ಜನ ಸಾಗರದ ನಡುವೆ ಕಾಲ್ನಡಿಗೆ ಬಿರುಸು
ಶ್ರೀ ಕೃಷ್ಣಾಜನ್ಮಾಷ್ಟಮಿ ಅಂಗವಾಗಿ ಗೋ ಪೂಜೆ, ಶ್ರೀ ಕೃಷ್ಣನಿಗೆ ಮಹಾ ಮಂಗಳಾರತಿ ನೆರವೇರಿಸ ಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅಂಗವಿಕಲರ, ವಯೋ ವೃದ್ಧರ ವೇತನವನ್ನು ಆರು ತಿಂಗಳಿನಿಂದ ಕೊಟ್ಟಿಲ್ಲ. ರಾಜ್ಯದ ಜನತೆ ಸರಕಾರದ ವಿರುದ್ಧ ಶಾಪ ಹಾಕುತ್ತಿದ್ದಾರೆ. ಜನರ ಸಂಕಷ್ಟ ಪರಿಹಾರಕ್ಕಾಗಿ ಸರಕಾರದ ಮೇಲೆ ಒತ್ತಡ ಹಾಕುವುದಕ್ಕಾಗಿ ಪಾದಯಾತ್ರೆ ನಡೆಸುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.