ತಂದೆ-ತಾಯಿ ಕಡೆಗಣನೆ ಕಳವಳಕಾರಿ
ತಾಯಿ- ತಂದೆಯನ್ನು ಅನಾಥರನ್ನಾಗಿ ಮಾಡುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂತಹ ಅಮಾನವೀಯ ಕೃತ್ಯಗಳಿಗೆ ತಡೆ ಹಾಕಬೇಕು ಎಂಬ ಉದ್ದೇಶದಿಂದ ಹಿರಿಯ ನಾಗರಿಕ ರನ್ನು ಆರೈಕೆ ಮಾಡದೆ ನಿರ್ಲಕ್ಷಿಸುವ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಹಕ್ಕು ರದ್ದುಗೊಳಿಸಲು ಅವಕಾಶ ಕಲ್ಪಿ ಸುವ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದ್ದು ಸ್ವಾಗತಾರ್ಹ ನಡೆ