ಆ್ಯಂಡರ್ಸನ್-ತೆಂಡೂಲ್ಕರ್ ಟ್ರೋಫಿ ಬಿಡುಗಡೆ ಕಾರ್ಯಕ್ರಮ ರದ್ದು ಸಾಧ್ಯತೆ
ಈ ಹಿಂದೆ ಇತ್ತಂಡಗಳ ಸರಣಿಯನ್ನು ಪಟೌಡಿ ಟ್ರೋಫಿ ಎಂದು ಕರೆಯಲಾಗುತ್ತಿತ್ತು. 2007ರಲ್ಲಿ ಉಭಯ ದೇಶಗಳ ನಡುವಿನ ಟೆಸ್ಟ್ಗೆ 75 ವರ್ಷ ಪೂರ್ಣಗೊಂಡಾಗ ಈ ಹೆಸರನ್ನು ಇಡಲಾಗಿತ್ತು. ಆದರೆ ಈ ಬಾರಿಯಿಂದ ಸರಣಿಯನ್ನು ಆ್ಯಂಡರ್ಸನ್-ತೆಂಡುಲ್ಕರ್ ಹೆಸರಲ್ಲಿ ನಡೆಸಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ (ಇಡಬ್ಲ್ಯುಸಿ) ನಿರ್ಧರಿಸಿದೆ.


ಲಂಡನ್: ಜೂನ್ 20ರಿಂದ ಆರಂಭವಾಗಲಿರುವ ಭಾರತ-ಇಂಗ್ಲೆಂಡ್(England-India) ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಗೆ ಆ್ಯಂಡರ್ಸನ್-ತೆಂಡುಲ್ಕರ್ ಟ್ರೋಫಿ(Anderson-Tendulkar Trophy) ಎಂದು ಮರುನಾಮಕರಣ ಮಾಡಲಾಗಿತ್ತು. ಅದರಂತೆ ಟ್ರೋಫಿ ಬಿಡುಗಡೆಗೆ ಕಾರ್ಯಕ್ರಮವನ್ನು ಜೂ. 14ರಂದು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಅಹ್ಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಅಪಘಾತದ(Ahmedabad plane crash) ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿತ್ತು. ಇದೀಗ ಟ್ರೋಫಿ ಅನಾವರಣ ಕಾರ್ಯಕ್ರವೇ ರದ್ದಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಈ ಹಿಂದೆ ಇತ್ತಂಡಗಳ ಸರಣಿಯನ್ನು ಪಟೌಡಿ ಟ್ರೋಫಿ ಎಂದು ಕರೆಯಲಾಗುತ್ತಿತ್ತು. 2007ರಲ್ಲಿ ಉಭಯ ದೇಶಗಳ ನಡುವಿನ ಟೆಸ್ಟ್ಗೆ 75 ವರ್ಷ ಪೂರ್ಣಗೊಂಡಾಗ ಈ ಹೆಸರನ್ನು ಇಡಲಾಗಿತ್ತು. ಆದರೆ ಈ ಬಾರಿಯಿಂದ ಸರಣಿಯನ್ನು ಆ್ಯಂಡರ್ಸನ್-ತೆಂಡುಲ್ಕರ್ ಹೆಸರಲ್ಲಿ ನಡೆಸಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ (ಇಡಬ್ಲ್ಯುಸಿ) ನಿರ್ಧರಿಸಿದೆ.
ಬಿಸಿಸಿಐ ಆಕ್ಷೇಪ
ಸರಣಿಯ ಹೆಸರನ್ನು ಬದಲಾಯಿಸಿದ ಬಗ್ಗೆ ಬಿಸಿಸಿಐ ಆಕ್ಷೇಪ ವ್ಯಕ್ತಪಡಿಸಿದೆ ಎನ್ನಲಾಗಿದೆ. ಮನ್ಸೂರ್ ಅಲಿ ಖಾನ್ ಪಟೌಡಿ ಓರ್ವ ದಿಗ್ಗಜ ಕ್ರಿಕೆಟರ್. ಅವರ ಹೆಸರಿನ ಸರಣಿಯನ್ನು ಬದಲಾಯಿಸುವುದು ಸರಿಯಲ್ಲ ಎಂದು ಇಸಿಬಿಯನ್ನು ವಿನಂತಿಸಿದೆ ಎನ್ನಲಾಗಿದೆ.
ಭಾರತದ ಇಂಗ್ಲೆಂಡ್ ಪ್ರವಾಸವು ಜೂನ್ 20 ರಂದು ಲೀಡ್ಸ್ನ ಹೆಡಿಂಗ್ಲಿಯಲ್ಲಿ ಆರಂಭಿಕ ಟೆಸ್ಟ್ನೊಂದಿಗೆ ಆರಂಭವಾಗಲಿದೆ. ಎಡ್ಜ್ಬಾಸ್ಟನ್, ಲಾರ್ಡ್ಸ್, ಓಲ್ಡ್ ಟ್ರಾಫರ್ಡ್ ಮತ್ತು ಕೆನ್ನಿಂಗ್ಟನ್ ಓವಲ್ ಉಳಿದ ನಾಲ್ಕು ಟೆಸ್ಟ್ಗಳನ್ನು ಆಯೋಜಿಸಲಿವೆ.
ಇಂಗ್ಲೆಂಡ್ ತಂಡ
ಬೆನ್ ಸ್ಟೋಕ್ಸ್ (ನಾಯಕ), ಶೋಯೆಬ್ ಬಶೀರ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಸ್ಯಾಮ್ ಕುಕ್, ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಜೇಮೀ ಓವರ್ಟನ್, ಓಲಿ ಪೋಪ್, ಜೋ ರೂಟ್, ಜೇಮೀ ಸ್ಮಿತ್, ಜೋಶ್ ಟಂಗ್, ಕ್ರಿಸ್ ವೋಕ್ಸ್.
ಇದನ್ನೂ ಓದಿ IND vs ENG: ಭಾರತ ತಂಡದ ಮೂರನೇ ಕ್ರಮಾಂಕಕ್ಕೆ ಸೂಕ್ತ ಆಟಗಾರನನ್ನು ಆರಿಸಿದ ಸಂಜಯ್ ಬಾಂಗರ್!
ಭಾರತ ಟೆಸ್ಟ್ ತಂಡ
ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್(ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ(ಕೆಲವು ಪಂದ್ಯಕ್ಕೆ ಮಾತ್ರ), ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್.