147 ರೈತರ ಜೀವ ನುಂಗಿದ ಸಾಲ
ಕೃಷ್ಣಾ-ಭೀಮಾ ನದಿಯ ಬೃಹತ್ ಜಲಾಶಯ ದಿಂದ ಫಲವತ್ತಾದ ಭೂಮಿ ಹೊಂದಿರುವ ಯಾದಗಿರಿ ಜಿಲ್ಲೆಯ ರೈತರು ದುರಾದೃಷ್ಟವಶಾತ್ ಋಣ ಭಾರಕ್ಕೆ ನಲುಗಿ ಹೋಗಿದ್ದಾರೆ. ಕೃಷಿ ಚಟುವಟಿಕೆ, ಕೌಟುಂಬಿಕ ಕಾರ್ಯಕ್ರಮಗಳಿಗೆ ಮಾಡಿಕೊಂಡ ಸಾಲ ತೀರಿಸಲು ಆಗದೆ ಆತ್ಮ ಹತ್ಯೆ ಮೊರೆ ಹೋಗುತ್ತಿದ್ದಾರೆ
ಅಪ್ರಾಪ್ತ ಬಾಲಕನೊಬ್ಬ ಜುಲೈ 10 ರಂದು ತನ್ನ ಲಿವ್ ಇನ್ ಪಾರ್ಟ್ನರ್ ಆಗಿದ್ದ 16 ವರ್ಷದ ಬಾಲಕಿಯನ್ನು ನಾಡಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಯು ಇತರ ಇಬ್ಬರೊಂದಿಗೆ ಸೇರಿ ಆಕೆಯ ಮೃತದೇಹವನ್ನು ತಮ್ಮ ಕೃಷಿ ಜಮೀನಿನಲ್ಲಿ ಹೂತುಹಾಕಿದ್ದನು ಎಂದು ತಿಳಿದು ಬಂದಿದೆ.
Bidadi Township Row: ಬಿಡದಿ ಟೌನ್ಶಿಪ್ ವಿವಾದ ತಾರಕಕ್ಕೇರಿದೆ. ಕಾಂಗ್ರೆಸ್ ನೇತೃತ್ವದ ಸರಾರ ಈ ಯೋಜನೆಯನ್ನು ಜಾರಿಗೊಳಿಸಿಯೇ ಸಿದ್ಧ ಎಂದು ಘೋಷಿಸಿದರೆ ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ. ಈ ಯೋಜನೆಗೆ ತೀವ್ರ ವ್ಯಕ್ತಪಡಿಸುವ ಎಚ್.ಡಿ. ಕುಮಾರಸ್ವಾಮಿಯೇ ಇದನ್ನು ಆರಂಭಿಸಿದ್ದು ಎಂದಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆ ನಡೆದು ಬಂದ ಹಾದಿಯ ಪರಿಚಯ ಇಲ್ಲಿದೆ.
HD Kumaraswamy: ಸರ್ಕಾರದ ಚಿತಾವಣೆಯಿಂದಲೇ ಅಧಿಕಾರಿಗಳು ಸರ್ವೆಗೆ ಬಂದಿದ್ದಾರೆ. ಮುಖ್ಯಮಂತ್ರಿಗೆ ಇಷ್ಟೊಂದು ಹಠ ಏಕೆ ಎಂಬುದೇ ಅರ್ಥವಾಗುತ್ತಿಲ್ಲ. ರೈತರ ಮೇಲೆ ಎರಡು ಎಫ್ಐಆರ್ಗಳನ್ನು ಹಾಕಿದ್ದಾರೆ. ಅವರಿಗೆ ಧೈರ್ಯವಿದ್ದರೆ ನನ್ನ ವಿರುದ್ಧ ಕೇಸ್ ಹಾಕಲಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬಿಡದಿ ಟೌನ್ಶಿಪ್ಗೆ ಮುಂದಾಗಿರುವ ರಾಜ್ಯ ಸರಕಾರ ತಕ್ಷಣ ಸರ್ವೆ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ವಾಪಸು ಕರೆಯಿಸಿಕೊಳ್ಳಬೇಕು. ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಕೂಡಲೇ ನಿಲ್ಲಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ. ಟಿ ಎಚ್ಚರಿಕೆ ನೀಡಿದ್ದಾರೆ.
ರಾಮನಗರದ ಚನ್ನಮಾನಹಳ್ಳಿಯಲ್ಲಿ ನಿರ್ಮಿಸಲ್ಪಟ್ಟ ಈ ಶ್ರೀ ಸೀತಾರಾಮಚಂದ್ರ ದೇವಾಲಯವು ಕೇವಲ ಒಂದು ಕಟ್ಟಡವಾಗಿರದೆ, ಅತ್ಯಂತ ಸುಂದರ ಹಾಗೂ ವೈಭವಯುತ ಕಲಾಕೃತಿಯಾಗಿ ಮೂಡಿಬರಲು ದೇಶದ ಹೆಸರಾಂತ ತಜ್ಞರು, ಅನುಭವಿ ಸ್ಥಪತಿಗಳು, ಶಿಲ್ಪಿಗಳು ಮತ್ತು ಚಿತ್ರಕಲಾವಿದರು ಶ್ರಮಿಸಿದ್ದಾರೆ. ತಮಿಳುನಾಡು ಸರಕಾರದ ಪ್ರಸಿದ್ಧ ಸ್ಥಪತಿಗಳಾದ, ಪದ್ಮಶ್ರೀ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರೀ ಮುತ್ತಯ್ಯ ಸ್ಥಪತಿಗಳ ಉನ್ನತ ನೇತೃತ್ವದಲ್ಲಿ ಚನ್ನಮಾನಹಳ್ಳಿಯ ಈ ದೇವಾಲಯದ ಸಂಪೂರ್ಣ ವಿನ್ಯಾಸ ನೆರವೇರಿತು.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ಪ್ರಜ್ಞೆ ತಪ್ಪಿಸಿ, ವಿವಸ್ತ್ರಗೊಳಿಸಿ ಹಲ್ಲೆಗೈದು, ವಿಡಿಯೋ ಚಿತ್ರೀಕರಿಸಿಕೊಂಡು 10 ಲಕ್ಷ ರೂ.ಗೆ ಬ್ಲಾಕ್ಮೇಲ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೈಸೂರು ಮೂಲದ ರೌಡಿಶೀಟರ್ ಅನುಷ್, ಶೋಭರಾಜ್ ಮತ್ತು ನವೀನ್ ಎಂಬುವರು ಈ ಕೃತ್ಯ ಎಸಗಿದ್ದಾರೆ.
BJP-JDS Protest: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ನಿಯಮಗಳನ್ನು ಗಾಳಿಗೆ ತೂರಿ, ಕಲ್ಯಾಣ ಮಂಟಪದಲ್ಲಿ ಅಕ್ರಮವಾಗಿ ದಾಖಲೆ ಸೃಷ್ಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಶುಕ್ರವಾರ ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
Ramanagara SIR scam: ನಿಯಮದಂತೆ ಬಿಎಲ್ಒಗಳು ಮನೆ-ಮನೆಗೆ ಹೋಗಬೇಕಾದರೆ, ರಾಮನಗರದಲ್ಲಿ ಸಿಎಂ ಅವರು ಪ್ರಭಾವ ಬಳಸಿ ಸಾವಿರಾರು ಜನರನ್ನು ಕಲ್ಯಾಣ ಮಂಟಪದಲ್ಲಿ ಕೂರಿಸಿ SIR ಜಾತ್ರೆ ನಡೆಸುತ್ತಿದ್ದಾರೆ. ದೇಶದ ಭದ್ರತೆಗೆ ಸವಾಲಾಗಿರುವ ಬಾಂಗ್ಲಾ ನುಸುಳುಕೋರರನ್ನು ಇಲ್ಲಿ ಪೋಷಿಸಿ, ಅವರಿಗೆ ಮತದಾನದ ಹಕ್ಕು ಕೊಡಿಸುವ ವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
Pralhad Joshi: ರಾಮನಗರದಲ್ಲಿ ನಡೆದ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮ ನಡೆದಿದೆ. ಇದು ಪ್ರಜಾಪ್ರಭುತ್ವದ ಆಶಯಕ್ಕೆ ದ್ರೋಹ ಬಗೆದಂತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ತಿರುಚಲು ಸರ್ಕಾರದ ಉನ್ನತ ಮಟ್ಟದಿಂದಲೇ ವ್ಯವಸ್ಥಿತವಾಗಿ ಸಂಚು ರೂಪಿಸಿದಂತಿದ್ದು, ನಿಜಕ್ಕೂ ಆತಂಕಕಾರಿ ಬೆಳವಣಿಗೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
V Somanna: ಚನ್ನಪಟ್ಟಣ ತಾಲೂಕಿನ ಎಲೆಕೇರಿ ಬಳಿ ನೂತನವಾಗಿ ನಿರ್ಮಿಸಿರುವ ರಸ್ತೆ ಮೇಲ್ಸೇತುವೆಯನ್ನು ಸೋಮವಾರ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ ರೈಲ್ವೆ ಮಾರ್ಗಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.
Nisha Yogeshwar: ನಿಶಾಳ ತಾಯಿ ನನ್ನಿಂದ ವಿಚ್ಚೇದನ ಪಡೆದು 25 ವರ್ಷಗಳಾಗಿವೆ. ಆಕೆ ಮತ್ತು ನನ್ನ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ. ಅದರೆ, ನನ್ನ ಮಗಳು ನನ್ನ ವಿರುದ್ಧವೇ ಇಲ್ಲ ಸಲ್ಲದ ಆರೋಪಗಳನ್ನು ಮಾಡಿರೋದು ನನ್ನ ಮನಸ್ಸಿದೆ ಘಾಸಿಯುಂಟು ಮಾಡಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.
ಬಿಡದಿ ಮೂಲದ 26 ವರ್ಷದ ಯುವತಿ ಜತೆ ಬಾಲಕ ಪ್ರೀತಿಯಲ್ಲಿ ಬಿದ್ದಿದ್ದ. ಈ ಬಗ್ಗೆ ಪೋಷಕರಿಗೆ ಗೊತ್ತಾಗಿದ್ದು, ಬಾಲಕನಿಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಬಾಲಕ ಹಾಗೂ ಯುವತಿ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ನಂತರ ಯುವತಿ ಜತೆ ಗಲಾಟೆ ಮಾಡಿಕೊಂಡು ಏ.29ರಂದು ವಿಷ ಸೇವಿಸಿ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ. ಇದೀಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಕನಕಪುರ (Kanakapura) ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿ ಪ್ರವಾಸಿಗರ ಮೇಲೆ ಎರಗಿದೆ. ಈ ವೇಳೆ ಪ್ರವಾಸಿಗರು ಸ್ಥಳದಿಂದ ಎದ್ದೆನೋ ಬಿದ್ದೆನೋ ಎಂದು ಓಡಿದ್ದಾರೆ. ಈ ವೇಳೆ ಓರ್ವ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ ಅಲ್ಲಿಂದ ಕಾಡಿನೊಳಗೆ ಕಾಲ್ಕಿತ್ತಿದೆ.
LPG Cylinder Shortage: ವಾಣಿಜ್ಯ ಎಲ್ಪಿಜಿ ಕೊರತೆಯಿಂದ ರಾಜ್ಯಾದ್ಯಂತ ಹೋಟೆಲ್ಗಳಲ್ಲಿ ಅಡುಗೆ ಸಿದ್ಧಪಡಿಸಲು ಸಮಸ್ಯೆಯಾಗಿದೆ. ದರ ಇದೆಲ್ಲದರ ಮಧ್ಯೆ ಸಿಲಿಂಡರ್ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವುದು ಜನರ ನಿದ್ದೆಗಡಿಸಿದೆ. ಬೆಂಗಳೂರು ಮತ್ತು ಚನ್ನಪಟ್ಟಣದಲ್ಲಿ ಸಿಲಿಂಡರ್ ಕಳ್ಳತನ ಪ್ರಕರಣ ನಡೆದಿವೆ.
ಶಾಸಕರಾಗಿ, ಸಂಸದರಾಗಿ ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವರು ಇಲ್ಲಿಗೆ ಬಂದು ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡುತ್ತಾರೆ. ನಾಳೆ ಕೆಲಸ ಮಾಡುತ್ತೇವೆ ಎಂಬುದು ಶತೃತ್ವ, ಇವತ್ತೇ ಕೆಲಸ ಮಾಡುತ್ತೇವೆ ಎಂಬುದು ಮಿತ್ರತ್ವ. ನಾಳೆ ಯಾರು ಇರುತ್ತಾರೋ ಇರುವುದಿಲ್ಲವೋ ಗೊತ್ತಿಲ್ಲ. ಅಧಿಕಾರ ಇದ್ದಾಗ ನಾವು ಏನು ಮಾಡಿದೆವು ಎಂಬುದು ಮುಖ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.