ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Daily Horoscope: ಪುಷ್ಯ ನಕ್ಷತ್ರದ ಅಧಿಪತಿ ಶನಿಯಿಂದ ಈ ರಾಶಿಯವರಿಗೆ ಭಾರೀ ಒಳಿತು!

ಇಂದು ವಿಶ್ವವಸುನಾಮ ಸಂವತ್ಸರದ ದಕ್ಷಿಣಾಯನ ವರ್ಷ ಋತು ಆಶ್ವಯುಜ ಮಾಸದ ಕೃಷ್ಣ ಪಕ್ಷದ, ನವಮಿ ತಿಥಿ, ಪುಷ್ಯ ನಕ್ಷತ್ರ, ಅಕ್ಟೋಬರ್‌ 15ನೇ ತಾರೀ‌ಖಿನ ಬುಧವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.

ಬುಧವಾರದ ಈ ದಿನ ರಾಶಿ ಭವಿಷ್ಯ ಹೇಗಿದೆ?

-

Profile Pushpa Kumari Oct 15, 2025 6:00 AM

ಬೆಂಗಳೂರು: ಇಂದು ವಿಶ್ವ ವಸುನಾಮ ಸಂವತ್ಸರದ ದಕ್ಷಿಣಾಯನ ವರ್ಷ ಋತು ಆಶ್ವಯುಜ ಮಾಸದ ಕೃಷ್ಣ ಪಕ್ಷದ, ನವಮಿ ತಿಥಿ, ಅಕ್ಟೋಬರ್ 15ನೇ ತಾರೀಖಿನ ಬುಧವಾರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ(Daily Horoscope) ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಪುಷ್ಯ ನಕ್ಷತ್ರದ ಅಧಿಪತಿ ಶನಿ ಆಗಿದ್ದಾನೆ. ಹೀಗಾಗಿ ಎಲ್ಲ ರಾಶಿಗೆ ಪರಿಣಾಮ ಬೀರುತ್ತದೆ‌. ಮೇಷ ರಾಶಿಯವರಿಗೆ ಇಂದು ಸ್ವಲ್ಪ ಕಷ್ಟಕರವಾದ ದಿನವಾಗಿದೆ. ತಾಯಿಯ ಆರೋಗ್ಯ, ಆಸ್ತಿ- ಪಾಸ್ತಿ ವಿಚಾರವಾಗಿ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ. ಮನಸ್ಸಿಗೆ ಇಂದು ಅಷ್ಟಾಗಿ ನೆಮ್ಮದಿ ಇರುವುದಿಲ್ಲ.

ವೃಷಭ ರಾಶಿ: ವೃಷಭ ರಾಶಿ ಅವರಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಬಂಧು ಬಾಂಧವರಿಂದಲೂ ಬಹಳನೇ ಒಳ್ಳೆಯ ದಿನವಾಗಿದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಸಂಸಾರದ ವಿಚಾರದಲ್ಲಿ ಮನಸ್ಸಿಗೆ ತೊಂದರೆ ಜಾಸ್ತಿಯಾಗಬಹುದು. ಆರ್ಥಿಕ ವಿಚಾರದಲ್ಲೂ ಹೆಚ್ಚು ಗಮನ ವನ್ನು ನೀಡಬೇಕಾಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಹಿಂದಿನ ಎರಡು ಮೂರು ದಿನಗಳ ಮನಸ್ಸಿನ ನೋವೆಲ್ಲ ಮಯವಾಗಲಿದೆ. ಇದ್ದ ಸಮಸ್ಯೆ ಎಲ್ಲ ಪರಿಹಾರ ಆಗಿ ಮನಸ್ಸಿಗೆ ಖುಷಿ ಸಿಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಕಷ್ಟಕರವಾದ ದಿನ ವಾಗಿದೆ‌. ನಿಮ್ಮ ಮುಖ್ಯವಾದ ವಿಚಾರ ದಲ್ಲಿ ಯಾವುದೇ ನಿರ್ಧಾರಗಳು ಇಂದು ಬೇಡ. ಯಾವುದೇ ಮೀಟಿಂಗ್, ವ್ಯವಹಾರದಲ್ಲಿ ಇಂದು ಪಾಲ್ಗೊಳ್ಳುವುದು ಉತ್ತಮವಲ್ಲ.

ಕನ್ಯಾ ರಾಶಿ: ಕನ್ಯಾ ರಾಶಿ ಅವರಿಗೆ ಉತ್ತಮವಾದ ದಿನವಾಗಿದ್ದು ಇಷ್ಟಾರ್ಥ ಸಿದ್ದಿ ಯಾಗಲಿದೆ.‌ ಅದೇ ರೀತಿ ಮನಸ್ಸಿಗೆ ನೆಮ್ಮದಿ ಇದ್ದು ಅಂದುಕೊಂಡ ಕೆಲಸ ಕಾರ್ಯಗಳು ಎಲ್ಲವೂ ನಡೆಯಲಿದೆ.

ಇದನ್ನೂ ಓದಿ:Vastu Tips: ಮಲಗುವ ಕೋಣೆಯಲ್ಲಿ ನಕಾರಾತ್ಮಕ ಶಕ್ತಿ ಇದ್ದರೆ ತಿಳಿಯುವುದು ಹೇಗೆ?

ತುಲಾ ರಾಶಿ: ತುಲಾ ರಾಶಿಯಲ್ಲಿ ಇರುವವರಿಗೆ ಕಾರ್ಯ ಕ್ಷೇತ್ರದಲ್ಲಿ ತೊಂದರೆ ಉಂಟಾಗಲಿದೆ. ಅದೇ ರೀತಿ ಕಾರ್ಯ ಕ್ಷೇತ್ರದಲ್ಲಿ ಚಾಲೆಂಜ್ ಗಳು ಎದುರಾಗಬಹುದು.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಉತ್ತಮ ದಿನವಾಗಿದ್ದು ಭಾಗ್ಯೋದಯವಾದ ದಿನ ಆಗುತ್ತದೆ. ಆದರೂ ಇಂದು ಹಿರಿಯರ ಭಗವಂತನ ಆಶೀರ್ವಾದ ಬಹಳ ಮುಖ್ಯವಾಗುತ್ತದೆ. ಇನ್ನು ಎಲ್ಲರ ಜೊತೆ ವಿನಯದಿಂದ ವರ್ತಿಸಬೇಕು.

ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಮನಸ್ಸಿಗೆ ಬಹಳನೇ ಕ್ಷೇಷ ವಾದ ದಿನವಾಗಿದೆ. ಪ್ರೀತಿ ಪಾತ್ರರಿಂದ ಯಾವುದೇ ಸಹಕಾರ ನಿಮಗೆ ಸಿಗುವುದಿಲ್ಲ. ಆರೋಗ್ಯ ಬಗ್ಗೆಯೂ ಹೆಚ್ಚಿನ ಗಮನ ವಹಿಸಬೇಕಾಗುತ್ತದೆ.

ಮಕರ ರಾಶಿ: ಮಕರ ರಾಶಿ ಅವರಿಗೆ ಉತ್ತಮವಾದ ದಿನ ವಾಗಿದೆ.ಮನೆಯಲ್ಲಿ ನೆಮ್ಮದಿ ಹಾಗೂ ಮನಸ್ಸಿನಲ್ಲಿಯೂ ಖುಷಿ ಸಿಗಲಿದೆ. ದಾಂಪತ್ಯ ವಿಚಾರದಲ್ಲೂ ನೆಮ್ಮದಿ ಸಿಗಲಿದೆ.

ಕುಂಭರಾಶಿ: ಕುಂಭ ರಾಶಿಯವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಆದರೂ ಕೂಡ ಶತ್ರುಗಳಿಂದ ನಿಮಗೆ ಜಯವಾಗುತ್ತದೆ. ಸಾಮಾಜಿಕ ಕೆಲಸದಲ್ಲಿ ಯಾವುದೇ ತೊಂದರೆ ಇಲ್ಲದೆ ಬಗೆಹರಿಯಲಿದೆ

ಮೀನ ರಾಶಿ: ಮೀನ ರಾಶಿ ಅವರಿಗೆ ನಿಮ್ಮ ಐಕ್ಯೂ, ಬುದ್ಧಿವಂತಿಕೆ ಬಹಳನೇ ಜಾಸ್ತಿ ಇರುತ್ತದೆ. ಆದ್ದರಿಂದ ಮಾಡುವ ಕೆಲಸದಲ್ಲಿ ಬುದ್ಧಿವಂತಿಕೆ ಉಪಯೋಗಿಸಿಕೊಂಡು ಕೆಲಸ ಮಾಡ ಬೇಕಾಗುತ್ತದೆ. ಎಲ್ಲ ಕೆಲಸದಲ್ಲಿ ಯಶಸ್ಸು ಸಿಗಬಹುದು.ಆದರೆ ಮಾನಸಿಕವಾಗಿ ಸ್ವಲ್ಪ ಸಮಸ್ಯೆ ಎದುರಾಗಬಹುದು.