Horoscope Today November 27th: ಇಂದು ಕುಜನ ಪ್ರಭಾವದಿಂದ ಈ ರಾಶಿಗಳಿಗೆ ಯಶಸ್ಸು
ನಿತ್ಯ ಭವಿಷ್ಯ ನವೆಂಬರ್ 27, 2025: ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಶರದೃತು, ಮಾರ್ಗಶಿರ ಮಾಸೆ, ಶುಕ್ಷ ಪಕ್ಷ, ಸಪ್ತಮಿ ತಿಥಿ, ದನಿಷ್ಠ ನಕ್ಷತ್ರದ ನವೆಂಬರ್ 27ನೇ ತಾರೀಖಿನ ಗುರುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.
ದಿನ ಭವಿಷ್ಯ(ಸಂಗ್ರಹ ಚಿತ್ರ) -
ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ಶರದೃತು, ಮಾರ್ಗಶಿರ ಮಾಸೆ, ಶುಕ್ಷ ಪಕ್ಷದ ಸಪ್ತಮಿ ತಿಥಿ, ದನಿಷ್ಠ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ (Daily Horoscope) ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ದನಿಷ್ಠ ನಕ್ಷತ್ರದ ಅಧಿಪತಿ ಕುಜ ಆಗಿದ್ದಾನೆ. ಹೀಗಾಗಿ ಇದರಿಂದ ಎಲ್ಲ ರಾಶಿಗೂ ಪರಿಣಾಮ ಬೀರುವ ಸಾದ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಗುಂಪು- ಕೆಲಸಗಳಿಂದ ಇಷ್ಟಾರ್ಥ ಸಿದ್ದಿಯಾಗುತ್ತದೆ. ಕೆಲಸ ಕಾರ್ಯದಲ್ಲಿ ಧನ ಲಾಭ ಕೂಡ ಆಗಲಿದೆ.
ವೃಷಭ ರಾಶಿ: ವೃಷಭ ರಾಶಿಯವರು ಕಾರ್ಯಕ್ಷೇತ್ರದಲ್ಲಿ ಬಹಳನೇ ಎಚ್ಚರಿಕೆಯಿಂದ ಕೆಲಸ ಮಾಡುತ್ತೀರಿ. ಅದೇ ರೀತಿ ವಿವೇಕವಾಗಿಯೂ ಪರಿಪೂರ್ಣಗೊಳಿಸುತ್ತೀರಿ. ನೀವು ಶ್ರಮಿಸಿದ ಕಷ್ಟಕ್ಕೆ ಪ್ರತಿಫಲ ಸಿಗಲಿದೆ.
ಮಿಥುನ ರಾಶಿ: ಮಿಥುನರಾಶಿಯಲ್ಲಿ ಇರುವವರಿಗೆ ಭಾಗ್ಯೋದಯವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗಲಿದ್ದು ಮನಸ್ಸಿನಲ್ಲಿ ಇದ್ದಂತಹ ಚಂಚಲತೆ ಇಂದು ಕಡಿಮೆಯಾಗುತ್ತದೆ. ಆದರೆ ಇಂದು ಭಗವಂತನ ಅನುಗ್ರಹ ಬಹಳ ಮುಖ್ಯವಾಗುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಮನಸ್ಸಿಗೆ ಕ್ಷೇಷ ಉಂಟಾಗುವ ದಿನ ಆಗಲಿದೆ. ಮನಸ್ಸಿಗೆ ಆತಂಕ ಹೆಚ್ಚಾಗಲಿದ್ದು ಧ್ಯಾನದಿಗಳನ್ನು ಮಾಡುವ ಮೂಲಕ ನೀವು ಸಮಯ ಕಳೆಯ ಬೇಕಾಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಎಲ್ಲ ಕಡೆಯಿಂದಲೂ ನಿಮಗೆ ಸೌಹಾರ್ದ ಪ್ರಾಪ್ತಿಯಾಗುತ್ತದೆ. ಕೆಲಸ ಕಾರ್ಯದಲ್ಲೂ ಕೂಡ ಜಯ ಪ್ರಾಪ್ತಿಯಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿ ಅವರಿಗೆ ಅತೀ ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆ ಯಲ್ಲಿ ಜಯ ಪ್ರಾಪ್ತಿ ಯಾಗುತ್ತದೆ. ಕೆಲಸ ಕಾರ್ಯದಲ್ಲಿ ಸುಧಾರಣೆ ಜೊತೆಗೆ ಆತ್ಮವಿಶ್ವಾಸ ತುಂಬಾ ಚೆನ್ನಾಗಿ ಇರುತ್ತದೆ.
Vastu Tips: ನಿಮ್ಮ ಮನೆಯಲ್ಲಿ ಸಂಪತ್ತು ಹೆಚ್ಚಾಗಬೇಕಾ? ಈ ಒಂದು ಗಿಡ ನೆಡಿ ಸಾಕು!
ತುಲಾ ರಾಶಿ: ತುಲಾ ರಾಶಿ ಅವರಿಗೆ ಕ್ಲಿಷ್ಟಕರವಾದ ದಿನವಾಗಿದೆ. ಬಿಸೆನೆಸ್ ವ್ಯವಹಾರದಲ್ಲಿ ಜಾಗೃತೆ ವಹಿಸ ಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ವ್ಯವಹಾರ ಮಾಡುವವರಿಗೂ ಕಷ್ಟಕರವಾದ ದಿನವಾಗಿದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಸಂಸಾರದ ತಾಪತ್ರಯಗಳು ಇಂದು ಹೆಚ್ಚಾಗುತ್ತದೆ. ತಾಯಿಯ ಆರೋಗ್ಯ ಬಗ್ಗೆ ಮತ್ತು ಮನೆಯವರ ಬಗ್ಗೆ ಸಹಕಾರ ಕೊಡುವುದರ ಬಗ್ಗೆ ಯೋಚಿಸ ಬೇಕಾಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೂ ಅತ್ಯುತ್ತಮ ವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಸಾಮಾಜಿಕ ಕೆಲಸ ಕಾರ್ಯದಲ್ಲಿ ಜಯ ಸಿಗುತ್ತದೆ. ಆತ್ಮವಿಶ್ವಾಸ ತುಂಬಾ ಚೆನ್ನಾಗಿ ಇರುತ್ತದೆ
ಮಕರ ರಾಶಿ: ಮಕರ ರಾಶಿ ಅವರು ಸಂಸಾರದ ತಾಪತ್ರಯ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ. ಅದೇ ರೀತಿ ನಿಮ್ಮ ಪ್ರೀತಿ ಪಾತ್ರರ ಜೊತೆ ಸಮಯವನ್ನು ಕೊಟ್ಟು ದಿನ ಕಳೆಯಬೇಕಾಗುತ್ತದೆ. .
ಕುಂಭರಾಶಿ: ಕುಂಭ ರಾಶಿ ಅವರಿಗೆ ಮನಸ್ಸಿಗೆ ನೆಮ್ಮದಿ ಇರುತ್ತದೆ. ನಿಮ್ಮ ರಾಶಿಗೆ ಚಂದ್ರ ಬಂದಿರುವುದರಿಂದ ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ಕ್ಲೇಷ ಎಲ್ಲವೂ ಮಯವಾಗುತ್ತದೆ.
ಮೀನ ರಾಶಿ: ಮೀನ ರಾಶಿ ಅವರಿಗೆ ಕ್ಲಿಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಬೇಡ. ಹಾಗೇ ಹತಾಶೆಯಲ್ಲಿ ಯಾವುದೇ ನಿರ್ಧಾರಗಳನ್ನು ಇಂದು ತೆಗೆದುಕೊಳ್ಳಲು ಹೋಗಬೇಡಿ.