ಐಪಿಎಲ್ ಸಮಾರೋಪ ಸಮಾರಂಭದಲ್ಲಿ ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ
IPL 2025 closing ceremony: ಭಾರತ ಹಾಗೂ ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟ್ಟಿದ್ದರಿಂದ ಟೂರ್ನಿಯನ್ನು ಒಂದು ವಾರಗಳ ಕಾಲ ಅರ್ಧದಲ್ಲೇ ಸ್ಥಗಿತಗೊಳಿಸಲಾಗಿತ್ತು. ಟೂರ್ನಿ ಪುನಾರಂಭಗೊಂಡ ಬಳಿಕ ಪ್ರತಿ ಪಂದ್ಯದ ವೇಳೆ ಬಿಸಿಸಿಐ ದೊಡ್ಡ ಬ್ಯಾನರ್ಗಳ ಮೂಲಕ ಸಶಸ್ತ್ರ ಪಡೆಗಳನ್ನು ಗೌರವಿಸುತ್ತಿದೆ.


ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2025 (IPL 2025) ಸಮಾರೋಪ ಸಮಾರಂಭದಲ್ಲಿ(IPL 2025 closing ceremony) ಭಾರತೀಯ ಸಶಸ್ತ್ರ ಪಡೆಗಳಿಗೆ ಬಿಸಿಸಿಐ (ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ವಿಶೇಷ ಗೌರವ ಸಲ್ಲಿಸಲಿದೆ ಎಂದು ಕಾರ್ಯದರ್ಶಿ ಸೈಕಿಯಾ ದೇವಜಿತ್ ಸೈಕಿಯಾ(Devajit Saikia) ತಿಳಿಸಿದ್ದಾರೆ. ಆಪರೇಷನ್ ಸಿಂದೂರ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಸಶಸ್ತ್ರ ಪಡೆಗಳ ಶೌರ್ಯವನ್ನು ಗೌರವಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಸಿಸಿಐ(BCCI) ತಿಳಿಸಿದೆ.
ಭಾರತವು ಮೇ 7 ರಂದು ಆಪರೇಷನ್ ಸಿಂದೂರ ಪ್ರಾರಂಭಿಸಿತ್ತು. ಇದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿಯಾಗಿತ್ತು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ನಂತರ ಈ ಕಾರ್ಯಾಚರಣೆಯನ್ನು ನಡೆಸಲಾಯಿತ್ತು. ಸಶಸ್ತ್ರ ಪಡೆಗಳ ಶೌರ್ಯ, ಧೈರ್ಯ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸಲು, ಬಿಸಿಸಿಐ ಸಮಾರೋಪ ಸಮಾರಂಭವನ್ನು ರಾಷ್ಟ್ರದ ವೀರರಿಗೆ ಅರ್ಪಿಸಲು ನಿರ್ಧರಿಸಿದೆ ಎಂದು ದೇವಜಿತ್ ಸೈಕಿಯಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
"ನಮ್ಮ ಸಶಸ್ತ್ರ ಪಡೆಗಳ ಶೌರ್ಯ, ಧೈರ್ಯ ಮತ್ತು ನಿಸ್ವಾರ್ಥ ಸೇವೆಗೆ ಬಿಸಿಸಿಐ ನಮಸ್ಕರಿಸುತ್ತದೆ. ಆಪರೇಷನ್ ಸಿಂದೂರ ಅಡಿಯಲ್ಲಿ ಅವರ ವೀರೋಚಿತ ಪ್ರಯತ್ನಗಳು ರಾಷ್ಟ್ರವನ್ನು ರಕ್ಷಿಸುತ್ತಿವೆ ಮತ್ತು ಪ್ರೇರೇಪಿಸುತ್ತಿವೆ. ಗೌರವಾರ್ಥವಾಗಿ, ನಾವು ಸಮಾರೋಪ ಸಮಾರಂಭವನ್ನು ಸಶಸ್ತ್ರ ಪಡೆಗಳಿಗೆ ಅರ್ಪಿಸಲು ಮತ್ತು ನಮ್ಮ ವೀರರನ್ನು ಗೌರವಿಸಲು ನಿರ್ಧರಿಸಿದ್ದೇವೆ. ಕ್ರಿಕೆಟ್ ರಾಷ್ಟ್ರೀಯ ಉತ್ಸಾಹವಾಗಿ ಉಳಿದಿದ್ದರೂ, ರಾಷ್ಟ್ರ ಮತ್ತು ಅದರ ಸಾರ್ವಭೌಮತ್ವ, ಸಮಗ್ರತೆ ಮತ್ತು ನಮ್ಮ ದೇಶದ ಭದ್ರತೆಗಿಂತ ದೊಡ್ಡದು ಯಾವುದೂ ಇಲ್ಲ" ಎಂದು ಸೈಕಿಯಾ ಹೇಳಿದರು.
ಜೂನ್ 3 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯ ಫೈನಲ್ ಪಂದ್ಯಕ್ಕೂ ಮುನ್ನ ಐಪಿಎಲ್ 2025 ರ ಸಮಾರೋಪ ಸಮಾರಂಭ ನಡೆಯಲಿದೆ.
ಪಂದ್ಯಾವಳಿ ಪುನರಾರಂಭವಾದಾಗಿನಿಂದ, ಬಿಸಿಸಿಐ ಎಲ್ಲಾ ಪಂದ್ಯಗಳಲ್ಲಿ ದೊಡ್ಡ ಬ್ಯಾನರ್ಗಳ ಮೂಲಕ ಸಶಸ್ತ್ರ ಪಡೆಗಳನ್ನು ಗೌರವಿಸುತ್ತಿದೆ. ಬಂಗಾಳ ಕ್ರಿಕೆಟ್ ಸಂಸ್ಥೆ (CAB) ಈಡನ್ ಗಾರ್ಡನ್ಸ್ ಕ್ಲಬ್ಹೌಸ್ನಲ್ಲಿ ದೊಡ್ಡ ಗೌರವ ಬ್ಯಾನರ್ ಪ್ರದರ್ಶಿಸುವ ಮೂಲಕ ದೇಶದ ಸಶಸ್ತ್ರ ಪಡೆಗಳನ್ನು ಗೌರವಿಸಿದೆ.
ಇದನ್ನೂ ಓದಿ IPL 2025: ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಸೂರ್ಯಕುಮಾರ್
ಭಾರತ ಹಾಗೂ ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟ್ಟಿದ್ದರಿಂದ ಟೂರ್ನಿಯನ್ನು ಒಂದು ವಾರಗಳ ಕಾಲ ಅರ್ಧದಲ್ಲೇ ಸ್ಥಗಿತಗೊಳಿಸಲಾಗಿತ್ತು. ಟೂರ್ನಿ ಪುನಾರಂಭಗೊಂಡ ಬಳಿಕ ಪ್ರತಿ ಪಂದ್ಯದ ವೇಳೆ ಬಿಸಿಸಿಐ ದೊಡ್ಡ ಬ್ಯಾನರ್ಗಳ ಮೂಲಕ ಸಶಸ್ತ್ರ ಪಡೆಗಳನ್ನು ಗೌರವಿಸುತ್ತಿದೆ.