ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೀಡೆ

IND vs SA: ಭಾರತ ವಿರುದ್ದದ ಒಡಿಐ, ಟಿ20 ಸರಣಿಗಳಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ!

ಭಾರತ ಪ್ರವಾಸದ ದಕ್ಷಿಣ ಆಫ್ರಿಕಾ ಒಡಿಐ, ಟಿ20ಐ ತಂಡಗಳ ಪ್ರಕಟ!

South Africa ODI, T20I Squads: ಭಾರತ ವಿರುದ್ಧದ ಒಡಿಐ ಹಾಗೂ ಟಿ20ಐ ಸರಣಿಗಳಿಗೆ ದಕ್ಷಿಣ ಆಫ್ರಿಕಾ ತಂಡಗಳನ್ನು ಪ್ರಕಟಿಸಲಾಗಿದೆ. ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಕ್ವಿಂಟನ್‌ ಡಿ ಕಾಕ್‌ ಹಾಗೂ ಏಡೆನ್‌ ಮಾರ್ಕ್ರಮ್‌ ಅವರು ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.

‌KSCA Election: ಡಿಸೆಂಬರ್‌ 7 ರಂದು ಕೆಎಸ್‌ಸಿಎ ಚುನಾವಣೆ, ಕರ್ನಾಟಕ ಹೈಕೋರ್ಟ್‌ ಆದೇಶ!

ಡಿಸೆಂಬರ್‌ 7 ರಂದು ಕೆಎಸ್‌ಸಿಎ ಚುನಾವಣೆ: ಹೈಕೋರ್ಟ್

ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ಚುನಾವಣೆಯ ದಿನಾಂಕ ಪ್ರಕಟವಾಗಿದೆ. ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಕೆಎಸ್‌ಸಿಎ ಕ್ರಿಕೆಟ್‌ ಸಂಸ್ಥೆಯ ವಿವಿಧ ಹುದ್ದೆಗಳಿಗೆ ಚುನಾವಣೆಯನ್ನು ಡಿಸೆಂಬರ್‌ 7 ರಂದು ನಡೆಸಬೇಕೆಂದು ನ್ಯಾಯಾಲಯ ಆದೇಶ ನೀಡಿದೆ. ಭಾರತ ತಂಡದ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್‌ ನಾಯಕತ್ವದ ಟೀಮ್‌ ಗೇಮ್‌ ಚೇಂಜರ್ಸ್‌ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದೆ.

ಬಾಂಗ್ಲಾದೇಶ ಎ ವಿರುದ್ಧ ಸೂಪರ್‌ ಓವರ್‌ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಭಾರತ ಎ!

ರೈಸಿಂಗ್‌ ಸ್ಟಾರ್ಸ್‌ ಏಷ್ಯಾ ಕಪ್‌ ಸೆಮಿಫೈನಲ್‌ನಲ್ಲಿ ಸೋತ ಭಾರತ ಎ!

ಪ್ರಸ್ತುತ ನಡೆಯುತ್ತಿರುವ ರೈಸಿಂಗ್‌ ಸ್ಟಾರ್ಸ್‌ ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತ ಎ ತಂಡದ ಕನಸು ಭಗ್ನವಾಗಿದೆ. ಬಾಂಗ್ಲಾದೇಶ ಎ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ರೋಚಕ ಓವರ್‌ನಲ್ಲಿ ಭಾರತ ಎ ತಂಡ ಸೋಲು ಅನುಭವಿಸಿತು. ಆ ಮೂಲಕ ಟೂರ್ನಿಯ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಯಿತು.

ಭಾರತದ ಪರ 4ನೇ ಕ್ರಮಾಂಕದಲ್ಲಿ ಆಡಬಲ್ಲ ಆಟಗಾರನನ್ನು ಆರಿಸಿದ ಸಿತಾಂಶು ಕೊಟಕ್‌!

ಶುಭಮನ್‌ ಗಿಲ್‌ ಅನುಪಸ್ಥಿತಿಯಲ್ಲಿ 4ನೇ ಕ್ರಮಾಂಕಕ್ಕೆ ಯಾರು?

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಶುಭಮನ್‌ ಗಿಲ್ ಅವರ ಅಲಭ್ಯತೆಯ ಕುರಿತು ಮಾತನಾಡಿರುವ ಭಾರತ ತಂಡದ ಬ್ಯಾಟಿಂಗ್‌ ಕೋಚ್‌ ಸಿತಾಂಶು ಕೊಟಕ್, ಮೊದಲ ಪಂದ್ಯದಲ್ಲಿ ಗಿಲ್ ಗಾಯಕ್ಕೆ ತುತ್ತಾದ ಬಳಿಕ ಧ್ರುವ್ ಜುರೆಲ್ 4ನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಿದ್ದರು. ಆದರೆ, ಗಿಲ್‌ ಫಿಟ್ನೆಸ್‌ ಪರೀಕ್ಷೆಯ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಹೇಳಿದ್ದಾರೆ.

IND vs SA: ಎರಡನೇ ಟೆಸ್ಟ್‌ಗೆ ಭಾರತ ತಂಡದಲ್ಲಿ ಎರಡು ಬದಲಾವಣೆ ಸೂಚಿಸಿದ ಆರ್‌ ಅಶ್ವಿನ್‌!

ಎರಡನೇ ಟೆಸ್ಟ್‌ಗೆ ಭಾರತಕ್ಕೆ 2 ಬದಲಾವಣೆ ಸೂಚಿಸಿದ ಆರ್‌ ಅಶ್ವಿನ್‌!

ಶನಿವಾರ ಗುಹವಾಟಿಯಲ್ಲಿ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಕುರಿತು ಮಾತನಾಡಿರುವ ಮಾಜಿ ಸ್ಪಿನ್ ಬೌಲರ್ ಆರ್ ಅಶ್ವಿನ್, ಮೊದಲ ಪಂದ್ಯದಲ್ಲಿ ಗಾಯಗೊಂಡು ತಂಡದಿಂದ ಹೊರಗುಳಿದಿರುವ ನಾಯಕ ಶುಭ್ ಮನ್ ಗಿಲ್ ಬದಲಿಗೆ ಸಾಯಿ ಸುದರ್ಶನ್ ಮತ್ತು ಅಕ್ಷರ್ ಪಟೇಲ್ ಬದಲಿಗೆ ನಿತೀಶ್ ರೆಡ್ಡಿ ಅವರಿಗೆ ತಂಡದಲ್ಲಿ ಸ್ಥಾನ ನೀಡುವುದು ಸೂಕ್ತ ಎಂದಿದ್ದಾರೆ.

IND vs SA: ಭಾರತ ತಂಡದ 3ನೇ ಕ್ರಮಾಂಕಕ್ಕೆ ಸೂಕ್ತ ಆಟಗಾರನನ್ನು ಆರಿಸಿದ ಅಜಿಂಕ್ಯ ರಹಾನೆ!

ಭಾರತದ 3ನೇ ಕ್ರಮಾಂಕಕ್ಕೆ ಸೂಕ್ತ ಆಟಗಾರನನ್ನು ಆರಿಸಿದ ರಹಾನೆ!

ಭಾರತ ಟೆಸ್ಟ್‌ ತಂಡದಲ್ಲಿ ಮೂರನೇ ಕ್ರಮಾಂಕಕ್ಕೆ ದೀರ್ಘಾವಧಿ ಯೋಜನೆಯ ದೃಷ್ಟಿಯಲ್ಲಿ ವಾಷಿಂಗ್ಟನ್‌ ಸುಂದರ್‌ ಅಥವಾ ಸಾಯಿ ಸುದರ್ಶನ್‌ ಅವರಲ್ಲಿ ಒಬ್ಬರನ್ನು ಪರಿಗಣಿಸಬೇಕು ಎಂದು ಭಾರತ ತಂಡದ ಮಾಜಿ ಬ್ಯಾಟ್ಸ್‌ಮನ್‌ ಅಜಿಂಕ್ಯ ರಹಾನೆ ಸಲಹೆ ನೀಡಿದ್ದಾರೆ. ನವೆಂಬರ್‌ 22 ರಂದು ಗುವಾಹಟಿಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಎರಡನೇ ಟೆಸ್ಟ್‌ ಆರಂಭವಾಗಲಿದೆ.

AUS vs ENG: 7   ವಿಕೆಟ್‌ ಕಬಳಿಸಿ ಮೊಹಮ್ಮದ್‌ ಶಮಿ ದಾಖಲೆ ಮುರಿದ ಮಿಚೆಲ್‌ ಸ್ಟಾರ್ಕ್‌!

7 ವಿಕೆಟ್‌ ಕಿತ್ತು ಮೊಹಮ್ಮದ್‌ ಶಮಿ ದಾಖಲೆ ಮುರಿದ ಮಿಚೆಲ್‌ ಸ್ಟಾರ್ಕ್‌!

Mitchell Starc Breakes Shami's Record: ಇಂಗ್ಲೆಂಡ್‌ ವಿರುದ್ಧ ಆಶಸ್‌ ಟೆಸ್ಟ್‌ ಸರಣಿಯ ಮೊದಲನೇ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ವೇಗದ ಬೌಲರ್‌ ಮಿಚೆಲ್‌ ಸ್ಟಾರ್ಕ್‌ 7 ವಿಕೆಟ್‌ ಸಾಧನೆ ಮಾಡಿದ್ದಾರೆ. ಆ ಮೂಲಕ ಭಾರತದ ವೇಗಿ ಮೊಹಮ್ಮದ್‌ ಶಮಿಯ ಏಳು ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

IND vs SA: ದಕ್ಷಿಣ ಆಫ್ರಿಕಾ ತಂಡಕ್ಕೆ ಆಘಾತ, ಎರಡನೇ ಟೆಸ್ಟ್‌ನಿಂದಲೂ ಕಗಿಸೊ ರಬಾಡ ಔಟ್‌!

IND vs SA: ಎರಡನೇ ಟೆಸ್ಟ್‌ನಿಂದ ಕಗಿಸೊ ರಬಾಡ ಔಟ್‌!

Kagiso Rabada out of 2nd Test: ಗಾಯದಿಂದ ಇನ್ನೂ ಗುಣಮುಖರಾಗದ ಕಾರಣ ದಕ್ಷಿಣ ಆಫ್ರಿಕಾ ತಂಡದ ಹಿರಿಯ ವೇಗಿ ಕಗಿಸೊ ರಬಾಡ ಎರಡನೇ ಟೆಸ್ಟ್‌ ಪಂದ್ಯದಿಂದ ಹೊರ ನಡೆದಿದ್ದಾರೆ. ಕೋಲ್ಕತಾ ಟೆಸ್ಟ್‌ನಲ್ಲಿಯೂ ರಬಾಡ ಆಡಿರಲಿಲ್ಲ. ಈ ಬಗ್ಗೆ ಹರಿಣ ಪಡೆಯ ನಾಯಕ ತೆಂಬಾ ಬವೂಮಾ ಸ್ಪಷ್ಟಪಡಿಸಿದ್ದಾರೆ.

IND vs SA: ಗುವಾಹಟಿಯ ನಿಗೂಢ ಪಿಚ್‌ನಲ್ಲಿ ಭಾರತಕ್ಕೆ ಟೆಸ್ಟ್‌ ಗೆಲ್ಲುವ ಸವಾಲು

ಚಾರಿತ್ರಿಕ ಸಾಧನೆಗಾಗಿ ತೆಂಬಾ ಪಡೆ ತವಕ; ಸರಣಿ ಸಮಬಲಕ್ಕೆ ಭಾರತ ಹೋರಾಟ

India vs South Africa 2nd Test: ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಕತ್ತುನೋವಿಗೆ ಸಿಲುಕಿದ್ದ ನಾಯಕ ಶುಭಮನ್‌ ಗಿಲ್‌ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಅವರ ಅನುಪಸ್ಥಿತಿಯಲ್ಲಿ ರಿಷಭ್‌ ಪಂತ್‌ ತಂಡವನ್ನು ಮುನ್ನಡೆಸಲಿದ್ದಾರೆ. ಇದನ್ನು ಶುಕ್ರವಾರ ಬಿಸಿಸಿಐ ಖಚಿತಪಡಿಸಿತು. ಗಿಲ್‌ ಅವರ ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಅಥವಾ ಕನ್ನಡಿಗ ದೇವದತ್ತ ಪಡಿಕ್ಕಲ್ ಅವರು ಸ್ಥಾನ ಪಡೆಯುವ ಸಾಧ್ಯತೆ ಇದೆ.

ದೆಹಲಿ ಮಾಲಿನ್ಯ:  ಪ್ರಮುಖ ಟೂರ್ನಮೆಂಟ್‌ನ ನಾಕೌಟ್ ಹಂತಗಳನ್ನು ದೆಹಲಿಯಿಂದ ಮುಂಬೈಗೆ ಸ್ಥಳಾಂತರಿಸಿದ ಬಿಸಿಸಿಐ

ದೆಹಲಿ ಹದಗೆಟ್ಟ ಗಾಳಿಯ ಗುಣಮಟ್ಟ; ಪ್ರಮುಖ ಕ್ರಿಕೆಟ್‌ ಟೂರ್ನಿ ಸ್ಥಳಾಂತರ

Pollution woes: ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (NCR) ವಾಯು ಗುಣಮಟ್ಟದ ಸೂಚ್ಯಂಕಗಳು ಇತ್ತೀಚೆಗೆ ತುಂಬಾ ಕಳಪೆ ಮತ್ತು ಗಂಭೀರ ವರ್ಗಗಳಿಗೆ ಇಳಿದಿದ್ದು, ಕ್ರೀಡಾಪಟುಗಳು, ಅಧಿಕಾರಿಗಳು ಮತ್ತು ಪ್ರೇಕ್ಷಕರಿಗೆ ಗಮನಾರ್ಹ ಆರೋಗ್ಯ ಅಪಾಯಗಳನ್ನು ಹೆಚ್ಚಿಸಿವೆ. ಶುಕ್ರವಾರ ಬೆಳಿಗ್ಗೆ ದೆಹಲಿಯ ಗಾಳಿಯ ಗುಣಮಟ್ಟ ಸ್ವಲ್ಪ ಸುಧಾರಿಸಿತು, ಆದರೆ ಸತತ ಏಳನೇ ದಿನವೂ ತುಂಬಾ ಕಳಪೆ ವ್ಯಾಪ್ತಿಯಲ್ಲಿಯೇ ಉಳಿದಿದೆ.

ಡಬ್ಲ್ಯುಪಿಎಲ್‌ ಆಟಗಾರ್ತಿಯರ ಹರಾಜು ಪಟ್ಟಿ ಬಿಡುಗಡೆ; ಮಾರ್ಕ್ಯೂ ಸೆಟ್‌ನಲ್ಲಿ ದೀಪ್ತಿ ಶರ್ಮಾ, ಮೆಗ್ ಲ್ಯಾನಿಂಗ್

WPL 2026: ಡಬ್ಲ್ಯುಪಿಎಲ್‌ ಆಟಗಾರ್ತಿಯರ ಹರಾಜು ಪಟ್ಟಿ ಬಿಡುಗಡೆ

WPL 2026 auction: ಹತ್ತೊಂಬತ್ತು ಆಟಗಾರ್ತಿಯರು ಗರಿಷ್ಠ ಮೂಲ ಬೆಲೆ 50 ಲಕ್ಷ ರೂ.ಗಳ ಪಟ್ಟಿಯಲ್ಲಿದ್ದಾರೆ. ಉಳಿದಂತೆ 11 ಆಟಗಾರ್ತಿಯರು 40 ಲಕ್ಷ ರೂ.ಗಳ ವಿಭಾಗದಲ್ಲಿ ಮತ್ತು 88 ಆಟಗಾರ್ತಿಯರು 30 ಲಕ್ಷ ರೂ.ಗಳ ಗುಂಪಿನಲ್ಲಿ ಸ್ಥಾನ ಪಡೆದಿದ್ದಾರೆ.

Joe Root: ಶೂನ್ಯ ಸುತ್ತಿ ವಿರಾಟ್‌ ಕೊಹ್ಲಿಯ ದಾಖಲೆ ಸರಿಗಟ್ಟಿದ ಜೋ ರೂಟ್‌

ಆ್ಯಶಸ್ ಮೊದಲ ಟೆಸ್ಟ್‌ನಲ್ಲಿ ಶೂನ್ಯ ಸುತ್ತಿ ಅನಗತ್ಯ ದಾಖಲೆ ಬರೆದ ರೂಟ್‌

Australia vs England 1st Test: ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡವು ಆರಂಭಿಕ ಬ್ಯಾಟ್ಸ್‌ಮನ್ ಜ್ಯಾಕ್ ಕ್ರಾಲಿ ಅವರನ್ನು ಮೊದಲ ಓವರ್‌ನಲ್ಲೇ ಕಳೆದುಕೊಂಡು ಕಳಪೆ ಆರಂಭ ಕಂಡಿತು. ಮಿಚೆಲ್‌ ಸ್ಟಾರ್ಕ್‌ ಅವರ ಬೆಂಕಿ ಉಂಡೆಗಳ ವೇಗದ ಬೌಲಿಂಗ್‌ ಮುಂದೆ ಆಂಗ್ಲ ಬ್ಯಾಟರ್‌ಗಳು ಪರದಾಡಿ 172 ರನ್‌ಗೆ ಸರ್ವಪತನ ಕಂಡರು. ಮಿಚೆಲ್‌ ಸ್ಟಾರ್‌ ಕೇವಲ 58 ರನ್‌ಗೆ 7 ವಿಕೆಟ್‌ ಕಿತ್ತು ಮಿಂಚಿದರು.

ಶುಭಮನ್ ಗಿಲ್ ತಂಡದಿಂದ ಬಿಡುಗಡೆ; ಗುವಾಹಟಿ ಟೆಸ್ಟ್‌ನಲ್ಲಿ ರಿಷಭ್ ಪಂತ್ ನಾಯಕ

ಗಾಯದ ಬಗ್ಗೆ ತಜ್ಞರ ಅಭಿಪ್ರಾಯ ಪಡೆಯಲು ಮುಂಬೈಗೆ ಪ್ರಯಾಣಿಸಿದ ಗಿಲ್‌

Gill ruled out of 2nd Test: ಗಿಲ್ ಸ್ಥಾನಕ್ಕೆ ಸಾಯಿ ಸುದರ್ಶನ್ ಹಾಗೂ ಕರ್ನಾಟಕದ ದೇವದತ್ತ ಪಡಿಕ್ಕಲ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈಗಾಗಲೇ ಮೂರನೇ ಕ್ರಮಾಂಕದಲ್ಲಿ ಆಡಿರುವುದರಿಂದ ಸುದರ್ಶನ್ ಅವರನ್ನೇ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ. ವೇಗದ ಪಿಚ್‌ ಆಗಿರುವ ಕಾರಣ ಅಕ್ಷರ್‌ ಪಟೇಲ್‌ ಅವರನ್ನು ಕೈ ಬಿಟ್ಟು ಅವರ ಸ್ಥಾನದಲ್ಲಿ ಆಲ್‌ರೌಂಡರ್‌ ನಿತೀಶ್‌ ಕುಮಾರ್‌ ರೆಡ್ಡಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.

Smriti Mandhana: ಸ್ಪೆಷಲ್‌ ವಿಡಿಯೊ ಮೂಲಕ ಪಾಲಶ್‌ ಮುಚ್ಚಲ್‌ ಜತೆಗಿನ ನಿಶ್ಚಿತಾರ್ಥ ಘೋಷಿಸಿದ ಸ್ಮೃತಿ ಮಂಧಾನ

ಮುನ್ನಾಭಾಯಿ ಶೈಲಿಯಲ್ಲಿ ನಿಶ್ಚಿತಾರ್ಥ ಘೋಷಿಸಿದ ಸ್ಮೃತಿ ಮಂಧಾನ

Smriti Mandhana engagement: ಈಗಾಗಲೇ ವರದಿಯಾದ ಪ್ರಕಾರ ಸ್ಮೃತಿ ಮಂಧಾನ ಹಾಗೂ ಚಲನಚಿತ್ರ ನಿರ್ಮಾಪಕ ಪಾಲಶ್‌ ಮುಚ್ಚಲ್‌ ವಿವಾಹ ನವೆಂಬರ್‌ 23 ರಂದು ಮಹಾರಾಷ್ಟ್ರ ಸಾಂಗ್ಲಿಯಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಇಂದೋರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಪಲಾಶ್‌, ‘ಸ್ಮೃತಿ ಸದ್ಯದಲ್ಲೇ ಇಂದೋರ್‌ನ ಸೊಸೆ ಆಗಲಿದ್ದಾರೆ’ ಎಂದು ತಮ್ಮ ಮದುವೆ ವಿಚಾರವನ್ನು ಬಹಿರಂಗಪಡಿಸಿದ್ದರು.

SMAT 2025-26: ಸಯ್ಯದ್​ ಮುಷ್ತಾಕ್​ ಅಲಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ; ಪಡಿಕ್ಕಲ್‌, ನಾಯರ್ ಕಮ್‌ಬ್ಯಾಕ್‌

ಮುಷ್ತಾಕ್​ ಅಲಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ; ಅಗರ್ವಾಲ್‌ ನಾಯಕ

ನವೆಂಬರ್​ 26ರಿಂದ ಅಹಮದಾಬಾದ್​ನಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಕರ್ನಾಟಕವು ತನ್ನ ಮೊದಲ ಪಂದ್ಯದಲ್ಲಿ ಉತ್ತರಾಖಂಡ ಎದುರು ಆಡಲಿದೆ. ಕರ್ನಾಟಕ ತಂಡ 'ಡಿ' ಗುಂಪಿನಲ್ಲಿ ಸ್ಥಾನ ಪಡೆದಿದೆ. ಉತ್ತರಾಖಂಡ, ರಾಜಸ್ಥಾನ, ತಮಿಳುನಾಡು, ದೆಹಲಿ, ಸೌರಾಷ್ಟ್ರ ಮತ್ತು ತ್ರಿಪುರ ತಂಡಗಳು ಈ ಗುಂಪಿನಲ್ಲಿವೆ.

IND vs SA: ಊಟದ ಹೊತ್ತಿಗೆ ಚಹಾ!; ಗುವಾಹಟಿ ಟೆಸ್ಟ್‌ ಸಮಯದಲ್ಲಿ ಬದಲಾವಣೆ

ಗುವಾಹಟಿ ಟೆಸ್ಟ್‌ ಸಮಯದಲ್ಲಿ ಬದಲಾವಣೆ; ಕಾರಣವೇನು?

Guwahati Test: ಹಾಲಿ ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ತಂಡವು ಸರಣಿಯಲ್ಲಿ ಈಗಾಗಲೇ 1–0 ಮುನ್ನಡೆಯಲ್ಲಿದೆ. 2010ರಲ್ಲಿ ಭಾರತದ ನೆಲದಲ್ಲಿ ಟೆಸ್ಟ್ ಸರಣಿಯನ್ನು 2–0ಯಿಂದ ಜಯಿಸಿತ್ತು. ಸರಣಿಯಲ್ಲಿ 1–1ರ ಸಮಬಲ ಸಾಧಿಸಲು ಆತಿಥೇಯ ತಂಡಕ್ಕೂ ಈ ಟೆಸ್ಟ್‌ನಲ್ಲಿ ಜಯ ದಾಖಲಿಸಲೇಬೇಕಿದೆ.

World Boxing Cup 2025: 9 ಚಿನ್ನದ ಪದಕಗಳಿಂದ ಇತಿಹಾಸ ಬರೆದ ಭಾರತ, ಮಹಿಳೆಯರಿಗೆ ಅಗ್ರ ಸ್ಥಾನ!

world Boxing Cup: 9 ಚಿನ್ನದ ಪದಕಗಳಿಂದ ಇತಿಹಾಸ ಬರೆದ ಭಾರತ!

2025ರ ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್‌ನಲ್ಲಿ ಭಾರತ ಒಂಬತ್ತು ಚಿನ್ನದ ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ. ಮಹಿಳೆಯರು ಏಳು ಚಿನ್ನದ ಪದಕಗಳನ್ನು ಗೆದ್ದರು, ಇದರಲ್ಲಿ ಜಾಸ್ಮಿನ್ ಲಂಬೋರಿಯಾ ಮತ್ತು ನಿಖತ್ ಜರೀನ್ ಅವರ ಅದ್ಭುತ ಗೆಲುವುಗಳು ಸೇರಿವೆ. ಪುರುಷರು ಎರಡು ಚಿನ್ನದ ಪದಕಗಳನ್ನು ಗೆದ್ದರು, ಇದು ಆತಿಥೇಯ ರಾಷ್ಟ್ರದ ಮಹತ್ವದ ಸಾಧನೆಯಾಗಿದೆ

ಹೊಸ ಹುಡುಗಿ ಜೊತೆ ಮತ್ತೆ ಎಂಗೇಜ್‌ಮೆಂಟ್‌ ಮಾಡಿಕೊಂಡ್ರಾ ಹಾರ್ದಿಕ್‌ ಪಾಂಡ್ಯ?

ಹೊಸ ಹುಡುಗಿ ಜೊತೆ ಮತ್ತೆ ಹಾರ್ದಿಕ್‌ ಪಾಂಡ್ಯ ಎಂಗೇಜ್‌ಮೆಂಟ್?

ಭಾರತ ಕ್ರಿಕೆಟ್‌ ತಂಡದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರ ನಿಶ್ಚಿತಾರ್ಥ ಸದ್ದು ಮಾಡುತ್ತಿದೆ. ಅವರು ತಮ್ಮ ಹೊಸ ಗೆಳತಿ ಮಹಿಕಾ ಶರ್ಮಾ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮಹಿಕಾ ಅವರ ಬೆರಳಿನಲ್ಲಿ ಕಾಣುವ ದೊಡ್ಡ ವಜ್ರದ ಉಂಗುರವು ನಿಶ್ಚಿತಾರ್ಥದ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. ಈ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

IND vs SA: ದಕ್ಷಿಣ ಆಫ್ರಿಕಾ ಒಡಿಐ ಸರಣಿಗೆ ಭಾರತದ ಸಂಭಾವ್ಯ ಆಟಗಾರರ ತಂಡ!

ದಕ್ಷಿಣ ಆಫ್ರಿಕಾ ಒಡಿಐ ಸರಣಿಗೆ ಭಾರತದ ಸಂಭಾವ್ಯ ಆಟಗಾರರ ತಂಡ!

India's Likely ODI Squad: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಒಡಿಐ ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಕೆಲವೇ ದಿನಗಳಲ್ಲಿ ಪ್ರಕಟಿಸಲಿದೆ. ಹಾಗಾಗಿ ಯಾವೆಲ್ಲಾ ಆಟಗಾರರು ಭಾರತ ತಂಡಕ್ಕೆ ಆಯ್ಕೆಯಾಗಬಹುದು ಎಂದು ಇಲ್ಲಿ ವಿವರಿಸಲಾಗಿದೆ. ಹೊಸ ಮುಖಗಳಿಗೂ ಕೂಡ ಮಣೆ ಹಾಕುವ ಸಾಧ್ಯತೆ ಇದೆ.

Anil Kumble: ಮೋಡಿ ಮಾಡುವಂತಿದೆ ಕಾಜಿರಂಗ: ಅನಿಲ್ ಕುಂಬ್ಳೆ

ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಅನಿಲ್ ಕುಂಬ್ಳೆ ಭೇಟಿ

ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಪತ್ನಿಯೊಂದಿಗೆ ಪ್ರವಾಸ ಬಂದಿದ್ದ ಭಾರತದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಇದೊಂದು ಅದ್ಭುತಲೋಕ. ಎಲ್ಲರೂ ಜೀವನದಲ್ಲಿ ಒಮ್ಮೆಯಾದರೂ ಭೇಟಿ ನೀಡಬೇಕಾದ ತಾಣವಿದು. ಕಾಜಿರಂಗ ನಿಜವಾಗಿಯೂ ಮುದ್ದಾಗಿದೆ. ಇಲ್ಲಿನ ಸೌಂದರ್ಯ ನೋಡಿ ನಾನು ಮೋಡಿಗೊಂಡಿದ್ದೇನೆ ಎಂದು ಹೇಳಿದರು.

IND vs SA: ಮೊಹಮ್ಮದ್‌ ಶಮಿಯನ್ನು ಕಡೆಗಣಿಸಿದ ಬಿಸಿಸಿಐ ವಿರುದ್ಧ ಮನೋಜ್‌ ತಿವಾರಿ ಕಿಡಿ!

ಮೊಹಮ್ಮದ್‌ ಶಮಿ ಪರ ಬ್ಯಾಟ್‌ ಬೀಸಿದ ಮನೋಜ್‌ ತಿವಾರಿ!

ಹಿರಿಯ ವೇಗಿ ಮೊಹಮ್ಮದ್‌ ಶಮಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡದ ಬಿಸಿಸಿಐ ಆಯ್ಕೆದಾರರ ನಡೆಯನ್ನು ಮಾಜಿ ಕ್ರಿಕೆಟಿಗ ಮನೋಜ್‌ ತಿವಾರಿ ಖಂಡಿಸಿದ್ದಾರೆ. ಆಯ್ಕೆದಾರರ ಸಂವಹನದ ಬಗ್ಗೆ ಪ್ರಶ್ನೆ ಮಾಡಿದ ಅವರು, ಶಮಿಯನ್ನು ನಡೆಸಿಕೊಳ್ಳುತ್ತಿರುವ ವಿಧಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ashes: ಮೊದಲನೇ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡದ ಪ್ಲೇಯಿಂಗ್‌ XI ಪ್ರಕಟ! ಇಬ್ಬರಿಗೆ ಚೊಚ್ಚಲ ಅವಕಾಶ!

ಆಶಸ್‌ ಮೊದಲನೇ ಟೆಸ್ಟ್‌ಗೆ ಆಸ್ಟ್ರೇಲಿಯಾ ಪ್ಲೇಯಿಂಗ್‌ XI

Australia Playing XI: ಇಂಗ್ಲೆಂಡ್‌ ವಿರುದ್ಧ ಆಶಸ್‌ ಟೆಸ್ಟ್‌ ಸರಣಿಯ ಮೊದಲನೇ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಪ್ಲೇಯಿಂಗ್‌ XI ಅನ್ನು ಪ್ರಕಟಿಸಲಾಗಿದೆ. ಓಪನಿಂಗ್‌ ಬ್ಯಾಟ್ಸ್‌ಮನ್‌ ಜೇಕ್‌ ವೆದರಾಲ್ಡ್‌ ಹಾಗೂ ವೇಗದ ಬೌಲರ್‌ ಬ್ರೆಂಡನ್‌ ಡಗೆಟ್‌ ಅವರು ಆಸ್ಟ್ರೇಲಿಯಾ ಪ್ಲೇಯಿಂಗ್‌ XI ನಲ್ಲಿ ಸ್ಥಾನ ಪಡೆಯುವ ಮೂಲಕ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ.

IND vs SA: ಗೌತಮ್‌ ಗಂಭೀರ್‌ ಕೋಚಿಂಗ್‌ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಎಬಿ ಡಿ ವಿಲಿಯರ್ಸ್‌!

ಗೌತಮ್‌ ಗಂಭೀರ್‌ ಕೋಚಿಂಗ್‌ ಬಗ್ಗೆ ಎಬಿಡಿ ಅಭಿಪ್ರಾಯ!

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 30 ರನ್‌ಗಳಿಂದ ಸೋತಿತ್ತು. ಸೋಲಿನ ನಂತರ, ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಪಿಚ್ ಅನ್ನು ಸಮರ್ಥಿಸಿಕೊಂಡರು ಮತ್ತು ಸೋಲಿಗೆ ಆಟಗಾರರನ್ನೇ ದೂಷಿಸಿದರು. ಈ ಬಗ್ಗೆ ಇದೀಗ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್‌ ಪ್ರತಿಕ್ರಿಯೆ ನೀಡಿದ್ದಾರೆ.

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಶುಭಮನ್‌ ಗಿಲ್‌ ಔಟ್‌?

ದಕ್ಷಿಣ ಆಫ್ರಿಕಾ ಏಕದಿನ ಸರಣಿಯಿಂದ ಶುಭಮನ್‌ ಗಿಲ್‌ ಔಟ್‌?

Shubman Gill out for ODI Series: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಗಾಯಾಳು ಶುಭಮನ್‌ ಗಿಲ್‌ ಅಲಭ್ಯರಾಗಲಿದ್ದಾರೆಂದು ಹೇಳಲಾಗುತ್ತಿದೆ. ಅವರು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲನೇ ಟೆಸ್ಟ್‌ ಪಂದ್ಯದ ವೇಳೆ ಗಿಲ್‌ ಕುತ್ತಿಗೆ ಗಾಯಕ್ಕೆ ತುತ್ತಾಗಿದ್ದರು. ಹಾಗಾಗಿ ಅವರು ಒಡಿಐ ಸರಣಿಗೆ ಅಲಭ್ಯರಾಗಿದ್ದಾರೆ.

Loading...