ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ರಾಯಚೂರು

Couple death: ಕನಸಿನ ಮನೆಯ ಮೆಟ್ಟಿಲು ಕುಸಿದು ದುರಂತ ಕಂಡ ದಂಪತಿ

ಕನಸಿನ ಮನೆಯ ಮೆಟ್ಟಿಲು ಕುಸಿದು ದುರಂತ ಕಂಡ ದಂಪತಿ

ದ್ಯಾವಪ್ಪ ಹಾಗೂ ಶಿವಮ್ಮ ದಂಪತಿ ಮನೆ ಕಟ್ಟುವ ಕನಸು ಕಂಡಿದ್ದು, ಅದರಂತೆ ಹಣ ಹೊಂದಿಸಿ ಮನೆ ನಿರ್ಮಾಣ ಮಾಡಲು ಶುರು ಮಾಡಿದ್ದರು. ಸ್ವತಃ ತಾವೇ ಮನೆ ನಿರ್ಮಿಸಿಕೊಳ್ಳುತ್ತಿದ್ದು, ಅರ್ಧ ಮನೆ ಸಹ ಕಟ್ಟಲಾಗಿತ್ತು. ನಿನ್ನೆ ಮನೆ ಗೋಡೆ ಪ್ಲಾಸ್ಟರಿಂಗ್ ಮಾಡುತ್ತಿದ್ದ ವೇಳೆ ದಂಪತಿ ಮೇಲೆ ಏಕಾಏಕಿ ಮೆಟ್ಟಿಲುಗಳ ಪಿಲ್ಲರ್ ಕುಸಿದು ಬಿದ್ದಿದೆ.

Raichur News: ರಾಯಚೂರಿನಲ್ಲಿ ಬೈಕ್‌ಗೆ ಟ್ರಕ್‌ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ರಾಯಚೂರಿನಲ್ಲಿ ಬೈಕ್‌ಗೆ ಟ್ರಕ್‌ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಮೃತರೆಲ್ಲಾ ನಗರದ ಸುಖಾಣಿ ಕಾಲೋನಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ (Raichur City Traffic Police) ಎಫ್‌ಐಆರ್‌ ದಾಖಲಾಗಿದೆ.

Hatti Gold Mine: ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳ ಪತ್ತೆ

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳ ಪತ್ತೆ

ಭದ್ರತಾ ದೃಷ್ಟಿಯಿಂದ ಜಿಲ್ಲೆಯ ಸೂಕ್ಷ್ಮ ಪ್ರದೇಶವಾದ ಹಟ್ಟಿ ಚಿನ್ನದ ಗಣಿ ದ್ವಾರದ ಬಳಿ ಮದ್ದುಗಳು ಪತ್ತೆಯಾಗಿದ್ದರಿಂದ ಪೊಲೀಸರು ಪರಿಶೀಲನೆ ಚುರುಕುಗೊಳಿಸಿದ್ದಾರೆ. ಹಟ್ಟಿ ಚಿನ್ನದ ಗಣಿಯಲ್ಲಿ ಚಿನ್ನದ ಗಣಿಗಾರಿಕೆಗೆ ಬಳಸುವ ಮದ್ದುಗಳಾ, ಖಾಸಗಿ ಕಲ್ಲು ಕ್ವಾರೆಗಳಲ್ಲಿ ಕಲ್ಲು ಗಣಿಗಾರಿಕೆಗೆ ಬಳಸುವ ಮದ್ದುಗಳಾ, ಯಾರು ಎಲ್ಲಿಗೆ ಸಾಗಿಸುತ್ತಿದ್ದರು ಅನ್ನೋ ಬಗ್ಗೆ ತನಿಖೆ ಆರಂಭಗೊಂಡಿದೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದೆಲ್ಲೆಡೆ ಧಾರ್ಮಿಕ, ಸಾಂಸ್ಕೃತಿಕ ಪುನರುತ್ಥಾನ: ಪ್ರಲ್ಹಾದ್‌ ಜೋಶಿ

ಪ್ರಧಾನಿ ಮೋದಿ ನೇತೃತ್ವದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಪುನರುತ್ಥಾನ: ಜೋಶಿ

Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದೆಲ್ಲೆಡೆ ಇಂದು ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ ಪುನರುತ್ಥಾನದ ಕೈಂಕರ್ಯ ನಡೆದಿದೆ. ಮಕ್ಕಳಲ್ಲಿ ಸಾಂಸ್ಕೃತಿಕ, ಆಧ್ಯಾತ್ಮಿಕ ಪರಿಕಲ್ಪನೆ ಮೂಡಿಸಲಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Prasannananda Puri: ಮಹರ್ಷಿ ವಾಲ್ಮಿಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ, ಅಸ್ಪತ್ರೆಗೆ ದಾಖಲು

ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ, ಅಸ್ಪತ್ರೆಗೆ ದಾಖಲು

ವೈದ್ಯರ ಸಲಹೆಯಂತೆ, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳನ್ನು ರಾಯಚೂರಿನಿಂದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಸದ್ಯ ಶ್ರೀಗಳು ಹೈದರಾಬಾದ್‌ನಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಠದ ಮೂಲಗಳು ಮತ್ತು ಆಸ್ಪತ್ರೆ ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರದ 6ನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ತುಂಗಾಭದ್ರ ಅಣೆಕಟ್ಟಿನ ಎಲ್ಲ ಗೇಟ್ ಬದಲಿಸುತ್ತೇವೆ ಎಂದ ಡಿಕೆಶಿ

DK Shivakumar: “ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಸರ್ಕಾರ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆಬ್ರವರಿ 14ರಂದು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆʼʼ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಕರ್ನಾಟಕದಲ್ಲಿ ಕನಕ ಗುರುಪೀಠ ಜಾತ್ಯತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕನಕ ಗುರುಪೀಠ ಜಾತ್ಯತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

ಬ್ರಹ್ಮಲೀನರಾದ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಸಮಾನ ಅವಕಾಶವಿರುವ ಸಮಸಮಾಜವನ್ನು ನಿರ್ಮಿಸುವುದು ಅವಶ್ಯಕ. ಶಿಕ್ಷಣವಿಲ್ಲದೇ ಪ್ರಗತಿ ಸಾಧ್ಯವಿಲ್ಲ. ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಭೀಕರ ಸರಣಿ ಅಪಘಾತ; ಐವರು ಸ್ಥಳದಲ್ಲೇ ಸಾವು

ರಾಯಚೂರಿನಲ್ಲಿ ಭೀಕರ ಸರಣಿ ಅಪಘಾತ; ಐವರು ಸ್ಥಳದಲ್ಲೇ ಸಾವು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಮಂಗಳವಾರ ಲಾರಿ ಹಾಗೂ ಎರಡು ಗೂಡ್ಸ್ ವಾಹನಾಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಇಂದು ಸಂಜೆ ಕುರಿ ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನ ಹಾಗೂ ಟಾಟಾ ಏಸ್ ಗೆ ಲಾರಿ ಡಿಕ್ಕಿ ಹೊಡೆದಿದೆ.

ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್‌ ಶಾಸಕಿ ಮನೆಗೆ ನುಗ್ಗಿ ಜೀವ ಬೆದರಿಕೆ!

ಮರಳು ದಂಧೆ ವಿರುದ್ಧ ಸಮರ ಸಾರಿದ ಶಾಸಕಿಗೆ ಜೀವ ಬೆದರಿಕೆ!

ಜೀವ ಬೆದರಿಕೆ ಸಂಬಂಧ ರಾಯಚೂರು ಎಸ್ಪಿ ಅರುಣಾಂಶು ಗಿರಿ ಅವರ ಕಚೇರಿಗೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್‌ ಅವರು ತೆರಳಿ ದೂರು ನೀಡಿದ್ದಾರೆ. ಅಕ್ರಮ ಮರಳುಗಾರಿಕೆ ತಡೆಯಲು ಹೋದರೆ ಯಾರೂ ಇಲ್ಲದ ಸಮಯ ನೋಡಿ ಮನೆ ಬಳಿ ಬಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ತಮಗೆ ರಕ್ಷಣೆ ನೀಡಬೇಕು ಎಂದು ಶಾಸಕಿ ಕೋರಿದ್ದಾರೆ.

Siddaramananda Swamiji: ಕಾಗಿನೆಲೆ ಕನಕಗುರು ಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಇನ್ನಿಲ್ಲ

ಕಾಗಿನೆಲೆ ಕನಕಗುರು ಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಇನ್ನಿಲ್ಲ

ಸ್ವಾಮೀಜಿ (Siddaramananda Swamiji) ಇದೇ ಜ.12, 13, 14 ರಂದು ಅದ್ದೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿದ್ದರು. ಹಾಲುಮತ ಸಾಹಿತ್ಯ ಸಮ್ಮೇಳನ ಹಾಗೂ ಹಾಲುಮತ (Halumatha) ಪೂಜಾರಿಗಳ ಶಿಬಿರ ಅದ್ದೂರಿಯಾಗಿ ನಡೆದಿತ್ತು. ಕಳೆದ ಒಂದು ವಾರದಿಂದ ಸರಿಯಾಗಿ ಊಟ, ನಿದ್ದೆ ಮಾಡದೇ ಕಾರ್ಯಕ್ರಮಲ್ಲಿ ಭಾಗಿಯಾಗಿದ್ದರಿಂದ ಬುಧವಾರ ರಾತ್ರಿ ಲೋ ಬಿಪಿಯಿಂದ ಸ್ವಾಮೀಜಿ ಬಳಲಿದ್ದರು.

Karnataka Weather Forecast: ನಾಳೆ ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ, ಉತ್ತರ ಒಳನಾಡಿಗೆ ಶೀತ ಗಾಳಿ ಎಚ್ಚರಿಕೆ!

ನಾಳೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಧಾರವಾಡ, ಗದಗ, ಬೀದರ್‌, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಶೀತ ಅಲೆಯ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

CM Siddaramaiah: ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಬಡವರ ಬದುಕು ಸರ್ವನಾಶ: ಸಿಎಂ ಸಿದ್ದರಾಮಯ್ಯ

ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಬಡವರ ಬದುಕು ಸರ್ವನಾಶ: ಸಿದ್ದರಾಮಯ್ಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜಾರಿಗೊಳಿಸಿದ್ದ ಜನಪರವಾಗಿದ್ದ ಮ ನರೇಗಾ ಕಾನೂನನ್ನು, 20 ವರ್ಷಗಳ ನಂತರ ಪ್ರಧಾನಿ ಮೋದಿ ಅವರು ಮಹಾತ್ಮಾ ಗಾಂಧಿಯವರ ಹೆಸರನ್ನೂ ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಹೆಸರಿಟ್ಟಿದ್ದಾರೆ. ಕೇಂದ್ರದ ಈ ಕ್ರಮವನ್ನು ರಾಜ್ಯದ ಜನರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Raichur News: ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ಗದ್ದೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಕೂಲಿ ಕೆಲಸ ಮುಗಿಸಿ ಕೈಕಾಲು ತೊಳೆದುಕೊಂಡು ಮನೆಗೆ ಹೋಗಲು ಕಾಲುವೆ ಬಳಿ ಬಂದಿದ್ದರು. ಲಿಂಗಸುಗೂರು ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮಹಿಳೆಯರ ಶವ ಹೊರತೆಗೆದಿದ್ದಾರೆ. ಸದ್ಯ ಇಬ್ಬರು ಮಹಿಳೆಯರ ಮೃತದೇಹವನ್ನು ಲಿಂಗಸುಗೂರು ತಾಲೂಕಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

Karnataka Weather: ಆರೆಂಜ್‌ ಅಲರ್ಟ್‌; ಇಂದು ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಸಾಧ್ಯತೆ!

ಇಂದು ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಸಾಧ್ಯತೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಪ್ರಮುಖವಾಗಿ ಶುಭ್ರ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ತೀವ್ರ ಶೀತ ಗಾಳಿ; ನಾಳೆ ಬೀದರ್‌, ಕಲಬುರಗಿ ಸೇರಿ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ತೀವ್ರ ಶೀತ ಗಾಳಿ ಹಿನ್ನೆಲೆ ನಾಳೆ ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

Cold Wave Alert For Karnataka: ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಭಾನುವಾರ ತೀವ್ರ ಶೀತಗಾಳಿ ಸಾಧ್ಯತೆ ಮತ್ತು ಗದಗ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

MGNREGA Recruitment 2025: ಮನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಅವಕಾಶ

ರಾಯಚೂರು ಜಿಲ್ಲಾ ಪಂಚಾಯತ್‌ನಲ್ಲಿದೆ ಉದ್ಯೋಗಾವಕಾಶ

ರಾಯಚೂರು ಜಿಲ್ಲಾ ಪಂಚಾಯತ್‌ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ, ವಯೋಮಿತಿ ಇತರೆ ಅರ್ಹತೆಗಳನ್ನು ತಿಳಿದು ಅರ್ಜಿ ಸಲ್ಲಿಸಿ.

Karnataka Weather: ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು; ಕರ್ನಾಟಕದಲ್ಲಿ ನಾಳೆ ಹೇಗಿರಲಿದೆ ಹವಾಮಾನ?

ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ 7 ಡಿಗ್ರಿ ಸೆ. ದಾಖಲು

ಮುಂದಿನ 2 ದಿನಗಳವರೆಗೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗಲಿದೆ.

ಪ್ರೇಯಸಿಯನ್ನು ಗರ್ಭಿಣಿಯನ್ನಾಗಿಸಿ ಮತ್ತೊಂದು ಮದುವೆಯಾಗಲು ಮುಂದಾದ ಯುವಕನ ಕೃತ್ಯ ಇನ್‌ಸ್ಟಾಗ್ರಾಂನಿಂದ ಬಯಲು; ಮಂಟಪದಲ್ಲಿ ಹೈಡ್ರಾಮ

ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳನ್ನು ವರಿಸಲು ಮುಂದಾದವನಿಗೆ ತಕ್ಕ ಶಾಸ್ತಿ

Raichur News: ಪ್ರೇಯಸಿಯನ್ನು ಗರ್ಭಿಣಿಯನ್ನಾಗಿ ಮಾಡಿ ಬೇರೊಂದು ಯುವತಿಯೊಂದಿಗೆ ಮದುವೆಯಾಗಲು ಮುಂದಾದ ರಾಯಚೂರು ಮೂಲದ ರಿಷಬ್‌ ಎಂಬ ಯುವಕನ ಕೃತ್ಯ ಬಯಲಾಗಿದೆ. ಮಂಟಪಕ್ಕೆ ಆಗಮಿಸಿದ ಯುವತಿ ಮದುವೆಯನ್ನು ನಿಲ್ಲಿಸಿದ್ದಾಳೆ. ಸದ್ಯ ರಿಷಬ್‌ ವಿರುದ್ದ ತನಿಖೆ ನಡೆಯುತ್ತಿದೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ ಮೂರು ದಿನ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ !

ರಾಜ್ಯದಲ್ಲಿ ಮುಂದಿನ 3 ದಿನ ಶೀತ ಗಾಳಿ ಎಚ್ಚರಿಕೆ; ಮಾರ್ಗಸೂಚಿ ಬಿಡುಗಡೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಬುಧವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9.2 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Karnataka Weather: ಬೀದರ್‌ನಲ್ಲಿ ಮುಂದಿನ 4 ದಿನ ಶೀತ ಗಾಳಿ ಎಚ್ಚರಿಕೆ, ಉಳಿದೆಡೆ ಒಣ ಹವೆ

ಬೀದರ್‌ನಲ್ಲಿ ಮುಂದಿನ 4 ದಿನ ಶೀತ ಗಾಳಿ ಎಚ್ಚರಿಕೆ, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಸ್ಪಷ್ಟ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು /ಮಂಜು ಕವಿಯಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

JDS Protest: ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ರೆ ತುಂಗಭದ್ರಾ ಡ್ಯಾಂಗೆ ಮುತ್ತಿಗೆ: ನಿಖಿಲ್‌ ಕುಮಾರಸ್ವಾಮಿ ಎಚ್ಚರಿಕೆ

ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ರೆ ಟಿಬಿ ಡ್ಯಾಂಗೆ ಮುತ್ತಿಗೆ: ನಿಖಿಲ್‌

ರೈತರಿಗೆ ಬೇಕಿರುವುದು ನೀರು, ಗ್ಯಾರಂಟಿಗಳಲ್ಲ. ನೀರು ಕೊಟ್ಟರೆ ಅವರೇ ನಿಮಗೆ ಗ್ಯಾರಂಟಿಗೆ ಹಣ ಕೊಡ್ತಾರೆ. ಈ ಸರ್ಕಾರಕ್ಕೆ ಮಾನ, ಮರ್ಯಾದೆ ಏನು ಇಲ್ಲ. ಇದು ದಪ್ಪ ಚರ್ಮದ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Karnataka Weather: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಕರಾವಳಿ, ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರಬಹುದು.

Karnataka Weather: ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು; ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಉತ್ತರ ಒಳನಾಡಿನಲ್ಲಿ ತೀವ್ರ ಶೀತಗಾಳಿ; ಬೀದರ್‌ನಲ್ಲಿ ರಾಜ್ಯದಲ್ಲೇ ಅತಿ ಕನಿಷ್ಠ ಉಷ್ಣಾಂಶ ದಾಖಲು

ತೀವ್ರ ಶೀತಗಾಳಿ; ಬೀದರ್‌ನಲ್ಲಿ ಅತಿ ಕನಿಷ್ಠ ಉಷ್ಣಾಂಶ ದಾಖಲು

ಕರ್ನಾಟಕ ಹವಾಮಾನ ವರದಿ: ಕಳೆದ ಎರಡು ವಾರದಿಂದ ಕರ್ನಾಟಕದಲ್ಲಿ ಹಿಂಗಾರು ಮಳೆ ಆರ್ಭಟ ಕಡಿಮೆಯಾಗಿದೆ. ಈ ನಡುವೆ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ. ಇನ್ನು ಮುಂದಿನ ಆರು ದಿನ ರಾಜ್ಯದ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿದೆ.

Loading...