ಶೇಖರಪ್ಪ ತಮ್ಮ ಅಕ್ಕ ಹಾಗೂ ಅವರ ಎರಡು ವರ್ಷದ ಮಗಳನ್ನು ಬೈಕ್​ನಲ್ಲಿ ಕೂರಿಸಿಕೊಂಡು ಕರೆಗುಡ್ಡ ಗ್ರಾಮಕ್ಕೆ ಬರುತ್ತಿರುವಾಗ ಕೊಪ್ಪಳದ ದೇಸಾಯಿ ಕ್ಯಾಂಪ್​ಗೆ ತೆರಳುತ್ತಿದ್ದ ಕಾರೊಂದು ಇವರ ಬೈಕ್​ಗೆ ಡಿಕ್ಕಿ ಹೊಡೆದಿದೆ. ಮಗಳು ಗೌತಮಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

Heart Failure: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮತ್ತೊಬ್ಬ ಡ್ಯಾನ್ಸ್‌ ಮಾಡುತ್ತಾ ಸಾವು

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಯುವಕ ಸಾವು

Raichur: ಮೊನ್ನೆ (ಆಗಸ್ಟ್ 31) ರಾತ್ರಿಯಿಡೀ ಡ್ಯಾನ್ಸ್ ಮಾಡಿದ್ದ ಅಭಿಷೇಕ್ ನಿನ್ನೆ (ಸೆ. 1) ಬೆಳಗಿನ ಜಾವ ಗಣೇಶ ವಿಸರ್ಜನೆ ಮಾರ್ಗ ಮಧ್ಯೆ ರಾಯಚೂರು ನಗರದ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದು, ಕೂಡಲೇ ಅಭಿಷೇಕ್‌ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ‌ಫಲಕಾರಿಯಾಗದೇ ಯುವಕ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ.

Loading...