Bengaluru stampede: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೆಎಸ್ಸಿಎ ವಿರುದ್ಧ ಎಫ್ಐಆರ್?
Bengaluru stampede: ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ. ಜೂನ್ 4 ರಂದು ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿದ್ದರು ಹಾಗೂ 47 ಮಂದಿ ಗಾಯಕ್ಕೆ ತುತ್ತಾಗಿದ್ದರು.

ಆರ್ಸಿಬಿ, ವಿರಾಟ್ ಕೊಹ್ಲಿಗೆ ಸಂಕಷ್ಟ.

ಬೆಂಗಳೂರು: ಬೆಂಗಳೂರು ಕಾಲ್ತುಳಿತ (Bengaluru stampede) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮೇಲೆ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ಒಂದು ದಿನದ ಬೆನ್ನಲ್ಲೆ ವಿರಾಟ್ ಕೊಹ್ಲಿ ಸೇರಿದಂತೆ ಆರ್ಸಿಬಿ ತಂಡಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ. ಜೂನ್ 4 ರಂದು ಆರ್ಸಿಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿದ ಸಂಭವಿಸಿತ್ತು ಹಾಗೂ ಈ ದುರ್ಘಟನೆಯಿಂದ 11 ಮಂದಿ ಸಾವೀಗೀಡಾಗಿದ್ದರೆ, ಬರೋಬ್ಬರಿ 47 ಮಂದಿ ಗಾಯಕ್ಕೆ ತುತ್ತಾಗಿದ್ದರು.
ಆರ್ಸಿಬಿ, ಡಿಎನ್ಎ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಆಡಳಿತ ಮಂಡಳಿ ವಿರುದ್ದ ಕಬ್ಬನ್ ಪಾರ್ಕ್ ಪೊಲೀಸರು ವಿವಿಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಸೇರಿದಂತೆ ಆರ್ಸಿಬಿ ತಂಡಕ್ಕೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಮತ್ತೊಂದು ಕಡೆ ಕೆಎಸ್ಸಿಎ ಆಡಳಿತ ಮಂಡಳಿಗೂ ಕೂಡ ದೊಡ್ಡ ಸಂಕಷ್ಟ ಎದುರಾಗಿದೆ.
Bengaluru Stampede: ʼಶಾಕ್ನಲ್ಲಿದ್ದೇನೆ...ʼ ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಡಿಕೆ ಶಿವಕುಮಾರ್
ಏನಿದು ಕಾಲ್ತುಳಿತ ಪ್ರಕರಣ?
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಚೊಚ್ಚಲ ಐಪಿಎಲ್ ಪ್ರಶಸ್ತಿಯ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರೋಡ್ ಶೋ ಆಯೋಜಿಸುವ ಬಗ್ಗೆ ಆರ್ಸಿಬಿ ಮಾಹಿತಿ ನೀಡಿತ್ತು. ಆದರೆ, ಭದ್ರತೆಯ ಕಾರಣ ಅದನ್ನು ರದ್ದುಗಳಿಸಲಾಯಿತು ಹಾಗೂ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾತ್ರ ವಿಜಯೋತ್ಸವವನ್ನು ನಡೆಸಲಾಗಿತ್ತು. ಇದಕ್ಕೂ ಮುನ್ನ ಆರ್ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮೈಸೂರು ಪೇಟ ತೊಡಸಿ ಗೌರವಿಸಲಾಗಿತ್ತು. ನಂತರ ಚಿನ್ನಸ್ವಾಮಿ ಅಂಗಣಕ್ಕೆ ಆರ್ಸಿಬಿ ತಂಡ ತೆರಳಿತ್ತು.
ಇದಕ್ಕೂ ಮುನ್ನ ಆರ್ಸಿಬಿ ಅಭಿಮಾನಿಗಳ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆಡ ನೂಕು ನುಗ್ಗಲು ನಡೆದಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿತು. ಈ ದುರ್ಘಟನೆಯಿಂದ 11 ಮಂದಿ ಆರ್ಸಿಬಿ ಅಭಿಮಾನಗಳು ಮೃತಪಟ್ಟರು ಹಾಗೂ 47 ಮಂದಿ ಗಾಯಕ್ಕೆ ತುತ್ತಾಗಿದ್ದರು. ನಂತರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ದುರ್ಘಟನೆ ಬಗ್ಗೆ ಮಾತನಾಡಿದ್ದರು.
IPL 2025: ʻನಾವು ತೀವ್ರ ದುಖಃದಲ್ಲಿದ್ದೇವೆʼ-ಕಾಲ್ತುಳಿತದ ಪ್ರಕರಣದ ಬಗ್ಗೆ ಆರ್ಸಿಬಿ ಪ್ರತಿಕ್ರಿಯೆ!
"ಕ್ರೀಡಾಂಗಣವು ಜನಸಂದಣಿಯ ಗಾತ್ರವನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ. ಕ್ರೀಡಾಂಗಣದ ಸಾಮರ್ಥ್ಯ 35,000 ಆದರೆ 2 ರಿಂದ 3 ಲಕ್ಷ ಜನರು ಆಚರಣೆಗೆ ಬಂದಿದ್ದರು. ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ರಾಜ್ಯ ಸರ್ಕಾರ 10 ಲಕ್ಷ ರು. ಪರಿಹಾರವನ್ನು ಘೋಷಿಸಿದೆ. ಬೌರಿಂಗ್ ಮತ್ತು ನಗರದಾದ್ಯಂತದ ಇತರ ಆಸ್ಪತ್ರೆಗಳಲ್ಲಿ ದಾಖಲಾಗಿರುವವರು ಸೇರಿದಂತೆ ಎಲ್ಲಾ ಗಾಯಾಳುಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ನೀಡಲಾಗುವುದು," ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.