Bengaluru IPL celebrations: ಭದ್ರತಾ ದೃಷ್ಟಿಯಿಂದ ಆರ್ಸಿಬಿ ವಿಕ್ಟರಿ ಪರೇಡ್ ರದ್ದು
ಅಹಮದಾಬಾದ್ನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬರಲಿರುವ ಆರ್ಸಿಬಿ ತಂಡ ನೇರವಾಗಿ ಖಾಸಗಿ ಹೋಟೆಲ್ಗೆ ತೆರಳಿ ಕೆಲ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. 4 ಗಂಟೆಗೆ ವಿಧಾನಸೌಧದಲ್ಲಿ ಸಿಂಎ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ನಾಯಕರು ತಂಡದ ಆಟಗಾರರಿಗೆ ಸನ್ಮಾನ ಮಾಡಲಾಗುತ್ತದೆ.


ಬೆಂಗಳೂರು: ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs PBKS Final) ತನ್ನ ಮೊದಲ ಕಪ್ ಗೆದ್ದಿರುವ ಹಿನ್ನೆಲೆಯಲ್ಲಿ, ಇಂದು(ಬುಧವಾರ) ಬೆಂಗಳೂರಿನಲ್ಲಿ ಯೋಜಿತವಾಗಿರುವ ವಿಜಯೋತ್ಸವದ ಪರೇಡ್(Bengaluru IPL Celebrations) ಭದ್ರತಾ ದೃಷ್ಟಿಯಿಂದ ಕೈಬಿಡಲಾಗಿದೆ. ಬದಲಾಗಿ ಚಿನ್ನಸ್ವಾಮಿಯಂ ಸ್ಟೇಡಿಯಂನಲ್ಲಿ(m chinnaswamy stadium) ವಿಜಯೋತ್ಸವ ಆಚರಿಸಲು ಅನುಮತಿ ನೀಡಲಾಗಿದೆ. ಆರಂಭದಲ್ಲಿ ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ಆರಂಭವಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ವರೆಗೆ ತಂಡವನ್ನು ತೆರೆದ ಬಸ್ನಲ್ಲಿ ಮೆರವಣಿಗೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಪೊಲೀಸ್ ಇಲಾಖೆ ಭದ್ರತಾ ದೃಷ್ಟಿಯಿಂದ ವಿಕ್ಟರಿ ಪರೇಡ್ ನಡೆಸಲು ಅನುಮತಿ ನಿರಾಕರಿಸಿತು.
ಅಹಮದಾಬಾದ್ನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬರಲಿರುವ ಆರ್ಸಿಬಿ ತಂಡ ನೇರವಾಗಿ ಖಾಸಗಿ ಹೋಟೆಲ್ಗೆ ತೆರಳಿ ಕೆಲ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. 4 ಗಂಟೆಗೆ ವಿಧಾನಸೌಧದಲ್ಲಿ ಸಿಂಎ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ನಾಯಕರು ತಂಡದ ಆಟಗಾರರಿಗೆ ಸನ್ಮಾನ ಮಾಡಲಾಗುತ್ತದೆ. ಇದಾದ ಬಳಿಕ ಆರ್ಸಿಬಿ ಆಟಗಾರರು ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿ ಅಲ್ಲಿ ಅಭಿಮಾನಿಗಳ ಮುಂದೆ ವಿಜಯೋತ್ಸವ ಮಾಡಲಿದ್ದಾರೆ.
ಸಿಂಎ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ನಿನ್ನೆಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ತವರೂರಿಗೆ ಆಗಮಿಸುತ್ತಿರುವ ಕರ್ನಾಟಕದ ಹೆಮ್ಮೆಯ ಆರ್ಸಿಬಿ ತಂಡವನ್ನು ಸಮಸ್ತ ಕನ್ನಡಿಗರ ಪರವಾಗಿ ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅಭಿನಂದಿಸಿ, ಸನ್ಮಾನಿಸಲಿದ್ದೇನೆ.
ಕೋಟ್ಯಂತರ ಅಭಿಮಾನಿಗಳ 18 ವರ್ಷಗಳ ಕಾತುರ, ಕಾಯುವಿಕೆ ಕೊನೆಗೊಂಡು, ಇಡೀ ರಾಜ್ಯದಲ್ಲೇ ಹಬ್ಬದ ವಾತಾವರಣ ಸೃಷ್ಟಿಸಿದ ಈ ಐತಿಹಾಸಿಕ ಗೆಲುವಿನ ಸಂಭ್ರಮದಲ್ಲಿ ನೀವೂ ಭಾಗಿಯಾಗಿ ಎಂದು ಟ್ವೀಟ್ ಮಾಡಿದ್ದಾರೆ.
ನಿನ್ನೆಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ತವರೂರಿಗೆ ಆಗಮಿಸುತ್ತಿರುವ ಕರ್ನಾಟಕದ ಹೆಮ್ಮೆಯ ಆರ್ಸಿಬಿ ತಂಡವನ್ನು ಸಮಸ್ತ ಕನ್ನಡಿಗರ ಪರವಾಗಿ ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅಭಿನಂದಿಸಿ, ಸನ್ಮಾನಿಸಲಿದ್ದೇನೆ.
— Siddaramaiah (@siddaramaiah) June 4, 2025
ಕೋಟ್ಯಂತರ ಅಭಿಮಾನಿಗಳ 18 ವರ್ಷಗಳ ಕಾತುರ, ಕಾಯುವಿಕೆ ಕೊನೆಗೊಂಡು, ಇಡೀ ರಾಜ್ಯದಲ್ಲೇ… pic.twitter.com/4fBlzaDTfZ
ಮಂಗಳವಾರದಂದೇ ಆರ್ಸಿಬಿ ಅಭಿಮಾನಿಗಳ ಸಂಭ್ರಮಕ್ಕೆ ಎಲ್ಲೆಯೇ ಇರಲಿಲ್ಲ. ಮಕ್ಕಳು, ಯುವಕರು, ಗೃಹಿಣಿಯರು, ಮಧ್ಯವಯಸ್ಕರು, ಇಳಿ ವಯಸ್ಸಿನ ಅಭಿಮಾನಿಗಳೂ ಮನೆಯಿಂದ ಹೊರಗೆ ಬಂದು ಆರ್ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಿದ್ದರು. ಲಕ್ಷಾಂತರ ಅಭಿಮಾನಿಗಳು ಒಮ್ಮೆಗೇ ರಸ್ತೆಗೆ ಇಳಿದಿದ್ದರಿಂದ ನಗರದ ಹಲವಡೆ ಮಧ್ಯರಾತ್ರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಹೀಗಾಗಿ ವಿಕ್ಟರಿ ಪರೇಡ್ ವೇಳೆ ಭದ್ರತೆ ನೀಡುವುದು ಕಷ್ಟ ಎಂದು ಇದಕ್ಕೆ ಅನುಮತಿ ನೀಡಿಲ್ಲ.