ಗಮನ ಸೆಳೆವ ಚನ್ನಮಾನಹಳ್ಳಿಯ ಸೀತಾರಾಮಚಂದ್ರ ದೇವಾಲಯ
ರಾಮನಗರದ ಚನ್ನಮಾನಹಳ್ಳಿಯಲ್ಲಿ ನಿರ್ಮಿಸಲ್ಪಟ್ಟ ಈ ಶ್ರೀ ಸೀತಾರಾಮಚಂದ್ರ ದೇವಾಲಯವು ಕೇವಲ ಒಂದು ಕಟ್ಟಡವಾಗಿರದೆ, ಅತ್ಯಂತ ಸುಂದರ ಹಾಗೂ ವೈಭವಯುತ ಕಲಾಕೃತಿಯಾಗಿ ಮೂಡಿಬರಲು ದೇಶದ ಹೆಸರಾಂತ ತಜ್ಞರು, ಅನುಭವಿ ಸ್ಥಪತಿಗಳು, ಶಿಲ್ಪಿಗಳು ಮತ್ತು ಚಿತ್ರಕಲಾವಿದರು ಶ್ರಮಿಸಿದ್ದಾರೆ. ತಮಿಳುನಾಡು ಸರಕಾರದ ಪ್ರಸಿದ್ಧ ಸ್ಥಪತಿಗಳಾದ, ಪದ್ಮಶ್ರೀ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರೀ ಮುತ್ತಯ್ಯ ಸ್ಥಪತಿಗಳ ಉನ್ನತ ನೇತೃತ್ವದಲ್ಲಿ ಚನ್ನಮಾನಹಳ್ಳಿಯ ಈ ದೇವಾಲಯದ ಸಂಪೂರ್ಣ ವಿನ್ಯಾಸ ನೆರವೇರಿತು.