Bengaluru Stampede: ಆರ್ಸಿಬಿ ಪೆರೇಡ್ ಕಾಲ್ತುಳಿತಕ್ಕೆ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಸಂತಾಪ
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಕೂಡ ಬುಧವಾರ ಬೆಂಗಳೂರಿನ ಕಾಲ್ತುಳಿತದ ಸಾವುಗಳಿಗೆ ಸಂತಾಪ ಸೂಚಿಸಿದ್ದಾರೆ. ಅಧ್ಯಕ್ಷೆ ದ್ರೌಪದಿ ಮುರ್ಮು ಅವರು "ಬೆಂಗಳೂರಿನ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ


ಲಂಡನ್: ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ(chinnaswamy stadium) ಆರ್ಸಿಬಿಯ ವಿಜಯೋತ್ಸವ ಆಚರಣೆಯ(RCB victory parade stampede) ವೇಳೆ ನಡೆದ ಕಾಲ್ತುಳಿತ ಘಟನೆಯಲ್ಲಿ(Bengaluru Stampede) 11 ಜನರು ಸಾವನ್ನಪ್ಪಿ, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಕ್ಕೆ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಸಂತಾಪ(Rishi Sunak Condoles) ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸುನಕ್, "ನನ್ನ ಮತ್ತು ಅಕ್ಷತಾ(ಪತ್ನಿ) ಅವರ ಹೃದಯಗಳು ಬೆಂಗಳೂರಿನ ದುರಂತ ಘಟನೆಯಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ಮತ್ತು ಗಾಯಗೊಂಡವರೊಂದಿಗೆ ಇದೆ. ಕಪ್ ಗೆದ್ದಾಗ ನಿಮ್ಮೊಂದಿಗೆ ನಾವು ಸಂಭ್ರಮಿಸಿದೆವು ಮತ್ತು ಇಂದು ನಿಮ್ಮೊಂದಿಗೆ ದುಃಖಿಸುತ್ತಿದ್ದೇವೆ” ಎಂದು ಸುನಕ್ ಸಂತಾಪ ಸೂಚಿಸಿದ್ದಾರೆ.
Mine and Akshata’s hearts go out to everyone who has lost loved ones or been hurt in the tragic events in Bengaluru.
— Rishi Sunak (@RishiSunak) June 4, 2025
We celebrated with you yesterday and we mourn with you today.
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಕೂಡ ಬುಧವಾರ ಬೆಂಗಳೂರಿನ ಕಾಲ್ತುಳಿತದ ಸಾವುಗಳಿಗೆ ಸಂತಾಪ ಸೂಚಿಸಿದ್ದಾರೆ. ಅಧ್ಯಕ್ಷೆ ದ್ರೌಪದಿ ಮುರ್ಮು ಅವರು "ಬೆಂಗಳೂರಿನ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತವನ್ನು ಪ್ರಧಾನಿ ಮೋದಿ "ಸಂಪೂರ್ಣವಾಗಿ ಹೃದಯವಿದ್ರಾವಕ" ಎಂದು ಬಣ್ಣಿಸಿದ್ದಾರೆ.
ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮಂಗಳವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದ ಫೈನಲ್ ಪಂದ್ಯಕ್ಕೆ ಹಾಜರಾಗಿದ್ದರು. ಪಂದ್ಯದುದ್ದಕ್ಕೂ ಆರ್ಸಿಬಿ ತಂಡಕ್ಕೆ ಬೆಂಬಲ ಸೂಚಿಸಿದ್ದ ಸುನಕ್ ಕಪ್ ಗೆದ್ದಾಗ ಕುಣಿದು ಕುಪ್ಪಳಿಸಿದ್ದರು.
ಇದನ್ನೂ ಓದಿRCB victory parade stampede: ಹೃದಯ ಒಡೆದಿದೆ; ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ
ಕಾಲ್ತುಳಿತಕ್ಕೆ ಸಂಬಂಧಿಸಿ 11 ಎಫ್ಐಆರ್ ದಾಖಲು
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ 11 ಎಫ್ಐಆರ್ಗಳು ದಾಖಲಾಗಿವೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬೆಂಗಳೂರು ಕ್ರೀಡಾಂಗಣದ ಹೊರಗೆ ಜನಸಂದಣಿ ಹೆಚ್ಚಾಗಿದ್ದರಿಂದ ದುರಂತ ಸಂಭವಿಸಿತು. ಉಚಿತ ಪಾಸ್ಗಳ ಸೀಮಿತತೆ, ಮಿತಿ ಮೀರಿದ ಜನದಟ್ಟಣೆ ಮತ್ತು ಕ್ರೀಡಾಂಗಣದಲ್ಲಿ ಸೀಮಿತ ಆಸನಗಳು ಮಾರಕ ಪರಿಸ್ಥಿತಿಗೆ ಕಾರಣವಾಯಿತು. ಕ್ರೀಡಾಂಗಣಕ್ಕೆ ಪ್ರವೇಶ ಟಿಕೆಟ್ ಹೊಂದಿರದ ಸಾವಿರಾರು ಆರ್ಸಿಬಿ ಅಭಿಮಾನಿಗಳು ಟಿಕೆಟ್ ಹೊಂದಿದ್ದವರೊಂದಿಗೆ ಪೈಪೋಟಿಯಲ್ಲಿ ಆವರಣಕ್ಕೆ ನುಗ್ಗಲು ಪ್ರಯತ್ನಿಸಿದಾಗ ಉಂಟಾದ ಅವ್ಯವಸ್ಥೆ ಕಾಲ್ತುಳಿತಕ್ಕೆ ಕಾರಣವಾಯಿತು. ಕಾಲ್ತುಳಿತಕ್ಕೆ ಸಂಬಂಧಿಸಿ ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.