ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಯಚೂರು

Padayatra reached 4th day: ರಾಯಚೂರು ಗಡಿ ದಾಟಿ ಕೊಪ್ಪಳಕ್ಕೆ ಆಗಮಿಸಿದ ಬಿಜೆಪಿ ಪಾದಯಾತ್ರೆ: ಜನ ಸಾಗರದ ನಡುವೆ ಕಾಲ್ನಡಿಗೆ ಬಿರುಸು

ಜನ ಸಾಗರದ ನಡುವೆ ಕಾಲ್ನಡಿಗೆ ಬಿರುಸು

ಶ್ರೀ ಕೃಷ್ಣಾಜನ್ಮಾಷ್ಟಮಿ ಅಂಗವಾಗಿ ಗೋ ಪೂಜೆ, ಶ್ರೀ ಕೃಷ್ಣನಿಗೆ ಮಹಾ ಮಂಗಳಾರತಿ ನೆರವೇರಿಸ ಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅಂಗವಿಕಲರ, ವಯೋ ವೃದ್ಧರ ವೇತನವನ್ನು ಆರು ತಿಂಗಳಿನಿಂದ ಕೊಟ್ಟಿಲ್ಲ. ರಾಜ್ಯದ ಜನತೆ ಸರಕಾರದ ವಿರುದ್ಧ ಶಾಪ ಹಾಕುತ್ತಿದ್ದಾರೆ. ಜನರ ಸಂಕಷ್ಟ ಪರಿಹಾರಕ್ಕಾಗಿ ಸರಕಾರದ ಮೇಲೆ ಒತ್ತಡ ಹಾಕುವುದಕ್ಕಾಗಿ ಪಾದಯಾತ್ರೆ ನಡೆಸುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Padayatra completes 3rd Day: ನೇಗಿಲು ಹೊತ್ತ ರೈತ ನಾಯಕ, ಗದ್ದೆಯಲ್ಲಿ ನಾಟಿ ಮಾಡಿದ ಕಾಯಕ

ನೇಗಿಲು ಹೊತ್ತ ರೈತ ನಾಯಕ, ಗದ್ದೆಯಲ್ಲಿ ನಾಟಿ ಮಾಡಿದ ಕಾಯಕ

ಪಾದಯಾತ್ರೆಯುದ್ದಕ್ಕೂ ಸರಕಾರದ ವಿರುದ್ಧ ಧಿಕ್ಕಾರ ಮೊಳಗಿದವು. ಸರಕಾರ ರೈತ, ದಲಿತ, ಯುವಕರ ವಿರೋಧಿ ಎಂಬ ಆಕ್ರೋಶ ವ್ಯಕ್ತವಾಯಿತು. ಮಾರ್ಗಮಧ್ಯೆ ವಿಜಯೇಂದ್ರ ಅವರಿಗಾಗಿ ಕಾದಿದ್ದ ರಂಗಾಪುರದ ಪ್ರಾಥಮಿಕ ಶಾಲಾ ಮಕ್ಕಳತ್ತ ತೆರಳಿದ ವಿಜಯೇಂದ್ರ ಮಕ್ಕಳ ಕೈ ಕುಲುಕಿದರು. ಭತ್ತ ನಾಟಿ: ವಿಜಯೇಂದ್ರ ಅವರು ಪಾದಯಾತ್ರೆಯ ನಡುವೆ ತಾಲೂಕಿನ ಪಾಂಡುರಂಗ ಕ್ಯಾಂಪ್‌ನ ರೈತ ಪಿ. ಸಾಯಿಬಾಬು ಅವರ ಜಮೀನಿಗೆ ಭೇಟಿ ನೀಡಿದರು.

ಬರದ ನಡುವೆ ಬಿಜೆಪಿ ಯಾತ್ರೆಗೆ ಜನಸಾಗರ

ಬರದ ನಡುವೆ ಬಿಜೆಪಿ ಯಾತ್ರೆಗೆ ಜನಸಾಗರ

ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಆರಂಭಿಸಿರುವ ಪಾದಯಾತ್ರೆಗೆ ಸ್ಥಳೀಯ ಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಿಜೆಪಿ ನಾಯಕರೊಂದಿಗೆ ಎರಡನೇ ದಿನ ಸಾವಿರಾರು ಮಂದಿ ಹೆಜ್ಜೆ ಹಾಕಿದರು. ರಾಯಚೂರಿನ ಲಿಂಗಸೂಗೂರಿನಿಂದ ಬಳ್ಳಾರಿಯವರೆಗೆ ನಡೆಯುತ್ತಿರುವ ಪಾದಯಾತ್ರೆಯ 2ನೇ ದಿನವಾದ ಬುಧವಾರ 22 ಕಿ.ಮೀ. ದೂರ ನಡೆಯಲಾಯಿತು.

BJP Padayatra: ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಸಿಎಂ ಡಿಕೆಶಿಗೆ ಬಿ.ವೈ. ವಿಜಯೇಂದ್ರ ಸವಾಲು

ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಬಿ.ವೈ. ವಿಜಯೇಂದ್ರ ಸವಾಲು

BY Vijayendra: ಡಿಕೆಶಿ ಸರ್ಕಾರದ ಇನ್ನೂ ಎರಡು ಮೂರು ವಿಕೆಟ್‍ಗಳು ಬೀಳಲು ತಯಾರು ಆದಂತೆ ಇದೆ. ಈ ಎಲ್ಲರಿಗೂ ಭ್ರಷ್ಟಾಚಾರ ಉರುಳಾಗಲಿದೆ. ಲಜ್ಜೆಗೆಟ್ಟ ಕಾಂಗ್ರೆಸ್‍ನವರಿಗೆ ಮಾನ, ಮರ್ಯಾದೆ ಏನೂ ಇಲ್ಲ. ಆನೆ ನಡೆದಿದ್ದೇ ದಾರಿ ಎಂದುಕೊಂಡಿದ್ದವರ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಾರಂಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ದೂರಿದ್ದಾರೆ.

BJP Padayatra: ಬರಪೀಡಿತ ಪ್ರದೇಶ ಘೋಷಿಸಲು ಲಂಚ ಬಯಸುವ ಸರ್ಕಾರ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬರಪೀಡಿತ ಪ್ರದೇಶ ಘೋಷಿಸಲು ಲಂಚ ಬಯಸುವ ಸರ್ಕಾರ: ವಿಜಯೇಂದ್ರ

BY Vijayendra: ಮಸ್ಕಿಯಲ್ಲಿ ಭೀಕರ ಬರ ಇದೆ. ಆದರೂ ಇದನ್ನು ಬರಪೀಡಿತ ಎಂದು ಘೋಷಿಸಿಲ್ಲ. ಈ ಕಾಂಗ್ರೆಸ್ ಸರ್ಕಾರದಲ್ಲಿ ಲಂಚ ಕೊಡದಿದ್ದರೆ ಏನೂ ಆಗುವುದಿಲ್ಲ. ಮಸ್ಕಿಯ ರೈತರು 10 ಲಕ್ಷವೋ 50 ಲಕ್ಷವೋ ಲಂಚ ಕೊಟ್ಟರೆ ಮುಖ್ಯಮಂತ್ರಿಗಳು ಈ ಪ್ರದೇಶವನ್ನು ಬರಪೀಡಿತ ಪ್ರದೇಶವಾಗಿ ಘೋಷಿಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ರಾಯಚೂರಿನ ಲಿಂಗಸೂಗೂರಿನಲ್ಲಿ ಪಾದಯಾತ್ರೆಗೆ ಚಾಲನೆ, ಬಿಎಸ್‌ವೈ ಹಾಜರ್ : ಬಳ್ಳಾರಿ ಚಲೋಗೆ ಬಿಜೆಪಿ ಕಹಳೆ

ಬಳ್ಳಾರಿ ಚಲೋಗೆ ಬಿಜೆಪಿ ಕಹಳೆ

ಸುಮಾರು 190ರಿಂದ 200 ಕಿಲೋಮೀಟರ್ ವ್ಯಾಪ್ತಿಯಲ್ಲಿ 9 ದಿನ ಪಾದಯಾತ್ರೆ ನಡೆಯ ಲಿದ್ದು, ಸೆ.10ಕ್ಕೆ ಬಳ್ಳಾರಿಯಲ್ಲಿ ಕೊನೆಗೊಳ್ಳಲಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಸಿ.ಟಿ.ರವಿ ಸೇರಿದಂತೆ ಬಹುತೇಕ ಬಿಜೆಪಿ ಮುಖಂಡರು ಪಾದಯಾತ್ರೆ ಯಲ್ಲಿ ಭಾಗವಹಿಸಿದ್ದಾರೆ.

BJP Padayatra: ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ

ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ ಎಂದು ಡಿಕೆಶಿ ಕೇಳುತ್ತಾರೆ; ನಿಮ್ಮ ಸರ್ಕಾರದ ವೈಫಲ್ಯಗಳೇ ನಮ್ಮ ಪಾದಯಾತ್ರೆಗೆ ಕಾರಣ. ರಾಜ್ಯದ ಜನರ ಹಕ್ಕು, ನ್ಯಾಯ ಮತ್ತು ಭವಿಷ್ಯಕ್ಕಾಗಿ ನಾವು ಬೀದಿಗಿಳಿದಿದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

BJP Padayatra: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಣಕಹಳೆ; ಬಳ್ಳಾರಿ ಚಲೋ ಪಾದಯಾತ್ರೆಗೆ ಲಿಂಗಸುಗೂರಿನಲ್ಲಿ ಚಾಲನೆ

ಬಳ್ಳಾರಿ ಚಲೋ; ರಾಯಚೂರಿನ ಲಿಂಗಸುಗೂರಿನಲ್ಲಿ ಬಿಜೆಪಿ ಪಾದಯಾತ್ರೆಗೆ ಚಾಲನೆ

Ballari Chalo padayatra: ರಾಜ್ಯ ಸರ್ಕಾರದ ವಿರುದ್ಧ ಲಿಂಗಸುಗೂರಿನಲ್ಲಿ ಬಳ್ಳಾರಿವರೆಗೆ ಬಿಜೆಪಿ ಪಾದಯಾತ್ರೆ ನಡೆಯಲಿದೆ. ದುಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ವಿರುದ್ಧ ಬಳ್ಳಾರಿ ಚಲೋ ಪಾದಯಾತ್ರೆ ಆರಂಭವಾಗಿದೆ. ತುಘಲಕ್‌ ಸರ್ಕಾರ ತೊಲಗುವವರೆಗೂ ಹೋರಾಟ ನಿರಂತರವಾಗಿರಲಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ : ರಾಯರ ರಥೋತ್ಸವ ಅದ್ದೂರಿಯಾಗಿ ಸಂಪನ್ನ

ರಾಯರ ರಥೋತ್ಸವ ಅದ್ದೂರಿಯಾಗಿ ಸಂಪನ್ನ

ರಥೋತ್ಸವದ ವೇಳೆ ವಿವಿಧ ಕಲಾ ತಂಡಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿತು. ರಥೋತ್ಸವಕ್ಕೂ ಮುನ್ನ ಭಕ್ತರಿಗೆ ಆಶೀರ್ವಚನ ನೀಡಿದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು, ರಾಯರ ಆರಾಧನೆ ಉತ್ಸವದಲ್ಲಿ ಪಾಲ್ಗೊಳ್ಳುವವರ ಕಷ್ಟಗಳನ್ನು ರಾಯರು ಕಳೆಯುತ್ತಾರೆ. ಭಾಷೆ ಪ್ರಾಂತ್ಯದ ಎಲ್ಲಾ ಮೀರಿದ ಜಾತ್ಯತೀತದ ಏಕೈಕ ಗುರುಗಳು ರಾಯರು.

ಲಿಂಗಸುಗೂರಿನಿಂದ BJP 'ಬಳ್ಳಾರಿ ಚಲೋ' ಶುರು; ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆಗೆ ಚಾಲನೆ

ಇಂದು ಲಿಂಗಸುಗೂರಿನಿಂದ BJP 'ಬಳ್ಳಾರಿ ಚಲೋ' ಶುರು

ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ಬಳ್ಳಾರಿ ಚಲೋʼ ಪಾದಯಾತ್ರೆಗೆ ಇಂದು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಚಾಲನೆ ಸಿಗಲಿದೆ. ಇಂದು ಲಿಂಗಸುಗೂರಿನಿಂದ ಸಂತೆಕೆಲ್ಲೂರುವರೆಗೆ 12 ಕಿ.ಮೀ. ಪಾದಯಾತ್ರೆ ನಡೆಯಲಿದೆ.

ಮಂತ್ರಾಲಯದಲ್ಲಿ 335ನೇ ರಾಯರ ಆರಾಧನೆ ಸಂಭ್ರಮ

ಮಂತ್ರಾಲಯದಲ್ಲಿ 335ನೇ ರಾಯರ ಆರಾಧನೆ ಸಂಭ್ರಮ

ತಿಂಗಳ ಕೊನೆಯ ಶನಿವಾರ ಪೂರ್ವಾ ರಾಧನೆಯ ಸಡಗರವಿದ್ದು ಶನಿವಾರ ಬೆಳಗಿನ ಜಾವದಿಂದಲೇ ನಾನಾ ಪೂಜಾ ಕೈಂಕರ್ಯಗಳು ಆರಂಭಗೊಂಡವು. ವಿಶೇಷವಾಗಿ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಮೂಲ ರಾಮದೇವರಿಗೆ ಪೂಜೆ, ಉತ್ಸವ ರಾಯರ ಪಾದಪೂಜೆ, ಪಂಚಾಮೃತ, ಅಲಂಕಾರ ಸಂತರ್ಪಣ, ಹಸ್ತೋದಕ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ನಡೆಯಿತು.

ಮಾನ್ವಿ: 360 ಪುರಾತನ ತಾಮದ ನಾಣ್ಯಗಳು ಪತ್ತೆ

ಮಾನ್ವಿ: 360 ಪುರಾತನ ತಾಮದ ನಾಣ್ಯಗಳು ಪತ್ತೆ

ನಾಣ್ಯಗಳನ್ನು ತಾಮ್ರದಿಂದ ತಯಾರಿಸಲಾಗಿದ್ದು, ಅವುಗಳ ಮೇಲೆ ಉರ್ದು ಭಾಷೆಯ ಲಿಪಿಯ ಬರಹ ಗಳಿವೆ. ಹಿಂದೆ ಈ ಭಾಗದಲ್ಲಿ ಆಡಳಿತ ನಡೆಸಿದವರ ಕಾಲಮಾನದಲ್ಲಿ ಚಲಾವಣೆಯಲ್ಲಿದ್ದ ನಾಣ್ಯ ಗಳಾಗಿರಬಹುದು ಎಂದು ಶಂಕಿಸಲಾಗಿದೆ. ಅವುಗಳನ್ನು ಹೆಚ್ಚಿನ ಅಧ್ಯಯನಕ್ಕಾಗಿ ಪುರಾತತ್ವ ಇಲಾಖೆಗೆ ಕಳುಹಿಸಿ ಕೋಡಲಾಗುವುದು

Raichur News: ಭಾರತದಲ್ಲಿ ಗಲಭೆಗೆ ಸಂಚು; ವಿದೇಶಿಗನ ಜತೆ ಸಂಪರ್ಕದಲ್ಲಿದ್ದ ರಾಯಚೂರಿನ ಯುವಕ ಅರೆಸ್ಟ್‌

ಭಾರತದಲ್ಲಿ ಗಲಭೆಗೆ ಸಂಚು; ರಾಯಚೂರಿನ ಟೀ ಸ್ಟಾಲ್‌ ಮಾಲೀಕ ಅರೆಸ್ಟ್‌

ಭಾರತದಲ್ಲಿ ಗಲಭೆ ಎಬ್ಬಿಸುವ ಸಂಚು ರೂಪಿಸಿದ ಆರೋಪದಲ್ಲಿ ರಾಯಚೂರಿನ ಟೀ ಸ್ಟಾಲ್‌ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ವಿದೇಶಿ ವ್ಯಕ್ತಿಯ ಪ್ರಚೋದನೆಯ ಮೇರೆಗೆ ರಾಯಚೂರಿನ ಯುವಕ ದುಷ್ಕೃತ್ಯಕ್ಕೆ ಸಿದ್ಧತೆ ನಡೆಸಿದ್ದನಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Raghavendra Swamy Mutt: ಮಂತ್ರಾಲಯ ಹುಂಡಿಯಲ್ಲಿ 10 ಲಕ್ಷ ರುಪಾಯಿ ಮೌಲ್ಯದ ನಾಣ್ಯ!

ಮಂತ್ರಾಲಯ ಹುಂಡಿಯಲ್ಲಿ 10 ಲಕ್ಷ ರುಪಾಯಿ ಮೌಲ್ಯದ ನಾಣ್ಯ!

Mantralayam Mutt: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಜೂನ್-ಜುಲೈಯ 22 ದಿನಗಳ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಒಟ್ಟು 3 ಕೋಟಿ 71 ಲಕ್ಷ ರುಪಾಯಿ ದಾಖಲೆಯ ನಗದು ಸಂಗ್ರಹವಾಗಿದೆ. ನಗದಿನ ಪೈಕಿ ಸುಮಾರು 10 ಲಕ್ಷ ರುಪಾಯಿ ಮೌಲ್ಯದ ನಾಣ್ಯ ಕಂಡು ಬಂದಿದೆ.

ಸ್ಯಾಟ್ಸ್ ಸರ್ವರ್‌ ಸಮಸ್ಯೆ: ಪಾಲಕರ ಪರದಾಟ

ಸ್ಯಾಟ್ಸ್ ಸರ್ವರ್‌ ಸಮಸ್ಯೆ: ಪಾಲಕರ ಪರದಾಟ

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡು ತಿಂಗಳು ಕಳೆದಿದ್ದು, ಸಕಾಲದಲ್ಲಿ ಪ್ರವೇಶಾತಿ ಸಿಗದೆ ವಿದ್ಯಾರ್ಥಿಗಳ ಗೋಳು ಕೇಳುವವರಿಲ್ಲದಂತಾಗಿದೆ. ಈಗಾಗಲೇ ಶಾಲಾ, ಕಾಲೇಜು ಪ್ರವೇಶಾತಿ ಭರದಿಂದ ಸಾಗಬೇಕಿತ್ತು. ಆದರೆ ರಾಯಚೂರು ಜಿಲ್ಲೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಶಿಕ್ಷಣ ಇಲಾಖೆಯ ಶಾಲಾ ದಾಖಲಾತಿಗೆ ಬಳಸುವ ಸ್ಯಾಟ್ಸ್ ವೆಬ್ಸೈಟ್ನಲ್ಲಿ ಉಂಟಾಗಿರುವ ಸರ್ವರ್‌ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Raichur News: ದೇವದುರ್ಗದಲ್ಲಿ ಕಟ್ಟಡದ ಮೇಲ್ಚಾವಣಿ ಕುಸಿದು ಇಬ್ಬರ ಸಾವು; ಕಿರುಚಿತ್ರದ ಪೋಸ್ಟರ್ ಅಂಟಿಸುವ ವೇಳೆ ದುರಂತ

ದೇವದುರ್ಗದಲ್ಲಿ ಕಟ್ಟಡದ ಮೇಲ್ಚಾವಣಿ ಕುಸಿದು ಇಬ್ಬರ ಸಾವು

ಯುವಕರು ತಾವೇ ನಿರ್ಮಿಸಿದ್ದ ಕಿರುಚಿತ್ರದ ಪೋಸ್ಟರ್ ಅಂಟಿಸಲು ಹೋಗಿದ್ದ ವೇಳೆ ಅವಘಡ ನಡೆದಿದೆ. ಕಟ್ಟಡದ ಮೇಲ್ಚಾವಣಿಯ ಸಜ್ಜಾ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಾಳುಗಳನ್ನು ದೇವದುರ್ಗ ತಾಲೂಕಾಸ್ಪತ್ರೆ ಹಾಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Raichur News: ಅಸಭ್ಯ ವರ್ತನೆ ತೋರಿದವನ ಕಣ್ಣಿಗೆ ಖಾರದ ಪುಡಿ ಎರಚಿ, ಧರ್ಮದೇಟು ಕೊಟ್ಟ ಮಹಿಳೆ! Video

ಅಸಭ್ಯ ವರ್ತನೆ ತೋರಿದವನಿಗೆ ಧರ್ಮದೇಟು ಕೊಟ್ಟ ಮಹಿಳೆ!

ರಾಯಚೂರಿನ ಸದರಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಸ್‌ ನಿಲ್ದಾಣದಲ್ಲಿ ಅನುಚಿತ ವರ್ತನೆ ತೋರಿದ್ದಾನೆ ಎಂದು ವ್ಯಕ್ತಿಯೊಬ್ಬನ ಕಣ್ಣಿಗೆ ಮಹಿಳೆ ಖಾರದ ಪುಡಿ ಎರಚಿ, ಧರ್ಮದೇಟು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Karnataka Weather: ಆರೆಂಜ್‌ ಅಲರ್ಟ್; ನಾಳೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ!

ನಾಳೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನ/ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಲಿಂಗಸುಗೂರಿನಲ್ಲಿ ಹೀನ ಕೃತ್ಯ; ತಂದೆ, ಆತನ ಸ್ನೇಹಿತನಿಂದಲೇ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ!

ತಂದೆ, ಆತನ ಸ್ನೇಹಿತನಿಂದಲೇ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ!

Raichur News: ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಹೀನ ಕೃತ್ಯ ನಡೆದಿದೆ. ಮಗಳ ಮೇಲೆ ತಂದೆ ಮತ್ತು ಆತನ ಸ್ನೇಹಿತನೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ; ಕಾರ್ಮಿಕರ ಶೆಡ್‌ಗಳು ಭಸ್ಮ: ತಪ್ಪಿದ ಭಾರಿ ಅನಾಹುತ

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ

Raichur News: ಮಂತ್ರಾಲಯದ ನರಹರಿ ತೀರ್ಥರ ವಸತಿ ಗೃಹದ ಸಮೀಪ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಮಂತ್ರಾಲಯದ ಶ್ರೀಮಠದ ಆವರಣದಲ್ಲಿರುವ ಕಾರ್ಮಿಕರ ಶೆಡ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾಗಿದೆ. ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಕಾರಣ ಈ ಅನಾಹುತ ನಡೆದಿದೆ.

ಡಿಸಿಎಂ ಡಿಕೆಶಿ, ನಟ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಅನಾಹುತ

ಡಿಕೆಶಿ, ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ

ರಾಯಚೂರು ಜಿಲ್ಲೆ ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಫೌಂಡೇಷನ್ ವತಿಯಿಂದ ಭಾನುವಾರ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ನಟ ಕಿಚ್ಚ ಸುದೀಪ್‌ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು. ಈ ವೇಳೆ ವೇದಿಕೆ ಬಳಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ.

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಮತ್ತೊಂದು ಬಲಿ; ಬಿಸಿಲ ತಾಪಕ್ಕೆ ಕಾರ್ಮಿಕ ಸಾವು

ಬಿಸಿಲ ತಾಪಕ್ಕೆ ಕಾರ್ಮಿಕ ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲಿನ ತಾಪ ತಾಳಲಾರದೆ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

PM Narendra Modi: ಮದುವೆಗೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ

ರಾಯಚೂರಿನ ಯುವಕನ ಮದುವೆಗೆ ಪ್ರಧಾನಿ ಮೋದಿಯಿಂದ ಶುಭಾಶಯ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ರಾಜೇಶ್ ನಾಯಕ್ ಅವರು ಪ್ರಧಾನಿ ಮೋದಿಗೆ ಮದುವೆ ಆಹ್ವಾನ ಪತ್ರಿಕೆ ಕಳುಹಿಸಿದ್ದರು. ಈಗ ಪ್ರಧಾನಿ ಕಚೇರಿಯಿಂದ ನವ ದಂಪತಿಗೆ ಶುಭಾಶಯ ಪತ್ರ ಬಂದಿದೆ. ಈ ಬಗ್ಗೆ ಯುವಕನ ಕುಟುಂಬ ಸಂತಸ ವ್ಯಕ್ತಪಡಿಸಿದೆ.

Road Accident: ನಾಲ್ವರು ಪ್ರಯಾಣಿಸುತ್ತಿದ್ದ ಬೈಕಿಗೆ ಟಿಪ್ಪರ್‌ ಡಿಕ್ಕಿ, ಇಬ್ಬರು ಸಾವು

ನಾಲ್ವರು ಪ್ರಯಾಣಿಸುತ್ತಿದ್ದ ಬೈಕಿಗೆ ಟಿಪ್ಪರ್‌ ಡಿಕ್ಕಿ, ಇಬ್ಬರು ಸಾವು

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಈ ದುರಂತ ನಡೆದಿದೆ. ಮೃತರನ್ನು ಬೈಕ್ ಓಡಿಸುತ್ತಿದ್ದ 37 ವರ್ಷದ ಅಂಜಿನಯ್ಯ ನಾಯಕ ಹಾಗೂ 10 ವರ್ಷದ ಬಾಲಕಿ ಅರ್ಚನಾ ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ 19 ಶ್ವೇತಾ ಅವರ ಕಾಲು ಕಟ್ ಆಗಿದೆ.

Loading...