ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕ್ರೀಡೆ
ಆಸ್ಟ್ರೇಲಿಯಾದಲ್ಲಿ ವಿರಾಟ್‌ ಕೊಹ್ಲಿ ನೀಡಿದ್ದ ವಿಶೇಷ ಗಿಫ್ಟ್‌ ರಿವೀಲ್‌ ಮಾಡಿದ ನಿತೀಶ್‌ ರೆಡ್ಡಿ!

ವಿರಾಟ್‌ ಕೊಹ್ಲಿ ನೀಡಿದ್ದ ಗಿಫ್ಟ್‌ ರಿವೀಲ್‌ ಮಾಡಿದ ನಿತೀಶ್‌ ರೆಡ್ಡಿ!

ಬಾರ್ಡರ್ ಗವಾಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯದಲ್ಲಿ ಭಾರತದ ಯುವ ಕ್ರಿಕೆಟಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಇನಿಂಗ್ಸ್‌ನಲ್ಲಿ ವಿರಾಟ್‌ ಕೊಹ್ಲಿಯ ಶೂ ಧರಿಸಿ ಬ್ಯಾಟ್‌ ಮಾಡಿದ್ದೆ ಎಂದು ನಿತೀಶ್‌ ರೆಡ್ಡಿ ಬಹಿರಂಗಪಡಿಸಿದ್ದಾರೆ. 2025ರ ಐಪಿಎಲ್‌ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಯುವ ಬ್ಯಾಟ್ಸ್‌ಮನ್‌ ಎದುರು ನೋಡುತ್ತಿದ್ದಾರೆ.

IPL 2025: ಹಾರ್ದಿಕ್‌ ಪಾಂಡ್ಯ ಬಚಾವ್‌? ಹೊಸ ನಿಯಮಗಳನ್ನು ಜಾರಿಗೆ ತಂದ ಬಿಸಿಸಿಐ!

2025ರ ಐಪಿಎಲ್‌ ಟೂರ್ನಿಗೆ ಹೊಸ ನಿಯಮಗಳನ್ನು ಜಾರಿಗೆ ತಂದ ಬಿಸಿಸಿಐ!

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯು 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ನಿಮಿತ್ತ ತನ್ನ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಿದೆ. ಇದರಲ್ಲಿ ನಿಧಾನಗತಿಯ ಬೌಲಿಂಗ್‌ ಕಾರಣ ನಾಯಕರನ್ನು ನಿಷೇಧಿಸಲಾಗುವುದಿಲ್ಲ. ಬಿಸಿಸಿಐ ಇದೀಗ ಹೊಸ ನಿಯಮವನ್ನು ತಂದಿದ್ದು, ಇದರೊಂದಿಗೆ ತಂಡಗಳ ನಾಯಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್‌ ಪಾಂಡ್ಯ ಬಚಾವ್‌ ಆಗಿದ್ದಾರೆ.

IPL 2025: ಆರ್‌ಸಿಬಿಯಿಂದ ಹೊರಬಂದ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ಮೊಹಮ್ಮದ್‌ ಸಿರಾಜ್‌!

ಆರ್‌ಸಿಬಿಯಿಂದ ಹೊರಬಂದ ಬಗ್ಗೆ ಮೊಹಮ್ಮದ್‌ ಸಿರಾಜ್‌ ಭಾವುಕ!

Mohammed Siraj emotional on leaving RCB: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ತೊರೆದಿರುವ ಬಗ್ಗೆ ಗುಜರಾತ್‌ ಟೈಟನ್ಸ್‌ ವೇಗಿ ಮೊಹಮ್ಮದ್‌ ಸಿರಾಜ್‌ ಭಾವುಕರಾಗಿದ್ದಾರೆ. ಆರ್‌ಸಿಬಿ ತಂಡದಲ್ಲಿ ಕಠಿಣ ಸಂದರ್ಭಗಳಲ್ಲಿ ವಿರಾಟ್‌ ಭಾಯ್‌ ನನಗೆ ಸಾಕಷ್ಟು ಬೆಂಬಲ ನೀಡಿದ್ದರು. ಆದರೆ, ಶುಭಮನ್‌ ಗಿಲ್‌ ನಾಯಕತ್ವದ ಗುಜರಾತ್‌ ಟೈಟನ್ಸ್‌ ಕೂಡ ಅತ್ಯುತ್ತಮವಾಗಿದೆ ಎಂದು ಮೊಹಮ್ಮದ್‌ ಸಿರಾಜ್‌ ಹೇಳಿದ್ದಾರೆ.

IPL 2025: ಆರ್‌ಸಿಬಿ vs ಕೆಕೆಆರ್‌ ನಡುವಣ ಪಂದ್ಯಕ್ಕೆ ಮಳೆ ಭೀತಿ! ಹವಾಮಾನ ವರದಿ ಹೇಗಿದೆ?

IPL 2025: ಕೆಕೆಆರ್‌ ವಿರುದ್ಧ ಆರ್‌ಸಿಬಿ ಪಂದ್ಯಕ್ಕೆ ಮಳೆ ಭೀತಿ!

RCB vs KKR Weather Report: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ತಂಡಗಳು ಮಾರ್ಚ್‌ 22 ರಂದು ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲನೇ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೋಲ್ಕತಾದ ಹವಾಮಾನ ವರದಿಯನ್ನು ಇಲ್ಲಿ ವಿವರಿಸಲಾಗಿದೆ.

RR vs SRH: ಜೋಫ್ರಾ ಆರ್ಚರ್‌ ಇನ್‌! ರಾಜಸ್ಥಾನ್‌ ರಾಯಲ್ಸ್‌ ಸಂಭಾವ್ಯ ಪ್ಲೇಯಿಂಗ್‌ XI ವಿವರ!

ಎಸ್‌ಆರ್‌ಎಚ್‌ ಪಂದ್ಯಕ್ಕೆ ರಾಜಸ್ಥಾನ್‌ ರಾಯಲ್ಸ್‌ ಸಂಭಾವ್ಯ ಪ್ಲೇಯಿಂಗ್‌ XI

Rajasthan Royals Predicted Playing XI: ನಿರೀಕ್ಷಿತ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯು ಮಾರ್ಚ್‌ 22 ರಂದು ಆರಂಭವಾಗಲಿದೆ. ಆದರೆ, ರಾಜಸ್ಥಾನ್‌ ರಾಯಲ್ಸ್‌ ತಂಡ ಮಾರ್ಚ್‌ 23 ರಂದು ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ಟೂರ್ನಿಯ ತನ್ನ ಮೊದಲನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ದ ಕಾದಾಟ ನಡೆಸಲಿದೆ. ಈ ಪಂದ್ಯಕ್ಕೆ ಆರ್‌ಆರ್‌ ತಂಡದ ಸಂಭಾವ್ಯ ಪ್ಲೇಯಿಂಗ್‌ XI ಅನ್ನು ವಿವರಿಸಲಾಗಿದೆ.

IPL 2025: ಸಿಎಸ್‌ಕೆಯನ್ನು ಹೊರಗಿಟ್ಟು ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬಲ್ಲ 4 ತಂಡಗಳನ್ನು ಆರಿಸಿದ ಎಬಿಡಿ!

IPL 2025: ಪ್ಲೇಆಫ್ಸ್‌ಗೆ ಅರ್ಹತೆ ಪಡೆಯುವ 4 ತಂಡಗಳನ್ನು ಆರಿಸಿದ ಎಬಿಡಿ!

ABD Picks 4 Favourites To Reach IPL 2025 Playoffs: ಮುಂಬರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬಲ್ಲ ನಾಲ್ಕು ತಂಡಗಳನ್ನು ದಕ್ಷಿಣ ಆಫ್ರಿಕಾ ಮಾಜಿ ನಾಯಕ ಹಾಗೂ ಆರ್‌ಸಿಬಿ ದಿಗ್ಗಜ ಎಬಿ ಡಿ ವಿಲಿಯರ್ಸ್‌ ಆಯ್ಕೆ ಮಾಡಿದ್ದಾರೆ. ಆದರೆ, ಐದು ಬಾರಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಕಡೆಗಣಿಸುವ ಮೂಲಕ ಅವರು ಅಚ್ಚರಿ ಮೂಡಿಸಿದ್ದಾರೆ.

IPL 2025: ಆರ್‌ಸಿಬಿಗೆ ಅವಮಾನ ಮಾಡಿದ್ರಾ ಎಸ್‌ ಬದ್ರಿನಾಥ್‌? ಫ್ಯಾನ್ಸ್‌ಗೆ ಅಚ್ಚರಿ ಮೂಡಿಸಿದ ವಿಡಿಯೊ!

IPL 2025: ಆರ್‌ಸಿಬಿಗೆ ಅವಮಾನ ಮಾಡಿದ್ರಾ ಎಸ್‌ ಬದ್ರಿನಾಥ್‌?

S Bardinath on RCB vs CSK Rivalry: ಬಹುನಿರೀಕ್ಷಿತ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌2025) ಟೂರ್ನಿಯ ಆರಂಭಕ್ಕೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಮಾರ್ಚ್‌ 22 ರಂದು ಕೋಲ್ಕತಾ ನೈಟ್‌ ರೈಡರ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳುಯ ಕಾದಾಟ ನಡೆಸುವ ಮೂಲಕ ಹದಿನನೆಂಟನೇ ಆವೃತ್ತಿಯ ಟೂರ್ನಿ ಆರಂಭವಾಗಲಿದೆ. ಇದರ ನಡುವೆ ಎಸ್‌ ಬದ್ರಿನಾಥ್‌, ಆರ್‌ಸಿಬಿ ತಂಡದ ಕಾಲೆಳೆದಿದ್ದಾರೆ.

IPL 2025: ಚೆಂಡಿಗೆ ಎಂಜಲು ಬಳಕೆ ನಿಷೇಧ ತೆರವುಗೊಳಿಸಿದ ಬಿಸಿಸಿಐ

ಇಬ್ಬನಿ ಕಾಟ ತಪ್ಪಿಸಲು ಎರಡು ಹೊಸ ಚೆಂಡು ಬಳಕೆಗೆ ಅವಕಾಶ

BCCI lifts saliva ban: ಕೋವಿಡ್‌ ಹಿನ್ನೆಲೆಯಲ್ಲಿ 2022ರಲ್ಲಿ ಚೆಂಡಿಗೆ ಎಂಜಲು ಸವರುವುದನ್ನು ಐಸಿಸಿ ಶಾಶ್ವತವಾಗಿ ನಿಷೇಧಿಸಿತ್ತು. ಈ ನಿಷೇಧ ತೆರವಿಗೆ ಅನೇಕ ವೇಗಿಗಳು ಮನವಿ ಮಾಡಿಕೊಂಡಿದ್ದರೂ ಐಸಿಸಿ ಅದನ್ನು ಪರಿಗಣಿಸಿಲ್ಲ. ಆದರೆ ಎಂಜಲಿನ ಬದಲು ಬೆವರು ಹಚ್ಚಲಷ್ಟೇ ಅವಕಾಶ ನೀಡಿತ್ತು. ಇದೀಗ ಬಿಸಿಸಿಐ ಈ ನಿಯವನ್ನು ಐಪಿಎಲ್‌ನಿಂದ ತೆಗೆದು ಹಾಕಿದೆ.

IPL 2025:  ಅಭಿಷೇಕ್‌ ಶರ್ಮಾ or ಇಶಾನ್‌ ಕಿಶನ್? ಸನ್‌ರೈಸರರ್ಸ್‌ ಹೈದರಾಬಾದ್‌ ಸಂಭಾವ್ಯ ಪ್ಲೇಯಿಂಗ್‌ XI ವಿವರ

ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಸಂಭಾವ್ಯ ಪ್ಲೇಯಿಂಗ್‌ XI ವಿವರ!

SRH Predicted Playing XI: ಕಳೆದ ಆವೃತ್ತಿಯಲ್ಲಿ ರನ್ನರ್‌ ಅಪ್‌ ಆಗಿದ್ದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ತಂಡವಾಗಿ ಕಣಕ್ಕೆ ಇಳಿಯಲಿದೆ. ಪ್ಯಾಟ್‌ ಕಮಿನ್ಸ್‌ ನಾಯತ್ವದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಸಂಭಾವ್ಯ ಪ್ಲೇಯಿಂಗ್‌ XI ಬಗ್ಗೆ ಇಲ್ಲಿ ವಿವರಿಸಲಾಗಿದೆ.

Chahal-Dhanashree: ಚಾಹಲ್-ಧನಶ್ರೀ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದ ಮುಂಬೈ ಕೌಟುಂಬಿಕ ನ್ಯಾಯಾಲಯ

ಅಧಿಕೃತವಾಗಿ ವಿಚ್ಛೇದನ ಪಡೆದ ಚಾಹಲ್-‌ ಧನಶ್ರೀ

Yuzvendra Chahal-Dhanashree Verma divorce: ಒಪ್ಪಂದದಂತೆ, ಚಾಹಲ್ ಅವರು ವರ್ಮಾಗೆ ₹ 4.75 ಕೋಟಿ ಶಾಶ್ವತ ಜೀವನಾಂಶ ನೀಡಲು ಒಪ್ಪಿಕೊಂಡಿದ್ದಾರೆ. ಇದರಲ್ಲಿ ₹2.37 ಕೋಟಿಯನ್ನು ಈಗಾಗಲೇ ಪಾವತಿಸಲಾಗಿದೆ. ಉಳಿದ ಮೊತ್ತ ಪಾವತಿಸದಿದ್ದಲ್ಲಿ ಅದನ್ನು, ಕುಟುಂಬ ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದೇ ಪರಿಗಣಿಸಲಾಗುವುದು' ಎಂದು 'ಬಾರ್ ಮತ್ತು ಬೆಂಚ್' ಹೇಳಿದೆ.

IPL 2025: ಈ ಬಾರಿಯೂ ಆರ್‌ಸಿಬಿ ಅಭಿಮಾನಿಗಳಿಗೆ ಬಿಸಿ ತುಪ್ಪವಾದ ತವರಿನ ಪಂದ್ಯಗಳ ಟಿಕೆಟ್‌ ದರ

ಆರ್‌ಸಿಬಿ ಅಭಿಮಾನಿಗಳಿಗೆ ಬಿಸಿ ತುಪ್ಪವಾದ ತವರಿನ ಪಂದ್ಯಗಳ ಟಿಕೆಟ್‌ ದರ

RCB Home Game Tickets: ಆರ್‌ಸಿಬಿ ತಂಡದ ತವರಿನ ಪಂದ್ಯಗಳ ಟಿಕೆಟ್‌ ಮಾರಾಟವನ್ನು ಫ್ರಾಂಚೈಸಿ ಅಧಿಕೃತ ವೆಬ್‌ಸೈಟ್‌ನಲ್ಲಿ ಈಗಾಗಲೇ ಪ್ರಕಟಿಸಿದ್ದು, ಕನಿಷ್ಠ 2300 ನಿಗದಿಪಡಿಸಲಾಗಿದೆ. ಗರಿಷ್ಠ ಮೊತ್ತದ ಟಿಕೆಟ್‌ ಮೌಲ್ಯ 42000 ಇದೆ. ಟಿಕೆಟ್‌ಗಳ ಬೆಲೆ ದುಬಾರಿಯಾಗಿದ್ದರೂ, ಮೊದಲ ಪಂದ್ಯದ ಟಿಕೆಟ್‌ಗಳು ಈಗಾಗಲೇ ಖಾಲಿಯಾಗಿವೆ.

Rj Mahvash: ಧನಶ್ರೀಗೆ ಚಹಲ್‌ 4.5 ಕೋಟಿ ಜೀವನಾಂಶ ನೀಡಲು ಒಪ್ಪಿದ ಬೆನ್ನಲ್ಲೇ ಮಹ್ವಾಶ್‌ ರಹಸ್ಯ ಪೋಸ್ಟ್‌

ರಹಸ್ಯ ಪೋಸ್ಟ್‌ ಮೂಲಕ ಚಹಲ್‌ ಬೆಂಬಲಕ್ಕೆ ನಿಂತ ಮಹ್ವಾಶ್‌

rj mahvash instagram post: ಚಹಲ್‌ ಈಗಾಗಲೇ 2.37 ಕೋಟಿಯನ್ನು ಧನಶ್ರೀಗೆ ಪಾವತಿಸಿದ್ದಾರೆ ಎನ್ನಲಾಗಿದೆ. ಈ ಜೋಡಿ ಕಳೆದ ಎರಡೂವರೆ ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಜೀವನಾಂಶ ವಿಚಾರದಲ್ಲಿ ಇವರಿಬ್ಬರ ನಿಲುವು ಒಂದೇ ಆಗಿದೆ ಎನ್ನಲಾಗಿದೆ. ಧನಶ್ರೀ ಮತ್ತು ಚಹಲ್‌ 2020ರ ಡಿಸೆಂಬರ್‌ 11 ರಂದು ದಾಂಪತ್ಯ ಜೀವನಕ್ಕೆ ಕಾಲಿಲಿಟ್ಟಿದ್ದರು.

IPL 2025: ರಾಜಸ್ಥಾನ್‌ ರಾಯಲ್ಸ್‌ 3 ಪಂದ್ಯಗಳಿಗೆ ರಿಯಾನ್‌ ಪರಾಗ್ ನಾಯಕ

ಸಂಜುಗೆ ಗಾಯ; ಮೊದಲ ಮೂರು ಪಂದ್ಯಕ್ಕೆ ಪರಾಗ್ ನಾಯಕ

Riyan Parag: 'ಯುವ ಆಲ್‌ರೌಂಡರ್ ಪರಾಗ್‌ ಸಾರಥ್ಯದಲ್ಲಿ ರಾಜಸ್ಥಾನ್‌ ತಂಡ ಮಾರ್ಚ್ 23 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ, ನಂತರ ಮಾರ್ಚ್ 26 ರಂದು ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಮತ್ತು ಮಾರ್ಚ್ 30 ರಂದು ನಡೆಯುವ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ತವರಿನ ಪಂದ್ಯದಲ್ಲಿ ಆಡಲಿದೆ' ಎಂದು ಫ್ರಾಂಚೈಸಿ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ

Champions Trophy BCCI Reward: ಚಾಂಪಿಯನ್ಸ್‌ ಟ್ರೋಫಿ ಗೆದ್ದ ರೋಹಿತ್‌ ಪಡೆಗೆ ಬೃಹತ್‌ ನಗದು ಪುರಸ್ಕಾರ ಘೋಷಿಸಿದ ಬಿಸಿಸಿಐ

ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ ತಂಡಕ್ಕೆ 58 ಕೋಟಿ ಘೋಷಿಸಿದ ಬಿಸಿಸಿಐ

BCCI Cash Prize for Team India: ಕಳೆದ ವರ್ಷ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಗೆಲುವಿನ ನಂತರ, ಟೀಮ್‌ ಇಂಡಿಯಾಕ್ಕೆ ಬಿಸಿಸಿಐ 125 ಕೋಟಿ ರೂ.ಗಳ ಬೃಹತ್ ಬಹುಮಾನ ನೀಡಿ ಘೋಷಿಸಿತ್ತು. ಆಟಗಾರರಿಗೆ ಮಾತ್ರವಲ್ಲದೆ ತಂಡ ಸಿಬ್ಬಂದಿಗಳಿಗೂ ಬಹುಮಾನ ಮೊತ್ತ ನೀಡಲಾಗಿತ್ತು.

IPL 2025 Opening Ceremony: ಪ್ರೇಕ್ಷಕರನ್ನು ಹೆಚ್ಚೆಬ್ಬಿಸಲು ಸಜ್ಜಾದ ದಿಶಾ ಪಟಾನಿ, ಶ್ರೇಯಾ ಘೋಷಾಲ್‌

ಐಪಿಎಲ್‌ ಉದ್ಘಾಟನ ಕಾರ್ಯಕ್ರಮದಲ್ಲಿ ದಿಶಾ ಪಟಾನಿ ನೃತ್ಯ ವೈಭವ

IPL 2025: ಸಿಎಬಿ ಅಧ್ಯಕ್ಷರ ಪ್ರಕಾರ, ಉದ್ಘಾಟನ ಪಂದ್ಯದ ಎಲ್ಲಾ ಟಿಕೆಟ್‌ಗಳು ಈಗಾಗಲೇ ಸೋಲ್ಡ್‌ ಆಗಿದೆ. ಮೊದಲ ಪಂದ್ಯದ ವೇಳೆ ಬಾಲಿವುಡ್‌ನ ಕತ್ರಿನಾ ಕೈಫ್, ಪ್ರಿಯಾಂಕಾ ಚೋಪ್ರಾ, ಟ್ರಿಪ್ಟಿ ಡಿಮ್ರಿ, ಅನನ್ಯಾ ಪಾಂಡೆ, ಮಾಧುರಿ ದೀಕ್ಷಿತ್, ಜಾನ್ವಿ ಕಪೂರ್, ಊರ್ವಶಿ ರೌಟೇಲಾ, ಪೂಜಾ ಹೆಗ್ಡೆ, ಕರೀನಾ ಕಪೂರ್, ಆಯುಷ್ಮಾನ್ ಖುರಾನಾ ಮತ್ತು ಸಾರಾ ಅಲಿ ಖಾನ್ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

IPL 2025: ಚೆಂಡಿಗೆ ಎಂಜಲು ಬಳಕೆ ನಿಷೇಧ ತೆರವಿಗೆ ಮುಂದಾದ ಬಿಸಿಸಿಐ

ಚೆಂಡಿಗೆ ಎಂಜಲು ಬಳಕೆ ನಿಷೇಧ ತೆರವಿಗೆ ಮುಂದಾದ ಬಿಸಿಸಿಐ

ಇಂದು(ಮಾ.20) ಮುಂಬೈನಲ್ಲಿ ನಡೆಯಲಿರುವ ಐಪಿಎಲ್ ತಂಡಗಳ ನಾಯಕರ ಸಭೆಯಲ್ಲಿ ಈ ಪ್ರಸ್ತಾವವನ್ನು ಇಡಲು ಬಿಸಿಸಿಐ ಸಿದ್ಧವಾಗಿದೆ. 2022ರಲ್ಲಿ ಐಸಿಸಿ (ಐಸಿಸಿ) ಕೋವಿಡ್ ತಡೆ ಮಾರ್ಗಸೂಚಿಯನ್ನು ಜಾರಿ ಮಾಡಿತ್ತು. ಆ ಸಂದರ್ಭದಲ್ಲಿ ಚೆಂಡಿಗೆ ಎಂಜಲು ಹಚ್ಚುವುದನ್ನು ನಿಷೇಧಿಸಿತ್ತು.

New Zealand PM: ಕಪಿಲ್‌ ದೇವ್‌ ಜತೆ ಗಲ್ಲಿ ಕ್ರಿಕೆಟ್‌ ಆಡಿದ ನ್ಯೂಜಿಲೆಂಡ್ ಪ್ರಧಾನಿ

ಗಲ್ಲಿ ಕ್ರಿಕೆಟ್‌ನಲ್ಲಿ ಆಲ್‌ರೌಂಡರ್‌ ಪ್ರದರ್ಶನ ತೋರಿದ ಕಿವೀಸ್‌ ಪ್ರಧಾನಿ

New Zealand PM Street Cricket: ಪ್ರಧಾನಿ ಕ್ರಿಸ್ಟೋಫರ್ ಅವರು ಮಕ್ಕಳೊಂದಿಗೆ ಮತ್ತು ಕಪಿಲ್‌ ಜತೆ ಸೇರಿ ಬ್ಯಾಟಿಂಗ್‌, ಬೌಲಿಂಗ್‌ ಮತ್ತು ಫೀಲ್ಡಿಂಗ್‌ ನಡೆಸಿದ ವಿಡಿಯೊವನ್ನು ಪಿಎಂ ಲಕ್ಸನ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಈ ವಿಡಿಯೊದಲ್ಲಿ ಕ್ರಿಸ್ಟೋಫರ್ ಅವರ ಆಲ್‌ರೌಂಡರ್‌ ಪ್ರದರ್ಶನವನ್ನು ಕಾಣಬಹುದು. ಎರಡು ಅದ್ಭುತ ಕ್ಯಾಚ್‌ಗಳನ್ನು ಕೂಡ ಹಿಡಿದು ಗಮನಸೆಳೆದರು.

IPL 2025: ಕೆಕೆಆರ್‌-ಲಕ್ನೋ ಪಂದ್ಯದ ದಿನಾಂಕ ಮರು ನಿಗದಿ!

ಕೆಕೆಆರ್‌-ಲಕ್ನೋ ಪಂದ್ಯದ ದಿನಾಂಕ ಮರು ನಿಗದಿ!

ಪೊಲೀಸರ ನೆರವಿಲ್ಲದೆ ಪಂದ್ಯವನ್ನು ನಡೆಸುವುದು, 65,000 ಪ್ರೇಕ್ಷಕರ ನಿರ್ವಹಣೆ, ರಕ್ಷಣೆ ಖಂಡಿತ ಸಾಧ್ಯವಾಗದು. ಇದನ್ನು ನಾವು ಬಿಸಿಸಿಐ ಗಮನಕ್ಕೆ ತಂದಿದ್ದೇವೆ. ಪಂದ್ಯವನ್ನು ಮರು ನಿಗದಿಪಡಿಸಲು ಇನ್ನೂ ಸಾಕಷ್ಟು ಕಾಲಾವಕಾಶವಿದೆ ಎಂದು ಬಂಗಾಳ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಸ್ನೇಹಶಿಷ್‌ ಗಂಗೂಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

IPL 2025: ಮುಂಬೈ ಇಂಡಿಯನ್ಸ್‌ಗೆ ಎದುರಾಗಿರುವ ದೊಡ್ಡ ಚಾಲೆಂಜ್‌ ತಿಳಿಸಿದ ಮಹೇಲಾ ಜಯವರ್ದನೆ!

ಮುಂಬೈ ಇಂಡಿಯನ್ಸ್‌ಗೆ ಕಾಡುತ್ತಿರುವ ಸವಾಲು ತಿಳಿಸಿದ ಜಯವರ್ದನೆ!

Mahela Jayawardene on Jasprit Bumrah's Absense: ಹಿರಿಯ ವೇಗಿ ಜಸ್‌ಪ್ರೀತ್‌ ಬುಮ್ರಾ ಅವರ ಅನುಪಸ್ಥಿತಿಯು 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡಕ್ಕೆ ದೊಡ್ಡ ಸವಾಲು ಎದುರಾಗಲಿದೆ ಎಂದು ಮುಂಬೈ ಕೋಚ್‌ ಮಹೇಲಾ ಜಯವರ್ದನೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

T20I Rankings: ಎರಡನೇ ಸ್ಥಾನದಲ್ಲಿಯೇ ಉಳಿದ ಅಭಿಷೇಕ್‌ ಶರ್ಮಾ, ವರುಣ್‌ ಚಕ್ರವರ್ತಿ!

ಟಿ20ಐ ಶ್ರೇಯಾಂಕದಲ್ಲಿ ಅಭಿಷೇಕ್‌ ಶರ್ಮಾಗೆ ಎರಡನೇ ಸ್ಥಾನ!

T20I Rankings: ಇತ್ತೀಚಿಗೆ ಪರಿಷ್ಕೃತಗೊಂಡಿರುವ ಐಸಿಸಿ ಟಿ20ಐ ಶ್ರೇಯಾಂಕದಲ್ಲಿ ಭಾರತೀಯ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ಕ್ರಮವಾಗಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗಗಳಲ್ಲಿ ಎರಡನೇ ಸ್ಥಾನದಲ್ಲಿ ಉಳಿದಿದ್ದಾರೆ. ಆಲ್‌ರೌಂಡರ್ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಅಗ್ರಸ್ಥಾನದಲ್ಲಿದ್ದರೆ, ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ವೆಸ್ಟ್ ಇಂಡೀಸ್‌ನ ಅಕಿಲ್ ಹುಸೇನ್ ಅಗ್ರ ಸ್ಥಾನದಲ್ಲಿದ್ದಾರೆ.

ಧನಶ್ರೀ ವರ್ಮಾಗೆ 4.75 ಕೋಟಿ ರೂ. ಜೀವನಾಂಶ ನೀಡಲು ಯುಜ್ವೇಂದ್ರ ಚಹಲ್‌ ಒಪ್ಪಿಗೆ!

ಧನಶ್ರೀ ವರ್ಮಾಗೆ 4.75 ಕೋಟಿ ರೂ. ಜೀವನಾಂಶ ನೀಡಲು ಒಪ್ಪಿದ ಚಹಲ್‌!

Yuzvendra Chahal And Dhanashree Verma Divorce: ಭಾರತದ ಹಿರಿಯ ಸ್ಪಿನ್ನರ್‌ ಯುಜ್ವೇದ್ರ ಚಹಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಅವರ ವಿಚ್ಛೇದನ ಪ್ರಕರಣದಲ್ಲಿ ಆರು ತಿಂಗಳ ಕಾಯುವ ಅವಧಿಯನ್ನು ಮನ್ನಾ ಮಾಡಲು ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಮಾರ್ಚ್ 20ರೊಳಗೆ ತೀರ್ಮಾನ ನೀಡುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ಸೂಚಿಸಿದೆ.

IPL 2025: ಶ್ರೇಯಸ್‌ ಅಯ್ಯರ್‌ಗೆ 3ನೇ ಕ್ರಮಾಂಕ, ಪಂಜಾಬ್‌ ಕಿಂಗ್ಸ್‌ ಸಂಭಾವ್ಯ ಪ್ಲೇಯಿಂಗ್‌ XI

IPL 2025: ಪಂಜಾಬ್‌ ಕಿಂಗ್ಸ್‌ ಸಂಭಾವ್ಯ ಪ್ಲೇಯಿಂಗ್‌ XI

PBKS Probable Playing XI: ಮುಂಬರುವ 2025ರ ಇಂಡಿಯನ್ಸ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಗೆ ಎಲ್ಲಾ ತಂಡಗಳು ಸಜ್ಜಾಗುತ್ತಿವೆ. ಅದರಂತೆ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಪಂಜಾಬ್‌ ಕಿಂಗ್ಸ್‌ ತಂಡ ಕಠಿಣ ತಾಲೀಮು ನಡೆಸುತ್ತಿದೆ. ಚೊಚ್ಚಲ ಐಪಿಎಲ್‌ ಟ್ರೋಫಿ ಮೇಲೆ ಕಣ್ಣಿಟ್ಟಿರುವ ಪಂಜಾಬ್‌ ಕಿಂಗ್ಸ್‌ ತಂಡದ ಪ್ಲೇಯಿಂಗ್‌ XI ಬಗ್ಗೆ ಇಲ್ಲಿ ವಿವರಿಸಲಾಗಿದೆ.

IPL 2025: ಸಿಎಸ್‌ಕೆ ಎದುರು ಮುಂಬೈ ಇಂಡಿಯನ್ಸ್‌ ತಂಡಕ್ಕೆ ಸೂರ್ಯಕುಮಾರ್‌ ಯಾದವ್‌ ನಾಯಕ!

MI vs CSK ಪಂದ್ಯಕ್ಕೆ ಸೂರ್ಯಕುಮಾರ್‌ ಯಾದವ್‌ ಮುಂಬೈಗೆ ನಾಯಕ!

Mumbai Indians vs Chennai Super Kings: ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ತನ್ನ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಸೂರ್ಯಕುಮಾರ್‌ ಯಾದವ್‌ ಮುನ್ನಡೆಸಲಿದ್ದಾರೆಂದು ನಾಯಕ ಹಾರ್ದಿಕ್‌ ಪಾಂಡ್ಯ ಸ್ಪಷ್ಟಪಡಿಸಿದ್ದಾರೆ. ಕಳೆದ ಆವೃತ್ತಿಯ ಐಪಿಎಲ್‌ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ ಕಾರಣ ಹಾರ್ದಿಕ್‌ ಮುಂದಿನ ಪಂದ್ಯಕ್ಕೆ ರದ್ದುಗೊಳಿಸಲಾಗಿದೆ.

ಐಪಿಎಲ್‌ ಟೂರ್ನಿಯಲ್ಲಿನ ಫಾರ್ಮ್‌ ಟೆಸ್ಟ್‌ ತಂಡದ ಆಯ್ಕೆಗೆ ಮಾನದಂಡವಾಗಬಾರದು: ಆರ್‌ ಅಶ್ವಿನ್‌!

ಶ್ರೇಯಸ್‌ ಅಯ್ಯರ್‌ರ ಐಪಿಎಲ್‌ ಫಾರ್ಮ್‌ ನೋಡಿ ಟೆಸ್ಟ್‌ಗೆ ಆರಿಸಬಾರದು!

R Ashwin on Shreyas Iyer Test Comeback: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರಿದ್ದ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌, ತಮ್ಮ ಅದೇ ಲಯವನ್ನು 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಮುಂದುವರಿಸಲು ಎದುರು ನೋಡುತ್ತಿದ್ದಾರೆ. ಆದರೆ, ಐಪಿಎಲ್‌ ಟೂರ್ನಿಯ ಫಾರ್ಮ್‌ ಅನ್ನು ಟೆಸ್ಟ್‌ ತಂಡದ ಕಮ್‌ಬ್ಯಾಕ್‌ಗೆ ಪರಿಗಣಿಸಬಾರದು ಎಂದು ಸ್ಪಿನ್‌ ದಿಗ್ಗಜ ಆರ್‌ ಅಶ್ವಿನ್‌ ಸಲಹೆ ನೀಡಿದ್ದಾರೆ.