ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಾಯಚೂರು

Heart Failure: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮತ್ತೊಬ್ಬ ಡ್ಯಾನ್ಸ್‌ ಮಾಡುತ್ತಾ ಸಾವು

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಯುವಕ ಸಾವು

Raichur: ಮೊನ್ನೆ (ಆಗಸ್ಟ್ 31) ರಾತ್ರಿಯಿಡೀ ಡ್ಯಾನ್ಸ್ ಮಾಡಿದ್ದ ಅಭಿಷೇಕ್ ನಿನ್ನೆ (ಸೆ. 1) ಬೆಳಗಿನ ಜಾವ ಗಣೇಶ ವಿಸರ್ಜನೆ ಮಾರ್ಗ ಮಧ್ಯೆ ರಾಯಚೂರು ನಗರದ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದು, ಕೂಡಲೇ ಅಭಿಷೇಕ್‌ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ‌ಫಲಕಾರಿಯಾಗದೇ ಯುವಕ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ.

Sri Raghavendra Swamy Mutt: ಮಂತ್ರಾಲಯದ ಮೂಲ ರಾಮ ದೇವರಿಗೆ ನವರತ್ನ ಹಾರ ಸಮರ್ಪಿಸಿದ ಜಿ.ವಿ. ರಾಮಕೃಷ್ಣ ದಂಪತಿ

ಮಂತ್ರಾಲಯದ ಮೂಲ ರಾಮ ದೇವರಿಗೆ ನವರತ್ನ ಹಾರ ಸಮರ್ಪಣೆ

Sri Raghavendra Swamy Mutt: ಗುರು ರಾಯರ ಪೂರ್ವಾರಾಧನೆ ಸಂದರ್ಭದಲ್ಲಿ ಬೆಂಗಳೂರಿನ ಜಿ.ವಿ. ರಾಮಕೃಷ್ಣ ಮತ್ತು ಪತ್ನಿ ಕವಿತಾ ರಾಮಕೃಷ್ಣ ಅವರು ಮಂತ್ರಾಲಯದ ಮೂಲ ರಾಮ ದೇವರಿಗೆ ಅಪರೂಪದ ನವರತ್ನ ಹಾರವನ್ನು ಸಮರ್ಪಿಸಿದ್ದಾರೆ. ಜಿ.ವಿ. ರಾಮಕೃಷ್ಣ ಅವರು 2007ರಿಂದ ಒಮಾನ್ ಪ್ರಮುಖ ಬ್ಯಾಂಕ್‌‌ವೊಂದರ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Mantralayam Rathotsava: ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ನಡೆದ ರಾಯರ ಉತ್ತರಾರಾಧನೆ ಮಹಾರಥೋತ್ಸವ

ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ನೆರವೇರಿದ ರಾಯರ ಉತ್ತರಾರಾಧನೆ ಮಹಾರಥೋತ್ಸವ

Mantralayam Rathotsava: ಗುರು ರಾಘವೇಂದ್ರ ಸ್ವಾಮಿಗಳು ವೃಂದಾವನಸ್ಥರಾದ ಮರುದಿನವನ್ನು ಮಂತ್ರಾಲಯದಲ್ಲಿ ಉತ್ತರಾರಾಧನೆಯಾಗಿ ಸಂಭ್ರಮದಿಂದ ಆಚರಿಸಲಾಗುತ್ತದೆ. ರಾಯರು ಪ್ರಹ್ಲಾದ ರಾಜರ ಉತ್ಸವ ಮೂರ್ತಿ ರೂಪದಿಂದ ಹೊರ ಪ್ರಾಕಾರದಲ್ಲಿ ಬಂದು ಭಕ್ತರಿಗೆ ರಾಜಬೀದಿಯಲ್ಲಿ ದರ್ಶನ ಕೊಡುತ್ತಾರೆ ಅನ್ನೋ ಪ್ರತೀತಿಯಿದೆ.

Fire Accident: ಮಂತ್ರಾಲಯದ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ; ಹೊತ್ತಿ ಉರಿದ ಮೇವಿನ ಬಣವೆಗಳು

ಮಂತ್ರಾಲಯದ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ

Fire Accident in Mantralaya: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಗೋಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನೂರಾರು ಹಸುಗಳಿರುವ ಈ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ವ್ಯಾಪಿಸಿದ್ದು, ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಅದೃಷ್ಟವಶಾತ್, ಗೋವುಗಳಿಗೆ ಅಪಾಯವಾಗಿಲ್ಲ.

Raichur Rains: ರಾಯಚೂರಿನಲ್ಲಿ ಸಿಡಿಲು ಬಡಿದು ಗರ್ಭಿಣಿ ಸಾವು

ರಾಯಚೂರಿನಲ್ಲಿ ಸಿಡಿಲು ಬಡಿದು ಗರ್ಭಿಣಿ ಸಾವು

Raichur Rains: ರಾಜ್ಯದ ವಿವಿಧೆಡೆ ಭಾನುವಾರ ವ್ಯಾಪಕ ಮಳೆಯಾಗಿದೆ. ಈ ನಡುವೆ ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ಸಿಡಿಲಿಗೆ ಗರ್ಭಿಣಿ ಬಲಿಯಾಗಿದ್ದಾಳೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅನಾಹುತ ನಡೆದಿದೆ. ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Raghavendra Swamy Aradhana: ಮಂತ್ರಾಲಯದ ರಾಯರ ಬೃಂದಾವನಕ್ಕೆ ತಿರುಮಲ ಶ್ರೀವಾರಿ ಶೇಷವಸ್ತ್ರ ಸಮರ್ಪಣೆ

ಮಂತ್ರಾಲಯದ ರಾಯರ ಬೃಂದಾವನಕ್ಕೆ ತಿರುಮಲ ಶ್ರೀವಾರಿ ಶೇಷವಸ್ತ್ರ ಸಮರ್ಪಣೆ

Mantralaya Mutt: ಮಂತ್ರಾಲಯ ಶ್ರೀ ಗುರುರಾಯರ 354ನೇ ಆರಾಧನೆಯ ಪ್ರಯುಕ್ತ ರಾಯರ ಮಠಕ್ಕೆ ಟಿಟಿಡಿ ಎಇಒ ರಾಮಕೃಷ್ಣ ಅವರು ಭೇಟಿ ನೀಡಿ, ತಿರುಮಲ ತಿರುಪತಿ ದೇವಸ್ಥಾನದ ಪವಿತ್ರ ಶ್ರೀವಾರಿ ಶೇಷವಸ್ತ್ರವನ್ನು ಸಮರ್ಪಿಸಿದರು. ಶ್ರೀ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು, ಶ್ರೀವಾರಿ ಶೇಷವಸ್ತ್ರವನ್ನು ಸ್ವೀಕರಿಸಿ, ಶ್ರೀ ರಾಯರ ಮೂಲ ಬೃಂದಾವನಕ್ಕೆ ವಸ್ತ್ರವನ್ನು ಅರ್ಪಿಸಿದ್ದಾರೆ.

ಮಂತ್ರಾಲಯದಲ್ಲಿ ರಾಯರ 354ನೇ ವರ್ಷದ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವಕ್ಕೆ ಶ್ರೀಗಳಿಂದ ಚಾಲನೆ

ಮಂತ್ರಾಲಯದಲ್ಲಿ ರಾಯರ 354ನೇ ವರ್ಷದ ಆರಾಧನಾ ಮಹೋತ್ಸವಕ್ಕೆ ಚಾಲನೆ

Raghavendra Swamy Aradhana: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ವರ್ಷದ ಆರಾಧನಾ ಸಪ್ತರಾತ್ರೋತ್ಸವಕ್ಕೆ (Raghavendra Swamy Aradhana) ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಭಗವಾ ಧ್ವಜಾರೋಹಣ ನೆರವೇರಿಸುವ ಮೂಲಕ‌ ವಿಧ್ಯುಕ್ತ ಚಾಲನೆ ನೀಡಿದರು.

Transport Strike: ಸಾರಿಗೆ ಮುಷ್ಕರ; ರಾಯಚೂರಿನಲ್ಲಿ ಆಂಧ್ರ, ತೆಲಂಗಾಣ ಬಸ್‌ಗಳ ಮೊರೆ ಹೋದ ಪ್ರಯಾಣಿಕರು

ರಾಯಚೂರಿನಲ್ಲಿ ಆಂಧ್ರ, ತೆಲಂಗಾಣ ಬಸ್‌ಗಳ ಮೊರೆ ಹೋದ ಪ್ರಯಾಣಿಕರು

Raichur News: ಸಾರಿಗೆ ನೌಕರರು ಕರ್ತವ್ಯಕ್ಕೆ ಹೋಗದೆ ಬಸ್ ನಿಲ್ದಾಣದಲ್ಲೇ ಉಳಿದಿದ್ದಾರೆ. ನಮ್ಮ ಕಷ್ಟಗಳಿಗೆ ಸರ್ಕಾರ ಸ್ಪಂದಿಸಿದರೆ ನಾವ್ಯಾಕೆ ಮುಷ್ಕರ ಮಾಡಬೇಕು, ನಮ್ಮ ಕಷ್ಟ ಕೇಳುವವರು ಯಾರು ಎಂದು ನೌಕರರು ಅಳಲು ತೋಡಿಕೊಂಡಿದ್ದಾರೆ. ಇದರಿಂದ ಬಸ್‌ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.

Raghavendra Swamy Aradhana: ಆ.8ರಿಂದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವ

ಆ.8ರಿಂದ ಮಂತ್ರಾಲಯದಲ್ಲಿ ಶ್ರೀ ರಾಯರ 354ನೇ ಆರಾಧನಾ ಮಹೋತ್ಸವ

ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ವರ್ಷದ ಆರಾಧನಾ ಸಪ್ತರಾತ್ರೋತ್ಸವ ಕಾರ್ಯಕ್ರಮವು ಆ.8ರಿಂದ 14 ರವರೆಗೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಶ್ರೀ ಮಠದ ಸಂಪ್ರದಾಯದಂತೆ ಅನೇಕ ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಕುರಿತ ಮಾಹಿತಿ ಇಲ್ಲಿದೆ.

Raichur News: ಪತಿಯನ್ನು ಪತ್ನಿ ನದಿಗೆ ತಳ್ಳಿದ ಕೇಸ್‌; ಬಾಲ್ಯವಿವಾಹವಾಗಿದ್ದ ತಾತಪ್ಪ ಅರೆಸ್ಟ್‌

ಪತಿಯನ್ನು ನದಿಗೆ ತಳ್ಳಿದ ಕೇಸ್‌; ಬಾಲ್ಯವಿವಾಹವಾಗಿದ್ದ ತಾತಪ್ಪ ಅರೆಸ್ಟ್‌

Raichur child marriage Case: ಜು.21 ರಂದು ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ತಾತಪ್ಪನನ್ನು ರಿಮ್ಸ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿರುವ ಪೊಲೀಸರು, ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ.

Mantralaya Raghavendra Swamy Matha: ಮಂತ್ರಾಲಯ ಹುಂಡಿ ಎಣಿಕೆ; ದಾಖಲೆಯ ಕಾಣಿಕೆ, ಚಿನ್ನ- ಬೆಳ್ಳಿ ಸಂಗ್ರಹ

ಮಂತ್ರಾಲಯ ಹುಂಡಿ ಎಣಿಕೆ; ದಾಖಲೆಯ ಕಾಣಿಕೆ, ಚಿನ್ನ- ಬೆಳ್ಳಿ ಸಂಗ್ರಹ

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಹುಂಡಿ ಎಣಿಕೆ ಕಾರ್ಯ ಮಾಡಲಾಗಿದ್ದು, ಒಟ್ಟು 5,46,06,555 ರೂ. ನಗದು ಕಾಣಿಕೆ ಮತ್ತು 127 ಗ್ರಾಂ ಚಿನ್ನ ಹಾಗೂ 1,820 ಗ್ರಾಂ ಬೆಳ್ಳಿ ಕಾಣಿಕೆಯನ್ನು ಭಕ್ತರು ಸಮರ್ಪಿಸಿದ್ದಾರೆ ಎಂದು ಶ್ರೀಮಠದ ವ್ಯವಸ್ಥಾಪಕ ಎಸ್.ಕೆ. ಶ್ರೀನಿವಾಸ ರಾವ್ ತಿಳಿಸಿದ್ದಾರೆ.

Raichur news: ಕಾಂಗ್ರೆಸ್‌ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಸಿಎಂ, ಡಿಸಿಎಂ ಫೋಟೋ ಮಾಯ; ʼಕ್ಷಮಿಸಿʼ ಎಂದ ಸೌಮ್ಯಾ ರೆಡ್ಡಿ

ಕಾಂಗ್ರೆಸ್‌ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಸಿಎಂ, ಡಿಸಿಎಂ ಫೋಟೋ ಮಾಯ!

Women Congress: ರಾಯಚೂರಿನಲ್ಲಿ ನಡೆದ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದ ಬ್ಯಾನರ್‌ನಲ್ಲಿ ರಾಷ್ಟ್ರ, ರಾಜ್ಯ, ಜಿಲ್ಲೆ ಹಾಗೂ ಸ್ಥಳೀಯ ಮಟ್ಟದ ನಾಯಕರ ಫೋಟೋಗಳು ಕಂಡುಬಂದವಾದರೂ, ಸಿಎಂ, ಡಿಸಿಎಂ ಚಿತ್ರಗಳು ಕಾಣಿಸಲಿಲ್ಲ.

POCSO case: ಪತ್ನಿ‌ ನದಿಗೆ ತಳ್ಳಿದ ಆರೋಪ ಮಾಡಿದ ತಾತಪ್ಪನ ವಿರುದ್ಧ ಪೋಕ್ಸೋ ಕೇಸ್

ಪತ್ನಿ‌ ನದಿಗೆ ತಳ್ಳಿದ ಆರೋಪ ಮಾಡಿದ ತಾತಪ್ಪನ ವಿರುದ್ಧ ಪೋಕ್ಸೋ ಕೇಸ್

Raichur News: ಬ್ರಿಡ್ಜ್ ಮೇಲಿನಿಂದ ಪತಿಯನ್ನು ನದಿಗೆ ತಳ್ಳಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತಿ ತಾತಪ್ಪ ವಿರುದ್ಧ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ತಾತಪ್ಪ ಬಾಲ್ಯವಿವಾಹವಾಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಕೇಸ್ ದಾಖಲಾಗಿದೆ.

Food Poison: ವಿಷಾಹಾರ ಸೇವನೆ, ತಂದೆ- ಮಗಳು ಸಾವು, ಇನ್ನೂ ಮೂವರು ಗಂಭೀರ

ವಿಷಾಹಾರ ಸೇವನೆ, ತಂದೆ- ಮಗಳು ಸಾವು, ಇನ್ನೂ ಮೂವರು ಗಂಭೀರ

Raichur News: ಊಟ ಮಾಡಿದ ಬಳಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮನೆಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆಸ್ಪತ್ರೆ ಸೇರಿದ ಐವರಲ್ಲಿ ತಂದೆ- ಮಗಳು ಮೃತಪಟ್ಟಿದ್ದಾರೆ. ಪತ್ನಿ, ಇನ್ನಿಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ರಾಯಚೂರಿನಲ್ಲಿ ನಡೆದಿದೆ.

Raichur News: ಪತಿಯನ್ನು ನದಿಗೆ ತಳ್ಳಿದ ಪ್ರಕರಣಕ್ಕೆ ಟ್ವಿಸ್ಟ್; ಬಾಲ್ಯ ವಿವಾಹ ಆರೋಪ, ತಾತಪ್ಪಗೆ ಸಂಕಷ್ಟ!

ಪತಿಯನ್ನು ನದಿಗೆ ತಳ್ಳಿದ ಪ್ರಕರಣ;‌ ಬಾಲ್ಯ ವಿವಾಹವಾಗಿದ್ದ ತಾತಪ್ಪ!

Raichur News: ತಾತಪ್ಪ ವಿರುದ್ಧ ಬಾಲ್ಯವಿವಾಹ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪತ್ನಿ ಗದ್ದೆಮ್ಮಳ ವಯಸ್ಸಿನ ದಾಖಲಾತಿ ನೀಡುವಂತೆ ಪತಿ ತಾತಪ್ಪನಿಗೆ ಗಡುವು ನೀಡಲಾಗಿದೆ. ಇನ್ನು ರಾಯಚೂರು ತಾಲೂಕಿನ ದೇವಸುಗೂರು ನಿವಾಸಿಯಾಗಿರುವ ತಾತಪ್ಪನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪತ್ರ ಬರೆದಿದೆ.

Excavation: ಮಸ್ಕಿಯಲ್ಲಿ ಪತ್ತೆಯಾಯ್ತು 4000 ವರ್ಷಗಳ ಹಿಂದಿನ ಪಳೆಯುಳಿಕೆ!

ಮಸ್ಕಿಯಲ್ಲಿ ಪತ್ತೆಯಾಯ್ತು 4000 ವರ್ಷಗಳ ಹಿಂದಿನ ಪಳೆಯುಳಿಕೆ!

Excavation: ಭಾರತ, ಅಮೆರಿಕ, ಕೆನಡಾ ದೇಶಗಳ 20ಕ್ಕೂ ಹೆಚ್ಚು ಸಂಶೋಧಕರು ಮಸ್ಕಿಯಲ್ಲಿ ಉತ್ಖನನವನ್ನು ಕೈಗೊಂಡಿದ್ದಾರೆ. ಈ ವೇಳೆ ಅವರ ಸಂಶೋಧನೆಯಲ್ಲಿ 4000 ವರ್ಷಗಳಷ್ಟು ಹಳೆಯದಾದ ಮಾನವನ ವಸಾಹತು ಪ್ರದೇಶ ಇತ್ತು ಎಂಬುವುದಕ್ಕೆ ಪುರಾವೆಗಳು ಪತ್ತೆಯಾಗಿದೆ.

Raichur News: ರಾಯಚೂರಿನಲ್ಲಿ ಸಚಿವರಿದ್ದ ಸಭೆಯಲ್ಲೇ ರಮ್ಮಿ ಆಡಿದ ಅರಣ್ಯಾಧಿಕಾರಿ!

ರಾಯಚೂರು ಕೆಡಿಪಿ ಸಭೆಯಲ್ಲೇ ರಮ್ಮಿ ಆಡಿದ ಅರಣ್ಯಾಧಿಕಾರಿ!

Raichur News: ಯಾದಗಿರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಯೊಬ್ಬರು ಸಭಾಂಗಣದಲ್ಲಿ ಕುಳಿತೇ ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದರು. ಇದನ್ನು ಗಮನಿಸಿದ ಒಬ್ಬರು ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

Drowned: ಮಂತ್ರಾಲಯಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ನೀರುಪಾಲು

ಮಂತ್ರಾಲಯಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ನೀರುಪಾಲು

Drowned: ನದಿಯಲ್ಲಿ ನೀರಿನ ರಭಸ ಕಂಡು ಬೇಡವೆಂದು ಹೇಳಿದರೂ ಈಜಲು ಹೋಗಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಹಾಗೂ ಈಜುಗಾರರ ತಂಡದಿಂದ ಯುವಕರ ಶೋಧ ಕಾರ್ಯ ನಡೆದಿದೆ.

Raichur News: ಫೋಟೋ ತೆಗೆಯುವ ನೆವದಲ್ಲಿ ಪತಿಯನ್ನು ನದಿಗೆ ತಳ್ಳಿ ಕೊಲ್ಲಲು ಯತ್ನಿಸಿದ ಪತ್ನಿ?

ಫೋಟೋ ತೆಗೆಯುವ ನೆವದಲ್ಲಿ ಪತಿಯ ನದಿಗೆ ತಳ್ಳಿ ಕೊಲ್ಲಲು ಯತ್ನಿಸಿದ ಪತ್ನಿ?

Raichur News: ದಂಪತಿ ರಾಯಚೂರಿನ ಶಕ್ತಿನಗರ ಮೂಲದ ಯುವಕ ತಾತಪ್ಪ ಹಾಗೂ ಯಾದಗಿರಿಯ ವಡಗೆರಾ ತಾಲೂಕಿನ ಗದ್ದೆಮ್ಮ ನಡುವೆ ಗಲಾಟೆ ಎನ್ನಲಾಗಿದೆ. ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಮೂಲಕ ಬೈಕ್‌ ಮೇಲೆ ಹೊರಟಿದ್ದ ದಂಪತಿ, ಬ್ಯಾರೇಜ್ ಬಳಿ ನದಿಯಲ್ಲಿ ಕಲ್ಲು ಬಂಡೆಗಳ ಮೇಲೆ ನಿಂತು ಫೋಟೋ ತೆಗೆದುಕೊಳ್ಳುವಾಗ ಘಟನೆ ನಡೆದಿದೆ.

Raichur News: ಆಸ್ಪತ್ರೆಯಲ್ಲಿ ಅನುಮಾನಾಸ್ಪದವಾಗಿ ಸೀರೆಯುಟ್ಟು ಓಡಾಡಿದ ಪುರುಷ ಪೊಲೀಸ್‌ ವಶಕ್ಕೆ

ಆಸ್ಪತ್ರೆಯಲ್ಲಿ ಸೀರೆಯುಟ್ಟು ಓಡಾಡಿದ ಪುರುಷ ಪೊಲೀಸ್‌ ವಶಕ್ಕೆ

Raichur News: ಹಸುಗೂಸು ಕಳ್ಳತನದ ಶಂಕೆ ಹಿನ್ನೆಲೆಯಲ್ಲಿ ಪೊಲೀಸರಿಗೆ ಸ್ಥಳೀಯರು ದೂರು ನೀಡಿದ್ದು, ಬಳಿಕ ಶರಣಪ್ಪನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ತಾನು ಮಂಗಳಮುಖಿ ಎಂದು ಈತ ಹೇಳಿಕೊಂಡಿದ್ದು, ಆಸ್ಪತ್ರೆಯಲ್ಲಿ ಮಲಗಲು ಹೋಗಿದ್ದೆ ಎಂದು ಹೇಳಿದ್ದಾನೆ.

Stray Dog Attack: 4 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ; ತಲೆ, ಕುತ್ತಿಗೆಗೆ ಗಂಭೀರ ಗಾಯ

4 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ; ತಲೆ, ಕುತ್ತಿಗೆಗೆ ಗಂಭೀರ ಗಾಯ

Stray Dog Attack: ಬೀದಿ ನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಗುವನ್ನು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಬೀದಿ ನಾಯಿಗಳ ನಿಯಂತ್ರಣಕ್ಕೆ ದೂರುಗಳು ಸಲ್ಲಿಕೆಯಾದರೂ ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

Raichur News: ಲಿಂಗಸುಗೂರಿನಲ್ಲಿ ಮೊಹರಂ ಆಚರಣೆ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿ ಸಾವು

ಲಿಂಗಸುಗೂರಿನಲ್ಲಿ ಮೊಹರಂ ಆಚರಣೆ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿ ಸಾವು

Raichur News: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿಯಲ್ಲಿ ಅವಘಡ ನಡೆದಿದೆ. ಅಲಾಯಿ ಕುಣಿಯಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಕೊನೆಯುಸಿರೆಳೆದಿದ್ದಾನೆ. ಬೆಂಕಿ ದೊಡ್ಡ ಪ್ರಮಾಣದಲ್ಲಿ ಹೊತ್ತಿ ಉರಿಯುತ್ತಿದ್ದರಿಂದ ಸ್ಥಳದಲ್ಲೇ ನೂರಾರು ಜನರಿದ್ದರೂ ಯುವಕನನ್ನು ರಕ್ಷಿಸಲು ಅಸಹಾಯಕರಾಗಿದ್ದಾರೆ.

Nava Brindavana: ನವ ವೃಂದಾವನ ಪೂಜೆ ವಿವಾದ; ಸಾಮರಸ್ಯದಿಂದ ಸಮಸ್ಯೆಗೆ ಇತಿಶ್ರೀ ಹಾಡಲು ರಾಯರ ಮಠ-ಉತ್ತರಾದಿ ಮಠದ ಶ್ರೀಗಳ ನಿರ್ಧಾರ

ನವ ವೃಂದಾವನ ಪೂಜೆ ವಿವಾದಕ್ಕೆ ಇತಿಶ್ರೀ ಹಾಡಲು ಉಭಯ ಶ್ರೀಗಳ ನಿರ್ಧಾರ

Nava Brindavana Pooja controversy: ಕೊಪ್ಪಳ ಜಿಲ್ಲೆಯ ಆನೆಗೊಂದಿಯ ನವ ವೃಂದಾವನದ ಪೂಜೆ ವಿವಾದವನ್ನು ಸಾಮರಸ್ಯದಿಂದ ಪರಿಹರಿಸಿಕೊಳ್ಳುವುದಾಗಿ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹಾಗೂ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಘೋಷಿಸಿದ್ದಾರೆ.

Fake currency notes: ಮಾನ್ವಿಯಲ್ಲಿ ಖೋಟಾ ನೋಟು ಜಾಲ ಪತ್ತೆ; 10 ಆರೋಪಿಗಳ ಬಂಧನ

ಮಾನ್ವಿಯಲ್ಲಿ ಖೋಟಾ ನೋಟು ಜಾಲ; 10 ಆರೋಪಿಗಳ ಬಂಧನ

Fake currency notes: ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಇಂಡಿಯನ್ ಬ್ಯಾಂಕ್‌ ಶಾಖೆಯ ಡೆಪಾಸಿಟ್‌ ಮಷಿನ್‌ನಲ್ಲಿ ನಕಲಿ ನೋಟುಗಳನ್ನು ಜಮಾ ಮಾಡುತ್ತಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Loading...