ಭಾರಿ ಮಳೆಗೆ ತೀರ್ಥಹಳ್ಳಿಯಲ್ಲಿ ಮೂವರು ಸಾವು
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಭಾನುವಾರ ಮುಂಜಾನೆ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಗುಡ್ಡ ಕುಸಿತದಿಂದಾಗಿ ಶೆಡ್ ನಲ್ಲಿ ಮಲಗಿದ್ದ ಮೂವರು ಸಮಾಧಿಯಾಗಿದ್ದಾರೆ. ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.