ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಅನುರಾಧ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.
ಮೇಷ ರಾಶಿ: ಈ ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ನಿಮ್ಮ ಪ್ರೀತಿ ಪಾತ್ರರ ಸಹಕಾರ ನಿಮಗೆ ಸಿಗದೇ ಇರಬಹುದು. ಮುಖ್ಯವಾದ ಸಂಬಂಧದಲ್ಲಿ ಕೂಡ ಒಡಕು ಕಾಣಬಹುದು.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ. ಪ್ರೀತಿ ಪಾತ್ರರೂ ಹಾಗೂ ಸ್ನೇಹಿತರ ಜೊತೆ ಸುಖದಾಯಕ ವಾದ ದಿನವನ್ನು ಕಳೆಯುತ್ತೀರಿ.
ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಕಾಣುತ್ತೀರಿ. ಹಿಂದೆ ಇದ್ದ ನೋವೆಲ್ಲ ಇಂದು ಬಗೆಹರಿಯುತ್ತದೆ.
ಕಟಕ ರಾಶಿ: ಕಟಕ ರಾಶಿಗೆ ಇಂದು ಬುದ್ದಿವಂತಿಕೆ ಉಪಯೋಗಿಸಿ ಮಾಡುವ ಕೆಲಸದಲ್ಲಿ ಜಯ ಪ್ರಾಪ್ತಿಯಾಗುತ್ತದೆ. ಆದರೆ ಹಣಕಾಸಿನ ವಿಚಾರದಲ್ಲಿ ನಿಮಗೆ ತೊಂದರೆಯಾಗುತ್ತದೆ. ಹೀಗಾಗಿ ಬಹಳಷ್ಟು ಜಾಗರೂಕತೆಯಿಂದ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ.
Vastu Tips: ಮನೆಯಲ್ಲಿ ಮೆಣಸಿನ ಗಿಡ ನೆಡಬಹುದೇ? ವಾಸ್ತು ಶಾಸ್ತ್ರ ಏನು ಹೇಳುತ್ತದೆ ಮೊದಲು ತಿಳಿಯಿರಿ!
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಮನೆಯ ಜವಾಬ್ದಾರಿಗಳು ಹೆಚ್ಚಾಗಬಹುದು. ಕೋರ್ಟ್,ಕಛೇರಿ ವ್ಯವಹಾರದಲ್ಲೂ ಕೂಡ ಹೆಚ್ಚಿನ ಜಾಗೃತಿ ವಹಿಸಬೇಕಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಬಂಧು- ಬಳಗದವರೆಲ್ಲರೂ ನಿಮಗೆ ಸಹಕಾರ ನೀಡಬಹುದು. ಇಂದು ನಿಮ್ಮ ಆತ್ಮವಿಶ್ವಾಸ ಕೂಡ ಚೆನ್ನಾಗಿ ಇರುತ್ತದೆ.
ತುಲಾ ರಾಶಿ: ತುಲಾ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಮನೆಯವರ ಬಗ್ಗೆ ಕೂಡ ಜವಾಬ್ದಾರಿವಹಿಸಿ ಅವರ ಜೊತೆ ಸಮಯ ಕಳೆಯಬೇಕಾಗುತ್ತದೆ.
ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಮನಸ್ಸಿನ ವ್ಯಾಕ್ಯೂಲತೆ ಇಂದು ಬಗೆಹರಿಯುತ್ತದೆ. ಉತ್ತಮ ಮಾರ್ಗದರ್ಶನ ಪ್ರಾಪ್ತಿಯಾಗಿ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ಆದರೆ ಸ್ನೇಹಿತರ ಬಗ್ಗೆ ಬೇಸರ ಉಂಟಾಗಬಹುದು. ಮುಖ್ಯವಾದ ಯಾವುದೇ ನಿರ್ಧಾರ ಇಂದು ಕೈಗೊಳ್ಳಲು ಹೋಗಬೇಡಿ
ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಭಾಗ್ಯೋದಯವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ ಹಾಗೂ ಮಿತ್ರರಿಂದ ಒಳಿತಾಗುತ್ತದೆ.
ಕುಂಭರಾಶಿ: ಈ ರಾಶಿಯವರಿಗೆ ಭಾಗ್ಯೋದಯವಾದ ದಿನವಾಗಿದೆ. ಇಂದು ಕೆಲಸಕಾರ್ಯದಲ್ಲಿ ಹೆಚ್ಚಿನ ಪ್ರತಿಷ್ಠೆ ಪ್ರಾಪ್ತಿಯಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಹಿಂದಿನ ಎರಡು ಮೂರು ದಿನಗಳ ನೋವೆಲ್ಲ ಇಂದು ಪರಿಹಾರವಾಗುತ್ತದೆ. ಕೆಲಸ ಕಾರ್ಯದಲ್ಲಿ ಕೂಡ ಯಶಸ್ಸು ಸಿಗುತ್ತದೆ.