ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಮನಗರ

Pravasi Prapancha: ಧರೆಗಿಳಿದ ಸೀತಾರಾಮ; ರಾಮನಗರದ ಚನ್ನಮಾನಹಳ್ಳಿಯ ಶ್ರೀ ಸೀತಾರಾಮಚಂದ್ರ ದೇವಾಲಯ

ಗಮನ ಸೆಳೆವ ಚನ್ನಮಾನಹಳ್ಳಿಯ ಸೀತಾರಾಮಚಂದ್ರ ದೇವಾಲಯ

ರಾಮನಗರದ ಚನ್ನಮಾನಹಳ್ಳಿಯಲ್ಲಿ ನಿರ್ಮಿಸಲ್ಪಟ್ಟ ಈ ಶ್ರೀ ಸೀತಾರಾಮಚಂದ್ರ ದೇವಾಲಯವು ಕೇವಲ ಒಂದು ಕಟ್ಟಡವಾಗಿರದೆ, ಅತ್ಯಂತ ಸುಂದರ ಹಾಗೂ ವೈಭವಯುತ ಕಲಾಕೃತಿಯಾಗಿ ಮೂಡಿಬರಲು ದೇಶದ ಹೆಸರಾಂತ ತಜ್ಞರು, ಅನುಭವಿ ಸ್ಥಪತಿಗಳು, ಶಿಲ್ಪಿಗಳು ಮತ್ತು ಚಿತ್ರಕಲಾವಿದರು ಶ್ರಮಿಸಿದ್ದಾರೆ. ತಮಿಳುನಾಡು ಸರಕಾರದ ಪ್ರಸಿದ್ಧ ಸ್ಥಪತಿಗಳಾದ, ಪದ್ಮಶ್ರೀ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರೀ ಮುತ್ತಯ್ಯ ಸ್ಥಪತಿಗಳ ಉನ್ನತ ನೇತೃತ್ವದಲ್ಲಿ ಚನ್ನಮಾನಹಳ್ಳಿಯ ಈ ದೇವಾಲಯದ ಸಂಪೂರ್ಣ ವಿನ್ಯಾಸ ನೆರವೇರಿತು.

ಚನ್ನಪಟ್ಟಣ ತಹಶೀಲ್ದಾರ್ ಮೇಲೆ  ಹಲ್ಲೆ ಮಾಡಿ ವಿವಸ್ತ್ರಗೊಳಿಸಿ 10 ಲಕ್ಷ ರೂ.ಗೆ ಬ್ಲ್ಯಾಕ್‌‌ಮೇಲ್; ರೌಡಿಶೀಟರ್ ಬಂಧನ, ಇನ್ನಿಬ್ಬರಿಗಾಗಿ ಶೋಧ

ಚನ್ನಪಟ್ಟಣ ತಹಶೀಲ್ದಾರ್ ಮೇಲೆ ಹಲ್ಲೆ; 10 ಲಕ್ಷ ರೂ.ಗೆ ಬ್ಲಾಕ್‌ಮೇಲ್

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ಪ್ರಜ್ಞೆ ತಪ್ಪಿಸಿ, ವಿವಸ್ತ್ರಗೊಳಿಸಿ ಹಲ್ಲೆಗೈದು, ವಿಡಿಯೋ ಚಿತ್ರೀಕರಿಸಿಕೊಂಡು 10 ಲಕ್ಷ ರೂ.ಗೆ ಬ್ಲಾಕ್‌ಮೇಲ್‌ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೈಸೂರು ಮೂಲದ ರೌಡಿಶೀಟರ್ ಅನುಷ್, ಶೋಭರಾಜ್ ಮತ್ತು ನವೀನ್ ಎಂಬುವರು ಈ ಕೃತ್ಯ ಎಸಗಿದ್ದಾರೆ.

ರಾಮನಗರ ರಹೀಂ ನಗರ ಆಗುತ್ತೆ; ಮುಸ್ಲಿಂ ವಾರ್ಡ್‌ಗಳಲ್ಲಿ ಕಾನೂನುಬಾಹಿರ SIR ಆಗ್ತಿದೆ ಎಂದು ನಿಖಿಲ್‌ ಕುಮಾರಸ್ವಾಮಿ ಕಿಡಿ

ಮುಸ್ಲಿಂ ವಾರ್ಡ್‌ಗಳಲ್ಲಿ ಕಾನೂನುಬಾಹಿರ SIR: ನಿಖಿಲ್‌ ಆರೋಪ

BJP-JDS Protest: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ನಿಯಮಗಳನ್ನು ಗಾಳಿಗೆ ತೂರಿ, ಕಲ್ಯಾಣ ಮಂಟಪದಲ್ಲಿ ಅಕ್ರಮವಾಗಿ ದಾಖಲೆ ಸೃಷ್ಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಶುಕ್ರವಾರ ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ರಾಮನಗರದಲ್ಲಿ 'SIR ಸ್ಕ್ಯಾಮ್', ಮತದಾರರ ಪಟ್ಟಿಯಲ್ಲಿ ಬಾಂಗ್ಲಾ ವಲಸಿಗರಿಗೆ ಮಣೆ:  ಎಚ್‌ಡಿಕೆ ಆರೋಪ

ಮತದಾರರ ಪಟ್ಟಿಯಲ್ಲಿ ಬಾಂಗ್ಲಾ ವಲಸಿಗರಿಗೆ ಮಣೆ: ಎಚ್‌ಡಿಕೆ ಆರೋಪ

Ramanagara SIR scam: ನಿಯಮದಂತೆ ಬಿಎಲ್‌ಒಗಳು ಮನೆ-ಮನೆಗೆ ಹೋಗಬೇಕಾದರೆ, ರಾಮನಗರದಲ್ಲಿ ಸಿಎಂ ಅವರು ಪ್ರಭಾವ ಬಳಸಿ ಸಾವಿರಾರು ಜನರನ್ನು ಕಲ್ಯಾಣ ಮಂಟಪದಲ್ಲಿ ಕೂರಿಸಿ SIR ಜಾತ್ರೆ ನಡೆಸುತ್ತಿದ್ದಾರೆ. ದೇಶದ ಭದ್ರತೆಗೆ ಸವಾಲಾಗಿರುವ ಬಾಂಗ್ಲಾ ನುಸುಳುಕೋರರನ್ನು ಇಲ್ಲಿ ಪೋಷಿಸಿ, ಅವರಿಗೆ ಮತದಾನದ ಹಕ್ಕು ಕೊಡಿಸುವ ವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

SIR in Karnataka: ರಾಮನಗರ SIR ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ; ಪ್ರಲ್ಹಾದ್‌ ಜೋಶಿ ಆರೋಪ

ರಾಮನಗರ SIR ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ; ಪ್ರಲ್ಹಾದ್‌ ಜೋಶಿ ಆರೋಪ

Pralhad Joshi: ರಾಮನಗರದಲ್ಲಿ ನಡೆದ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ ನಡೆದಿದೆ. ಇದು ಪ್ರಜಾಪ್ರಭುತ್ವದ ಆಶಯಕ್ಕೆ ದ್ರೋಹ ಬಗೆದಂತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ತಿರುಚಲು ಸರ್ಕಾರದ ಉನ್ನತ ಮಟ್ಟದಿಂದಲೇ ವ್ಯವಸ್ಥಿತವಾಗಿ ಸಂಚು ರೂಪಿಸಿದಂತಿದ್ದು, ನಿಜಕ್ಕೂ ಆತಂಕಕಾರಿ ಬೆಳವಣಿಗೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ ಮಾರ್ಗ: ವಿ. ಸೋಮಣ್ಣ

ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ ಮಾರ್ಗ

V Somanna: ಚನ್ನಪಟ್ಟಣ ತಾಲೂಕಿನ ಎಲೆಕೇರಿ ಬಳಿ ನೂತನವಾಗಿ ನಿರ್ಮಿಸಿರುವ ರಸ್ತೆ ಮೇಲ್ಸೇತುವೆಯನ್ನು ಸೋಮವಾರ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ ರೈಲ್ವೆ ಮಾರ್ಗಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.

CP Yogeshwar: ಮನೆಗೆ ಪ್ರವೇಶ ನಿರಾಕರಣೆ; ಪುತ್ರಿ ನಿಶಾ ಆರೋಪಕ್ಕೆ ಶಾಸಕ ಸಿ.ಪಿ. ಯೋಗೇಶ್ವರ್‌ ಸ್ಪಷ್ಟನೆ ಏನು?

ಪುತ್ರಿ ನಿಶಾ ಆರೋಪಕ್ಕೆ ಶಾಸಕ ಸಿ.ಪಿ. ಯೋಗೇಶ್ವರ್‌ ಸ್ಪಷ್ಟನೆ ಏನು?

Nisha Yogeshwar: ನಿಶಾಳ ತಾಯಿ ನನ್ನಿಂದ ವಿಚ್ಚೇದನ ಪಡೆದು 25 ವರ್ಷಗಳಾಗಿವೆ. ಆಕೆ ಮತ್ತು ನನ್ನ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ. ಅದರೆ, ನನ್ನ ಮಗಳು ನನ್ನ ವಿರುದ್ಧವೇ ಇಲ್ಲ ಸಲ್ಲದ ಆರೋಪಗಳನ್ನು ಮಾಡಿರೋದು ನನ್ನ ಮನಸ್ಸಿದೆ ಘಾಸಿಯುಂಟು ಮಾಡಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ.

Nisha Yogeshwar: ನಾವು ಹುಟ್ಟಿ ಬೆಳೆದ ಮನೆಗೆ ನಮಗೆ ಪ್ರವೇಶವಿಲ್ಲ: ನಿಶಾ ಯೋಗೇಶ್ವರ್‌ ಕಣ್ಣೀರು, Video

ನಾವು ಹುಟ್ಟಿ ಬೆಳೆದ ಮನೆಗೆ ನಮಗೆ ಪ್ರವೇಶವಿಲ್ಲ: ನಿಶಾ ಯೋಗೇಶ್ವರ್‌

ಚನ್ನಪಟ್ಟಣದ ತಮ್ಮ ಸ್ವಗೃಹದ ಮುಂದೆ ನಿಂತು ಅಸಹಾಯಕತೆ ವ್ಯಕ್ತಪಡಿಸಿರುವ ನಿಶಾ ಯೋಗೇಶ್ವರ್‌ ಅವರು, ನಾವು ಹುಟ್ಟಿ ಬೆಳೆದ ನಮ್ಮ ಮನೆಗೆ ನಮಗೆ ಪ್ರವೇಶವಿಲ್ಲ. ನಮ್ಮ ಮನೆಗೆ ಈಗ ಬೀಗ ಹಾಕಲಾಗಿದೆ ಎಂದು ಹೇಳಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Channapatna News: 26 ವರ್ಷದ ಯುವತಿ ಜತೆ ಪ್ರೀತಿಗೆ ಮನೆಯವರ ಅಡ್ಡಿ: ಮನನೊಂದು 15 ವರ್ಷದ ಬಾಲಕ ಆತ್ಮಹತ್ಯೆ

26ರ ಯುವತಿ ಜತೆ ಪ್ರೀತಿಗೆ ಮನೆಯವರ ಅಡ್ಡಿ; ಬಾಲಕ ಆತ್ಮಹತ್ಯೆ

ಬಿಡದಿ ಮೂಲದ 26 ವರ್ಷದ ಯುವತಿ ಜತೆ ಬಾಲಕ ಪ್ರೀತಿಯಲ್ಲಿ ಬಿದ್ದಿದ್ದ. ಈ ಬಗ್ಗೆ ಪೋಷಕರಿಗೆ ಗೊತ್ತಾಗಿದ್ದು, ಬಾಲಕನಿಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಬಾಲಕ ಹಾಗೂ ಯುವತಿ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ನಂತರ ಯುವತಿ ಜತೆ ಗಲಾಟೆ ಮಾಡಿಕೊಂಡು ಏ.29ರಂದು ವಿಷ ಸೇವಿಸಿ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ. ಇದೀಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Ramanagara News: ಬೆತ್ತಲೆ ಪೂಜೆ ಮಾಡಿದ್ರೆ 30 ಲಕ್ಷ ಹಣ; ಯುವತಿಗೆ ಟಾರ್ಚರ್ ನೀಡಿದ ಖದೀಮನ ವಿರುದ್ಧ ದೂರು ದಾಖಲು

ಬೆತ್ತಲೆ ಪೂಜೆ ಮಾಡಿದ್ರೆ 30 ಲಕ್ಷ ಹಣ; ಯುವತಿಗೆ ಟಾರ್ಚರ್ ನೀಡಿದ ಖದೀಮ!

ಒಂದು ದಿನ ಬೆತ್ತಲಾಗಿ ಪೂಜೆ ಕುಳಿತುಕೋ ಎಂದು ಒತ್ತಾಯಿಸಿ ಆರೋಪಿ ಕಿರುಕುಳ ನೀಡುತ್ತಿದ್ದಾನೆ ಎಂದು ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾಳೆ. ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಎಂಬಾತನ ವಿರುದ್ಧ ಯುವತಿ ದೂರು ನೀಡಿದ್ದಾಳೆ.

Elephant attack: ಪ್ರವಾಸಿ ತಾಣದಲ್ಲಿ ಆನೆ ದಾಳಿ: ಮೇಕೆದಾಟು ಬಳಿ ನುಗ್ಗಿಬಂದ ಕಾಡಾನೆ, ಮಹಿಳೆಗೆ ಗಾಯ

ಮೇಕೆದಾಟು ಬಳಿ ಪ್ರವಾಸಿಗರ ಮೇಲೆ ನುಗ್ಗಿಬಂದ ಕಾಡಾನೆ, ಮಹಿಳೆಗೆ ಗಾಯ

ಕನಕಪುರ (Kanakapura) ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿ ಪ್ರವಾಸಿಗರ ಮೇಲೆ ಎರಗಿದೆ. ಈ ವೇಳೆ ಪ್ರವಾಸಿಗರು ಸ್ಥಳದಿಂದ ಎದ್ದೆನೋ ಬಿದ್ದೆನೋ ಎಂದು ಓಡಿದ್ದಾರೆ. ಈ ವೇಳೆ ಓರ್ವ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ ಅಲ್ಲಿಂದ ಕಾಡಿನೊಳಗೆ ಕಾಲ್ಕಿತ್ತಿದೆ.

Channapatna News: ದಿನಾ ತಿಂಡಿ ಕೊಡುತ್ತಿದ್ದ ವೃದ್ಧೆಯ ಶವದ ಮೇಲೆ ಬಿದ್ದು ಹೊರಳಾಡಿ ದುಃಖಿಸಿದ ಕೋತಿ!

ತಿಂಡಿ ಕೊಡುತ್ತಿದ್ದ ವೃದ್ಧೆಯ ಶವದ ಮೇಲೆ ಬಿದ್ದು ಹೊರಳಾಡಿ ದುಃಖಿಸಿದ ಕೋತಿ!

ನಿತ್ಯ ಮನೆ ಬಳಿ ಬರುತ್ತಿದ್ದ ಕೋತಿಯನ್ನು ಪಾರ್ವತಮ್ಮ ಅವರು ತಿಂಡಿ ಕೊಟ್ಟು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಕೋತಿ ಜೊತೆ ನಿತ್ಯ ಒಡನಾಟ ಹೊಂದಿದ್ದ ವೃದ್ಧೆ ಇಂದು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ವೃದ್ಧೆ ಸಾವಿಗೆ ಕೋತಿ ಮೂಕರೋದನ ವ್ಯಕ್ತಪಡಿಸಿದೆ.

HD Kumaraswamy: ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರ ಅಸ್ತು: ಹೆಚ್‌ಡಿ ಕುಮಾರಸ್ವಾಮಿ ಮನವಿಗೆ ಸ್ಪಂದಿಸಿದ ಅಶ್ವಿನ್‌ ವೈಷ್ಣವ್‌

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರ ಅಸ್ತು

ರಾಜ್ಯದಲ್ಲಿ ಬೆಂಗಳೂರು ಮತ್ತು ಮೈಸೂರು ನಡುವೆ ದೊಡ್ಡ ಪ್ರಮಾಣದಷ್ಟು ಜನರು ಪ್ರಯಾಣ ಮಾಡುತ್ತಾರೆ. ರಾಜ್ಯದಲ್ಲಿಯೇ ಅತಿಹೆಚ್ಚು ಜನರು ಸಂಚರಿಸುವ ಕಾರಿಡಾರ್‌ಗಳಲ್ಲಿ ಇದೂ ಒಂದಾಗಿದ್ದು, ಈ ಉಪಕ್ರಮದಿಂದ ರಾಮನಗರ ಜಿಲ್ಲೆಯ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೊಡಿಸಲು ದೇವೇಗೌಡರು, ಕುಮಾರಸ್ವಾಮಿ ಬದ್ಧ: ನಿಖಿಲ್ ಕುಮಾರಸ್ವಾಮಿ

ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲು ಎ‌ಚ್‌ಡಿಡಿ, ಎಚ್‌ಡಿಕೆ ಬದ್ಧ

Nikhil Kumaraswamy: ರಾಮನಗರದ ಚಿಕ್ಕೇಗೌಡನದೊಡ್ಡಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೊಡಿಸಲು ದೇವೇಗೌಡರು, ಕುಮಾರಸ್ವಾಮಿ ಬದ್ಧರಾಗಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

BESCOM: ಪೂರ್ವ ಮುಂಗಾರು ಮಳೆ ಅಬ್ಬರ; ವಿದ್ಯುತ್ ಸುರಕ್ಷತಾ ಕ್ರಮ ಅನುಸರಿಸಲು ಬೆಸ್ಕಾಂ ಮನವಿ

ಭಾರಿ ಮಳೆ; ವಿದ್ಯುತ್ ಸುರಕ್ಷತಾ ಕ್ರಮ ಅನುಸರಿಸಲು ಬೆಸ್ಕಾಂ ಮನವಿ

BESCOM: ಗಾಳಿ-ಮಳೆ ಸಂದರ್ಭದಲ್ಲಿ ಕರೆಗಳ ಒತ್ತಡದಿಂದ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಕೆಲವೊಮ್ಮೆ ಲಭ್ಯವಾಗುವುದಿಲ್ಲ, ಹೀಗಾಗಿ ಬೆಸ್ಕಾಂ ವಾಟ್ಸ್ ಆಪ್ ಸಂಖ್ಯೆಗಳಿಗೆ ವಿದ್ಯುತ್ ಸಮಸ್ಯೆ ಕುರಿತ ಸಂದೇಶಗಳನ್ನು ಕಳುಹಿಸಲು ಬೆಸ್ಕಾಂ ಮನವಿ ಮಾಡಿದೆ. ಈ ಕುರಿತ ವಿವರ ಇಲ್ಲಿದೆ.

LPG Cylinder Theft: ಎಲ್‌ಪಿಜಿ ಕೊರತೆ ನಡುವೆ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ; ಬೆಂಗಳೂರು ಸೇರಿ 2 ಕಡೆ ಸಿಲಿಂಡರ್ ಕಳವು, ವಿಡಿಯೊ ವೈರಲ್‌!

ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ; 2 ಕಡೆ ಕಳವು, ವಿಡಿಯೊ ವೈರಲ್‌!

LPG Cylinder Shortage: ವಾಣಿಜ್ಯ ಎಲ್‌ಪಿಜಿ ಕೊರತೆಯಿಂದ ರಾಜ್ಯಾದ್ಯಂತ ಹೋಟೆಲ್‌ಗಳಲ್ಲಿ ಅಡುಗೆ ಸಿದ್ಧಪಡಿಸಲು ಸಮಸ್ಯೆಯಾಗಿದೆ. ದರ ಇದೆಲ್ಲದರ ಮಧ್ಯೆ ಸಿಲಿಂಡರ್ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವುದು ಜನರ ನಿದ್ದೆಗಡಿಸಿದೆ. ಬೆಂಗಳೂರು ಮತ್ತು ಚನ್ನಪಟ್ಟಣದಲ್ಲಿ ಸಿಲಿಂಡರ್‌ ಕಳ್ಳತನ ಪ್ರಕರಣ ನಡೆದಿವೆ.

ನಮ್ಮದು ನಾಳೆ ಎನ್ನುವ ಸರ್ಕಾರವಲ್ಲ, ಇಂದೇ ಎನ್ನುವ ಸರ್ಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

ನಮ್ಮದು ನಾಳೆ ಎನ್ನುವ ಸರ್ಕಾರವಲ್ಲ, ಇಂದೇ ಎನ್ನುವ ಸರ್ಕಾರ: ಡಿಕೆಶಿ

ಶಾಸಕರಾಗಿ, ಸಂಸದರಾಗಿ ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವರು ಇಲ್ಲಿಗೆ ಬಂದು ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡುತ್ತಾರೆ. ನಾಳೆ ಕೆಲಸ ಮಾಡುತ್ತೇವೆ ಎಂಬುದು ಶತೃತ್ವ, ಇವತ್ತೇ ಕೆಲಸ ಮಾಡುತ್ತೇವೆ ಎಂಬುದು ಮಿತ್ರತ್ವ. ನಾಳೆ ಯಾರು ಇರುತ್ತಾರೋ ಇರುವುದಿಲ್ಲವೋ ಗೊತ್ತಿಲ್ಲ. ಅಧಿಕಾರ ಇದ್ದಾಗ ನಾವು ಏನು ಮಾಡಿದೆವು ಎಂಬುದು ಮುಖ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ನಾನು ರಾಮನಗರಕ್ಕೆ ಫಿಕ್ಸ್ ಆಗಿದ್ದೇನೆ, ಯಾವುದೇ ಅನುಮಾನ ಬೇಡ ಎಂದ ನಿಖಿಲ್ ಕುಮಾರಸ್ವಾಮಿ

ನಾನು ರಾಮನಗರಕ್ಕೆ ಫಿಕ್ಸ್ ಆಗಿದ್ದೇನೆ ಎಂದ ನಿಖಿಲ್ ಕುಮಾರಸ್ವಾಮಿ

Nikhil Kumaraswamy: ನಾನು ರಾಮನಗರಕ್ಕೆ ಫಿಕ್ಸ್ ಆಗಿದ್ದೇನೆ, ಯಾವುದೇ ಅನುಮಾನ ಬೇಡ. ನಾನು ಪಲಾಯನವಾದಿ ರಾಜಕಾರಣ‌ ಮಾಡಲ್ಲ, ನಮ್ಮ ಕಾರ್ಯಕರ್ತರ ಆದೇಶವೇ ಅಂತಿಮ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿ ಸವಾಲು

ಕುಮಾರಸ್ವಾಮಿಯನ್ನು ಚರ್ಚೆಗೆ ಕರೆದ ಡಿಸಿಎಂ

ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಬೇಕಾದರೆ ಚರ್ಚೆಗೆ ಬರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸವಾಲು ಹಾಕಿದ್ದಾರೆ. ಇದಕ್ಕಾಗಿ ಮಾಧ್ಯಮಗಳೇ ಚರ್ಚೆಗೆ ದಿನಾಂಕ ನಿಗದಿ ಮಾಡಿ 3 ದಿನ ಮುಂಚಿತವಾಗಿ ನನಗೆ ಮಾಹಿತಿ ನೀಡಲಿ. ಚರ್ಚೆಗೆ ಬರುತ್ತೇನೆ ಎನ್ನುವವರನ್ನು ಬೇಡ ಎನ್ನಲು ಆಗುತ್ತದೆಯೇ ಎಂದು ಅವರು ಪ್ರಶ್ನಿಸಿದರು.

Bigg Boss Kannada 12 Finale: ಬಿಗ್‌ಬಾಸ್‌ ಹೌಸ್‌ ಬಳಿ ಮುಗಿಲುಮುಟ್ಟಿದ ಗಿಲ್ಲಿ ಅಭಿಮಾನಿಗಳ ಸಂಭ್ರಮ; ಪಟಾಕಿ ಸಿಡಿಸಿ, ಸಿಹಿ ಹಂಚಿಕೆ

ಬಿಗ್‌ಬಾಸ್‌ ಹೌಸ್‌ ಬಳಿ ಮುಗಿಲುಮುಟ್ಟಿದ ಗಿಲ್ಲಿ ಅಭಿಮಾನಿಗಳ ಸಂಭ್ರಮ

ಬಿಗ್‌ಬಾಸ್‌ ಗ್ರ್ಯಾಂಡ್‌ ಫಿನಾಲೆ ಹಿನ್ನೆಲೆಯಲ್ಲಿ ಭಾನುವಾರ ಸಂಜೆಯಿಂದಲೇ ಜಾಲಿವುಡ್‌ ಸ್ಟುಡಿಯೋದ ಎರಡೂ ಗೇಟ್​ಗಳ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಬಿಗ್‌ಬಾಸ್‌ ವಿನ್ನರ್‌ ಆಗಿ ಗಿಲ್ಲಿ ಹೆಸರು ಘೋಷಣೆಯಾಗುತ್ತಲೇ ಅಭಿಮಾನಿಗಳು ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ.

Physical Abuse: ರಾಮನಗರದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ, ಮೂವರ ಸೆರೆ

ರಾಮನಗರದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ, ಮೂವರ ಸೆರೆ

ಬೆಂಗಳೂರಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ವಿಕಾಸ್, ಬಳಿಕ ಯುವತಿ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಅನಂತರ ಪ್ರಶಾಂತ್ ಮತ್ತು ಚೇತನ್ ಜೊತೆಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ.

Ramanagara News: ಕೌಟುಂಬಿಕ ಕಲಹ; ಪತ್ನಿಯನ್ನು ಕತ್ತುಹಿಸುಕಿ ಕೊಂದು ಪತಿಯೂ ಆತ್ಮಹತ್ಯೆ!

ಕೌಟುಂಬಿಕ ಕಲಹ; ಪತ್ನಿಯನ್ನು ಕತ್ತುಹಿಸುಕಿ ಕೊಂದು ಪತಿಯೂ ಆತ್ಮಹತ್ಯೆ!

ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ವಾರ ದಂಪತಿ ಗಲಾಟೆ ಮಾಡಿಕೊಂಡು ಮಹಿಳಾ ಠಾಣೆ ಮೆಟ್ಟಿಲೇರಿದ್ದರು. ಸೋಮವಾರ ಗಲಾಟೆ ವಿಕೋಪಕ್ಕೆ ತಿರುಗಿದ ವೇಳೆ ಪತ್ನಿಯನ್ನು ಕೊಂದು ಪತಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Karnataka Weather: ಇಂದಿನ ಹವಾಮಾನ; ಬೆಂಗಳೂರಿನಲ್ಲಿ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

ಇಂದಿನ ಹವಾಮಾನ; ಬೆಂಗಳೂರಿನಲ್ಲಿ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಹೆಚ್ಚಿಎ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 18°C ಇರುವ ಸಾಧ್ಯತೆ ಇದೆ.

Karnataka Politics: ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ಹೋಗಿದ್ದೇಕೆ?; ಆ ಗುಟ್ಟು ಬಹಿರಂಗ ಮಾಡಲ್ಲ ಎಂದ ಡಿ.ಕೆ.ಶಿವಕುಮಾರ್‌

ಖರ್ಗೆ ದೆಹಲಿಗೆ ಹೋಗಿದ್ದೇಕೆ?; ಆ ಗುಟ್ಟು ಬಹಿರಂಗ ಮಾಡಲ್ಲ ಎಂದ ಡಿಕೆಶಿ

DK Shivakumar: ಕೆಲ ಶಾಸಕರು ದೆಹಲಿಗೆ ತೆರಳಿದ್ದು, ನಿಮ್ಮನ್ನು ಸಿಎಂ ಮಾಡಲು ಪ್ರಯತ್ನಿಸುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌ ಅವರು, “ಸಚಿವ ಸ್ಥಾನದ ಆಕಾಂಕ್ಷೆ ಇರುವವರು ಹೋಗಿದ್ದಾರೆ, ನನ್ನನ್ನು ಸಿಎಂ ಮಾಡುವ ಪ್ರಯತ್ನದ ಬಗ್ಗೆ ನನಗೆ ಗೊತ್ತಿಲ್ಲ. ನಾನು ಅವರಿಗೆ ಕರೆ ಮಾಡಿಲ್ಲ, ಅವರನ್ನು ಕಳುಹಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Loading...