ಒಲಿದು ಬಂತು ಕಂಕಣ ಭಾಗ್ಯ; ತವರು ತೊರೆದ ತಂಗೀರ ಅಳಲು
Annayya serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಣ್ಣಯ್ಯ ಧಾರಾವಾಹಿಯಲ್ಲಿ ಅಂತೂ ರತ್ನ ಮದುವೆ ಅದ್ಧೂರಿಯಾಗಿ ನೆರವೇರಿದೆ. ಅಣ್ಣಯ್ಯ ಮದುವೆ ಮಾಡಿರುವ ಯಾವ ತಂಗಿಯರೂ ಸಂತೋಷ ಕಾಣುತ್ತಿಲ್ಲ. ಎಲ್ಲರೂ ಮೋಸ ಹೋಗಿರುವವರೇ. ಮತ್ತೊಬ್ಬಳನ್ನು ಪ್ರೀತಿಸುವ ಗಂಡ ಗುಂಡಮ್ಮನ ಪತಿ, ರಾಣಿಗೆ ಪೆದ್ದು ಗಂಡ ಆದರೆ ಇದೀಗ ರತ್ನಾಳಿಗೂ ಸರಿಯಾದ ಗಂಡ ಕೊನೆಗೂ ಸಿಕ್ಕಿಲ್ಲ. ಅಂತೂ ವೀರಭದ್ರ ಮನೆಗೆ ಸೊಸೆಯಾಗಿ ಹೋಗಿದ್ದಾಳೆ ರತ್ನಾ.